Homeಮುಖಪುಟ1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ &...

1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ & ಅತ್ಯಂತ ಅಸಮಾನ ದೇಶ’

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ.

- Advertisement -
- Advertisement -

ಭಾರತವು “ಶ್ರೀಮಂತ ಗಣ್ಯರನ್ನು ಹೊಂದಿರುವ ಬಡ ಮತ್ತು ಅತ್ಯಂತ ಅಸಮಾನ ದೇಶವಾಗಿದೆ” ಎಂದು ಇತ್ತೀಚಿನ “ವಿಶ್ವ ಅಸಮಾನತೆ ವರದಿ-2022’’ ಹೇಳಿದೆ. 2021 ರಲ್ಲಿ ದೇಶದ 57% ಒಟ್ಟು ರಾಷ್ಟ್ರೀಯ ಆದಾಯದ ಪಾಲು ಅಗ್ರ 10% ಜನರು ಹೊಂದಿದ್ದಾರೆ ಎಂದು ವರದಿಯು ಹೇಳಿದೆ.

ಭಾರತೀಯ ವಯಸ್ಕ ಜನಸಂಖ್ಯೆಯ ಸರಾಸರಿ ರಾಷ್ಟ್ರೀಯ ಆದಾಯ 2,04,200 ಆಗಿದೆ. ಕೆಳ ಮಟ್ಟದ 50% ಜನರು ವಾರ್ಷಿಕವಾಗಿ ₹53,610 ಗಳಿಸಿದರೆ, ಅಗ್ರ 10% ಜನರು ಅದಕ್ಕಿಂದ 20 ಪಟ್ಟು (₹11,66,520) ಹೆಚ್ಚು ಗಳಿಸುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ. ವಿಶ್ವ ಅಸಮಾನತೆಯ ವರದಿ-2022 ರ ಪ್ರಕಾರ, “2021 ರಲ್ಲಿ ದೇಶದ ಒಟ್ಟು ರಾಷ್ಟ್ರೀಯ ಆದಾಯದ 22% ಸಂಪತ್ತು ಕೇವಲ ಅಗ್ರ 1% ಜನರ ಬಳಿ ಶೇಖರಣೆಗೊಂಡಿದ್ದು, ಈ ಮೂಲಕ ಭಾರತವು ಅತ್ಯಂತ ಅಸಮಾನ ದೇಶವಾಗಿ ಹೊರಹೊಮ್ಮಿದೆ” ಎಂದು ಉಲ್ಲೇಖಿಸಿದೆ.

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ. ದೇಶದ ಸರಾಸರಿ ಕುಟುಂಬವೊಂದರ ಸಂಪತ್ತು ₹9,83,010 ರಷ್ಟಿದ್ದರೆ, ಕೆಳಗಿನ 50 ಪ್ರತಿಶತದಷ್ಟು ಜನರು ಬಹುತೇಕ ಏನನ್ನೂ ಹೊಂದಿಲ್ಲ, ರೂ 66,280 ರ ಸರಾಸರಿ ಆದಾಯ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ಈ ವರದಿಯು ದೇಶದ ಲಿಂಗ ಅಸಮಾನತೆಯನ್ನು ಎತ್ತಿ ತೋರಿಸಿದ್ದು, ದೇಶದ ಆದಾಯದಲ್ಲಿ ಮಹಿಳಾ ಕಾರ್ಮಿಕರ ಆದಾಯದ ಪಾಲು 18% ಎಂದು ಉಲ್ಲೇಖಿಸಿದ್ದು, ಇದು ಪ್ರಪಂಚದಲ್ಲೇ ಅತ್ಯಂತ ಕಡಿಮೆ ಎಂದು ವರದಿ ತಿಳಿಸಿದೆ. ಆದರೆ ಮಧ್ಯಪ್ರಾಚ್ಯ ದೇಶಕ್ಕಿಂತ ಹೆಚ್ಚಿದ್ದು, ಮಧ್ಯಪ್ರಾಚ್ಯದಲ್ಲಿ ಮಹಿಳಾ ಕಾರ್ಮಿರ ಆದಾಯದ ಪಾಲು 15% ಎಂದು ವರದಿ ತಿಳಿಸಿದೆ.

ನೀತಿ ಆಯೋಗವು ಇತ್ತೀಚೆಗೆ ಸಿದ್ಧಪಡಿಸಿದ ಬಹು ಆಯಾಮದ ಬಡತನ ಸೂಚ್ಯಂಕ (MPI) ಪ್ರಕಾರ, ಭಾರತದಲ್ಲಿ ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಬಹು ಆಯಾಮದ ಬಡವರಾಗಿದ್ದರು. ಬಹುಆಯಾಮದ ಬಡವರಾಗಿರುವ ಬಿಹಾರವು ಅತಿ ಹೆಚ್ಚು ಜನರನ್ನು (ರಾಜ್ಯದ ಜನಸಂಖ್ಯೆಯ ಶೇಕಡಾ 51.91) ಹೊಂದಿದೆ, ನಂತರ ಜಾರ್ಖಂಡ್ ಶೇಕಡಾ 42.16 ಮತ್ತು ಉತ್ತರ ಪ್ರದೇಶವು ಶೇಕಡಾ 37.79 ರಷ್ಟಿದೆ.

“ಅಸಮಾನತೆಯಲ್ಲಿ ವಿಶ್ವದ ಎಲ್ಲಾ ದೇಶಗಳು ಒಂದೇ ರೀತಿಯಲ್ಲಿ ಏರಿಕೆಯಾಗಿಲ್ಲ. ಅಮೆರಿಕಾ, ರಷ್ಯಾ ಮತ್ತು ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ಅಸಮಾನತೆ ತೀವ್ರವಾಗಿ ಹೆಚ್ಚಗಿದ್ದರೆ, ಚೀನಾ ಮತ್ತು ಯುರೋಪಿಯನ್ ದೇಶಗಳಲ್ಲಿ ತುಲನಾತ್ಮಕವಾಗಿ ಸಣ್ಣ ಪ್ರಮಾಣದಲ್ಲಿ ಏರಿಕೆಗಳನ್ನು ಅನುಭವಿದೆ” ಎಂದು ವರದಿಯು ಹೇಳಿದೆ.

ಅನಿಯಂತ್ರಣ ಮತ್ತು ಉದಾರೀಕರಣದಿಂದಾಗಿ 1980 ರ ದಶಕದಿಂದಲೂ ವಿಶ್ವದ ಅನೇಕ ದೇಶದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆಗಳು ಹೆಚ್ಚುತ್ತಿದೆ ಎಂದು ವರದಿ ಕಂಡುಕೊಂಡಿದೆ. ಮೂರು ದಶಕಗಳ ವ್ಯಾಪಾರ ಮತ್ತು ಆರ್ಥಿಕ ಜಾಗತೀಕರಣದ ನಂತರ 2021 ರಲ್ಲಿ, ಜಾಗತಿಕ ಅಸಮಾನತೆಗಳು ಅತ್ಯಂತ ಸ್ಪಷ್ಟವಾಗಿವೆ ಎಂದು ವರದಿಯು ಗಮನ ಸೆಳೆದಿದೆ.

ವಿಶ್ವ ಅಸಮಾನತೆಯ ಪ್ರಯೋಗಾಲಯದ ಸಹ-ನಿರ್ದೇಶಕ ಲ್ಯೂಕಾಸ್ ಚಾನ್ಸೆಲ್ ಅವರು ವರದಿಯನ್ನು ರಚಿಸಿದ್ದು, ಫ್ರೆಂಚ್ ಅರ್ಥಶಾಸ್ತ್ರಜ್ಞ ಥಾಮಸ್ ಪಿಕೆಟ್ಟಿ ಸೇರಿದಂತೆ ಹಲವಾರು ತಜ್ಞರು ಸಂಯೋಜಿಸಿದ್ದಾರೆ.

ಇದನ್ನೂ ಓದಿ:’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...