Homeಮುಖಪುಟ1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ &...

1% ಜನರ ಬಳಿ ದೇಶದ 22% ಸಂಪತ್ತು: ‘ಭಾರತ ಅತೀ ಶ್ರೀಮಂತರನ್ನು ಹೊಂದಿರುವ ಬಡ & ಅತ್ಯಂತ ಅಸಮಾನ ದೇಶ’

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ.

- Advertisement -
- Advertisement -

ಭಾರತವು “ಶ್ರೀಮಂತ ಗಣ್ಯರನ್ನು ಹೊಂದಿರುವ ಬಡ ಮತ್ತು ಅತ್ಯಂತ ಅಸಮಾನ ದೇಶವಾಗಿದೆ” ಎಂದು ಇತ್ತೀಚಿನ “ವಿಶ್ವ ಅಸಮಾನತೆ ವರದಿ-2022’’ ಹೇಳಿದೆ. 2021 ರಲ್ಲಿ ದೇಶದ 57% ಒಟ್ಟು ರಾಷ್ಟ್ರೀಯ ಆದಾಯದ ಪಾಲು ಅಗ್ರ 10% ಜನರು ಹೊಂದಿದ್ದಾರೆ ಎಂದು ವರದಿಯು ಹೇಳಿದೆ.

ಭಾರತೀಯ ವಯಸ್ಕ ಜನಸಂಖ್ಯೆಯ ಸರಾಸರಿ ರಾಷ್ಟ್ರೀಯ ಆದಾಯ 2,04,200 ಆಗಿದೆ. ಕೆಳ ಮಟ್ಟದ 50% ಜನರು ವಾರ್ಷಿಕವಾಗಿ ₹53,610 ಗಳಿಸಿದರೆ, ಅಗ್ರ 10% ಜನರು ಅದಕ್ಕಿಂದ 20 ಪಟ್ಟು (₹11,66,520) ಹೆಚ್ಚು ಗಳಿಸುತ್ತಾರೆ ಎಂದು ವರದಿಯು ಉಲ್ಲೇಖಿಸಿದೆ. ವಿಶ್ವ ಅಸಮಾನತೆಯ ವರದಿ-2022 ರ ಪ್ರಕಾರ, “2021 ರಲ್ಲಿ ದೇಶದ ಒಟ್ಟು ರಾಷ್ಟ್ರೀಯ ಆದಾಯದ 22% ಸಂಪತ್ತು ಕೇವಲ ಅಗ್ರ 1% ಜನರ ಬಳಿ ಶೇಖರಣೆಗೊಂಡಿದ್ದು, ಈ ಮೂಲಕ ಭಾರತವು ಅತ್ಯಂತ ಅಸಮಾನ ದೇಶವಾಗಿ ಹೊರಹೊಮ್ಮಿದೆ” ಎಂದು ಉಲ್ಲೇಖಿಸಿದೆ.

ಜನಸಂಖ್ಯೆಯ ಅಗ್ರ 10% ಜನರು ದೇಶದ ಒಟ್ಟು ಆದಾಯದ 57% ಅನ್ನು ಹೊಂದಿದ್ದರೆ, ಕೆಳ ಮಟ್ಟದ 50% ಜನರ ಪಾಲು 13% ಕ್ಕೆ ಇಳಿದಿದೆ ಎಂದು ವರದಿ ತಿಳಿಸಿದೆ. ದೇಶದ ಸರಾಸರಿ ಕುಟುಂಬವೊಂದರ ಸಂಪತ್ತು ₹9,83,010 ರಷ್ಟಿದ್ದರೆ, ಕೆಳಗಿನ 50 ಪ್ರತಿಶತದಷ್ಟು ಜನರು ಬಹುತೇಕ ಏನನ್ನೂ ಹೊಂದಿಲ್ಲ, ರೂ 66,280 ರ ಸರಾಸರಿ ಆದಾಯ ಹೊಂದಿದ್ದಾರೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ಭಾರತದ ಆರ್ಥಿಕತೆ – ಸುಧಾರಣಾಪೂರ್ವ ಮತ್ತು ಸುಧಾರಣೋತ್ತರ ಕಾಲಘಟ್ಟ; ಒಂದು ಮೌಲ್ಯಮಾಪನ

ಈ ವರದಿಯು ದೇಶದ ಲಿಂಗ ಅಸಮಾನತೆಯನ್ನು ಎತ್ತಿ ತೋರಿಸಿದ್ದು, ದೇಶದ ಆದಾಯದಲ್ಲಿ ಮಹಿಳಾ ಕಾರ್ಮಿಕರ ಆದಾಯದ ಪಾಲು 18% ಎಂದು ಉಲ್ಲೇಖಿಸಿದ್ದು, ಇದು ಪ್ರಪಂಚದಲ್ಲೇ ಅತ್ಯಂತ ಕಡಿಮೆ ಎಂದು ವರದಿ ತಿಳಿಸಿದೆ. ಆದರೆ ಮಧ್ಯಪ್ರಾಚ್ಯ ದೇಶಕ್ಕಿಂತ ಹೆಚ್ಚಿದ್ದು, ಮಧ್ಯಪ್ರಾಚ್ಯದಲ್ಲಿ ಮಹಿಳಾ ಕಾರ್ಮಿರ ಆದಾಯದ ಪಾಲು 15% ಎಂದು ವರದಿ ತಿಳಿಸಿದೆ.

ನೀತಿ ಆಯೋಗವು ಇತ್ತೀಚೆಗೆ ಸಿದ್ಧಪಡಿಸಿದ ಬಹು ಆಯಾಮದ ಬಡತನ ಸೂಚ್ಯಂಕ (MPI) ಪ್ರಕಾರ, ಭಾರತದಲ್ಲಿ ಪ್ರತಿ ನಾಲ್ಕು ಜನರಲ್ಲಿ ಒಬ್ಬರು ಬಹು ಆಯಾಮದ ಬಡವರಾಗಿದ್ದರು. ಬಹುಆಯಾಮದ ಬಡವರಾಗಿರುವ ಬಿಹಾರವು ಅತಿ ಹೆಚ್ಚು ಜನರನ್ನು (ರಾಜ್ಯದ ಜನಸಂಖ್ಯೆಯ ಶೇಕಡಾ 51.91) ಹೊಂದಿದೆ, ನಂತರ ಜಾರ್ಖಂಡ್ ಶೇಕಡಾ 42.16 ಮತ್ತು ಉತ್ತರ ಪ್ರದೇಶವು ಶೇಕಡಾ 37.79 ರಷ್ಟಿದೆ.

“ಅಸಮಾನತೆಯಲ್ಲಿ ವಿಶ್ವದ ಎಲ್ಲಾ ದೇಶಗಳು ಒಂದೇ ರೀತಿಯಲ್ಲಿ ಏರಿಕೆಯಾಗಿಲ್ಲ. ಅಮೆರಿಕಾ, ರಷ್ಯಾ ಮತ್ತು ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ಅಸಮಾನತೆ ತೀವ್ರವಾಗಿ ಹೆಚ್ಚಗಿದ್ದರೆ, ಚೀನಾ ಮತ್ತು ಯುರೋಪಿಯನ್ ದೇಶಗಳಲ್ಲಿ ತುಲನಾತ್ಮಕವಾಗಿ ಸಣ್ಣ ಪ್ರಮಾಣದಲ್ಲಿ ಏರಿಕೆಗಳನ್ನು ಅನುಭವಿದೆ” ಎಂದು ವರದಿಯು ಹೇಳಿದೆ.

ಅನಿಯಂತ್ರಣ ಮತ್ತು ಉದಾರೀಕರಣದಿಂದಾಗಿ 1980 ರ ದಶಕದಿಂದಲೂ ವಿಶ್ವದ ಅನೇಕ ದೇಶದಲ್ಲಿ ಆದಾಯ ಮತ್ತು ಸಂಪತ್ತಿನ ಅಸಮಾನತೆಗಳು ಹೆಚ್ಚುತ್ತಿದೆ ಎಂದು ವರದಿ ಕಂಡುಕೊಂಡಿದೆ. ಮೂರು ದಶಕಗಳ ವ್ಯಾಪಾರ ಮತ್ತು ಆರ್ಥಿಕ ಜಾಗತೀಕರಣದ ನಂತರ 2021 ರಲ್ಲಿ, ಜಾಗತಿಕ ಅಸಮಾನತೆಗಳು ಅತ್ಯಂತ ಸ್ಪಷ್ಟವಾಗಿವೆ ಎಂದು ವರದಿಯು ಗಮನ ಸೆಳೆದಿದೆ.

ವಿಶ್ವ ಅಸಮಾನತೆಯ ಪ್ರಯೋಗಾಲಯದ ಸಹ-ನಿರ್ದೇಶಕ ಲ್ಯೂಕಾಸ್ ಚಾನ್ಸೆಲ್ ಅವರು ವರದಿಯನ್ನು ರಚಿಸಿದ್ದು, ಫ್ರೆಂಚ್ ಅರ್ಥಶಾಸ್ತ್ರಜ್ಞ ಥಾಮಸ್ ಪಿಕೆಟ್ಟಿ ಸೇರಿದಂತೆ ಹಲವಾರು ತಜ್ಞರು ಸಂಯೋಜಿಸಿದ್ದಾರೆ.

ಇದನ್ನೂ ಓದಿ:’ಅಸಮಾನತೆಗಾಗಿ ಮೀಸಲಾತಿ’ ಹೋರಾಟದ ಭರಾಟೆಯಲ್ಲಿ ಅಬ್ರಾಹ್ಮಣರಿಗೆ ಮೀಸಲಾತಿ ದಕ್ಕುವುದು ಸುಲಭವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...