HomeUncategorizedಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

ಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

- Advertisement -
- Advertisement -

ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಿ, ಪ್ರಮುಖ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ವಿತ್ತ ಸಚಿವೆಯಾದ ನಾಲ್ಕೇ ತಿಂಗಳಿಗೆ ಆರ್ಥಿಕ ಕುಸಿತದ ಮೇನ್ ವಿಲನ್' ರೂಪದಲ್ಲಿ ಎಲ್ಲರೆದುರು ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭಾರತದ ಆರ್ಥಿಕತೆ ಗಂಭೀರವಾಗಿ ಪತನವಾಗಲು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿಗಿಂತಲೂ ಪ್ರಧಾನಿ ಮೋದಿಯವರ ಯಡವಟ್ಟು ಆರ್ಥಿಕ ನೀತಿಗಳು ಕಾರಣಗಳು ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಮೊನ್ನೆಯಷ್ಟೇ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಅಭಿಜಿತ್ ಬ್ಯಾನರ್ಜಿ ಹಾಗೂ ಎಸ್ತರ್ ಡುಪ್ಲೋ ತುಂಬಾ ಹಿಂದೆಯೇ ಕರಾಳ ದಿನಗಳಿಗೆ ಕಾರಣವಾಗುತ್ತದೆಂದು ಅಂದಾಜಿಸಿದ್ದ `ನೋಟು ಅಮಾನ್ಯೀಕರಣ’ವನ್ನು ಹೇರುವುದರ ಹಿಂದೆ ಅರ್ಥ ಸಚಿವ ಜೇಟ್ಲಿ, ಆರ್.ಬಿ.ಐ. ಆಡಳಿತ ಮಂಡಳಿಗೆ ಯಾವ ಪಾತ್ರವೂ ಇರಲಿಲ್ಲ. ಅಷ್ಟರ ಮಟ್ಟಿಗೆ ಮೋದಿಯವರ ನೀತಿಗಳು ಇವತ್ತಿನ ಆರ್ಥಿಕ ದುಸ್ಥಿತಿಗೆ ಕಾರಣ. ಆದರೆ ಈಗ ಪರಿಸ್ಥಿತಿಯನ್ನು ಎತ್ತ ತಿರುಗಿಸಲಾಗುತ್ತಿದೆಯೆಂದರೆ, ಈ ಸಮಸ್ತ ಕುಸಿತಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ಹಣಕಾಸು ಇಲಾಖೆಯ ಹೊಣೆ ಹೊತ್ತ ನಿರ್ಮಲಾ ಸೀತಾರಾಮನ್ ಖಳನಾಯಕಿಯಾಗಿ ಬಿಂಬಿತವಾಗುತ್ತಿದ್ದಾರೆ. ನಿರ್ಮಲಾ ಕೂಡಾ, ಆರ್ಥಿಕ ಕುಸಿತದ ಕುರಿತಾಗಿ ಕೇಳಿಬರುತ್ತಿರುವ ಟೀಕೆಗಳನ್ನು ವೈಯಕ್ತಿಕವಾಗಿ ಸ್ವೀಕರಿಸಿ `ಅಗ್ರೆಸಿವ್’ ಆಗಿ ಪ್ರತಿಕ್ರಿಯಿಸುತ್ತಿರೋದು, ಇಡೀ ರಂಗವೇದಿಕೆಯಿಂದ ಹಿಂದೆ ಸರಿಯಲು ಮೋದಿಗೆ ಅನುವು ಮಾಡಿಕೊಡುತ್ತಿದೆ. ಸ್ವತಃ ಮೋದಿ ಅಭಿಮಾನಿಗಳು, ಮೋದಿಯನ್ನು ಹಾಡಿ ಹೊಗಳಿದ್ದ ದೊಡ್ಡದೊಡ್ಡ ಉದ್ಯಮಿಗಳು ನಿರ್ಮಲಾರನ್ನೇ ಟಾರ್ಗೆಟ್ ಮಾಡಿ ಟೀಕೆಗಳನ್ನು ಸುರಿಸುತ್ತಿದ್ದಾರೆ.

ನೋ ಡೌಟ್, ವಿತ್ತ ಸಚಿವೆಯಾಗಿ ದೇಶದ ಸದ್ಯದ ಆರ್ಥಿಕ ಪರಿಸ್ಥಿತಿಗೆ ಅವರೇ ಉತ್ತರದಾಯಿ ಆಗುತ್ತಾರೆ. ಟೀಕೆಗಳೂ ಅವರಿಗೇ ಸಲ್ಲುತ್ತವೆ. ಆದರೆ ಕಳೆದ ಬಿಜೆಪಿ ಅವಧಿಯಲ್ಲಿ ಪರಿಸ್ಥಿತಿ ಹೀಗೇ ಇತ್ತಾ? ಕಡೇಪಕ್ಷ ಹಣಕಾಸು ಸಚಿವರ ಜೊತೆ ಚರ್ಚಿಸಿಯೇ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತೇ? ಈ ಪ್ರಶ್ನೆಗಳಿಗೆ ಉತ್ತರ ಎಲ್ಲರಿಗೂ ಗೊತ್ತಿರುವಂತದ್ದೇ. ಆದರೆ ಕುಸಿತ ಶುರುವಾಗಿ, ದೇಶ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ ಅದಕ್ಕೆ ಕಾರಣರಾದವರು ಹಿನ್ನೆಲೆಗೆ ಸರಿದು, ಹುದ್ದೆಯ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ಅವರನ್ನು ಮುಂದೆ ಬಿಡುತ್ತಿರೋದು ನೋಡಿದರೆ, ಬಲಿಪಶು ಮಾಡಲಾಗುತ್ತಿದೆಯಾ? ಎಂಬ ವಾದವೀಗ ಮುನ್ನೆಲೆಗೆ ಬರುತ್ತಿದೆ. ಅಂದಹಾಗೆ, ಕಳೆದ ಸರ್ಕಾರದ ಅವಧಿಯಲ್ಲೂ ಮನೋಹರ್ ಪಾರಿಕ್ಕರ್ ರಕ್ಷಣಾ ಮಂತ್ರಿಯಾಗಿದ್ದರೂ, ರಕ್ಷಣಾ ಇಲಾಖೆಯನ್ನೇ ಬೈಪಾಸ್ ಮಾಡಿದ್ದ ಪ್ರಧಾನಿ ಮಂತ್ರಿ ಕಾರ್ಯಾಲಯ ಏಕಪಕ್ಷೀಯವಾಗಿ ವ್ಯವಹಾರ ಕುದುರಿಸಿದ್ದ `ರಫೇಲ್ ಖರೀದಿ’ ಹಗರಣ ಮಾಧ್ಯಮಗಳ ಮೂಲಕ ದೊಡ್ಡ ಬಿರುಗಾಳಿ ಎಬ್ಬಿಸುವ ಹೊತ್ತಿಗೆ ಸರಿಯಾಗಿ ನಿರ್ಮಲಾ ಸೀತಾರಾಮನ್ ಅವರನ್ನು ಪಾರಿಕ್ಕರ್ ಜಾಗದಲ್ಲಿ ಪ್ರತಿಷ್ಠಾಪಿಸಿ, ಕಳಂಕ ಮೆತ್ತಿಸಿಕೊಳ್ಳುವಂತೆ ಮಾಡಿದ್ದು ಕಾಕತಾಳೀಯವೇ ಇರಬಹುದು!

ಪೂರ್ಣ ಪ್ರಮಾಣದ ಹಣಕಾಸು ಸಚಿವೆಯಾಗಿ ದೇಶದ ಮೊದಲ ಮಹಿಳೆ ಎಂಬ ಕೀರ್ತಿಗೆ ಪಾತ್ರರಾದ ನಿರ್ಮಲಾ ಸೀತಾರಾಮನ್ ಅಧಿಕಾರ ವಹಿಸಿಕೊಂಡ ಘಳಿಗೆಯಲ್ಲೇ ಆರ್ಥಿಕತೆ ಇಳಿಜಾರಿನತ್ತ ಮುಖ ಮಾಡಿತ್ತು. ಭಾರತದ ಆರ್ಥಿಕ ಬೆಳವಣಿಗೆ ಕಳೆದ ವರ್ಷದ ಕಡೆಯ ತ್ರೈಮಾಸಿಕದಲ್ಲಿ ಶೇ.6ಕ್ಕೆ ಕುಸಿದಿದ್ದರೆ, 2018-19ನೇ ಸಂಪೂರ್ಣ ವಿತ್ತ ವರ್ಷದಲ್ಲಿ ಅದರ ಸರಾಸರಿ ವೇಗ ಶೇ.6.8ಕ್ಕೆ ಕ್ಷೀಣಗೊಂಡಿತ್ತು. ಇನ್ನು 2019-20ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಚಾರಿತ್ರಿಕ ಕನಿಷ್ಠ ಶೇ.5ರತ್ತ ದಾಪುಗಾಲಿಡಲು ಶುರು ಮಾಡಿತ್ತು. ಅಂತೆಯೇ ದೇಶದ ನಿರುದ್ಯೋಗ ದರ 2017ರಲ್ಲೇ ಶೇ.6ಕ್ಕೆ ದಾಖಲೆಯ ಕುಸಿತ ಕಂಡಿತ್ತು. ಅಂತಹ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದು!

ಇನ್ನು ನಿರ್ಮಲಾ ಸೀತಾರಾಮನ್ ಜುಲೈನಲ್ಲಿ ತಮ್ಮ ಮೊದಲ ಬಜೆಟ್ ಮಂಡಿಸಿದರು. ಆಗ ಹಿಂದಿದ್ದ ಹಲವು ಸಂಪ್ರದಾಯಗಳನ್ನು ಮುರಿದರು. ದಿನಬೆಳಗಾದರೆ ದೇವರು, ಹಬ್ಬ ಹರಿದಿನಗಳ ಬಗ್ಗೆ ಟ್ವೀಟ್ ಮಾಡುವ ನಿರ್ಮಲಾ ಸೀತಾರಾಮನ್ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮಾತ್ರ ಮಾತನಾಡುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಆರ್ಥಿಕತಜ್ಞರಾದ ಶಮಿಕಾ ರವಿ ಮಾತನಾಡಿ, ಭಾರತ ಆರ್ಥಿಕತೆಯ ಕುಸಿತ ಗಂಭೀರ ಪರಿಣಾಮ ಬೀರಲಿದೆ. ಕುಸಿಯುತ್ತಿರುವ ಆರ್ಥಿಕತೆಯನ್ನು ಸುಧಾರಿಸಲು ಪ್ರಮುಖ ತಂತ್ರಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಆಲೋಚಿಸಬೇಕಿದೆ ಎಂದು ಹೇಳಿದ್ದರು. ಬಿಜೆಪಿ ಎಂ.ಪಿ ಸುಬ್ರಮಣಿಯನ್ ಸ್ವಾಮಿ ಕೂಡ ನಿರ್ಮಲಾ ಸೀತಾರಾಮನ್ ಅವರ ಕಾರ್ಯ ವೈಖರಿಯನ್ನು ಖಂಡಿಸಿದ್ದರು. ನೆಲಕಚ್ಚುತ್ತಿರುವ ಆರ್ಥಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಮೋದಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಸೂಕ್ಷ್ಮ ಚಿಂತನೆಯ ಅವಶ್ಯಕತೆಯ ಬಗ್ಗೆ ತಿಳಿಸಿದ್ದರು.

ಪ್ರತಿಷ್ಠಿತ ಜೆಎನ್.ಯು ವಿವಿಯಲ್ಲಿ ಎಂಎ, ಎಂ.ಫಿಲ್  (ಎಕನಾಮಿಕ್ಸ್) ಪಡೆದಿದ್ದ ನಿರ್ಮಲಾ, ಓದು-ವಿದ್ಯಾರ್ಹತೆ-ಅನುಭವದ ನಿಟ್ಟಿನಲ್ಲಿ ಹಣಕಾಸು ಸಚಿವೆಯ ಹುದ್ದೆಗೆ ಲಾಯಕ್ಕಾದವರೇ ಇರಬಹುದು. ಆದರೆ, ದೇಶದ ಆರ್ಥಿಕ ಸ್ಥಿತಿ ಅದೆಷ್ಟು ಹದಗೆಟ್ಟು ಹೋಗಿತ್ತೆಂದರೆ, (ಹದಗೆಡಿಸಲಾಗಿತ್ತೆಂದರೆ) ತುಂಬಾ ದೃಢ ಮತ್ತು ದೂರಾಲೋಚನೆಯ ನಿರ್ಧಾರಗಳಿಂದ ಮಾತ್ರ ಅದನ್ನು ನಿಭಾಯಿಸಲು ಸಾಧ್ಯ ಎನ್ನುವ ಸ್ಥಿತಿಯಲ್ಲಿತ್ತು. ಆದರೆ ನಿರ್ಮಲಾಗೆ ಅಂತಹ ಸ್ವಾತಂತ್ರ್ಯವೂ ಇರಲಿಲ್ಲ, ಆ ಬಗೆಯ ಇಚ್ಛೆ ನಿರ್ಮಲಾ ಅವರಿಗೂ ಇದ್ದಂತಿರಲಿಲ್ಲ. ಅವರು ಮಂಡಿಸಿದ ಮೊದಲ ಬಜೆಟ್ಟಿನ ಕ್ರಮಗಳು ಹಾಗೂ ಆ ನಂತರದಲ್ಲಿ ಅವರೇ ಆ ಕ್ರಮಗಳಿಂದ ತೆಗೆದುಕೊಂಡ ಯೂ-ಟರ್ನ್ ಗಳು ಇದಕ್ಕೆ ಸಾಕ್ಷಿ. ಈಗ ಅವರ ಪತಿಯೇ ಅವರನ್ನು ಟೀಕಿಸುವಂತಹ ಸಂದರ್ಭ ಬಂದೊದಗಿದೆ. ದುರಂತವೆಂದರೆ, ಈಗಲೂ ಕೇಂದ್ರದ ಬಿಜೆಪಿ ಸರ್ಕಾರದ ಬಳಿ ಸಮರ್ಪಕ ಪರಿಹಾರದ ನೀಲನಕ್ಷೆಗಳು ಗೋಚರಿಸುತ್ತಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...