HomeUncategorizedಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

ಆರ್ಥಿಕ ಕುಸಿತ: ಮೋದಿಗೆ ಕಳಂಕ ತಪ್ಪಿಸಲು ಬಲಿಪಶು ಆಗುತ್ತಿದ್ದಾರಾ ನಿರ್ಮಲಾ ಸೀತಾರಾಮನ್!?

- Advertisement -
- Advertisement -

ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವ ಸ್ಥಾನ ಅಲಂಕರಿಸಿ, ಪ್ರಮುಖ ಜವಾಬ್ದಾರಿ ಹೊತ್ತಿರುವ ನಿರ್ಮಲಾ ಸೀತಾರಾಮನ್ ವಿತ್ತ ಸಚಿವೆಯಾದ ನಾಲ್ಕೇ ತಿಂಗಳಿಗೆ ಆರ್ಥಿಕ ಕುಸಿತದ ಮೇನ್ ವಿಲನ್' ರೂಪದಲ್ಲಿ ಎಲ್ಲರೆದುರು ಕಾಣಿಸಿಕೊಳ್ಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಭಾರತದ ಆರ್ಥಿಕತೆ ಗಂಭೀರವಾಗಿ ಪತನವಾಗಲು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅರುಣ್ ಜೇಟ್ಲಿಗಿಂತಲೂ ಪ್ರಧಾನಿ ಮೋದಿಯವರ ಯಡವಟ್ಟು ಆರ್ಥಿಕ ನೀತಿಗಳು ಕಾರಣಗಳು ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಮೊನ್ನೆಯಷ್ಟೇ ಅರ್ಥಶಾಸ್ತ್ರಕ್ಕೆ ನೊಬೆಲ್ ಪ್ರಶಸ್ತಿ ಪಡೆದ ಅಭಿಜಿತ್ ಬ್ಯಾನರ್ಜಿ ಹಾಗೂ ಎಸ್ತರ್ ಡುಪ್ಲೋ ತುಂಬಾ ಹಿಂದೆಯೇ ಕರಾಳ ದಿನಗಳಿಗೆ ಕಾರಣವಾಗುತ್ತದೆಂದು ಅಂದಾಜಿಸಿದ್ದ `ನೋಟು ಅಮಾನ್ಯೀಕರಣ’ವನ್ನು ಹೇರುವುದರ ಹಿಂದೆ ಅರ್ಥ ಸಚಿವ ಜೇಟ್ಲಿ, ಆರ್.ಬಿ.ಐ. ಆಡಳಿತ ಮಂಡಳಿಗೆ ಯಾವ ಪಾತ್ರವೂ ಇರಲಿಲ್ಲ. ಅಷ್ಟರ ಮಟ್ಟಿಗೆ ಮೋದಿಯವರ ನೀತಿಗಳು ಇವತ್ತಿನ ಆರ್ಥಿಕ ದುಸ್ಥಿತಿಗೆ ಕಾರಣ. ಆದರೆ ಈಗ ಪರಿಸ್ಥಿತಿಯನ್ನು ಎತ್ತ ತಿರುಗಿಸಲಾಗುತ್ತಿದೆಯೆಂದರೆ, ಈ ಸಮಸ್ತ ಕುಸಿತಕ್ಕೆ ನಾಲ್ಕು ತಿಂಗಳ ಹಿಂದಷ್ಟೇ ಹಣಕಾಸು ಇಲಾಖೆಯ ಹೊಣೆ ಹೊತ್ತ ನಿರ್ಮಲಾ ಸೀತಾರಾಮನ್ ಖಳನಾಯಕಿಯಾಗಿ ಬಿಂಬಿತವಾಗುತ್ತಿದ್ದಾರೆ. ನಿರ್ಮಲಾ ಕೂಡಾ, ಆರ್ಥಿಕ ಕುಸಿತದ ಕುರಿತಾಗಿ ಕೇಳಿಬರುತ್ತಿರುವ ಟೀಕೆಗಳನ್ನು ವೈಯಕ್ತಿಕವಾಗಿ ಸ್ವೀಕರಿಸಿ `ಅಗ್ರೆಸಿವ್’ ಆಗಿ ಪ್ರತಿಕ್ರಿಯಿಸುತ್ತಿರೋದು, ಇಡೀ ರಂಗವೇದಿಕೆಯಿಂದ ಹಿಂದೆ ಸರಿಯಲು ಮೋದಿಗೆ ಅನುವು ಮಾಡಿಕೊಡುತ್ತಿದೆ. ಸ್ವತಃ ಮೋದಿ ಅಭಿಮಾನಿಗಳು, ಮೋದಿಯನ್ನು ಹಾಡಿ ಹೊಗಳಿದ್ದ ದೊಡ್ಡದೊಡ್ಡ ಉದ್ಯಮಿಗಳು ನಿರ್ಮಲಾರನ್ನೇ ಟಾರ್ಗೆಟ್ ಮಾಡಿ ಟೀಕೆಗಳನ್ನು ಸುರಿಸುತ್ತಿದ್ದಾರೆ.

ನೋ ಡೌಟ್, ವಿತ್ತ ಸಚಿವೆಯಾಗಿ ದೇಶದ ಸದ್ಯದ ಆರ್ಥಿಕ ಪರಿಸ್ಥಿತಿಗೆ ಅವರೇ ಉತ್ತರದಾಯಿ ಆಗುತ್ತಾರೆ. ಟೀಕೆಗಳೂ ಅವರಿಗೇ ಸಲ್ಲುತ್ತವೆ. ಆದರೆ ಕಳೆದ ಬಿಜೆಪಿ ಅವಧಿಯಲ್ಲಿ ಪರಿಸ್ಥಿತಿ ಹೀಗೇ ಇತ್ತಾ? ಕಡೇಪಕ್ಷ ಹಣಕಾಸು ಸಚಿವರ ಜೊತೆ ಚರ್ಚಿಸಿಯೇ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿತ್ತೇ? ಈ ಪ್ರಶ್ನೆಗಳಿಗೆ ಉತ್ತರ ಎಲ್ಲರಿಗೂ ಗೊತ್ತಿರುವಂತದ್ದೇ. ಆದರೆ ಕುಸಿತ ಶುರುವಾಗಿ, ದೇಶ ಸಂಕಷ್ಟಕ್ಕೆ ಸಿಲುಕುತ್ತಿದ್ದಂತೆಯೇ ಅದಕ್ಕೆ ಕಾರಣರಾದವರು ಹಿನ್ನೆಲೆಗೆ ಸರಿದು, ಹುದ್ದೆಯ ಕಾರಣಕ್ಕೆ ನಿರ್ಮಲಾ ಸೀತಾರಾಮನ್ ಅವರನ್ನು ಮುಂದೆ ಬಿಡುತ್ತಿರೋದು ನೋಡಿದರೆ, ಬಲಿಪಶು ಮಾಡಲಾಗುತ್ತಿದೆಯಾ? ಎಂಬ ವಾದವೀಗ ಮುನ್ನೆಲೆಗೆ ಬರುತ್ತಿದೆ. ಅಂದಹಾಗೆ, ಕಳೆದ ಸರ್ಕಾರದ ಅವಧಿಯಲ್ಲೂ ಮನೋಹರ್ ಪಾರಿಕ್ಕರ್ ರಕ್ಷಣಾ ಮಂತ್ರಿಯಾಗಿದ್ದರೂ, ರಕ್ಷಣಾ ಇಲಾಖೆಯನ್ನೇ ಬೈಪಾಸ್ ಮಾಡಿದ್ದ ಪ್ರಧಾನಿ ಮಂತ್ರಿ ಕಾರ್ಯಾಲಯ ಏಕಪಕ್ಷೀಯವಾಗಿ ವ್ಯವಹಾರ ಕುದುರಿಸಿದ್ದ `ರಫೇಲ್ ಖರೀದಿ’ ಹಗರಣ ಮಾಧ್ಯಮಗಳ ಮೂಲಕ ದೊಡ್ಡ ಬಿರುಗಾಳಿ ಎಬ್ಬಿಸುವ ಹೊತ್ತಿಗೆ ಸರಿಯಾಗಿ ನಿರ್ಮಲಾ ಸೀತಾರಾಮನ್ ಅವರನ್ನು ಪಾರಿಕ್ಕರ್ ಜಾಗದಲ್ಲಿ ಪ್ರತಿಷ್ಠಾಪಿಸಿ, ಕಳಂಕ ಮೆತ್ತಿಸಿಕೊಳ್ಳುವಂತೆ ಮಾಡಿದ್ದು ಕಾಕತಾಳೀಯವೇ ಇರಬಹುದು!

ಪೂರ್ಣ ಪ್ರಮಾಣದ ಹಣಕಾಸು ಸಚಿವೆಯಾಗಿ ದೇಶದ ಮೊದಲ ಮಹಿಳೆ ಎಂಬ ಕೀರ್ತಿಗೆ ಪಾತ್ರರಾದ ನಿರ್ಮಲಾ ಸೀತಾರಾಮನ್ ಅಧಿಕಾರ ವಹಿಸಿಕೊಂಡ ಘಳಿಗೆಯಲ್ಲೇ ಆರ್ಥಿಕತೆ ಇಳಿಜಾರಿನತ್ತ ಮುಖ ಮಾಡಿತ್ತು. ಭಾರತದ ಆರ್ಥಿಕ ಬೆಳವಣಿಗೆ ಕಳೆದ ವರ್ಷದ ಕಡೆಯ ತ್ರೈಮಾಸಿಕದಲ್ಲಿ ಶೇ.6ಕ್ಕೆ ಕುಸಿದಿದ್ದರೆ, 2018-19ನೇ ಸಂಪೂರ್ಣ ವಿತ್ತ ವರ್ಷದಲ್ಲಿ ಅದರ ಸರಾಸರಿ ವೇಗ ಶೇ.6.8ಕ್ಕೆ ಕ್ಷೀಣಗೊಂಡಿತ್ತು. ಇನ್ನು 2019-20ರ ಮೊದಲ ತ್ರೈಮಾಸಿಕದಲ್ಲಿ ಜಿಡಿಪಿ ಚಾರಿತ್ರಿಕ ಕನಿಷ್ಠ ಶೇ.5ರತ್ತ ದಾಪುಗಾಲಿಡಲು ಶುರು ಮಾಡಿತ್ತು. ಅಂತೆಯೇ ದೇಶದ ನಿರುದ್ಯೋಗ ದರ 2017ರಲ್ಲೇ ಶೇ.6ಕ್ಕೆ ದಾಖಲೆಯ ಕುಸಿತ ಕಂಡಿತ್ತು. ಅಂತಹ ಸಂದರ್ಭದಲ್ಲಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವೆಯಾಗಿ ಅಧಿಕಾರ ಸ್ವೀಕರಿಸಿದ್ದು!

ಇನ್ನು ನಿರ್ಮಲಾ ಸೀತಾರಾಮನ್ ಜುಲೈನಲ್ಲಿ ತಮ್ಮ ಮೊದಲ ಬಜೆಟ್ ಮಂಡಿಸಿದರು. ಆಗ ಹಿಂದಿದ್ದ ಹಲವು ಸಂಪ್ರದಾಯಗಳನ್ನು ಮುರಿದರು. ದಿನಬೆಳಗಾದರೆ ದೇವರು, ಹಬ್ಬ ಹರಿದಿನಗಳ ಬಗ್ಗೆ ಟ್ವೀಟ್ ಮಾಡುವ ನಿರ್ಮಲಾ ಸೀತಾರಾಮನ್ ಕುಸಿಯುತ್ತಿರುವ ಆರ್ಥಿಕತೆ ಬಗ್ಗೆ ಮಾತ್ರ ಮಾತನಾಡುವುದಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತವಾಗಿತ್ತು. ಆರ್ಥಿಕತಜ್ಞರಾದ ಶಮಿಕಾ ರವಿ ಮಾತನಾಡಿ, ಭಾರತ ಆರ್ಥಿಕತೆಯ ಕುಸಿತ ಗಂಭೀರ ಪರಿಣಾಮ ಬೀರಲಿದೆ. ಕುಸಿಯುತ್ತಿರುವ ಆರ್ಥಿಕತೆಯನ್ನು ಸುಧಾರಿಸಲು ಪ್ರಮುಖ ತಂತ್ರಗಳನ್ನು ಕಂಡುಕೊಳ್ಳುವ ಅವಶ್ಯಕತೆಯಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಆಲೋಚಿಸಬೇಕಿದೆ ಎಂದು ಹೇಳಿದ್ದರು. ಬಿಜೆಪಿ ಎಂ.ಪಿ ಸುಬ್ರಮಣಿಯನ್ ಸ್ವಾಮಿ ಕೂಡ ನಿರ್ಮಲಾ ಸೀತಾರಾಮನ್ ಅವರ ಕಾರ್ಯ ವೈಖರಿಯನ್ನು ಖಂಡಿಸಿದ್ದರು. ನೆಲಕಚ್ಚುತ್ತಿರುವ ಆರ್ಥಿಕತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಮೋದಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಸೂಕ್ಷ್ಮ ಚಿಂತನೆಯ ಅವಶ್ಯಕತೆಯ ಬಗ್ಗೆ ತಿಳಿಸಿದ್ದರು.

ಪ್ರತಿಷ್ಠಿತ ಜೆಎನ್.ಯು ವಿವಿಯಲ್ಲಿ ಎಂಎ, ಎಂ.ಫಿಲ್  (ಎಕನಾಮಿಕ್ಸ್) ಪಡೆದಿದ್ದ ನಿರ್ಮಲಾ, ಓದು-ವಿದ್ಯಾರ್ಹತೆ-ಅನುಭವದ ನಿಟ್ಟಿನಲ್ಲಿ ಹಣಕಾಸು ಸಚಿವೆಯ ಹುದ್ದೆಗೆ ಲಾಯಕ್ಕಾದವರೇ ಇರಬಹುದು. ಆದರೆ, ದೇಶದ ಆರ್ಥಿಕ ಸ್ಥಿತಿ ಅದೆಷ್ಟು ಹದಗೆಟ್ಟು ಹೋಗಿತ್ತೆಂದರೆ, (ಹದಗೆಡಿಸಲಾಗಿತ್ತೆಂದರೆ) ತುಂಬಾ ದೃಢ ಮತ್ತು ದೂರಾಲೋಚನೆಯ ನಿರ್ಧಾರಗಳಿಂದ ಮಾತ್ರ ಅದನ್ನು ನಿಭಾಯಿಸಲು ಸಾಧ್ಯ ಎನ್ನುವ ಸ್ಥಿತಿಯಲ್ಲಿತ್ತು. ಆದರೆ ನಿರ್ಮಲಾಗೆ ಅಂತಹ ಸ್ವಾತಂತ್ರ್ಯವೂ ಇರಲಿಲ್ಲ, ಆ ಬಗೆಯ ಇಚ್ಛೆ ನಿರ್ಮಲಾ ಅವರಿಗೂ ಇದ್ದಂತಿರಲಿಲ್ಲ. ಅವರು ಮಂಡಿಸಿದ ಮೊದಲ ಬಜೆಟ್ಟಿನ ಕ್ರಮಗಳು ಹಾಗೂ ಆ ನಂತರದಲ್ಲಿ ಅವರೇ ಆ ಕ್ರಮಗಳಿಂದ ತೆಗೆದುಕೊಂಡ ಯೂ-ಟರ್ನ್ ಗಳು ಇದಕ್ಕೆ ಸಾಕ್ಷಿ. ಈಗ ಅವರ ಪತಿಯೇ ಅವರನ್ನು ಟೀಕಿಸುವಂತಹ ಸಂದರ್ಭ ಬಂದೊದಗಿದೆ. ದುರಂತವೆಂದರೆ, ಈಗಲೂ ಕೇಂದ್ರದ ಬಿಜೆಪಿ ಸರ್ಕಾರದ ಬಳಿ ಸಮರ್ಪಕ ಪರಿಹಾರದ ನೀಲನಕ್ಷೆಗಳು ಗೋಚರಿಸುತ್ತಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...