Homeಮುಖಪುಟಭಾರತ ’ಚುನಾಯಿತ ಸರ್ವಾಧಿಕಾರ’ದತ್ತ ವಾಲುತ್ತಿದೆ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ

ಭಾರತ ’ಚುನಾಯಿತ ಸರ್ವಾಧಿಕಾರ’ದತ್ತ ವಾಲುತ್ತಿದೆ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ

1962 ರಲ್ಲಿ ಚೀನಾದ ಜೊತೆ ಹಾಗೂ 1971 ರಲ್ಲಿ ಪಾಕಿಸ್ತಾನದ ಜೊತೆ ಭಾರತ ಯುದ್ಧ ಮಾಡುತ್ತಿದ್ದ ಸಂದರ್ಭವೂ ಸಂಸತ್ತು ಕಾರ್ಯಾಚರಿಸುವುದನ್ನು ನಿಲ್ಲಿಸಿರಲಿಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದ ಮರುದಿನವೂ ಅಧಿವೇಶನ ನಡೆದಿತ್ತು ಎಂದು ಅವರು ನೆನಪಿಸಿದ್ದಾರೆ.

- Advertisement -
- Advertisement -

ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಪಿ. ಶಾ ‘ಭಾರತವು ಒಂದು ರೀತಿಯ ಚುನಾಯಿತ ಸರ್ವಾಧಿಕಾರದ ಕಡೆ ಸಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜನರಿಗೆ ಸೂಕ್ತ ನಾಯಕತ್ವ ಒದಗಿಸಲು ಸಂಸತ್ತು ವಿಫಲವಾಗಿರುವ ಕೊರೊನಾ ಕಾಲದ ಈ ಸಂದರ್ಭವನ್ನು ಉಪಯೋಗಿಸಿ ಸರಕಾರಕ್ಕೆ ತನಗೆ ಬೇಕಿದ್ದಂತೆ ಮಾಡಲು ಸ್ವಾತಂತ್ರ್ಯ ನೀಡಿದಂತಾಗಿದೆ ಎಂದು ಅವರು ಹೇಳಿದ್ದಾರೆ.

ಸರಕಾರವನ್ನು ಹದ್ದುಬಸ್ತಿನಲ್ಲಿಡುವ ಅಧಿಕಾರ ಹೊಂದಿದ ನ್ಯಾಯಾಂಗ ಸಂಸ್ಥೆಯನ್ನು ಭಾರತದಲ್ಲಿ ವ್ಯವಸ್ಥಿತವಾಗಿ ನಾಶಗೊಳಿಸಲಾಗುತ್ತಿದೆ ಎಂದಿರುವ ಮಾಜಿ ನ್ಯಾಯಮೂರ್ತಿ, 2014 ರಿಂದ ಈ ಎಲ್ಲಾ ಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.

ಇಂದಿರಾ ಗಾಂಧಿ ಮಾಡಿದಂತೆ ಇದು ಬಹಿರಂಗವಾಗಿ ಇಲ್ಲದಿದ್ದರು ಭಾರತದ ಪ್ರಜಾಪ್ರಭುತ್ವ ಕೋಮಾ ಸ್ಥಿತಿಯಲ್ಲಿರುವಂತೆ ಮಾಡಲಾಗುತ್ತಿದೆ ಜೊತೆಗೆ ಕಾರ್ಯಾಂಗಕ್ಕೆ ಹೆಚ್ಚಿನ ವಿಚಾರಗಳಲ್ಲಿ ಮೇಲುಗೈ ಒದಗಿಸಲಾಗಿದೆ, ಚುನಾಯಿತ ಸರ್ವಾಧಿಕಾರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಾರ್ಚ್ ತಿಂಗಳಿನಿಂದ ದೇಶದ ಸಂಸತ್ತು “ಭೂತಗಳ ಪಟ್ಟಣ”ವಾಗಿದೆ ಎಂದಿರುವ ಅವರು, ಇಂತಹ ಒಂದು ಸಾಂಕ್ರಾಮಿಕ ರೋಗ ಸೃಷ್ಟಿಸಿದ ಸಮಸ್ಯೆಯ ಸಂದರ್ಭ ಜನರಿಗೆ ನಾಯಕತ್ವ ಒದಗಿಸಲು ವಿಫಲವಾಗಿರುವುದರ ಜತೆಗೆ ಉತ್ತರದಾಯಿತ್ವ ಹಾಗೂ ಪ್ರತಿನಿಧಿತ್ವವನ್ನು ದೂರವಾಗಿಸಿ ಕಾರ್ಯಾಂಗಕ್ಕೆ ತನಗೆ ಬೇಕಿದ್ದಂತೆ ಮಾಡುವ ಸ್ವಾತಂತ್ರ್ಯ ನೀಡಿದೆ’ ಎಂದಿದ್ದಾರೆ.

“ಇಂತಹ ಸಂದರ್ಭಗಳಲ್ಲಿ ಕಾರ್ಯಾಂಗದ ಉತ್ತರದಾಯಿತ್ವ ನೆನಪು ಮಾತ್ರ, ಅದರ ಕಾರ್ಯಗಳ ಕುರಿತು ಪ್ರಶ್ನೆಗಳನ್ನು ಎತ್ತಲು ಯಾರೂ ಇಲ್ಲ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

1962 ರಲ್ಲಿ ಚೀನಾದ ಜೊತೆ ಹಾಗೂ 1971 ರಲ್ಲಿ ಪಾಕಿಸ್ತಾನದ ಜೊತೆ ಭಾರತ ಯುದ್ಧ ಮಾಡುತ್ತಿದ್ದ ಸಂದರ್ಭವೂ ಸಂಸತ್ತು ಕಾರ್ಯಾಚರಿಸುವುದನ್ನು ನಿಲ್ಲಿಸಿರಲಿಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದ ಮರುದಿನವೂ ಅಧಿವೇಶನ ನಡೆದಿತ್ತು ಎಂದು ಅವರು ನೆನಪಿಸಿದ್ದಾರೆ.

ಮಾರ್ಚ್ ತಿಂಗಳಲ್ಲಿ ಭಾರತದ ಸಂಸತ್ತಿನ ಬಜೆಟ್ ಅಧಿವೇಶನ ಮುಂದೂಡಲಾಗಿದೆ. ಆದರೆ ಇತರ ದೇಶಗಳು ಕೊರೊನಾ ವೈರಸ್ ಭೀತಿಯ ನಡುವೆಯೇ ವರ್ಚುವಲ್ ಆಗಿ ಕಾರ್ಯಾಚರಿಸುತ್ತಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಜನರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ ಎಂದು ನ್ಯಾಯಾಂಗವನ್ನು ಟೀಕಿಸಿದ ಎ.ಪಿ. ಶಾ, “ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಕುರಿತಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ಕಾರ್ಯ ನಿರ್ವಹಿಸದೆ, ಕಾರ್ಯಾಂಗ ನೇತೃತ್ವದ ಸಮಿತಿಗೆ ಈ ವಿಚಾರ ತೀರ್ಮಾನಿಸಲು ಬಿಟ್ಟಿದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.


ಓದಿ: ಯಾರು ಕನ್ನಡಿಗರು, ಯಾರು ಕನ್ನಡಿಗರಲ್ಲ ಎಂಬುದನ್ನು ನಿರ್ಧರಿಸುವವರು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...