Homeಮುಖಪುಟಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಹೈಪರ್‌ ಸಾನಿಕ್‌ ತಂತ್ರಜ್ಞಾನದ ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಯಶಸ್ವಿ ಉಡಾವಣೆ ಮಾಡಿದ ಭಾರತ

ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ.

- Advertisement -
- Advertisement -

ಭಾರತದಲ್ಲೇ ನಿರ್ಮಿಸಿದ ಅತ್ಯಾಧುನಿಕ ಹೈಪರ್‌ ಸಾನಿಕ್ ತಂತ್ರಜ್ಞಾನದ ಡೆಮಾನ್‌ಸ್ಟ್ರೇಷರ್‌ ವೆಹಿಕಲ್(HSTDV) ಪರೀಕ್ಷಾರ್ಥ ಉಡಾವಣೆ ನಿನ್ನೆ ಯಶಸ್ವಿಯಾಗಿ ಒಡಿಶಾದ ಬಲಾಸೂರ್‌ನಲ್ಲಿರುವ ಎಪಿಜೆ ಅಬ್ದುಲ್ ಕಲಾಂ ಪರೀಕ್ಷಾ ಕೇಂದ್ರದಲ್ಲಿ ನಡೆಯಿತು.

ಈ ಮೂಲಕ ಭಾರತವು HSTDV ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರವಾಗಲಿದೆ. ಇದುವರೆಗೆ ರಷ್ಯಾ, ಚೀನಾ ಮತ್ತು ಅಮೇರಿಕಾ ಮಾತ್ರ ಇದನ್ನು ಹೊಂದಿತ್ತು. “ರಕ್ಷಣಾ ಕ್ಷೇತ್ರದಲ್ಲಿ ಇದೊಂದು ದೊಡ್ಡ ಮೈಲಿಗಲ್ಲು” ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ದಿ ಸಂಸ್ಥೆಯ (DRDO) ಮುಖ್ಯಸ್ಥ ಡಾ. ಜಿ. ಸತೀಶ್ ರೆಡ್ಡಿ ಹೇಳಿದ್ದಾರೆ.

ಏನಿದು ಡೆಮಾನ್‌‌ಸ್ಟ್ರೇಷರ್‌ ವೆಹಿಕಲ್ ಅಥವಾ HSTDV?

ಹೈಪರ್​ ಸಾನಿಕ್ ಟೆಕ್ನಾಲಜಿ ಡೆಮಾನ್ಸ್​‌ಟ್ರೇಟರ್ ವೆಹಿಕಲ್ ಎಂಬುವುದು ಮಾನವರಹಿತ ಸ್ಕ್ರಾಮ್‌‌ಜೆಟ್ ಪ್ರಾತ್ಯಕ್ಷಿಕೆ ವಿಮಾನ.ಇದು ಶಬ್ದದ ವೇಗಕ್ಕಿಂತ ಐದು ಪಟ್ಟು ಅಥವಾ ಅದಕ್ಕಿಂತಾ ಹೆಚ್ಚಿನ ವೇಗದಲ್ಲಿ ಮತ್ತು ತುಂಬಾ ದೂರ ಹಾರಬಲ್ಲ ಕ್ಷಿಪಣಿ ಸಾಗಣೆಯ ವಾಹನವಾಗಿದೆ, ಒಂದು ಸೆಕೆಂಡ್‍ಗೆ 2 ಕಿ,ಮೀ. ಎತ್ತರ ನೆಗೆಯಬಲ್ಲ ಸಾಮರ್ಥ್ಯ ಹೊಂದಿದೆ. ಈ ತಂತ್ರಜ್ಞಾನವು ದೇಶದ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಲಿದೆ.

HSTDV

ಪ್ರಸ್ತುತ ಈ ಹೈಪರ್‌ಸಾನಿಕ್ ವೆಹಿಕಲ್ 20 ಸೆಕೆಂಡುಗಳ ಹಾರಾಟ ನಡೆಸುತ್ತದೆ. ಅಂತಿಮವಾಗಿ 20 ಮೈಲಿ ದೂರವನ್ನು ತಲುಪುವುದು DRDO ಗುರಿಯಾಗಿದೆ. ಉಡಾವಣಾ ವಾಹನಗಳನ್ನು ಮರುಬಳಕೆ ಮಾಡಲು ಸಾಧ್ಯ ಇರುವ ಹಾಗೆ ಅಭಿವೃದ್ದಿ ಪಡಿಸುವುದು DRDO ಯೋಜನೆಯಲ್ಲಿ ಸೇರಿದೆ.

HSTDV ಯ ಅಣಕು ಯೋಜನೆಯನ್ನು ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ನಡೆದ ಏರೋ ಇಂಡಿಯಾದಲ್ಲಿ ಪ್ರದರ್ಶಿಸಲಾಗಿತ್ತು. DRDO ಇದಕ್ಕೆ ಸಂಬಂಧಿಸಿದ ವೈಮಾನಿಕ ಚೌಕಟ್ಟಿನ ವಿನ್ಯಾಸವನ್ನು 2004 ರಲ್ಲಿಯೇ ಪೂರ್ಣಗೊಳಿಸಿತ್ತು.

ಇದನ್ನು ಓದಿ: ಲಡಾಖ್‌ನಿಂದ ಚೀನಾ ಸೈನ್ಯವನ್ನು ಯಾವಾಗ ಹೊರಗೆ ಹಾಕುತ್ತೀರಿ: ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಅಷ್ಟೇ ಅಲ್ಲದೆ 15-20 ಕಿ.ಮೀ. ಎತ್ತರದಲ್ಲಿ ಇದರ ಎಂಜಿನ್ ಪ್ರಾತ್ಯಕ್ಷಿಕೆ ಪ್ರದರ್ಶಿಸಲು ಬಯಸಿರುವುದಾಗಿ 2008 ರಲ್ಲಿ DRDO ತಿಳಿಸಿತ್ತು. ಸ್ಕ್ರಾಮ್‌ಜೆಟ್ ಎಂಜಿನ್ ಶಕ್ತಿಯೊಂದಿಗೆ ಹೈಪರ್‌ಸಾನಿಕ್ ವಾಹನ ಅಭಿವೃದ್ಧಿಪಡಿಸಲಾಗುತ್ತಿದೆ. ಈ ದ್ವಿ-ಬಳಕೆ ತಂತ್ರಜ್ಞಾನ ಬಹುಬಳಕೆಗೆ ಸಿಗಲಿದೆ ಎಂದು ಅದು ಹೇಳಿತ್ತು.

DRDO ತಂಡಕ್ಕೆ ಗಣ್ಯ ಶುಭಾಶಯ

ದೇಶದ ರಕ್ಷಣಾ ಕಾರ್ಯದಲ್ಲಿ ಮೈಲುಗಲ್ಲನ್ನು ಸ್ಥಾಪಿಸಿದ DRDO ತಂಡಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವಾರು ಗಣ್ಯರು ಶುಭಾಶಯ ಹೇಳಿದ್ದಾರೆ.

ಪ್ರಧಾನಿ ಮೋದಿ ಈ ಬಗ್ಗೆ ಟ್ವೀಟ್ ಮಾಡಿ, “ಹೈಪರ್ಸಾನಿಕ್ ಟೆಸ್ಟ್ ಪ್ರಾತ್ಯಕ್ಷಿಕೆ ವಾಹನದ ಯಶಸ್ವಿ ಹಾರಾಟಕ್ಕಾಗಿ DRDO ಗೆ ಅಭಿನಂದನೆಗಳು. ನಮ್ಮ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಸ್ಕ್ರ್ಯಾಮ್‌ಜೆಟ್ ಎಂಜಿನ್ ಹಾರಾಟವು ಶಬ್ದದ ವೇಗಕ್ಕಿಂತ 6 ಪಟ್ಟು ವೇಗವನ್ನು ಸಾಧಿಸಲು ಸಹಾಯ ಮಾಡುತ್ತದೆ. ಕೆಲವೇ ಕೆಲವು ದೇಶಗಳು ಇಂತಹ ಸಾಮರ್ಥ್ಯವನ್ನು ಹೊಂದಿವೆ” ಎಂದು ಹೇಳಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, “ಪ್ರಧಾನ ಮಂತ್ರಿ ಅವರ ಆತ್ಮನಿರ್ಭರ ಭಾರತ ಯೋಜನೆ ಸಾಕಾರಗೊಳಿಸಲು ಇದೊಂದು ಮೈಲಿಗಲ್ಲಾಗಲಿದೆ. ಡಿಆರ್‌ಡಿಓ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ. ಈ ಯೋಜನೆಯಲ್ಲಿ ಕಾರ್ಯನಿರ್ವಹಿಸಿದ ಎಲ್ಲ ವಿಜ್ಞಾನಿಗಳಿಗೆ ಶುಭಾಶಯ ಹೇಳುತ್ತೇನೆ. ಭಾರತಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ” ಎಂದು ಟ್ವೀಟ್ ಮಾಡಿದ್ದಾರೆ.

ಮಾಜಿ ಸೈನ್ಯಾಧಿಕಾರಿಯು ಆಗಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್‌ ಸಿಂಗ್, ಸ್ಥಳೀಯವಾಗಿ ಅಭಿವೃದ್ಧಿ ಹೊಂದಿದ ಹೈಪರ್ಸಾನಿಕ್ ಟೆಕ್ನಾಲಜಿ ಡೆಮೋನ್‌ಸ್ಟ್ರೇಟರ್ ವೆಹಿಕಲ್‌ನ ಯಶಸ್ವಿ ಹಾರಾಟ ಪರೀಕ್ಷೆಗೆ DRDO ವನ್ನು ನಾನು ಅಭಿನಂದಿಸುತ್ತೇನೆ. ನಾವು ನಿಮ್ಮ ಬಗ್ಗೆ ಹೆಮ್ಮೆಪಡುತ್ತೇವೆ! ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ, ಅಶೋಕ್ ಗೆಹ್ಲೋಟ್ ಸೇರಿದಂತೆ ಹಲವಾರು ಜನರು DRDO ಗೆ ಶುಭಾಶಯ ಕೋರಿದ್ದಾರೆ.


ಇದನ್ನೂ ಓದಿ: ಪ್ಯಾಂಗೊಂಗ್ ತ್ಸೊದಲ್ಲಿ ಹೆಲಿಪ್ಯಾಡ್ ಹಾಗೂ ಸೈನ್ಯವನ್ನು ಒಟ್ಟುಗೂಡಿಸುತ್ತಿರುವ ಚೀನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...