Homeಅಂತರಾಷ್ಟ್ರೀಯಭಾರತ ಏಷ್ಯಾದಲ್ಲೇ ಅತ್ಯಂತ ಭ್ರಷ್ಟ ದೇಶ: ಸಮೀಕ್ಷಾ ವರದಿ

ಭಾರತ ಏಷ್ಯಾದಲ್ಲೇ ಅತ್ಯಂತ ಭ್ರಷ್ಟ ದೇಶ: ಸಮೀಕ್ಷಾ ವರದಿ

ಭಾರತದ ಬಹುಪಾಲು ನಾಗರಿಕರು (ಶೇಕಡಾ 63) ಭ್ರಷ್ಟಾಚಾರದ ಬಗ್ಗೆ ದೂರು ನೀಡಿದರೆ ಪ್ರತೀಕಾರಕ್ಕೆ ಒಳಗಾಗುತ್ತಾರೆ ಎಂದು ವರದಿ ಹೇಳಿದೆ.

- Advertisement -
- Advertisement -

ಭಾರತವು ಏಷ್ಯಾದಲ್ಲೇ ಅತಿ ಹೆಚ್ಚು ಭ್ರಷ್ಟಾಚಾರ ಹೊಂದಿರುವ ದೇಶವಾಗಿದ್ದು ಮತ್ತು ಸಾರ್ವಜನಿಕ ಸೇವೆಗಳನ್ನು ಪಡೆಯಲು ವೈಯಕ್ತಿಕ ಸಂಪರ್ಕಗಳನ್ನು ಬಳಸುವವರ ಸಂಖ್ಯೆ ಹೆಚ್ಚು ಎಂದು ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್‌ನ ಸಮೀಕ್ಷಯಲ್ಲಿ ತಿಳಿದು ಬಂದಿದೆ.

ಲಂಚ ಪಾವತಿಸಿದ ಸುಮಾರು 50% ದಷ್ಟು ಜನರಲ್ಲಿ 32% ರಷ್ಟು ಜನರು ವೈಯಕ್ತಿಕ ಸಂಪರ್ಕಗಳನ್ನು ಬಳಸದೆ ತಾವು ಸೇವೆಯನ್ನು ಪಡೆಯಲು ಸಾಧ್ಯವಿರಲಿಲ್ಲ ಎಂದು ಹೇಳಿದ್ದಾರೆ. ಈ ವರ್ಷದ ಜೂನ್ 17 ಮತ್ತು ಜುಲೈ 17 ರ ನಡುವೆ ಭಾರತದಲ್ಲಿ 2,000 ಮಾದರಿ ಗಾತ್ರದೊಂದಿಗೆ ನಡೆಸಿದ ಸಮೀಕ್ಷೆಯ ಆಧಾರದ ಮೇಲೆ ಈ ಸಮೀಕ್ಷಾ ವರದಿ ತಯಾರಾಗಿದೆ.

ಇದನ್ನೂ ಓದಿ: ಬಡತನ, ಭ್ರಷ್ಟಾಚಾರದ ಮೇಲೆ‌ ಸರ್ಜಿಕಲ್ ಸ್ಟ್ರೈಕ್ ಮಾಡಿ: ಬಿಜೆಪಿ ವಿರುದ್ಧ ಆಕ್ರೋಶ 

ಭ್ರಷ್ಟಾಚಾರದ ಪ್ರಕರಣಗಳನ್ನು ತಡೆಯಲು ದೂರು ನೀಡುವುದು ಅಗತ್ಯವೆನಿಸಿದರೂ ಭಾರತದ ಬಹುಪಾಲು ನಾಗರಿಕರು (ಶೇಕಡಾ 63) ಭ್ರಷ್ಟಾಚಾರದ ಬಗ್ಗೆ ದೂರು ನೀಡಿದರೆ ಪ್ರತೀಕಾರಕ್ಕೆ ಒಳಗಾಗುತ್ತಾರೆ ಎಂದು ವರದಿ ಹೇಳಿದೆ.

ಭಾರತ, ಮಲೇಷ್ಯಾ, ಥೈಲ್ಯಾಂಡ್, ಶ್ರೀಲಂಕಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವಾರು ದೇಶಗಳಲ್ಲಿ ಲೈಂಗಿಕ ಸುಲಿಗೆ ಪ್ರಮಾಣವೂ ಹೆಚ್ಚಾಗಿದೆ ಮತ್ತು ಇದನ್ನು ತಡೆಗಟ್ಟಲು ಹಾಗೂ ನಿರ್ದಿಷ್ಟ ಲಿಂಗಭೇದದ ಭ್ರಷ್ಟಾಚಾರವನ್ನು ಪರಿಹರಿಸಲು ಹೆಚ್ಚಿನದನ್ನು ಮಾಡಬೇಕು ಎಂದು ವರದಿ ತಿಳಿಸಿದೆ.

ಲೈಂಗಿಕ ಸುಲಿಗೆ ಎನ್ನುವುದು ಫೋಟೋಗಳನ್ನು ತಿದ್ದಿ ಆ ಮೂಲಕ ಲೈಂಗಿಕ ಚಟುವಟಿಕೆಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುವ ಮೂಲಕ ಹಣ ಅಥವಾ ಲೈಂಗಿಕ ನೆರವು ಪಡೆಯುವುದಾಗಿದೆ.

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಭಾರತದಲ್ಲಿ, 89% ರಷ್ಟು ಜನರು ಸರ್ಕಾರದ ಭ್ರಷ್ಟಾಚಾರವು ಒಂದು ದೊಡ್ಡ ಸಮಸ್ಯೆ ಎಂದು ಭಾವಿಸುತ್ತಾರೆ, 18% ಜನರು ಮತಗಳಿಗಾಗಿ ಲಂಚ ಪಡೆಯುತ್ತಾರೆ ಮತ್ತು 11% ಲೈಂಗಿಕ ಸುಳಿಗೆಯ ಅನುಭವ ಹೊಂದಿದ್ದಾರೆ ಅಥವಾ ಅದು ನಡೆಸುವವರನ್ನು ತಿಳಿದಿದ್ದಾರೆ.

ಸಮೀಕ್ಷೆಯಲ್ಲಿ 63% ದಷ್ಟು ಜನರು ಭ್ರಷ್ಟಾಚಾರವನ್ನು ನಿಭಾಯಿಸುವಲ್ಲಿ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರೆ, 73% ಜನರು ದೇಶದ ಭ್ರಷ್ಟಾಚಾರ ವಿರೋಧಿ ಸಂಸ್ಥೆ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದ್ದಾರೆ.

17 ದೇಶಗಳಲ್ಲಿ ನಡೆಸಿದ ಕ್ಷೇತ್ರಕಾರ್ಯದ ಆಧಾರದ ಮೇಲೆ, ಸಂಸ್ಥೆಯೂ ಒಟ್ಟು 20,000 ನಾಗರಿಕರನ್ನು ಸಮೀಕ್ಷೆ ಮಾಡಿದೆ.

ಇದನ್ನೂ ಓದಿ: ಭ್ರಷ್ಟಾಚಾರ ಪ್ರಶ್ನಿಸಿದ ಪತ್ರಕರ್ತನ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳಿಂದ ಹಲ್ಲೆ: ಅವ್ಯಾಹತವಾಗಿ ನಡೆದಿದೆ ಅರಣ್ಯ ಲೂಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...