Homeಮುಖಪುಟ1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ &...

1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ & ಅತ್ಯಂತ ಅಸಮಾನ ದೇಶ’

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ.

- Advertisement -
- Advertisement -

ಭಾರತವು “ಶ್ರೀಮಂತ ಗಣ್ಯರನ್ನು ಹೊಂದಿರುವ ಬಡ ಮತ್ತು ಅತ್ಯಂತ ಅಸಮಾನ ದೇಶವಾಗಿದೆ” ಎಂದು ಇತ್ತೀಚಿನ “ವಿಶ್ವ ಅಸಮಾನತೆ ವರದಿ-2022’’ ಹೇಳಿದೆ. 2021 ರಲ್ಲಿ ದೇಶದ 57% ಒಟ್ಟು ರಾಷ್ಟ್ರೀಯ ಆದಾಯದ ಪಾಲು ಅಗ್ರ 10% ಜನರು ಹೊಂದಿದ್ದಾರೆ ಎಂದು ವರದಿಯು ಹೇಳಿದೆ.

ಭಾರತೀಯ ವಯಸ್ಕ ಜನಸಂಖ್ಯೆಯ ಸರಾಸರಿ ರಾಷ್ಟ್ರೀಯ ಆದಾಯ 2,04,200 ಆಗಿದೆ. ಕೆಳ ಮಟ್ಟದ 50% ಜನರು ವಾರ್ಷಿಕವಾಗಿ ₹53,610 ಗಳಿಸಿದರೆ, ಅಗ್ರ 10% ಜನರು ಅದಕ್ಕಿಂದ 20 ಪಟ್ಟು (₹11,66,520) ಹೆಚ್ಚು ಗಳಿಸುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ. ವಿಶ್ವ ಅಸಮಾನತೆಯ ವರದಿ-2022 ರ ಪ್ರಕಾರ, “2021 ರಲ್ಲಿ ದೇಶದ ಒಟ್ಟು ರಾಷ್ಟ್ರೀಯ ಆದಾಯದ 22% ಸಂಪತ್ತು ಕೇವಲ ಅಗ್ರ 1% ಜನರ ಬಳಿ ಶೇಖರಣೆಗೊಂಡಿದ್ದು, ಈ ಮೂಲಕ ಭಾರತವು ಅತ್ಯಂತ ಅಸಮಾನ ದೇಶವಾಗಿ ಹೊರಹೊಮ್ಮಿದೆ” ಎಂದು ಉಲ್ಲೇಖಿಸಿದೆ.

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ. ದೇಶದ ಸರಾಸರಿ ಕುಟುಂಬವೊಂದರ ಸಂಪತ್ತು ₹9,83,010 ರಷ್ಟಿದ್ದರೆ, ಕೆಳಗಿನ 50 ಪ್ರತಿಶತದಷ್ಟು ಜನರು ಬಹುತೇಕ ಏನನ್ನೂ ಹೊಂದಿಲ್ಲ, ರೂ 66,280 ರ ಸರಾಸರಿ ಆದಾಯ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ಈ ವರದಿಯು ದೇಶದ ಲಿಂಗ ಅಸಮಾನತೆಯನ್ನು ಎತ್ತಿ ತೋರಿಸಿದ್ದು, ದೇಶದ ಆದಾಯದಲ್ಲಿ ಮಹಿಳಾ ಕಾರ್ಮಿಕರ ಆದಾಯದ ಪಾಲು 18% ಎಂದು ಉಲ್ಲೇಖಿಸಿದ್ದು, ಇದು ಪ್ರಪಂಚದಲ್ಲೇ ಅತ್ಯಂತ ಕಡಿಮೆ ಎಂದು ವರದಿ ತಿಳಿಸಿದೆ. ಆದರೆ ಮಧ್ಯಪ್ರಾಚ್ಯ ದೇಶಕ್ಕಿಂತ ಹೆಚ್ಚಿದ್ದು, ಮಧ್ಯಪ್ರಾಚ್ಯದಲ್ಲಿ ಮಹಿಳಾ ಕಾರ್ಮಿರ ಆದಾಯದ ಪಾಲು 15% ಎಂದು ವರದಿ ತಿಳಿಸಿದೆ.

ನೀತಿ ಆಯೋಗವು ಇತ್ತೀಚೆಗೆ ಸಿದ್ಧಪಡಿಸಿದ ಬಹು ಆಯಾಮದ ಬಡತನ ಸೂಚ್ಯಂಕ (MPI) ಪ್ರಕಾರ, ಭಾರತದಲ್ಲಿ ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಬಹು ಆಯಾಮದ ಬಡವರಾಗಿದ್ದರು. ಬಹುಆಯಾಮದ ಬಡವರಾಗಿರುವ ಬಿಹಾರವು ಅತಿ ಹೆಚ್ಚು ಜನರನ್ನು (ರಾಜ್ಯದ ಜನಸಂಖ್ಯೆಯ ಶೇಕಡಾ 51.91) ಹೊಂದಿದೆ, ನಂತರ ಜಾರ್ಖಂಡ್ ಶೇಕಡಾ 42.16 ಮತ್ತು ಉತ್ತರ ಪ್ರದೇಶವು ಶೇಕಡಾ 37.79 ರಷ್ಟಿದೆ.

“ಅಸಮಾನತೆಯಲ್ಲಿ ವಿಶ್ವದ ಎಲ್ಲಾ ದೇಶಗಳು ಒಂದೇ ರೀತಿಯಲ್ಲಿ ಏರಿಕೆಯಾಗಿಲ್ಲ. ಅಮೆರಿಕಾ, ರಷ್ಯಾ ಮತ್ತು ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ಅಸಮಾನತೆ ತೀವ್ರವಾಗಿ ಹೆಚ್ಚಗಿದ್ದರೆ, ಚೀನಾ ಮತ್ತು ಯುರೋಪಿಯನ್ ದೇಶಗಳಲ್ಲಿ ತುಲನಾತ್ಮಕವಾಗಿ ಸಣ್ಣ ಪ್ರಮಾಣದಲ್ಲಿ ಏರಿಕೆಗಳನ್ನು ಅನುಭವಿದೆ” ಎಂದು ವರದಿಯು ಹೇಳಿದೆ.

ಅನಿಯಂತ್ರಣ ಮತ್ತು ಉದಾರೀಕರಣದಿಂದಾಗಿ 1980 ರ ದಶಕದಿಂದಲೂ ವಿಶ್ವದ ಅನೇಕ ದೇಶದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆಗಳು ಹೆಚ್ಚುತ್ತಿದೆ ಎಂದು ವರದಿ ಕಂಡುಕೊಂಡಿದೆ. ಮೂರು ದಶಕಗಳ ವ್ಯಾಪಾರ ಮತ್ತು ಆರ್ಥಿಕ ಜಾಗತೀಕರಣದ ನಂತರ 2021 ರಲ್ಲಿ, ಜಾಗತಿಕ ಅಸಮಾನತೆಗಳು ಅತ್ಯಂತ ಸ್ಪಷ್ಟವಾಗಿವೆ ಎಂದು ವರದಿಯು ಗಮನ ಸೆಳೆದಿದೆ.

ವಿಶ್ವ ಅಸಮಾನತೆಯ ಪ್ರಯೋಗಾಲಯದ ಸಹ-ನಿರ್ದೇಶಕ ಲ್ಯೂಕಾಸ್ ಚಾನ್ಸೆಲ್ ಅವರು ವರದಿಯನ್ನು ರಚಿಸಿದ್ದು, ಫ್ರೆಂಚ್ ಅರ್ಥಶಾಸ್ತ್ರಜ್ಞ ಥಾಮಸ್ ಪಿಕೆಟ್ಟಿ ಸೇರಿದಂತೆ ಹಲವಾರು ತಜ್ಞರು ಸಂಯೋಜಿಸಿದ್ದಾರೆ.

ಇದನ್ನೂ ಓದಿ:’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...