Homeಮುಖಪುಟಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ.

- Advertisement -
- Advertisement -

ಭಾರತದಲ್ಲೇ ನಿರ್ಮಿಸಿದ ಅತ್ಯಾಧುನಿಕ ಹೈಪರ್‌ ಸಾನಿಕ್ ತಂತ್ರಜ್ಞಾನದ ಡೆಮಾನ್‌ಸ್ಟ್ರೇಷರ್‌ ವೆಹಿಕಲ್(HSTDV) ಪರೀಕ್ಷಾರ್ಥ ಉಡಾವಣೆ ನಿನ್ನೆ ಯಶಸ್ವಿಯಾಗಿ ಒಡಿಶಾದ ಬಲಾಸೂರ್‌ನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ಪರೀಕ್ಷಾ ಕೇಂದ್ರದಲ್ಲಿ ನಡೆಯಿತು.

ಈ ಮೂಲಕ ಭಾರತವು HSTDV ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ. ಇದುವರೆಗೆ ರಷ್ಯಾ, ಚೀನಾ ಮತ್ತು ಅಮೇರಿಕಾ ಮಾತ್ರ ಇದನ್ನು ಹೊಂದಿತ್ತು. “ರಕ್ಷಣಾ ಕ್ಷೇತ್ರದಲ್ಲಿ ಇದೊಂದು ದೊಡ್ಡ ಮೈಲಿಗಲ್ಲು” ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆಯ (DRDO) ಮುಖ್ಯಸ್ಥ ಡಾ. ಜಿ. ಸತೀಶ್ ರೆಡ್ಡಿ ಹೇಳಿದ್ದಾರೆ.

ಏನಿದು ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV?

ಹೈಪರ್​ ಸಾನಿಕ್ ಟೆಕ್ನಾಲಜಿ ಡೆಮಾನ್ಸ್​‌ಟ್ರೇಟರ್ ವೆಹಿಕಲ್ ಎಂಬುವುದು ಮಾನವರಹಿತ ಸ್ಕ್ರಾಮ್‌‌ಜೆಟ್ ಪ್ರಾತ್ಯಕ್ಷಿಕೆ ವಿಮಾನ.ಇದು ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ, ಒಂದು ಸೆಕೆಂಡ್‍ಗೆ 2 ಕಿ,ಮೀ. ಎತ್ತರ ನೆಗೆಯಬಲ್ಲ ಸಾಮರ್ಥ್ಯ ಹೊಂದಿದೆ. ಈ ತಂತ್ರಜ್ಞಾನವು ದೇಶದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ.

HSTDV

ಪ್ರಸ್ತುತ ಈ ಹೈಪರ್‌ಸಾನಿಕ್ ವೆಹಿಕಲ್ 20 ಸೆಕೆಂಡುಗಳ ಹಾರಾಟ ನಡೆಸುತ್ತದೆ. ಅಂತಿಮವಾಗಿ 20 ಮೈಲಿ ದೂರವನ್ನು ತಲುಪುವುದು DRDO ಗುರಿಯಾಗಿದೆ. ಉಡಾವಣಾ ವಾಹನಗಳನ್ನು ಮರುಬಳಕೆ ಮಾಡಲು ಸಾಧ್ಯ ಇರುವ ಹಾಗೆ ಅಭಿವೃದ್ದಿ ಪಡಿಸುವುದು DRDO ಯೋಜನೆಯಲ್ಲಿ ಸೇರಿದೆ.

HSTDV ಯ ಅಣಕು ಯೋಜನೆಯನ್ನು ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾದಲ್ಲಿ ಪ್ರದರ್ಶಿಸಲಾಗಿತ್ತು. DRDO ಇದಕ್ಕೆ ಸಂಬಂಧಿಸಿದ ವೈಮಾನಿಕ ಚೌಕಟ್ಟಿನ ವಿನ್ಯಾಸವನ್ನು 2004 ರಲ್ಲಿಯೇ ಪೂರ್ಣಗೊಳಿಸಿತ್ತು.

ಇದನ್ನು ಓದಿ: ಲಡಾಖ್‌ನಿಂದ ಚೀನಾ ಸೈನ್ಯವನ್ನು ಯಾವಾಗ ಹೊರಗೆ ಹಾಕುತ್ತೀರಿ: ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಅಷ್ಟೇ ಅಲ್ಲದೆ 15-20 ಕಿ.ಮೀ. ಎತ್ತರದಲ್ಲಿ ಇದರ ಎಂಜಿನ್ ಪ್ರಾತ್ಯಕ್ಷಿಕೆ ಪ್ರದರ್ಶಿಸಲು ಬಯಸಿರುವುದಾಗಿ 2008 ರಲ್ಲಿ DRDO ತಿಳಿಸಿತ್ತು. ಸ್ಕ್ರಾಮ್‌ಜೆಟ್ ಎಂಜಿನ್ ಶಕ್ತಿಯೊಂದಿಗೆ ಹೈಪರ್‌ಸಾನಿಕ್ ವಾಹನ ಅಭಿವೃದ್ಧಿಪಡಿಸಲಾಗುತ್ತಿದೆ. ಈ ದ್ವಿ-ಬಳಕೆ ತಂತ್ರಜ್ಞಾನ ಬಹುಬಳಕೆಗೆ ಸಿಗಲಿದೆ ಎಂದು ಅದು ಹೇಳಿತ್ತು.

DRDO ತಂಡಕ್ಕೆ ಗಣ್ಯ ಶುಭಾಶಯ

ದೇಶದ ರಕ್ಷಣಾ ಕಾರ್ಯದಲ್ಲಿ ಮೈಲುಗಲ್ಲನ್ನು ಸ್ಥಾಪಿಸಿದ DRDO ತಂಡಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರು ಶುಭಾಶಯ ಹೇಳಿದ್ದಾರೆ.

ಪ್ರಧಾನಿ ಮೋದಿ ಈ ಬಗ್ಗೆ ಟ್ವೀಟ್ ಮಾಡಿ, “ಹೈಪರ್ಸಾನಿಕ್ ಟೆಸ್ಟ್ ಪ್ರಾತ್ಯಕ್ಷಿಕೆ ವಾಹನದ ಯಶಸ್ವಿ ಹಾರಾಟಕ್ಕಾಗಿ DRDO ಗೆ ಅಭಿನಂದನೆಗಳು. ನಮ್ಮ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸ್ಕ್ರ್ಯಾಮ್‌ಜೆಟ್ ಎಂಜಿನ್ ಹಾರಾಟವು ಶಬ್ದದ ವೇಗಕ್ಕಿಂತ 6 ಪಟ್ಟು ವೇಗವನ್ನು ಸಾಧಿಸಲು ಸಹಾಯ ಮಾಡುತ್ತದೆ. ಕೆಲವೇ ಕೆಲವು ದೇಶಗಳು ಇಂತಹ ಸಾಮರ್ಥ್ಯವನ್ನು ಹೊಂದಿವೆ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಪ್ರಧಾನ ಮಂತ್ರಿ ಅವರ ಆತ್ಮನಿರ್ಭರ ಭಾರತ ಯೋಜನೆ ಸಾಕಾರಗೊಳಿಸಲು ಇದೊಂದು ಮೈಲಿಗಲ್ಲಾಗಲಿದೆ. ಡಿಆರ್‌ಡಿಓ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಈ ಯೋಜನೆಯಲ್ಲಿ ಕಾರ್ಯನಿರ್ವಹಿಸಿದ ಎಲ್ಲ ವಿಜ್ಞಾನಿಗಳಿಗೆ ಶುಭಾಶಯ ಹೇಳುತ್ತೇನೆ. ಭಾರತಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸೈನ್ಯಾಧಿಕಾರಿಯು ಆಗಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್, ಸ್ಥಳೀಯವಾಗಿ ಅಭಿವೃದ್ಧಿ ಹೊಂದಿದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮೋನ್‌ಸ್ಟ್ರೇಟರ್ ವೆಹಿಕಲ್‌ನ ಯಶಸ್ವಿ ಹಾರಾಟ ಪರೀಕ್ಷೆಗೆ DRDO ವನ್ನು ನಾನು ಅಭಿನಂದಿಸುತ್ತೇನೆ. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ! ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ, ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವಾರು ಜನರು DRDO ಗೆ ಶುಭಾಶಯ ಕೋರಿದ್ದಾರೆ.


ಇದನ್ನೂ ಓದಿ: ಪ್ಯಾಂಗೊಂಗ್ ತ್ಸೊದಲ್ಲಿ ಹೆಲಿಪ್ಯಾಡ್ ಹಾಗೂ ಸೈನ್ಯವನ್ನು ಒಟ್ಟುಗೂಡಿಸುತ್ತಿರುವ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...