Homeಮುಖಪುಟ1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ &...

1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ & ಅತ್ಯಂತ ಅಸಮಾನ ದೇಶ’

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ.

- Advertisement -
- Advertisement -

ಭಾರತವು “ಶ್ರೀಮಂತ ಗಣ್ಯರನ್ನು ಹೊಂದಿರುವ ಬಡ ಮತ್ತು ಅತ್ಯಂತ ಅಸಮಾನ ದೇಶವಾಗಿದೆ” ಎಂದು ಇತ್ತೀಚಿನ “ವಿಶ್ವ ಅಸಮಾನತೆ ವರದಿ-2022’’ ಹೇಳಿದೆ. 2021 ರಲ್ಲಿ ದೇಶದ 57% ಒಟ್ಟು ರಾಷ್ಟ್ರೀಯ ಆದಾಯದ ಪಾಲು ಅಗ್ರ 10% ಜನರು ಹೊಂದಿದ್ದಾರೆ ಎಂದು ವರದಿಯು ಹೇಳಿದೆ.

ಭಾರತೀಯ ವಯಸ್ಕ ಜನಸಂಖ್ಯೆಯ ಸರಾಸರಿ ರಾಷ್ಟ್ರೀಯ ಆದಾಯ 2,04,200 ಆಗಿದೆ. ಕೆಳ ಮಟ್ಟದ 50% ಜನರು ವಾರ್ಷಿಕವಾಗಿ ₹53,610 ಗಳಿಸಿದರೆ, ಅಗ್ರ 10% ಜನರು ಅದಕ್ಕಿಂದ 20 ಪಟ್ಟು (₹11,66,520) ಹೆಚ್ಚು ಗಳಿಸುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ. ವಿಶ್ವ ಅಸಮಾನತೆಯ ವರದಿ-2022 ರ ಪ್ರಕಾರ, “2021 ರಲ್ಲಿ ದೇಶದ ಒಟ್ಟು ರಾಷ್ಟ್ರೀಯ ಆದಾಯದ 22% ಸಂಪತ್ತು ಕೇವಲ ಅಗ್ರ 1% ಜನರ ಬಳಿ ಶೇಖರಣೆಗೊಂಡಿದ್ದು, ಈ ಮೂಲಕ ಭಾರತವು ಅತ್ಯಂತ ಅಸಮಾನ ದೇಶವಾಗಿ ಹೊರಹೊಮ್ಮಿದೆ” ಎಂದು ಉಲ್ಲೇಖಿಸಿದೆ.

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ. ದೇಶದ ಸರಾಸರಿ ಕುಟುಂಬವೊಂದರ ಸಂಪತ್ತು ₹9,83,010 ರಷ್ಟಿದ್ದರೆ, ಕೆಳಗಿನ 50 ಪ್ರತಿಶತದಷ್ಟು ಜನರು ಬಹುತೇಕ ಏನನ್ನೂ ಹೊಂದಿಲ್ಲ, ರೂ 66,280 ರ ಸರಾಸರಿ ಆದಾಯ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ಈ ವರದಿಯು ದೇಶದ ಲಿಂಗ ಅಸಮಾನತೆಯನ್ನು ಎತ್ತಿ ತೋರಿಸಿದ್ದು, ದೇಶದ ಆದಾಯದಲ್ಲಿ ಮಹಿಳಾ ಕಾರ್ಮಿಕರ ಆದಾಯದ ಪಾಲು 18% ಎಂದು ಉಲ್ಲೇಖಿಸಿದ್ದು, ಇದು ಪ್ರಪಂಚದಲ್ಲೇ ಅತ್ಯಂತ ಕಡಿಮೆ ಎಂದು ವರದಿ ತಿಳಿಸಿದೆ. ಆದರೆ ಮಧ್ಯಪ್ರಾಚ್ಯ ದೇಶಕ್ಕಿಂತ ಹೆಚ್ಚಿದ್ದು, ಮಧ್ಯಪ್ರಾಚ್ಯದಲ್ಲಿ ಮಹಿಳಾ ಕಾರ್ಮಿರ ಆದಾಯದ ಪಾಲು 15% ಎಂದು ವರದಿ ತಿಳಿಸಿದೆ.

ನೀತಿ ಆಯೋಗವು ಇತ್ತೀಚೆಗೆ ಸಿದ್ಧಪಡಿಸಿದ ಬಹು ಆಯಾಮದ ಬಡತನ ಸೂಚ್ಯಂಕ (MPI) ಪ್ರಕಾರ, ಭಾರತದಲ್ಲಿ ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಬಹು ಆಯಾಮದ ಬಡವರಾಗಿದ್ದರು. ಬಹುಆಯಾಮದ ಬಡವರಾಗಿರುವ ಬಿಹಾರವು ಅತಿ ಹೆಚ್ಚು ಜನರನ್ನು (ರಾಜ್ಯದ ಜನಸಂಖ್ಯೆಯ ಶೇಕಡಾ 51.91) ಹೊಂದಿದೆ, ನಂತರ ಜಾರ್ಖಂಡ್ ಶೇಕಡಾ 42.16 ಮತ್ತು ಉತ್ತರ ಪ್ರದೇಶವು ಶೇಕಡಾ 37.79 ರಷ್ಟಿದೆ.

“ಅಸಮಾನತೆಯಲ್ಲಿ ವಿಶ್ವದ ಎಲ್ಲಾ ದೇಶಗಳು ಒಂದೇ ರೀತಿಯಲ್ಲಿ ಏರಿಕೆಯಾಗಿಲ್ಲ. ಅಮೆರಿಕಾ, ರಷ್ಯಾ ಮತ್ತು ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ಅಸಮಾನತೆ ತೀವ್ರವಾಗಿ ಹೆಚ್ಚಗಿದ್ದರೆ, ಚೀನಾ ಮತ್ತು ಯುರೋಪಿಯನ್ ದೇಶಗಳಲ್ಲಿ ತುಲನಾತ್ಮಕವಾಗಿ ಸಣ್ಣ ಪ್ರಮಾಣದಲ್ಲಿ ಏರಿಕೆಗಳನ್ನು ಅನುಭವಿದೆ” ಎಂದು ವರದಿಯು ಹೇಳಿದೆ.

ಅನಿಯಂತ್ರಣ ಮತ್ತು ಉದಾರೀಕರಣದಿಂದಾಗಿ 1980 ರ ದಶಕದಿಂದಲೂ ವಿಶ್ವದ ಅನೇಕ ದೇಶದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆಗಳು ಹೆಚ್ಚುತ್ತಿದೆ ಎಂದು ವರದಿ ಕಂಡುಕೊಂಡಿದೆ. ಮೂರು ದಶಕಗಳ ವ್ಯಾಪಾರ ಮತ್ತು ಆರ್ಥಿಕ ಜಾಗತೀಕರಣದ ನಂತರ 2021 ರಲ್ಲಿ, ಜಾಗತಿಕ ಅಸಮಾನತೆಗಳು ಅತ್ಯಂತ ಸ್ಪಷ್ಟವಾಗಿವೆ ಎಂದು ವರದಿಯು ಗಮನ ಸೆಳೆದಿದೆ.

ವಿಶ್ವ ಅಸಮಾನತೆಯ ಪ್ರಯೋಗಾಲಯದ ಸಹ-ನಿರ್ದೇಶಕ ಲ್ಯೂಕಾಸ್ ಚಾನ್ಸೆಲ್ ಅವರು ವರದಿಯನ್ನು ರಚಿಸಿದ್ದು, ಫ್ರೆಂಚ್ ಅರ್ಥಶಾಸ್ತ್ರಜ್ಞ ಥಾಮಸ್ ಪಿಕೆಟ್ಟಿ ಸೇರಿದಂತೆ ಹಲವಾರು ತಜ್ಞರು ಸಂಯೋಜಿಸಿದ್ದಾರೆ.

ಇದನ್ನೂ ಓದಿ:’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...