Homeಮುಖಪುಟಭಾರತ ’ಚುನಾಯಿತ ಸರ್ವಾಧಿಕಾರ’ದತ್ತ ವಾಲುತ್ತಿದೆ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ

ಭಾರತ ’ಚುನಾಯಿತ ಸರ್ವಾಧಿಕಾರ’ದತ್ತ ವಾಲುತ್ತಿದೆ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ

1962 ರಲ್ಲಿ ಚೀನಾದ ಜೊತೆ ಹಾಗೂ 1971 ರಲ್ಲಿ ಪಾಕಿಸ್ತಾನದ ಜೊತೆ ಭಾರತ ಯುದ್ಧ ಮಾಡುತ್ತಿದ್ದ ಸಂದರ್ಭವೂ ಸಂಸತ್ತು ಕಾರ್ಯಾಚರಿಸುವುದನ್ನು ನಿಲ್ಲಿಸಿರಲಿಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದ ಮರುದಿನವೂ ಅಧಿವೇಶನ ನಡೆದಿತ್ತು ಎಂದು ಅವರು ನೆನಪಿಸಿದ್ದಾರೆ.

- Advertisement -
- Advertisement -

ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಪಿ. ಶಾ ‘ಭಾರತವು ಒಂದು ರೀತಿಯ ಚುನಾಯಿತ ಸರ್ವಾಧಿಕಾರದ ಕಡೆ ಸಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜನರಿಗೆ ಸೂಕ್ತ ನಾಯಕತ್ವ ಒದಗಿಸಲು ಸಂಸತ್ತು ವಿಫಲವಾಗಿರುವ ಕೊರೊನಾ ಕಾಲದ ಈ ಸಂದರ್ಭವನ್ನು ಉಪಯೋಗಿಸಿ ಸರಕಾರಕ್ಕೆ ತನಗೆ ಬೇಕಿದ್ದಂತೆ ಮಾಡಲು ಸ್ವಾತಂತ್ರ್ಯ ನೀಡಿದಂತಾಗಿದೆ ಎಂದು ಅವರು ಹೇಳಿದ್ದಾರೆ.

ಸರಕಾರವನ್ನು ಹದ್ದುಬಸ್ತಿನಲ್ಲಿಡುವ ಅಧಿಕಾರ ಹೊಂದಿದ ನ್ಯಾಯಾಂಗ ಸಂಸ್ಥೆಯನ್ನು ಭಾರತದಲ್ಲಿ ವ್ಯವಸ್ಥಿತವಾಗಿ ನಾಶಗೊಳಿಸಲಾಗುತ್ತಿದೆ ಎಂದಿರುವ ಮಾಜಿ ನ್ಯಾಯಮೂರ್ತಿ, 2014 ರಿಂದ ಈ ಎಲ್ಲಾ ಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.

ಇಂದಿರಾ ಗಾಂಧಿ ಮಾಡಿದಂತೆ ಇದು ಬಹಿರಂಗವಾಗಿ ಇಲ್ಲದಿದ್ದರು ಭಾರತದ ಪ್ರಜಾಪ್ರಭುತ್ವ ಕೋಮಾ ಸ್ಥಿತಿಯಲ್ಲಿರುವಂತೆ ಮಾಡಲಾಗುತ್ತಿದೆ ಜೊತೆಗೆ ಕಾರ್ಯಾಂಗಕ್ಕೆ ಹೆಚ್ಚಿನ ವಿಚಾರಗಳಲ್ಲಿ ಮೇಲುಗೈ ಒದಗಿಸಲಾಗಿದೆ, ಚುನಾಯಿತ ಸರ್ವಾಧಿಕಾರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಾರ್ಚ್ ತಿಂಗಳಿನಿಂದ ದೇಶದ ಸಂಸತ್ತು “ಭೂತಗಳ ಪಟ್ಟಣ”ವಾಗಿದೆ ಎಂದಿರುವ ಅವರು, ಇಂತಹ ಒಂದು ಸಾಂಕ್ರಾಮಿಕ ರೋಗ ಸೃಷ್ಟಿಸಿದ ಸಮಸ್ಯೆಯ ಸಂದರ್ಭ ಜನರಿಗೆ ನಾಯಕತ್ವ ಒದಗಿಸಲು ವಿಫಲವಾಗಿರುವುದರ ಜತೆಗೆ ಉತ್ತರದಾಯಿತ್ವ ಹಾಗೂ ಪ್ರತಿನಿಧಿತ್ವವನ್ನು ದೂರವಾಗಿಸಿ ಕಾರ್ಯಾಂಗಕ್ಕೆ ತನಗೆ ಬೇಕಿದ್ದಂತೆ ಮಾಡುವ ಸ್ವಾತಂತ್ರ್ಯ ನೀಡಿದೆ’ ಎಂದಿದ್ದಾರೆ.

“ಇಂತಹ ಸಂದರ್ಭಗಳಲ್ಲಿ ಕಾರ್ಯಾಂಗದ ಉತ್ತರದಾಯಿತ್ವ ನೆನಪು ಮಾತ್ರ, ಅದರ ಕಾರ್ಯಗಳ ಕುರಿತು ಪ್ರಶ್ನೆಗಳನ್ನು ಎತ್ತಲು ಯಾರೂ ಇಲ್ಲ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

1962 ರಲ್ಲಿ ಚೀನಾದ ಜೊತೆ ಹಾಗೂ 1971 ರಲ್ಲಿ ಪಾಕಿಸ್ತಾನದ ಜೊತೆ ಭಾರತ ಯುದ್ಧ ಮಾಡುತ್ತಿದ್ದ ಸಂದರ್ಭವೂ ಸಂಸತ್ತು ಕಾರ್ಯಾಚರಿಸುವುದನ್ನು ನಿಲ್ಲಿಸಿರಲಿಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದ ಮರುದಿನವೂ ಅಧಿವೇಶನ ನಡೆದಿತ್ತು ಎಂದು ಅವರು ನೆನಪಿಸಿದ್ದಾರೆ.

ಮಾರ್ಚ್ ತಿಂಗಳಲ್ಲಿ ಭಾರತದ ಸಂಸತ್ತಿನ ಬಜೆಟ್ ಅಧಿವೇಶನ ಮುಂದೂಡಲಾಗಿದೆ. ಆದರೆ ಇತರ ದೇಶಗಳು ಕೊರೊನಾ ವೈರಸ್ ಭೀತಿಯ ನಡುವೆಯೇ ವರ್ಚುವಲ್ ಆಗಿ ಕಾರ್ಯಾಚರಿಸುತ್ತಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಜನರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ ಎಂದು ನ್ಯಾಯಾಂಗವನ್ನು ಟೀಕಿಸಿದ ಎ.ಪಿ. ಶಾ, “ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಕುರಿತಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ಕಾರ್ಯ ನಿರ್ವಹಿಸದೆ, ಕಾರ್ಯಾಂಗ ನೇತೃತ್ವದ ಸಮಿತಿಗೆ ಈ ವಿಚಾರ ತೀರ್ಮಾನಿಸಲು ಬಿಟ್ಟಿದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.


ಓದಿ: ಯಾರು ಕನ್ನಡಿಗರು, ಯಾರು ಕನ್ನಡಿಗರಲ್ಲ ಎಂಬುದನ್ನು ನಿರ್ಧರಿಸುವವರು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...