HomeUncategorizedಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

ಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

- Advertisement -
- Advertisement -

ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಿ, ಪ್ರಮುಖ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ವಿತ್ತ ಸಚಿವೆಯಾದ ನಾಲ್ಕೇ ತಿಂಗಳಿಗೆ ಆರ್ಥಿಕ ಕುಸಿತದ ಮೇನ್ ವಿಲನ್' ರೂಪದಲ್ಲಿ ಎಲ್ಲರೆದುರು ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭಾರತದ ಆರ್ಥಿಕತೆ ಗಂಭೀರವಾಗಿ ಪತನವಾಗಲು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿಗಿಂತಲೂ ಪ್ರಧಾನಿ ಮೋದಿಯವರ ಯಡವಟ್ಟು ಆರ್ಥಿಕ ನೀತಿಗಳು ಕಾರಣಗಳು ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಮೊನ್ನೆಯಷ್ಟೇ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಅಭಿಜಿತ್ ಬ್ಯಾನರ್ಜಿ ಹಾಗೂ ಎಸ್ತರ್ ಡುಪ್ಲೋ ತುಂಬಾ ಹಿಂದೆಯೇ ಕರಾಳ ದಿನಗಳಿಗೆ ಕಾರಣವಾಗುತ್ತದೆಂದು ಅಂದಾಜಿಸಿದ್ದ `ನೋಟು ಅಮಾನ್ಯೀಕರಣ’ವನ್ನು ಹೇರುವುದರ ಹಿಂದೆ ಅರ್ಥ ಸಚಿವ ಜೇಟ್ಲಿ, ಆರ್.ಬಿ.ಐ. ಆಡಳಿತ ಮಂಡಳಿಗೆ ಯಾವ ಪಾತ್ರವೂ ಇರಲಿಲ್ಲ. ಅಷ್ಟರ ಮಟ್ಟಿಗೆ ಮೋದಿಯವರ ನೀತಿಗಳು ಇವತ್ತಿನ ಆರ್ಥಿಕ ದುಸ್ಥಿತಿಗೆ ಕಾರಣ. ಆದರೆ ಈಗ ಪರಿಸ್ಥಿತಿಯನ್ನು ಎತ್ತ ತಿರುಗಿಸಲಾಗುತ್ತಿದೆಯೆಂದರೆ, ಈ ಸಮಸ್ತ ಕುಸಿತಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ಹಣಕಾಸು ಇಲಾಖೆಯ ಹೊಣೆ ಹೊತ್ತ ನಿರ್ಮಲಾ ಸೀತಾರಾಮನ್ ಖಳನಾಯಕಿಯಾಗಿ ಬಿಂಬಿತವಾಗುತ್ತಿದ್ದಾರೆ. ನಿರ್ಮಲಾ ಕೂಡಾ, ಆರ್ಥಿಕ ಕುಸಿತದ ಕುರಿತಾಗಿ ಕೇಳಿಬರುತ್ತಿರುವ ಟೀಕೆಗಳನ್ನು ವೈಯಕ್ತಿಕವಾಗಿ ಸ್ವೀಕರಿಸಿ `ಅಗ್ರೆಸಿವ್’ ಆಗಿ ಪ್ರತಿಕ್ರಿಯಿಸುತ್ತಿರೋದು, ಇಡೀ ರಂಗವೇದಿಕೆಯಿಂದ ಹಿಂದೆ ಸರಿಯಲು ಮೋದಿಗೆ ಅನುವು ಮಾಡಿಕೊಡುತ್ತಿದೆ. ಸ್ವತಃ ಮೋದಿ ಅಭಿಮಾನಿಗಳು, ಮೋದಿಯನ್ನು ಹಾಡಿ ಹೊಗಳಿದ್ದ ದೊಡ್ಡದೊಡ್ಡ ಉದ್ಯಮಿಗಳು ನಿರ್ಮಲಾರನ್ನೇ ಟಾರ್ಗೆಟ್ ಮಾಡಿ ಟೀಕೆಗಳನ್ನು ಸುರಿಸುತ್ತಿದ್ದಾರೆ.

ನೋ ಡೌಟ್, ವಿತ್ತ ಸಚಿವೆಯಾಗಿ ದೇಶದ ಸದ್ಯದ ಆರ್ಥಿಕ ಪರಿಸ್ಥಿತಿಗೆ ಅವರೇ ಉತ್ತರದಾಯಿ ಆಗುತ್ತಾರೆ. ಟೀಕೆಗಳೂ ಅವರಿಗೇ ಸಲ್ಲುತ್ತವೆ. ಆದರೆ ಕಳೆದ ಬಿಜೆಪಿ ಅವಧಿಯಲ್ಲಿ ಪರಿಸ್ಥಿತಿ ಹೀಗೇ ಇತ್ತಾ? ಕಡೇಪಕ್ಷ ಹಣಕಾಸು ಸಚಿವರ ಜೊತೆ ಚರ್ಚಿಸಿಯೇ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತೇ? ಈ ಪ್ರಶ್ನೆಗಳಿಗೆ ಉತ್ತರ ಎಲ್ಲರಿಗೂ ಗೊತ್ತಿರುವಂತದ್ದೇ. ಆದರೆ ಕುಸಿತ ಶುರುವಾಗಿ, ದೇಶ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ ಅದಕ್ಕೆ ಕಾರಣರಾದವರು ಹಿನ್ನೆಲೆಗೆ ಸರಿದು, ಹುದ್ದೆಯ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ಅವರನ್ನು ಮುಂದೆ ಬಿಡುತ್ತಿರೋದು ನೋಡಿದರೆ, ಬಲಿಪಶು ಮಾಡಲಾಗುತ್ತಿದೆಯಾ? ಎಂಬ ವಾದವೀಗ ಮುನ್ನೆಲೆಗೆ ಬರುತ್ತಿದೆ. ಅಂದಹಾಗೆ, ಕಳೆದ ಸರ್ಕಾರದ ಅವಧಿಯಲ್ಲೂ ಮನೋಹರ್ ಪಾರಿಕ್ಕರ್ ರಕ್ಷಣಾ ಮಂತ್ರಿಯಾಗಿದ್ದರೂ, ರಕ್ಷಣಾ ಇಲಾಖೆಯನ್ನೇ ಬೈಪಾಸ್ ಮಾಡಿದ್ದ ಪ್ರಧಾನಿ ಮಂತ್ರಿ ಕಾರ್ಯಾಲಯ ಏಕಪಕ್ಷೀಯವಾಗಿ ವ್ಯವಹಾರ ಕುದುರಿಸಿದ್ದ `ರಫೇಲ್ ಖರೀದಿ’ ಹಗರಣ ಮಾಧ್ಯಮಗಳ ಮೂಲಕ ದೊಡ್ಡ ಬಿರುಗಾಳಿ ಎಬ್ಬಿಸುವ ಹೊತ್ತಿಗೆ ಸರಿಯಾಗಿ ನಿರ್ಮಲಾ ಸೀತಾರಾಮನ್ ಅವರನ್ನು ಪಾರಿಕ್ಕರ್ ಜಾಗದಲ್ಲಿ ಪ್ರತಿಷ್ಠಾಪಿಸಿ, ಕಳಂಕ ಮೆತ್ತಿಸಿಕೊಳ್ಳುವಂತೆ ಮಾಡಿದ್ದು ಕಾಕತಾಳೀಯವೇ ಇರಬಹುದು!

ಪೂರ್ಣ ಪ್ರಮಾಣದ ಹಣಕಾಸು ಸಚಿವೆಯಾಗಿ ದೇಶದ ಮೊದಲ ಮಹಿಳೆ ಎಂಬ ಕೀರ್ತಿಗೆ ಪಾತ್ರರಾದ ನಿರ್ಮಲಾ ಸೀತಾರಾಮನ್ ಅಧಿಕಾರ ವಹಿಸಿಕೊಂಡ ಘಳಿಗೆಯಲ್ಲೇ ಆರ್ಥಿಕತೆ ಇಳಿಜಾರಿನತ್ತ ಮುಖ ಮಾಡಿತ್ತು. ಭಾರತದ ಆರ್ಥಿಕ ಬೆಳವಣಿಗೆ ಕಳೆದ ವರ್ಷದ ಕಡೆಯ ತ್ರೈಮಾಸಿಕದಲ್ಲಿ ಶೇ.6ಕ್ಕೆ ಕುಸಿದಿದ್ದರೆ, 2018-19ನೇ ಸಂಪೂರ್ಣ ವಿತ್ತ ವರ್ಷದಲ್ಲಿ ಅದರ ಸರಾಸರಿ ವೇಗ ಶೇ.6.8ಕ್ಕೆ ಕ್ಷೀಣಗೊಂಡಿತ್ತು. ಇನ್ನು 2019-20ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಚಾರಿತ್ರಿಕ ಕನಿಷ್ಠ ಶೇ.5ರತ್ತ ದಾಪುಗಾಲಿಡಲು ಶುರು ಮಾಡಿತ್ತು. ಅಂತೆಯೇ ದೇಶದ ನಿರುದ್ಯೋಗ ದರ 2017ರಲ್ಲೇ ಶೇ.6ಕ್ಕೆ ದಾಖಲೆಯ ಕುಸಿತ ಕಂಡಿತ್ತು. ಅಂತಹ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದು!

ಇನ್ನು ನಿರ್ಮಲಾ ಸೀತಾರಾಮನ್ ಜುಲೈನಲ್ಲಿ ತಮ್ಮ ಮೊದಲ ಬಜೆಟ್ ಮಂಡಿಸಿದರು. ಆಗ ಹಿಂದಿದ್ದ ಹಲವು ಸಂಪ್ರದಾಯಗಳನ್ನು ಮುರಿದರು. ದಿನಬೆಳಗಾದರೆ ದೇವರು, ಹಬ್ಬ ಹರಿದಿನಗಳ ಬಗ್ಗೆ ಟ್ವೀಟ್ ಮಾಡುವ ನಿರ್ಮಲಾ ಸೀತಾರಾಮನ್ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮಾತ್ರ ಮಾತನಾಡುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಆರ್ಥಿಕತಜ್ಞರಾದ ಶಮಿಕಾ ರವಿ ಮಾತನಾಡಿ, ಭಾರತ ಆರ್ಥಿಕತೆಯ ಕುಸಿತ ಗಂಭೀರ ಪರಿಣಾಮ ಬೀರಲಿದೆ. ಕುಸಿಯುತ್ತಿರುವ ಆರ್ಥಿಕತೆಯನ್ನು ಸುಧಾರಿಸಲು ಪ್ರಮುಖ ತಂತ್ರಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಆಲೋಚಿಸಬೇಕಿದೆ ಎಂದು ಹೇಳಿದ್ದರು. ಬಿಜೆಪಿ ಎಂ.ಪಿ ಸುಬ್ರಮಣಿಯನ್ ಸ್ವಾಮಿ ಕೂಡ ನಿರ್ಮಲಾ ಸೀತಾರಾಮನ್ ಅವರ ಕಾರ್ಯ ವೈಖರಿಯನ್ನು ಖಂಡಿಸಿದ್ದರು. ನೆಲಕಚ್ಚುತ್ತಿರುವ ಆರ್ಥಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಮೋದಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಸೂಕ್ಷ್ಮ ಚಿಂತನೆಯ ಅವಶ್ಯಕತೆಯ ಬಗ್ಗೆ ತಿಳಿಸಿದ್ದರು.

ಪ್ರತಿಷ್ಠಿತ ಜೆಎನ್.ಯು ವಿವಿಯಲ್ಲಿ ಎಂಎ, ಎಂ.ಫಿಲ್  (ಎಕನಾಮಿಕ್ಸ್) ಪಡೆದಿದ್ದ ನಿರ್ಮಲಾ, ಓದು-ವಿದ್ಯಾರ್ಹತೆ-ಅನುಭವದ ನಿಟ್ಟಿನಲ್ಲಿ ಹಣಕಾಸು ಸಚಿವೆಯ ಹುದ್ದೆಗೆ ಲಾಯಕ್ಕಾದವರೇ ಇರಬಹುದು. ಆದರೆ, ದೇಶದ ಆರ್ಥಿಕ ಸ್ಥಿತಿ ಅದೆಷ್ಟು ಹದಗೆಟ್ಟು ಹೋಗಿತ್ತೆಂದರೆ, (ಹದಗೆಡಿಸಲಾಗಿತ್ತೆಂದರೆ) ತುಂಬಾ ದೃಢ ಮತ್ತು ದೂರಾಲೋಚನೆಯ ನಿರ್ಧಾರಗಳಿಂದ ಮಾತ್ರ ಅದನ್ನು ನಿಭಾಯಿಸಲು ಸಾಧ್ಯ ಎನ್ನುವ ಸ್ಥಿತಿಯಲ್ಲಿತ್ತು. ಆದರೆ ನಿರ್ಮಲಾಗೆ ಅಂತಹ ಸ್ವಾತಂತ್ರ್ಯವೂ ಇರಲಿಲ್ಲ, ಆ ಬಗೆಯ ಇಚ್ಛೆ ನಿರ್ಮಲಾ ಅವರಿಗೂ ಇದ್ದಂತಿರಲಿಲ್ಲ. ಅವರು ಮಂಡಿಸಿದ ಮೊದಲ ಬಜೆಟ್ಟಿನ ಕ್ರಮಗಳು ಹಾಗೂ ಆ ನಂತರದಲ್ಲಿ ಅವರೇ ಆ ಕ್ರಮಗಳಿಂದ ತೆಗೆದುಕೊಂಡ ಯೂ-ಟರ್ನ್ ಗಳು ಇದಕ್ಕೆ ಸಾಕ್ಷಿ. ಈಗ ಅವರ ಪತಿಯೇ ಅವರನ್ನು ಟೀಕಿಸುವಂತಹ ಸಂದರ್ಭ ಬಂದೊದಗಿದೆ. ದುರಂತವೆಂದರೆ, ಈಗಲೂ ಕೇಂದ್ರದ ಬಿಜೆಪಿ ಸರ್ಕಾರದ ಬಳಿ ಸಮರ್ಪಕ ಪರಿಹಾರದ ನೀಲನಕ್ಷೆಗಳು ಗೋಚರಿಸುತ್ತಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...