Homeಅಂತರಾಷ್ಟ್ರೀಯಕೊರೊನಾ ನಿಯಂತ್ರಣ: WHO ವಿರುದ್ಧದ ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ

ಕೊರೊನಾ ನಿಯಂತ್ರಣ: WHO ವಿರುದ್ಧದ ತನಿಖೆಗೆ ಭಾರತ ಸೇರಿ 62 ರಾಷ್ಟ್ರಗಳ ಒತ್ತಾಯ

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ನಿಯಂತ್ರಣಯಕ್ಕೆ ಸಂಬಂಧಿಸಿದಂತೆ ಇದುವರೆಗು WHO ತೆಗೆದುಕೊಂಡ ಕ್ರಮಗಳ ಬಗ್ಗೆ ಸ್ವತಂತ್ರ ವಿಚಾರಣೆಗೆ ಕರೆ ನೀಡಲಾಗಿದ್ದು, ಇದಕ್ಕೆ ಇಂದಿನಿಂದ ಪ್ರಾರಂಭವಾಗುವ 73 ನೇ ವಿಶ್ವ ಆರೋಗ್ಯ ಅಸೆಂಬ್ಲಿ (ಡಬ್ಲ್ಯುಎಚ್‌ಎ) ಸಭೆಯಲ್ಲಿ ಪ್ರಸ್ತಾಪಿಸಲಾದ ಕರಡು ನಿರ್ಣಯದ ಪ್ರಕಾರ ಭಾರತ ಸೇರಿದಂತೆ 62 ದೇಶಗಳು ಬೆಂಬಲ ಸೂಚಿಸಿವೆ.

ವಿಶ್ವ ಆರೋಗ್ಯ ಸಂಸ್ಥೆಯ ಕ್ರಮಗಳು ಮತ್ತು ಮಾರ್ಗಸೂಚಿಗಳು ಕೊರೊನಾ ಸಾಂಕ್ರಾಮಿಕವನ್ನು ಕಾಲಮಿತಿಗಳೊಳಗೆ ತಡೆಯಲು ಎಷ್ಟು ಸಹಕಾರಿಯಾಗಿದೆ ಅಥವಾ ಇಲ್ಲ ಎಂಬುದರ ಬಗ್ಗೆ “ನಿಷ್ಪಕ್ಷಪಾತ, ಸ್ವತಂತ್ರ ಮತ್ತು ಸಮಗ್ರ” ತನಿಖೆ ನಡೆಸಬೇಕೆಂದು ಕರಡು ಹೇಳುತ್ತದೆ.

ಆರಂಭಿಕವಾಗಿ ಅಂತರರಾಷ್ಟ್ರೀಯ ಆರೋಗ್ಯದ ಕುರಿತಂತೆ WHO ನ ಸಂಘಟಿತ ಪ್ರತಿಕ್ರಿಯೆಯಿಂದ ಕಲಿತ ಪಾಠಗಳನ್ನು ಸದಸ್ಯ ರಾಷ್ಟ್ರಗಳೊಂದಿಗೆ ಸಮಾಲೋಚಿಸಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನಗಳನ್ನು ಬಳಸುವುದು ಸೇರಿದಂತೆ, ಸೂಕ್ತವಾದ ಅನುಭವವನ್ನು ಪಡೆದುಕೊಳ್ಳುವುದು ಮತ್ತು ಪಡೆದ ಅನುಭವವನ್ನು ಪರಿಶೀಲಿಸಲು ನಿಷ್ಪಕ್ಷಪಾತ, ಸ್ವತಂತ್ರ ಮತ್ತು ಸಮಗ್ರ ಮೌಲ್ಯಮಾಪನದ ತನಿಖೆ ಅಗತ್ಯವಿದೆ ಎಂದು ಕರಡಿನಲ್ಲಿ ತಿಳಿಸಲಾಗಿದೆ.

ಆಸ್ಟ್ರೇಲಿಯಾ ಹಾಗೂ ಯುರೋಪಿಯನ್ ರಾಷ್ಟ್ರಗಳು ಕೊರೊನಾಗೆ WHO ವಿರುದ್ಧದ ತನಿಖೆಗೆ ಇತರ ರಾಷ್ಟ್ರಗಳ ಬೆಂಬಲವನ್ನು ಯಾಚಿಸಿವೆ. ಕಳೆದ ತಿಂಗಳು, ಕೊರೊನಾ ವೈರಸ್ ಹೇಗೆ ಪ್ರಾರಂಭವಾಯಿತು ಎಂಬುದರ ಬಗ್ಗೆ ಸ್ವತಂತ್ರ ವಿಚಾರಣೆಗೆ ಕರೆ ನೀಡಿದ ಮೊದಲ ದೇಶ ಆಸ್ಟ್ರೇಲಿಯಾವಾಗಿದೆ.

ಯುರೋಪಿಯನ್ ಯುನಿಯನ್ ಬೆಂಬಲಿತ ಕರಡಿನಲ್ಲಿ ಇತರ ಪ್ರಮುಖ ದೇಶಗಳಾದ ಜಪಾನ್, ಯುನೈಟೆಡ್ ಕಿಂಗ್‌ಡಮ್, ನ್ಯೂಜಿಲೆಂಡ್, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಕೆನಡಾ ಸೇರಿವೆ.


ಓದಿ: ರಾಹುಲ್‌ ಗಾಂಧಿ ಗಟ್ಸ್‌ ಪರೀಕ್ಷಿಸಿಲು ಹೋಗಿ ಅಪಹಾಸ್ಯಕ್ಕೊಳಗಾದ TV9 ರಂಗನಾಥ್ ಭಾರದ್ವಾಜ್!


ವಿಡಿಯೊ ನೋಡಿ: ಲಾಕ್ಡೌನ್ನಿಂದ ಸಂಕಷ್ಟಕ್ಕೆ ಸಿಲುಕಿಕೊಂಡ ರೈತರಿಗೆ ೨೦ ಲಕ್ಷ ಕೋಟಿ ಪ್ಯಾಕೇಜಿನಲ್ಲಿ ಸಿಕ್ಕಿದ್ದು ಏನು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...