Homeಮುಖಪುಟಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ.

- Advertisement -
- Advertisement -

ಭಾರತದಲ್ಲೇ ನಿರ್ಮಿಸಿದ ಅತ್ಯಾಧುನಿಕ ಹೈಪರ್‌ ಸಾನಿಕ್ ತಂತ್ರಜ್ಞಾನದ ಡೆಮಾನ್‌ಸ್ಟ್ರೇಷರ್‌ ವೆಹಿಕಲ್(HSTDV) ಪರೀಕ್ಷಾರ್ಥ ಉಡಾವಣೆ ನಿನ್ನೆ ಯಶಸ್ವಿಯಾಗಿ ಒಡಿಶಾದ ಬಲಾಸೂರ್‌ನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ಪರೀಕ್ಷಾ ಕೇಂದ್ರದಲ್ಲಿ ನಡೆಯಿತು.

ಈ ಮೂಲಕ ಭಾರತವು HSTDV ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ. ಇದುವರೆಗೆ ರಷ್ಯಾ, ಚೀನಾ ಮತ್ತು ಅಮೇರಿಕಾ ಮಾತ್ರ ಇದನ್ನು ಹೊಂದಿತ್ತು. “ರಕ್ಷಣಾ ಕ್ಷೇತ್ರದಲ್ಲಿ ಇದೊಂದು ದೊಡ್ಡ ಮೈಲಿಗಲ್ಲು” ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆಯ (DRDO) ಮುಖ್ಯಸ್ಥ ಡಾ. ಜಿ. ಸತೀಶ್ ರೆಡ್ಡಿ ಹೇಳಿದ್ದಾರೆ.

ಏನಿದು ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV?

ಹೈಪರ್​ ಸಾನಿಕ್ ಟೆಕ್ನಾಲಜಿ ಡೆಮಾನ್ಸ್​‌ಟ್ರೇಟರ್ ವೆಹಿಕಲ್ ಎಂಬುವುದು ಮಾನವರಹಿತ ಸ್ಕ್ರಾಮ್‌‌ಜೆಟ್ ಪ್ರಾತ್ಯಕ್ಷಿಕೆ ವಿಮಾನ.ಇದು ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ, ಒಂದು ಸೆಕೆಂಡ್‍ಗೆ 2 ಕಿ,ಮೀ. ಎತ್ತರ ನೆಗೆಯಬಲ್ಲ ಸಾಮರ್ಥ್ಯ ಹೊಂದಿದೆ. ಈ ತಂತ್ರಜ್ಞಾನವು ದೇಶದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ.

HSTDV

ಪ್ರಸ್ತುತ ಈ ಹೈಪರ್‌ಸಾನಿಕ್ ವೆಹಿಕಲ್ 20 ಸೆಕೆಂಡುಗಳ ಹಾರಾಟ ನಡೆಸುತ್ತದೆ. ಅಂತಿಮವಾಗಿ 20 ಮೈಲಿ ದೂರವನ್ನು ತಲುಪುವುದು DRDO ಗುರಿಯಾಗಿದೆ. ಉಡಾವಣಾ ವಾಹನಗಳನ್ನು ಮರುಬಳಕೆ ಮಾಡಲು ಸಾಧ್ಯ ಇರುವ ಹಾಗೆ ಅಭಿವೃದ್ದಿ ಪಡಿಸುವುದು DRDO ಯೋಜನೆಯಲ್ಲಿ ಸೇರಿದೆ.

HSTDV ಯ ಅಣಕು ಯೋಜನೆಯನ್ನು ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾದಲ್ಲಿ ಪ್ರದರ್ಶಿಸಲಾಗಿತ್ತು. DRDO ಇದಕ್ಕೆ ಸಂಬಂಧಿಸಿದ ವೈಮಾನಿಕ ಚೌಕಟ್ಟಿನ ವಿನ್ಯಾಸವನ್ನು 2004 ರಲ್ಲಿಯೇ ಪೂರ್ಣಗೊಳಿಸಿತ್ತು.

ಇದನ್ನು ಓದಿ: ಲಡಾಖ್‌ನಿಂದ ಚೀನಾ ಸೈನ್ಯವನ್ನು ಯಾವಾಗ ಹೊರಗೆ ಹಾಕುತ್ತೀರಿ: ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಅಷ್ಟೇ ಅಲ್ಲದೆ 15-20 ಕಿ.ಮೀ. ಎತ್ತರದಲ್ಲಿ ಇದರ ಎಂಜಿನ್ ಪ್ರಾತ್ಯಕ್ಷಿಕೆ ಪ್ರದರ್ಶಿಸಲು ಬಯಸಿರುವುದಾಗಿ 2008 ರಲ್ಲಿ DRDO ತಿಳಿಸಿತ್ತು. ಸ್ಕ್ರಾಮ್‌ಜೆಟ್ ಎಂಜಿನ್ ಶಕ್ತಿಯೊಂದಿಗೆ ಹೈಪರ್‌ಸಾನಿಕ್ ವಾಹನ ಅಭಿವೃದ್ಧಿಪಡಿಸಲಾಗುತ್ತಿದೆ. ಈ ದ್ವಿ-ಬಳಕೆ ತಂತ್ರಜ್ಞಾನ ಬಹುಬಳಕೆಗೆ ಸಿಗಲಿದೆ ಎಂದು ಅದು ಹೇಳಿತ್ತು.

DRDO ತಂಡಕ್ಕೆ ಗಣ್ಯ ಶುಭಾಶಯ

ದೇಶದ ರಕ್ಷಣಾ ಕಾರ್ಯದಲ್ಲಿ ಮೈಲುಗಲ್ಲನ್ನು ಸ್ಥಾಪಿಸಿದ DRDO ತಂಡಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರು ಶುಭಾಶಯ ಹೇಳಿದ್ದಾರೆ.

ಪ್ರಧಾನಿ ಮೋದಿ ಈ ಬಗ್ಗೆ ಟ್ವೀಟ್ ಮಾಡಿ, “ಹೈಪರ್ಸಾನಿಕ್ ಟೆಸ್ಟ್ ಪ್ರಾತ್ಯಕ್ಷಿಕೆ ವಾಹನದ ಯಶಸ್ವಿ ಹಾರಾಟಕ್ಕಾಗಿ DRDO ಗೆ ಅಭಿನಂದನೆಗಳು. ನಮ್ಮ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸ್ಕ್ರ್ಯಾಮ್‌ಜೆಟ್ ಎಂಜಿನ್ ಹಾರಾಟವು ಶಬ್ದದ ವೇಗಕ್ಕಿಂತ 6 ಪಟ್ಟು ವೇಗವನ್ನು ಸಾಧಿಸಲು ಸಹಾಯ ಮಾಡುತ್ತದೆ. ಕೆಲವೇ ಕೆಲವು ದೇಶಗಳು ಇಂತಹ ಸಾಮರ್ಥ್ಯವನ್ನು ಹೊಂದಿವೆ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಪ್ರಧಾನ ಮಂತ್ರಿ ಅವರ ಆತ್ಮನಿರ್ಭರ ಭಾರತ ಯೋಜನೆ ಸಾಕಾರಗೊಳಿಸಲು ಇದೊಂದು ಮೈಲಿಗಲ್ಲಾಗಲಿದೆ. ಡಿಆರ್‌ಡಿಓ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಈ ಯೋಜನೆಯಲ್ಲಿ ಕಾರ್ಯನಿರ್ವಹಿಸಿದ ಎಲ್ಲ ವಿಜ್ಞಾನಿಗಳಿಗೆ ಶುಭಾಶಯ ಹೇಳುತ್ತೇನೆ. ಭಾರತಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸೈನ್ಯಾಧಿಕಾರಿಯು ಆಗಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್, ಸ್ಥಳೀಯವಾಗಿ ಅಭಿವೃದ್ಧಿ ಹೊಂದಿದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮೋನ್‌ಸ್ಟ್ರೇಟರ್ ವೆಹಿಕಲ್‌ನ ಯಶಸ್ವಿ ಹಾರಾಟ ಪರೀಕ್ಷೆಗೆ DRDO ವನ್ನು ನಾನು ಅಭಿನಂದಿಸುತ್ತೇನೆ. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ! ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ, ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವಾರು ಜನರು DRDO ಗೆ ಶುಭಾಶಯ ಕೋರಿದ್ದಾರೆ.


ಇದನ್ನೂ ಓದಿ: ಪ್ಯಾಂಗೊಂಗ್ ತ್ಸೊದಲ್ಲಿ ಹೆಲಿಪ್ಯಾಡ್ ಹಾಗೂ ಸೈನ್ಯವನ್ನು ಒಟ್ಟುಗೂಡಿಸುತ್ತಿರುವ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...