Homeಮುಖಪುಟಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ.

- Advertisement -
- Advertisement -

ಭಾರತದಲ್ಲೇ ನಿರ್ಮಿಸಿದ ಅತ್ಯಾಧುನಿಕ ಹೈಪರ್‌ ಸಾನಿಕ್ ತಂತ್ರಜ್ಞಾನದ ಡೆಮಾನ್‌ಸ್ಟ್ರೇಷರ್‌ ವೆಹಿಕಲ್(HSTDV) ಪರೀಕ್ಷಾರ್ಥ ಉಡಾವಣೆ ನಿನ್ನೆ ಯಶಸ್ವಿಯಾಗಿ ಒಡಿಶಾದ ಬಲಾಸೂರ್‌ನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ಪರೀಕ್ಷಾ ಕೇಂದ್ರದಲ್ಲಿ ನಡೆಯಿತು.

ಈ ಮೂಲಕ ಭಾರತವು HSTDV ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ. ಇದುವರೆಗೆ ರಷ್ಯಾ, ಚೀನಾ ಮತ್ತು ಅಮೇರಿಕಾ ಮಾತ್ರ ಇದನ್ನು ಹೊಂದಿತ್ತು. “ರಕ್ಷಣಾ ಕ್ಷೇತ್ರದಲ್ಲಿ ಇದೊಂದು ದೊಡ್ಡ ಮೈಲಿಗಲ್ಲು” ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆಯ (DRDO) ಮುಖ್ಯಸ್ಥ ಡಾ. ಜಿ. ಸತೀಶ್ ರೆಡ್ಡಿ ಹೇಳಿದ್ದಾರೆ.

ಏನಿದು ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV?

ಹೈಪರ್​ ಸಾನಿಕ್ ಟೆಕ್ನಾಲಜಿ ಡೆಮಾನ್ಸ್​‌ಟ್ರೇಟರ್ ವೆಹಿಕಲ್ ಎಂಬುವುದು ಮಾನವರಹಿತ ಸ್ಕ್ರಾಮ್‌‌ಜೆಟ್ ಪ್ರಾತ್ಯಕ್ಷಿಕೆ ವಿಮಾನ.ಇದು ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ, ಒಂದು ಸೆಕೆಂಡ್‍ಗೆ 2 ಕಿ,ಮೀ. ಎತ್ತರ ನೆಗೆಯಬಲ್ಲ ಸಾಮರ್ಥ್ಯ ಹೊಂದಿದೆ. ಈ ತಂತ್ರಜ್ಞಾನವು ದೇಶದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ.

HSTDV

ಪ್ರಸ್ತುತ ಈ ಹೈಪರ್‌ಸಾನಿಕ್ ವೆಹಿಕಲ್ 20 ಸೆಕೆಂಡುಗಳ ಹಾರಾಟ ನಡೆಸುತ್ತದೆ. ಅಂತಿಮವಾಗಿ 20 ಮೈಲಿ ದೂರವನ್ನು ತಲುಪುವುದು DRDO ಗುರಿಯಾಗಿದೆ. ಉಡಾವಣಾ ವಾಹನಗಳನ್ನು ಮರುಬಳಕೆ ಮಾಡಲು ಸಾಧ್ಯ ಇರುವ ಹಾಗೆ ಅಭಿವೃದ್ದಿ ಪಡಿಸುವುದು DRDO ಯೋಜನೆಯಲ್ಲಿ ಸೇರಿದೆ.

HSTDV ಯ ಅಣಕು ಯೋಜನೆಯನ್ನು ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾದಲ್ಲಿ ಪ್ರದರ್ಶಿಸಲಾಗಿತ್ತು. DRDO ಇದಕ್ಕೆ ಸಂಬಂಧಿಸಿದ ವೈಮಾನಿಕ ಚೌಕಟ್ಟಿನ ವಿನ್ಯಾಸವನ್ನು 2004 ರಲ್ಲಿಯೇ ಪೂರ್ಣಗೊಳಿಸಿತ್ತು.

ಇದನ್ನು ಓದಿ: ಲಡಾಖ್‌ನಿಂದ ಚೀನಾ ಸೈನ್ಯವನ್ನು ಯಾವಾಗ ಹೊರಗೆ ಹಾಕುತ್ತೀರಿ: ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಅಷ್ಟೇ ಅಲ್ಲದೆ 15-20 ಕಿ.ಮೀ. ಎತ್ತರದಲ್ಲಿ ಇದರ ಎಂಜಿನ್ ಪ್ರಾತ್ಯಕ್ಷಿಕೆ ಪ್ರದರ್ಶಿಸಲು ಬಯಸಿರುವುದಾಗಿ 2008 ರಲ್ಲಿ DRDO ತಿಳಿಸಿತ್ತು. ಸ್ಕ್ರಾಮ್‌ಜೆಟ್ ಎಂಜಿನ್ ಶಕ್ತಿಯೊಂದಿಗೆ ಹೈಪರ್‌ಸಾನಿಕ್ ವಾಹನ ಅಭಿವೃದ್ಧಿಪಡಿಸಲಾಗುತ್ತಿದೆ. ಈ ದ್ವಿ-ಬಳಕೆ ತಂತ್ರಜ್ಞಾನ ಬಹುಬಳಕೆಗೆ ಸಿಗಲಿದೆ ಎಂದು ಅದು ಹೇಳಿತ್ತು.

DRDO ತಂಡಕ್ಕೆ ಗಣ್ಯ ಶುಭಾಶಯ

ದೇಶದ ರಕ್ಷಣಾ ಕಾರ್ಯದಲ್ಲಿ ಮೈಲುಗಲ್ಲನ್ನು ಸ್ಥಾಪಿಸಿದ DRDO ತಂಡಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರು ಶುಭಾಶಯ ಹೇಳಿದ್ದಾರೆ.

ಪ್ರಧಾನಿ ಮೋದಿ ಈ ಬಗ್ಗೆ ಟ್ವೀಟ್ ಮಾಡಿ, “ಹೈಪರ್ಸಾನಿಕ್ ಟೆಸ್ಟ್ ಪ್ರಾತ್ಯಕ್ಷಿಕೆ ವಾಹನದ ಯಶಸ್ವಿ ಹಾರಾಟಕ್ಕಾಗಿ DRDO ಗೆ ಅಭಿನಂದನೆಗಳು. ನಮ್ಮ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸ್ಕ್ರ್ಯಾಮ್‌ಜೆಟ್ ಎಂಜಿನ್ ಹಾರಾಟವು ಶಬ್ದದ ವೇಗಕ್ಕಿಂತ 6 ಪಟ್ಟು ವೇಗವನ್ನು ಸಾಧಿಸಲು ಸಹಾಯ ಮಾಡುತ್ತದೆ. ಕೆಲವೇ ಕೆಲವು ದೇಶಗಳು ಇಂತಹ ಸಾಮರ್ಥ್ಯವನ್ನು ಹೊಂದಿವೆ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಪ್ರಧಾನ ಮಂತ್ರಿ ಅವರ ಆತ್ಮನಿರ್ಭರ ಭಾರತ ಯೋಜನೆ ಸಾಕಾರಗೊಳಿಸಲು ಇದೊಂದು ಮೈಲಿಗಲ್ಲಾಗಲಿದೆ. ಡಿಆರ್‌ಡಿಓ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಈ ಯೋಜನೆಯಲ್ಲಿ ಕಾರ್ಯನಿರ್ವಹಿಸಿದ ಎಲ್ಲ ವಿಜ್ಞಾನಿಗಳಿಗೆ ಶುಭಾಶಯ ಹೇಳುತ್ತೇನೆ. ಭಾರತಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸೈನ್ಯಾಧಿಕಾರಿಯು ಆಗಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್, ಸ್ಥಳೀಯವಾಗಿ ಅಭಿವೃದ್ಧಿ ಹೊಂದಿದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮೋನ್‌ಸ್ಟ್ರೇಟರ್ ವೆಹಿಕಲ್‌ನ ಯಶಸ್ವಿ ಹಾರಾಟ ಪರೀಕ್ಷೆಗೆ DRDO ವನ್ನು ನಾನು ಅಭಿನಂದಿಸುತ್ತೇನೆ. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ! ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ, ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವಾರು ಜನರು DRDO ಗೆ ಶುಭಾಶಯ ಕೋರಿದ್ದಾರೆ.


ಇದನ್ನೂ ಓದಿ: ಪ್ಯಾಂಗೊಂಗ್ ತ್ಸೊದಲ್ಲಿ ಹೆಲಿಪ್ಯಾಡ್ ಹಾಗೂ ಸೈನ್ಯವನ್ನು ಒಟ್ಟುಗೂಡಿಸುತ್ತಿರುವ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...