Homeಮುಖಪುಟಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ.

- Advertisement -
- Advertisement -

ಭಾರತದಲ್ಲೇ ನಿರ್ಮಿಸಿದ ಅತ್ಯಾಧುನಿಕ ಹೈಪರ್‌ ಸಾನಿಕ್ ತಂತ್ರಜ್ಞಾನದ ಡೆಮಾನ್‌ಸ್ಟ್ರೇಷರ್‌ ವೆಹಿಕಲ್(HSTDV) ಪರೀಕ್ಷಾರ್ಥ ಉಡಾವಣೆ ನಿನ್ನೆ ಯಶಸ್ವಿಯಾಗಿ ಒಡಿಶಾದ ಬಲಾಸೂರ್‌ನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ಪರೀಕ್ಷಾ ಕೇಂದ್ರದಲ್ಲಿ ನಡೆಯಿತು.

ಈ ಮೂಲಕ ಭಾರತವು HSTDV ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ. ಇದುವರೆಗೆ ರಷ್ಯಾ, ಚೀನಾ ಮತ್ತು ಅಮೇರಿಕಾ ಮಾತ್ರ ಇದನ್ನು ಹೊಂದಿತ್ತು. “ರಕ್ಷಣಾ ಕ್ಷೇತ್ರದಲ್ಲಿ ಇದೊಂದು ದೊಡ್ಡ ಮೈಲಿಗಲ್ಲು” ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆಯ (DRDO) ಮುಖ್ಯಸ್ಥ ಡಾ. ಜಿ. ಸತೀಶ್ ರೆಡ್ಡಿ ಹೇಳಿದ್ದಾರೆ.

ಏನಿದು ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV?

ಹೈಪರ್​ ಸಾನಿಕ್ ಟೆಕ್ನಾಲಜಿ ಡೆಮಾನ್ಸ್​‌ಟ್ರೇಟರ್ ವೆಹಿಕಲ್ ಎಂಬುವುದು ಮಾನವರಹಿತ ಸ್ಕ್ರಾಮ್‌‌ಜೆಟ್ ಪ್ರಾತ್ಯಕ್ಷಿಕೆ ವಿಮಾನ.ಇದು ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ, ಒಂದು ಸೆಕೆಂಡ್‍ಗೆ 2 ಕಿ,ಮೀ. ಎತ್ತರ ನೆಗೆಯಬಲ್ಲ ಸಾಮರ್ಥ್ಯ ಹೊಂದಿದೆ. ಈ ತಂತ್ರಜ್ಞಾನವು ದೇಶದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ.

HSTDV

ಪ್ರಸ್ತುತ ಈ ಹೈಪರ್‌ಸಾನಿಕ್ ವೆಹಿಕಲ್ 20 ಸೆಕೆಂಡುಗಳ ಹಾರಾಟ ನಡೆಸುತ್ತದೆ. ಅಂತಿಮವಾಗಿ 20 ಮೈಲಿ ದೂರವನ್ನು ತಲುಪುವುದು DRDO ಗುರಿಯಾಗಿದೆ. ಉಡಾವಣಾ ವಾಹನಗಳನ್ನು ಮರುಬಳಕೆ ಮಾಡಲು ಸಾಧ್ಯ ಇರುವ ಹಾಗೆ ಅಭಿವೃದ್ದಿ ಪಡಿಸುವುದು DRDO ಯೋಜನೆಯಲ್ಲಿ ಸೇರಿದೆ.

HSTDV ಯ ಅಣಕು ಯೋಜನೆಯನ್ನು ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾದಲ್ಲಿ ಪ್ರದರ್ಶಿಸಲಾಗಿತ್ತು. DRDO ಇದಕ್ಕೆ ಸಂಬಂಧಿಸಿದ ವೈಮಾನಿಕ ಚೌಕಟ್ಟಿನ ವಿನ್ಯಾಸವನ್ನು 2004 ರಲ್ಲಿಯೇ ಪೂರ್ಣಗೊಳಿಸಿತ್ತು.

ಇದನ್ನು ಓದಿ: ಲಡಾಖ್‌ನಿಂದ ಚೀನಾ ಸೈನ್ಯವನ್ನು ಯಾವಾಗ ಹೊರಗೆ ಹಾಕುತ್ತೀರಿ: ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಅಷ್ಟೇ ಅಲ್ಲದೆ 15-20 ಕಿ.ಮೀ. ಎತ್ತರದಲ್ಲಿ ಇದರ ಎಂಜಿನ್ ಪ್ರಾತ್ಯಕ್ಷಿಕೆ ಪ್ರದರ್ಶಿಸಲು ಬಯಸಿರುವುದಾಗಿ 2008 ರಲ್ಲಿ DRDO ತಿಳಿಸಿತ್ತು. ಸ್ಕ್ರಾಮ್‌ಜೆಟ್ ಎಂಜಿನ್ ಶಕ್ತಿಯೊಂದಿಗೆ ಹೈಪರ್‌ಸಾನಿಕ್ ವಾಹನ ಅಭಿವೃದ್ಧಿಪಡಿಸಲಾಗುತ್ತಿದೆ. ಈ ದ್ವಿ-ಬಳಕೆ ತಂತ್ರಜ್ಞಾನ ಬಹುಬಳಕೆಗೆ ಸಿಗಲಿದೆ ಎಂದು ಅದು ಹೇಳಿತ್ತು.

DRDO ತಂಡಕ್ಕೆ ಗಣ್ಯ ಶುಭಾಶಯ

ದೇಶದ ರಕ್ಷಣಾ ಕಾರ್ಯದಲ್ಲಿ ಮೈಲುಗಲ್ಲನ್ನು ಸ್ಥಾಪಿಸಿದ DRDO ತಂಡಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರು ಶುಭಾಶಯ ಹೇಳಿದ್ದಾರೆ.

ಪ್ರಧಾನಿ ಮೋದಿ ಈ ಬಗ್ಗೆ ಟ್ವೀಟ್ ಮಾಡಿ, “ಹೈಪರ್ಸಾನಿಕ್ ಟೆಸ್ಟ್ ಪ್ರಾತ್ಯಕ್ಷಿಕೆ ವಾಹನದ ಯಶಸ್ವಿ ಹಾರಾಟಕ್ಕಾಗಿ DRDO ಗೆ ಅಭಿನಂದನೆಗಳು. ನಮ್ಮ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸ್ಕ್ರ್ಯಾಮ್‌ಜೆಟ್ ಎಂಜಿನ್ ಹಾರಾಟವು ಶಬ್ದದ ವೇಗಕ್ಕಿಂತ 6 ಪಟ್ಟು ವೇಗವನ್ನು ಸಾಧಿಸಲು ಸಹಾಯ ಮಾಡುತ್ತದೆ. ಕೆಲವೇ ಕೆಲವು ದೇಶಗಳು ಇಂತಹ ಸಾಮರ್ಥ್ಯವನ್ನು ಹೊಂದಿವೆ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಪ್ರಧಾನ ಮಂತ್ರಿ ಅವರ ಆತ್ಮನಿರ್ಭರ ಭಾರತ ಯೋಜನೆ ಸಾಕಾರಗೊಳಿಸಲು ಇದೊಂದು ಮೈಲಿಗಲ್ಲಾಗಲಿದೆ. ಡಿಆರ್‌ಡಿಓ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಈ ಯೋಜನೆಯಲ್ಲಿ ಕಾರ್ಯನಿರ್ವಹಿಸಿದ ಎಲ್ಲ ವಿಜ್ಞಾನಿಗಳಿಗೆ ಶುಭಾಶಯ ಹೇಳುತ್ತೇನೆ. ಭಾರತಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸೈನ್ಯಾಧಿಕಾರಿಯು ಆಗಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್, ಸ್ಥಳೀಯವಾಗಿ ಅಭಿವೃದ್ಧಿ ಹೊಂದಿದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮೋನ್‌ಸ್ಟ್ರೇಟರ್ ವೆಹಿಕಲ್‌ನ ಯಶಸ್ವಿ ಹಾರಾಟ ಪರೀಕ್ಷೆಗೆ DRDO ವನ್ನು ನಾನು ಅಭಿನಂದಿಸುತ್ತೇನೆ. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ! ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ, ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವಾರು ಜನರು DRDO ಗೆ ಶುಭಾಶಯ ಕೋರಿದ್ದಾರೆ.


ಇದನ್ನೂ ಓದಿ: ಪ್ಯಾಂಗೊಂಗ್ ತ್ಸೊದಲ್ಲಿ ಹೆಲಿಪ್ಯಾಡ್ ಹಾಗೂ ಸೈನ್ಯವನ್ನು ಒಟ್ಟುಗೂಡಿಸುತ್ತಿರುವ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...