Homeಅಂತರಾಷ್ಟ್ರೀಯಭಾರತ ಏಷ್ಯಾದಲ್ಲೇ ಅತ್ಯಂತ ಭ್ರಷ್ಟ ದೇಶ: ಸಮೀಕ್ಷಾ ವರದಿ

ಭಾರತ ಏಷ್ಯಾದಲ್ಲೇ ಅತ್ಯಂತ ಭ್ರಷ್ಟ ದೇಶ: ಸಮೀಕ್ಷಾ ವರದಿ

ಭಾರತದ ಬಹುಪಾಲು ನಾಗರಿಕರು (ಶೇಕಡಾ 63) ಭ್ರಷ್ಟಾಚಾರದ ಬಗ್ಗೆ ದೂರು ನೀಡಿದರೆ ಪ್ರತೀಕಾರಕ್ಕೆ ಒಳಗಾಗುತ್ತಾರೆ ಎಂದು ವರದಿ ಹೇಳಿದೆ.

- Advertisement -
- Advertisement -

ಭಾರತವು ಏಷ್ಯಾದಲ್ಲೇ ಅತಿ ಹೆಚ್ಚು ಭ್ರಷ್ಟಾಚಾರ ಹೊಂದಿರುವ ದೇಶವಾಗಿದ್ದು ಮತ್ತು ಸಾರ್ವಜನಿಕ ಸೇವೆಗಳನ್ನು ಪಡೆಯಲು ವೈಯಕ್ತಿಕ ಸಂಪರ್ಕಗಳನ್ನು ಬಳಸುವವರ ಸಂಖ್ಯೆ ಹೆಚ್ಚು ಎಂದು ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್‌ನ ಸಮೀಕ್ಷಯಲ್ಲಿ ತಿಳಿದು ಬಂದಿದೆ.

ಲಂಚ ಪಾವತಿಸಿದ ಸುಮಾರು 50% ದಷ್ಟು ಜನರಲ್ಲಿ 32% ರಷ್ಟು ಜನರು ವೈಯಕ್ತಿಕ ಸಂಪರ್ಕಗಳನ್ನು ಬಳಸದೆ ತಾವು ಸೇವೆಯನ್ನು ಪಡೆಯಲು ಸಾಧ್ಯವಿರಲಿಲ್ಲ ಎಂದು ಹೇಳಿದ್ದಾರೆ. ಈ ವರ್ಷದ ಜೂನ್ 17 ಮತ್ತು ಜುಲೈ 17 ರ ನಡುವೆ ಭಾರತದಲ್ಲಿ 2,000 ಮಾದರಿ ಗಾತ್ರದೊಂದಿಗೆ ನಡೆಸಿದ ಸಮೀಕ್ಷೆಯ ಆಧಾರದ ಮೇಲೆ ಈ ಸಮೀಕ್ಷಾ ವರದಿ ತಯಾರಾಗಿದೆ.

ಇದನ್ನೂ ಓದಿ: ಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ 

ಭ್ರಷ್ಟಾಚಾರದ ಪ್ರಕರಣಗಳನ್ನು ತಡೆಯಲು ದೂರು ನೀಡುವುದು ಅಗತ್ಯವೆನಿಸಿದರೂ ಭಾರತದ ಬಹುಪಾಲು ನಾಗರಿಕರು (ಶೇಕಡಾ 63) ಭ್ರಷ್ಟಾಚಾರದ ಬಗ್ಗೆ ದೂರು ನೀಡಿದರೆ ಪ್ರತೀಕಾರಕ್ಕೆ ಒಳಗಾಗುತ್ತಾರೆ ಎಂದು ವರದಿ ಹೇಳಿದೆ.

ಭಾರತ, ಮಲೇಷ್ಯಾ, ಥೈಲ್ಯಾಂಡ್, ಶ್ರೀಲಂಕಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವಾರು ದೇಶಗಳಲ್ಲಿ ಲೈಂಗಿಕ ಸುಲಿಗೆ ಪ್ರಮಾಣವೂ ಹೆಚ್ಚಾಗಿದೆ ಮತ್ತು ಇದನ್ನು ತಡೆಗಟ್ಟಲು ಹಾಗೂ ನಿರ್ದಿಷ್ಟ ಲಿಂಗಭೇದದ ಭ್ರಷ್ಟಾಚಾರವನ್ನು ಪರಿಹರಿಸಲು ಹೆಚ್ಚಿನದನ್ನು ಮಾಡಬೇಕು ಎಂದು ವರದಿ ತಿಳಿಸಿದೆ.

ಲೈಂಗಿಕ ಸುಲಿಗೆ ಎನ್ನುವುದು ಫೋಟೋಗಳನ್ನು ತಿದ್ದಿ ಆ ಮೂಲಕ ಲೈಂಗಿಕ ಚಟುವಟಿಕೆಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುವ ಮೂಲಕ ಹಣ ಅಥವಾ ಲೈಂಗಿಕ ನೆರವು ಪಡೆಯುವುದಾಗಿದೆ.

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಭಾರತದಲ್ಲಿ, 89% ರಷ್ಟು ಜನರು ಸರ್ಕಾರದ ಭ್ರಷ್ಟಾಚಾರವು ಒಂದು ದೊಡ್ಡ ಸಮಸ್ಯೆ ಎಂದು ಭಾವಿಸುತ್ತಾರೆ, 18% ಜನರು ಮತಗಳಿಗಾಗಿ ಲಂಚ ಪಡೆಯುತ್ತಾರೆ ಮತ್ತು 11% ಲೈಂಗಿಕ ಸುಳಿಗೆಯ ಅನುಭವ ಹೊಂದಿದ್ದಾರೆ ಅಥವಾ ಅದು ನಡೆಸುವವರನ್ನು ತಿಳಿದಿದ್ದಾರೆ.

ಸಮೀಕ್ಷೆಯಲ್ಲಿ 63% ದಷ್ಟು ಜನರು ಭ್ರಷ್ಟಾಚಾರವನ್ನು ನಿಭಾಯಿಸುವಲ್ಲಿ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರೆ, 73% ಜನರು ದೇಶದ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.

17 ದೇಶಗಳಲ್ಲಿ ನಡೆಸಿದ ಕ್ಷೇತ್ರಕಾರ್ಯದ ಆಧಾರದ ಮೇಲೆ, ಸಂಸ್ಥೆಯೂ ಒಟ್ಟು 20,000 ನಾಗರಿಕರನ್ನು ಸಮೀಕ್ಷೆ ಮಾಡಿದೆ.

ಇದನ್ನೂ ಓದಿ: ಭ್ರಷ್ಟಾಚಾರ ಪ್ರಶ್ನಿಸಿದ ಪತ್ರಕರ್ತನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಲ್ಲೆ: ಅವ್ಯಾಹತವಾಗಿ ನಡೆದಿದೆ ಅರಣ್ಯ ಲೂಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...