Homeಮುಖಪುಟ1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ &...

1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ & ಅತ್ಯಂತ ಅಸಮಾನ ದೇಶ’

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ.

- Advertisement -
- Advertisement -

ಭಾರತವು “ಶ್ರೀಮಂತ ಗಣ್ಯರನ್ನು ಹೊಂದಿರುವ ಬಡ ಮತ್ತು ಅತ್ಯಂತ ಅಸಮಾನ ದೇಶವಾಗಿದೆ” ಎಂದು ಇತ್ತೀಚಿನ “ವಿಶ್ವ ಅಸಮಾನತೆ ವರದಿ-2022’’ ಹೇಳಿದೆ. 2021 ರಲ್ಲಿ ದೇಶದ 57% ಒಟ್ಟು ರಾಷ್ಟ್ರೀಯ ಆದಾಯದ ಪಾಲು ಅಗ್ರ 10% ಜನರು ಹೊಂದಿದ್ದಾರೆ ಎಂದು ವರದಿಯು ಹೇಳಿದೆ.

ಭಾರತೀಯ ವಯಸ್ಕ ಜನಸಂಖ್ಯೆಯ ಸರಾಸರಿ ರಾಷ್ಟ್ರೀಯ ಆದಾಯ 2,04,200 ಆಗಿದೆ. ಕೆಳ ಮಟ್ಟದ 50% ಜನರು ವಾರ್ಷಿಕವಾಗಿ ₹53,610 ಗಳಿಸಿದರೆ, ಅಗ್ರ 10% ಜನರು ಅದಕ್ಕಿಂದ 20 ಪಟ್ಟು (₹11,66,520) ಹೆಚ್ಚು ಗಳಿಸುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ. ವಿಶ್ವ ಅಸಮಾನತೆಯ ವರದಿ-2022 ರ ಪ್ರಕಾರ, “2021 ರಲ್ಲಿ ದೇಶದ ಒಟ್ಟು ರಾಷ್ಟ್ರೀಯ ಆದಾಯದ 22% ಸಂಪತ್ತು ಕೇವಲ ಅಗ್ರ 1% ಜನರ ಬಳಿ ಶೇಖರಣೆಗೊಂಡಿದ್ದು, ಈ ಮೂಲಕ ಭಾರತವು ಅತ್ಯಂತ ಅಸಮಾನ ದೇಶವಾಗಿ ಹೊರಹೊಮ್ಮಿದೆ” ಎಂದು ಉಲ್ಲೇಖಿಸಿದೆ.

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ. ದೇಶದ ಸರಾಸರಿ ಕುಟುಂಬವೊಂದರ ಸಂಪತ್ತು ₹9,83,010 ರಷ್ಟಿದ್ದರೆ, ಕೆಳಗಿನ 50 ಪ್ರತಿಶತದಷ್ಟು ಜನರು ಬಹುತೇಕ ಏನನ್ನೂ ಹೊಂದಿಲ್ಲ, ರೂ 66,280 ರ ಸರಾಸರಿ ಆದಾಯ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ಈ ವರದಿಯು ದೇಶದ ಲಿಂಗ ಅಸಮಾನತೆಯನ್ನು ಎತ್ತಿ ತೋರಿಸಿದ್ದು, ದೇಶದ ಆದಾಯದಲ್ಲಿ ಮಹಿಳಾ ಕಾರ್ಮಿಕರ ಆದಾಯದ ಪಾಲು 18% ಎಂದು ಉಲ್ಲೇಖಿಸಿದ್ದು, ಇದು ಪ್ರಪಂಚದಲ್ಲೇ ಅತ್ಯಂತ ಕಡಿಮೆ ಎಂದು ವರದಿ ತಿಳಿಸಿದೆ. ಆದರೆ ಮಧ್ಯಪ್ರಾಚ್ಯ ದೇಶಕ್ಕಿಂತ ಹೆಚ್ಚಿದ್ದು, ಮಧ್ಯಪ್ರಾಚ್ಯದಲ್ಲಿ ಮಹಿಳಾ ಕಾರ್ಮಿರ ಆದಾಯದ ಪಾಲು 15% ಎಂದು ವರದಿ ತಿಳಿಸಿದೆ.

ನೀತಿ ಆಯೋಗವು ಇತ್ತೀಚೆಗೆ ಸಿದ್ಧಪಡಿಸಿದ ಬಹು ಆಯಾಮದ ಬಡತನ ಸೂಚ್ಯಂಕ (MPI) ಪ್ರಕಾರ, ಭಾರತದಲ್ಲಿ ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಬಹು ಆಯಾಮದ ಬಡವರಾಗಿದ್ದರು. ಬಹುಆಯಾಮದ ಬಡವರಾಗಿರುವ ಬಿಹಾರವು ಅತಿ ಹೆಚ್ಚು ಜನರನ್ನು (ರಾಜ್ಯದ ಜನಸಂಖ್ಯೆಯ ಶೇಕಡಾ 51.91) ಹೊಂದಿದೆ, ನಂತರ ಜಾರ್ಖಂಡ್ ಶೇಕಡಾ 42.16 ಮತ್ತು ಉತ್ತರ ಪ್ರದೇಶವು ಶೇಕಡಾ 37.79 ರಷ್ಟಿದೆ.

“ಅಸಮಾನತೆಯಲ್ಲಿ ವಿಶ್ವದ ಎಲ್ಲಾ ದೇಶಗಳು ಒಂದೇ ರೀತಿಯಲ್ಲಿ ಏರಿಕೆಯಾಗಿಲ್ಲ. ಅಮೆರಿಕಾ, ರಷ್ಯಾ ಮತ್ತು ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ಅಸಮಾನತೆ ತೀವ್ರವಾಗಿ ಹೆಚ್ಚಗಿದ್ದರೆ, ಚೀನಾ ಮತ್ತು ಯುರೋಪಿಯನ್ ದೇಶಗಳಲ್ಲಿ ತುಲನಾತ್ಮಕವಾಗಿ ಸಣ್ಣ ಪ್ರಮಾಣದಲ್ಲಿ ಏರಿಕೆಗಳನ್ನು ಅನುಭವಿದೆ” ಎಂದು ವರದಿಯು ಹೇಳಿದೆ.

ಅನಿಯಂತ್ರಣ ಮತ್ತು ಉದಾರೀಕರಣದಿಂದಾಗಿ 1980 ರ ದಶಕದಿಂದಲೂ ವಿಶ್ವದ ಅನೇಕ ದೇಶದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆಗಳು ಹೆಚ್ಚುತ್ತಿದೆ ಎಂದು ವರದಿ ಕಂಡುಕೊಂಡಿದೆ. ಮೂರು ದಶಕಗಳ ವ್ಯಾಪಾರ ಮತ್ತು ಆರ್ಥಿಕ ಜಾಗತೀಕರಣದ ನಂತರ 2021 ರಲ್ಲಿ, ಜಾಗತಿಕ ಅಸಮಾನತೆಗಳು ಅತ್ಯಂತ ಸ್ಪಷ್ಟವಾಗಿವೆ ಎಂದು ವರದಿಯು ಗಮನ ಸೆಳೆದಿದೆ.

ವಿಶ್ವ ಅಸಮಾನತೆಯ ಪ್ರಯೋಗಾಲಯದ ಸಹ-ನಿರ್ದೇಶಕ ಲ್ಯೂಕಾಸ್ ಚಾನ್ಸೆಲ್ ಅವರು ವರದಿಯನ್ನು ರಚಿಸಿದ್ದು, ಫ್ರೆಂಚ್ ಅರ್ಥಶಾಸ್ತ್ರಜ್ಞ ಥಾಮಸ್ ಪಿಕೆಟ್ಟಿ ಸೇರಿದಂತೆ ಹಲವಾರು ತಜ್ಞರು ಸಂಯೋಜಿಸಿದ್ದಾರೆ.

ಇದನ್ನೂ ಓದಿ:’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...