Homeಮುಖಪುಟ1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ &...

1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ & ಅತ್ಯಂತ ಅಸಮಾನ ದೇಶ’

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ.

- Advertisement -
- Advertisement -

ಭಾರತವು “ಶ್ರೀಮಂತ ಗಣ್ಯರನ್ನು ಹೊಂದಿರುವ ಬಡ ಮತ್ತು ಅತ್ಯಂತ ಅಸಮಾನ ದೇಶವಾಗಿದೆ” ಎಂದು ಇತ್ತೀಚಿನ “ವಿಶ್ವ ಅಸಮಾನತೆ ವರದಿ-2022’’ ಹೇಳಿದೆ. 2021 ರಲ್ಲಿ ದೇಶದ 57% ಒಟ್ಟು ರಾಷ್ಟ್ರೀಯ ಆದಾಯದ ಪಾಲು ಅಗ್ರ 10% ಜನರು ಹೊಂದಿದ್ದಾರೆ ಎಂದು ವರದಿಯು ಹೇಳಿದೆ.

ಭಾರತೀಯ ವಯಸ್ಕ ಜನಸಂಖ್ಯೆಯ ಸರಾಸರಿ ರಾಷ್ಟ್ರೀಯ ಆದಾಯ 2,04,200 ಆಗಿದೆ. ಕೆಳ ಮಟ್ಟದ 50% ಜನರು ವಾರ್ಷಿಕವಾಗಿ ₹53,610 ಗಳಿಸಿದರೆ, ಅಗ್ರ 10% ಜನರು ಅದಕ್ಕಿಂದ 20 ಪಟ್ಟು (₹11,66,520) ಹೆಚ್ಚು ಗಳಿಸುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ. ವಿಶ್ವ ಅಸಮಾನತೆಯ ವರದಿ-2022 ರ ಪ್ರಕಾರ, “2021 ರಲ್ಲಿ ದೇಶದ ಒಟ್ಟು ರಾಷ್ಟ್ರೀಯ ಆದಾಯದ 22% ಸಂಪತ್ತು ಕೇವಲ ಅಗ್ರ 1% ಜನರ ಬಳಿ ಶೇಖರಣೆಗೊಂಡಿದ್ದು, ಈ ಮೂಲಕ ಭಾರತವು ಅತ್ಯಂತ ಅಸಮಾನ ದೇಶವಾಗಿ ಹೊರಹೊಮ್ಮಿದೆ” ಎಂದು ಉಲ್ಲೇಖಿಸಿದೆ.

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ. ದೇಶದ ಸರಾಸರಿ ಕುಟುಂಬವೊಂದರ ಸಂಪತ್ತು ₹9,83,010 ರಷ್ಟಿದ್ದರೆ, ಕೆಳಗಿನ 50 ಪ್ರತಿಶತದಷ್ಟು ಜನರು ಬಹುತೇಕ ಏನನ್ನೂ ಹೊಂದಿಲ್ಲ, ರೂ 66,280 ರ ಸರಾಸರಿ ಆದಾಯ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ಈ ವರದಿಯು ದೇಶದ ಲಿಂಗ ಅಸಮಾನತೆಯನ್ನು ಎತ್ತಿ ತೋರಿಸಿದ್ದು, ದೇಶದ ಆದಾಯದಲ್ಲಿ ಮಹಿಳಾ ಕಾರ್ಮಿಕರ ಆದಾಯದ ಪಾಲು 18% ಎಂದು ಉಲ್ಲೇಖಿಸಿದ್ದು, ಇದು ಪ್ರಪಂಚದಲ್ಲೇ ಅತ್ಯಂತ ಕಡಿಮೆ ಎಂದು ವರದಿ ತಿಳಿಸಿದೆ. ಆದರೆ ಮಧ್ಯಪ್ರಾಚ್ಯ ದೇಶಕ್ಕಿಂತ ಹೆಚ್ಚಿದ್ದು, ಮಧ್ಯಪ್ರಾಚ್ಯದಲ್ಲಿ ಮಹಿಳಾ ಕಾರ್ಮಿರ ಆದಾಯದ ಪಾಲು 15% ಎಂದು ವರದಿ ತಿಳಿಸಿದೆ.

ನೀತಿ ಆಯೋಗವು ಇತ್ತೀಚೆಗೆ ಸಿದ್ಧಪಡಿಸಿದ ಬಹು ಆಯಾಮದ ಬಡತನ ಸೂಚ್ಯಂಕ (MPI) ಪ್ರಕಾರ, ಭಾರತದಲ್ಲಿ ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಬಹು ಆಯಾಮದ ಬಡವರಾಗಿದ್ದರು. ಬಹುಆಯಾಮದ ಬಡವರಾಗಿರುವ ಬಿಹಾರವು ಅತಿ ಹೆಚ್ಚು ಜನರನ್ನು (ರಾಜ್ಯದ ಜನಸಂಖ್ಯೆಯ ಶೇಕಡಾ 51.91) ಹೊಂದಿದೆ, ನಂತರ ಜಾರ್ಖಂಡ್ ಶೇಕಡಾ 42.16 ಮತ್ತು ಉತ್ತರ ಪ್ರದೇಶವು ಶೇಕಡಾ 37.79 ರಷ್ಟಿದೆ.

“ಅಸಮಾನತೆಯಲ್ಲಿ ವಿಶ್ವದ ಎಲ್ಲಾ ದೇಶಗಳು ಒಂದೇ ರೀತಿಯಲ್ಲಿ ಏರಿಕೆಯಾಗಿಲ್ಲ. ಅಮೆರಿಕಾ, ರಷ್ಯಾ ಮತ್ತು ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ಅಸಮಾನತೆ ತೀವ್ರವಾಗಿ ಹೆಚ್ಚಗಿದ್ದರೆ, ಚೀನಾ ಮತ್ತು ಯುರೋಪಿಯನ್ ದೇಶಗಳಲ್ಲಿ ತುಲನಾತ್ಮಕವಾಗಿ ಸಣ್ಣ ಪ್ರಮಾಣದಲ್ಲಿ ಏರಿಕೆಗಳನ್ನು ಅನುಭವಿದೆ” ಎಂದು ವರದಿಯು ಹೇಳಿದೆ.

ಅನಿಯಂತ್ರಣ ಮತ್ತು ಉದಾರೀಕರಣದಿಂದಾಗಿ 1980 ರ ದಶಕದಿಂದಲೂ ವಿಶ್ವದ ಅನೇಕ ದೇಶದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆಗಳು ಹೆಚ್ಚುತ್ತಿದೆ ಎಂದು ವರದಿ ಕಂಡುಕೊಂಡಿದೆ. ಮೂರು ದಶಕಗಳ ವ್ಯಾಪಾರ ಮತ್ತು ಆರ್ಥಿಕ ಜಾಗತೀಕರಣದ ನಂತರ 2021 ರಲ್ಲಿ, ಜಾಗತಿಕ ಅಸಮಾನತೆಗಳು ಅತ್ಯಂತ ಸ್ಪಷ್ಟವಾಗಿವೆ ಎಂದು ವರದಿಯು ಗಮನ ಸೆಳೆದಿದೆ.

ವಿಶ್ವ ಅಸಮಾನತೆಯ ಪ್ರಯೋಗಾಲಯದ ಸಹ-ನಿರ್ದೇಶಕ ಲ್ಯೂಕಾಸ್ ಚಾನ್ಸೆಲ್ ಅವರು ವರದಿಯನ್ನು ರಚಿಸಿದ್ದು, ಫ್ರೆಂಚ್ ಅರ್ಥಶಾಸ್ತ್ರಜ್ಞ ಥಾಮಸ್ ಪಿಕೆಟ್ಟಿ ಸೇರಿದಂತೆ ಹಲವಾರು ತಜ್ಞರು ಸಂಯೋಜಿಸಿದ್ದಾರೆ.

ಇದನ್ನೂ ಓದಿ:’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...