HomeUncategorizedಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

ಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

- Advertisement -
- Advertisement -

ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಿ, ಪ್ರಮುಖ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ವಿತ್ತ ಸಚಿವೆಯಾದ ನಾಲ್ಕೇ ತಿಂಗಳಿಗೆ ಆರ್ಥಿಕ ಕುಸಿತದ ಮೇನ್ ವಿಲನ್' ರೂಪದಲ್ಲಿ ಎಲ್ಲರೆದುರು ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭಾರತದ ಆರ್ಥಿಕತೆ ಗಂಭೀರವಾಗಿ ಪತನವಾಗಲು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿಗಿಂತಲೂ ಪ್ರಧಾನಿ ಮೋದಿಯವರ ಯಡವಟ್ಟು ಆರ್ಥಿಕ ನೀತಿಗಳು ಕಾರಣಗಳು ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಮೊನ್ನೆಯಷ್ಟೇ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಅಭಿಜಿತ್ ಬ್ಯಾನರ್ಜಿ ಹಾಗೂ ಎಸ್ತರ್ ಡುಪ್ಲೋ ತುಂಬಾ ಹಿಂದೆಯೇ ಕರಾಳ ದಿನಗಳಿಗೆ ಕಾರಣವಾಗುತ್ತದೆಂದು ಅಂದಾಜಿಸಿದ್ದ `ನೋಟು ಅಮಾನ್ಯೀಕರಣ’ವನ್ನು ಹೇರುವುದರ ಹಿಂದೆ ಅರ್ಥ ಸಚಿವ ಜೇಟ್ಲಿ, ಆರ್.ಬಿ.ಐ. ಆಡಳಿತ ಮಂಡಳಿಗೆ ಯಾವ ಪಾತ್ರವೂ ಇರಲಿಲ್ಲ. ಅಷ್ಟರ ಮಟ್ಟಿಗೆ ಮೋದಿಯವರ ನೀತಿಗಳು ಇವತ್ತಿನ ಆರ್ಥಿಕ ದುಸ್ಥಿತಿಗೆ ಕಾರಣ. ಆದರೆ ಈಗ ಪರಿಸ್ಥಿತಿಯನ್ನು ಎತ್ತ ತಿರುಗಿಸಲಾಗುತ್ತಿದೆಯೆಂದರೆ, ಈ ಸಮಸ್ತ ಕುಸಿತಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ಹಣಕಾಸು ಇಲಾಖೆಯ ಹೊಣೆ ಹೊತ್ತ ನಿರ್ಮಲಾ ಸೀತಾರಾಮನ್ ಖಳನಾಯಕಿಯಾಗಿ ಬಿಂಬಿತವಾಗುತ್ತಿದ್ದಾರೆ. ನಿರ್ಮಲಾ ಕೂಡಾ, ಆರ್ಥಿಕ ಕುಸಿತದ ಕುರಿತಾಗಿ ಕೇಳಿಬರುತ್ತಿರುವ ಟೀಕೆಗಳನ್ನು ವೈಯಕ್ತಿಕವಾಗಿ ಸ್ವೀಕರಿಸಿ `ಅಗ್ರೆಸಿವ್’ ಆಗಿ ಪ್ರತಿಕ್ರಿಯಿಸುತ್ತಿರೋದು, ಇಡೀ ರಂಗವೇದಿಕೆಯಿಂದ ಹಿಂದೆ ಸರಿಯಲು ಮೋದಿಗೆ ಅನುವು ಮಾಡಿಕೊಡುತ್ತಿದೆ. ಸ್ವತಃ ಮೋದಿ ಅಭಿಮಾನಿಗಳು, ಮೋದಿಯನ್ನು ಹಾಡಿ ಹೊಗಳಿದ್ದ ದೊಡ್ಡದೊಡ್ಡ ಉದ್ಯಮಿಗಳು ನಿರ್ಮಲಾರನ್ನೇ ಟಾರ್ಗೆಟ್ ಮಾಡಿ ಟೀಕೆಗಳನ್ನು ಸುರಿಸುತ್ತಿದ್ದಾರೆ.

ನೋ ಡೌಟ್, ವಿತ್ತ ಸಚಿವೆಯಾಗಿ ದೇಶದ ಸದ್ಯದ ಆರ್ಥಿಕ ಪರಿಸ್ಥಿತಿಗೆ ಅವರೇ ಉತ್ತರದಾಯಿ ಆಗುತ್ತಾರೆ. ಟೀಕೆಗಳೂ ಅವರಿಗೇ ಸಲ್ಲುತ್ತವೆ. ಆದರೆ ಕಳೆದ ಬಿಜೆಪಿ ಅವಧಿಯಲ್ಲಿ ಪರಿಸ್ಥಿತಿ ಹೀಗೇ ಇತ್ತಾ? ಕಡೇಪಕ್ಷ ಹಣಕಾಸು ಸಚಿವರ ಜೊತೆ ಚರ್ಚಿಸಿಯೇ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತೇ? ಈ ಪ್ರಶ್ನೆಗಳಿಗೆ ಉತ್ತರ ಎಲ್ಲರಿಗೂ ಗೊತ್ತಿರುವಂತದ್ದೇ. ಆದರೆ ಕುಸಿತ ಶುರುವಾಗಿ, ದೇಶ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ ಅದಕ್ಕೆ ಕಾರಣರಾದವರು ಹಿನ್ನೆಲೆಗೆ ಸರಿದು, ಹುದ್ದೆಯ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ಅವರನ್ನು ಮುಂದೆ ಬಿಡುತ್ತಿರೋದು ನೋಡಿದರೆ, ಬಲಿಪಶು ಮಾಡಲಾಗುತ್ತಿದೆಯಾ? ಎಂಬ ವಾದವೀಗ ಮುನ್ನೆಲೆಗೆ ಬರುತ್ತಿದೆ. ಅಂದಹಾಗೆ, ಕಳೆದ ಸರ್ಕಾರದ ಅವಧಿಯಲ್ಲೂ ಮನೋಹರ್ ಪಾರಿಕ್ಕರ್ ರಕ್ಷಣಾ ಮಂತ್ರಿಯಾಗಿದ್ದರೂ, ರಕ್ಷಣಾ ಇಲಾಖೆಯನ್ನೇ ಬೈಪಾಸ್ ಮಾಡಿದ್ದ ಪ್ರಧಾನಿ ಮಂತ್ರಿ ಕಾರ್ಯಾಲಯ ಏಕಪಕ್ಷೀಯವಾಗಿ ವ್ಯವಹಾರ ಕುದುರಿಸಿದ್ದ `ರಫೇಲ್ ಖರೀದಿ’ ಹಗರಣ ಮಾಧ್ಯಮಗಳ ಮೂಲಕ ದೊಡ್ಡ ಬಿರುಗಾಳಿ ಎಬ್ಬಿಸುವ ಹೊತ್ತಿಗೆ ಸರಿಯಾಗಿ ನಿರ್ಮಲಾ ಸೀತಾರಾಮನ್ ಅವರನ್ನು ಪಾರಿಕ್ಕರ್ ಜಾಗದಲ್ಲಿ ಪ್ರತಿಷ್ಠಾಪಿಸಿ, ಕಳಂಕ ಮೆತ್ತಿಸಿಕೊಳ್ಳುವಂತೆ ಮಾಡಿದ್ದು ಕಾಕತಾಳೀಯವೇ ಇರಬಹುದು!

ಪೂರ್ಣ ಪ್ರಮಾಣದ ಹಣಕಾಸು ಸಚಿವೆಯಾಗಿ ದೇಶದ ಮೊದಲ ಮಹಿಳೆ ಎಂಬ ಕೀರ್ತಿಗೆ ಪಾತ್ರರಾದ ನಿರ್ಮಲಾ ಸೀತಾರಾಮನ್ ಅಧಿಕಾರ ವಹಿಸಿಕೊಂಡ ಘಳಿಗೆಯಲ್ಲೇ ಆರ್ಥಿಕತೆ ಇಳಿಜಾರಿನತ್ತ ಮುಖ ಮಾಡಿತ್ತು. ಭಾರತದ ಆರ್ಥಿಕ ಬೆಳವಣಿಗೆ ಕಳೆದ ವರ್ಷದ ಕಡೆಯ ತ್ರೈಮಾಸಿಕದಲ್ಲಿ ಶೇ.6ಕ್ಕೆ ಕುಸಿದಿದ್ದರೆ, 2018-19ನೇ ಸಂಪೂರ್ಣ ವಿತ್ತ ವರ್ಷದಲ್ಲಿ ಅದರ ಸರಾಸರಿ ವೇಗ ಶೇ.6.8ಕ್ಕೆ ಕ್ಷೀಣಗೊಂಡಿತ್ತು. ಇನ್ನು 2019-20ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಚಾರಿತ್ರಿಕ ಕನಿಷ್ಠ ಶೇ.5ರತ್ತ ದಾಪುಗಾಲಿಡಲು ಶುರು ಮಾಡಿತ್ತು. ಅಂತೆಯೇ ದೇಶದ ನಿರುದ್ಯೋಗ ದರ 2017ರಲ್ಲೇ ಶೇ.6ಕ್ಕೆ ದಾಖಲೆಯ ಕುಸಿತ ಕಂಡಿತ್ತು. ಅಂತಹ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದು!

ಇನ್ನು ನಿರ್ಮಲಾ ಸೀತಾರಾಮನ್ ಜುಲೈನಲ್ಲಿ ತಮ್ಮ ಮೊದಲ ಬಜೆಟ್ ಮಂಡಿಸಿದರು. ಆಗ ಹಿಂದಿದ್ದ ಹಲವು ಸಂಪ್ರದಾಯಗಳನ್ನು ಮುರಿದರು. ದಿನಬೆಳಗಾದರೆ ದೇವರು, ಹಬ್ಬ ಹರಿದಿನಗಳ ಬಗ್ಗೆ ಟ್ವೀಟ್ ಮಾಡುವ ನಿರ್ಮಲಾ ಸೀತಾರಾಮನ್ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮಾತ್ರ ಮಾತನಾಡುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಆರ್ಥಿಕತಜ್ಞರಾದ ಶಮಿಕಾ ರವಿ ಮಾತನಾಡಿ, ಭಾರತ ಆರ್ಥಿಕತೆಯ ಕುಸಿತ ಗಂಭೀರ ಪರಿಣಾಮ ಬೀರಲಿದೆ. ಕುಸಿಯುತ್ತಿರುವ ಆರ್ಥಿಕತೆಯನ್ನು ಸುಧಾರಿಸಲು ಪ್ರಮುಖ ತಂತ್ರಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಆಲೋಚಿಸಬೇಕಿದೆ ಎಂದು ಹೇಳಿದ್ದರು. ಬಿಜೆಪಿ ಎಂ.ಪಿ ಸುಬ್ರಮಣಿಯನ್ ಸ್ವಾಮಿ ಕೂಡ ನಿರ್ಮಲಾ ಸೀತಾರಾಮನ್ ಅವರ ಕಾರ್ಯ ವೈಖರಿಯನ್ನು ಖಂಡಿಸಿದ್ದರು. ನೆಲಕಚ್ಚುತ್ತಿರುವ ಆರ್ಥಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಮೋದಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಸೂಕ್ಷ್ಮ ಚಿಂತನೆಯ ಅವಶ್ಯಕತೆಯ ಬಗ್ಗೆ ತಿಳಿಸಿದ್ದರು.

ಪ್ರತಿಷ್ಠಿತ ಜೆಎನ್.ಯು ವಿವಿಯಲ್ಲಿ ಎಂಎ, ಎಂ.ಫಿಲ್  (ಎಕನಾಮಿಕ್ಸ್) ಪಡೆದಿದ್ದ ನಿರ್ಮಲಾ, ಓದು-ವಿದ್ಯಾರ್ಹತೆ-ಅನುಭವದ ನಿಟ್ಟಿನಲ್ಲಿ ಹಣಕಾಸು ಸಚಿವೆಯ ಹುದ್ದೆಗೆ ಲಾಯಕ್ಕಾದವರೇ ಇರಬಹುದು. ಆದರೆ, ದೇಶದ ಆರ್ಥಿಕ ಸ್ಥಿತಿ ಅದೆಷ್ಟು ಹದಗೆಟ್ಟು ಹೋಗಿತ್ತೆಂದರೆ, (ಹದಗೆಡಿಸಲಾಗಿತ್ತೆಂದರೆ) ತುಂಬಾ ದೃಢ ಮತ್ತು ದೂರಾಲೋಚನೆಯ ನಿರ್ಧಾರಗಳಿಂದ ಮಾತ್ರ ಅದನ್ನು ನಿಭಾಯಿಸಲು ಸಾಧ್ಯ ಎನ್ನುವ ಸ್ಥಿತಿಯಲ್ಲಿತ್ತು. ಆದರೆ ನಿರ್ಮಲಾಗೆ ಅಂತಹ ಸ್ವಾತಂತ್ರ್ಯವೂ ಇರಲಿಲ್ಲ, ಆ ಬಗೆಯ ಇಚ್ಛೆ ನಿರ್ಮಲಾ ಅವರಿಗೂ ಇದ್ದಂತಿರಲಿಲ್ಲ. ಅವರು ಮಂಡಿಸಿದ ಮೊದಲ ಬಜೆಟ್ಟಿನ ಕ್ರಮಗಳು ಹಾಗೂ ಆ ನಂತರದಲ್ಲಿ ಅವರೇ ಆ ಕ್ರಮಗಳಿಂದ ತೆಗೆದುಕೊಂಡ ಯೂ-ಟರ್ನ್ ಗಳು ಇದಕ್ಕೆ ಸಾಕ್ಷಿ. ಈಗ ಅವರ ಪತಿಯೇ ಅವರನ್ನು ಟೀಕಿಸುವಂತಹ ಸಂದರ್ಭ ಬಂದೊದಗಿದೆ. ದುರಂತವೆಂದರೆ, ಈಗಲೂ ಕೇಂದ್ರದ ಬಿಜೆಪಿ ಸರ್ಕಾರದ ಬಳಿ ಸಮರ್ಪಕ ಪರಿಹಾರದ ನೀಲನಕ್ಷೆಗಳು ಗೋಚರಿಸುತ್ತಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...