Homeಮುಖಪುಟಭಾರತ ’ಚುನಾಯಿತ ಸರ್ವಾಧಿಕಾರ’ದತ್ತ ವಾಲುತ್ತಿದೆ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ

ಭಾರತ ’ಚುನಾಯಿತ ಸರ್ವಾಧಿಕಾರ’ದತ್ತ ವಾಲುತ್ತಿದೆ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ

1962 ರಲ್ಲಿ ಚೀನಾದ ಜೊತೆ ಹಾಗೂ 1971 ರಲ್ಲಿ ಪಾಕಿಸ್ತಾನದ ಜೊತೆ ಭಾರತ ಯುದ್ಧ ಮಾಡುತ್ತಿದ್ದ ಸಂದರ್ಭವೂ ಸಂಸತ್ತು ಕಾರ್ಯಾಚರಿಸುವುದನ್ನು ನಿಲ್ಲಿಸಿರಲಿಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದ ಮರುದಿನವೂ ಅಧಿವೇಶನ ನಡೆದಿತ್ತು ಎಂದು ಅವರು ನೆನಪಿಸಿದ್ದಾರೆ.

- Advertisement -
- Advertisement -

ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಪಿ. ಶಾ ‘ಭಾರತವು ಒಂದು ರೀತಿಯ ಚುನಾಯಿತ ಸರ್ವಾಧಿಕಾರದ ಕಡೆ ಸಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜನರಿಗೆ ಸೂಕ್ತ ನಾಯಕತ್ವ ಒದಗಿಸಲು ಸಂಸತ್ತು ವಿಫಲವಾಗಿರುವ ಕೊರೊನಾ ಕಾಲದ ಈ ಸಂದರ್ಭವನ್ನು ಉಪಯೋಗಿಸಿ ಸರಕಾರಕ್ಕೆ ತನಗೆ ಬೇಕಿದ್ದಂತೆ ಮಾಡಲು ಸ್ವಾತಂತ್ರ್ಯ ನೀಡಿದಂತಾಗಿದೆ ಎಂದು ಅವರು ಹೇಳಿದ್ದಾರೆ.

ಸರಕಾರವನ್ನು ಹದ್ದುಬಸ್ತಿನಲ್ಲಿಡುವ ಅಧಿಕಾರ ಹೊಂದಿದ ನ್ಯಾಯಾಂಗ ಸಂಸ್ಥೆಯನ್ನು ಭಾರತದಲ್ಲಿ ವ್ಯವಸ್ಥಿತವಾಗಿ ನಾಶಗೊಳಿಸಲಾಗುತ್ತಿದೆ ಎಂದಿರುವ ಮಾಜಿ ನ್ಯಾಯಮೂರ್ತಿ, 2014 ರಿಂದ ಈ ಎಲ್ಲಾ ಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.

ಇಂದಿರಾ ಗಾಂಧಿ ಮಾಡಿದಂತೆ ಇದು ಬಹಿರಂಗವಾಗಿ ಇಲ್ಲದಿದ್ದರು ಭಾರತದ ಪ್ರಜಾಪ್ರಭುತ್ವ ಕೋಮಾ ಸ್ಥಿತಿಯಲ್ಲಿರುವಂತೆ ಮಾಡಲಾಗುತ್ತಿದೆ ಜೊತೆಗೆ ಕಾರ್ಯಾಂಗಕ್ಕೆ ಹೆಚ್ಚಿನ ವಿಚಾರಗಳಲ್ಲಿ ಮೇಲುಗೈ ಒದಗಿಸಲಾಗಿದೆ, ಚುನಾಯಿತ ಸರ್ವಾಧಿಕಾರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಾರ್ಚ್ ತಿಂಗಳಿನಿಂದ ದೇಶದ ಸಂಸತ್ತು “ಭೂತಗಳ ಪಟ್ಟಣ”ವಾಗಿದೆ ಎಂದಿರುವ ಅವರು, ಇಂತಹ ಒಂದು ಸಾಂಕ್ರಾಮಿಕ ರೋಗ ಸೃಷ್ಟಿಸಿದ ಸಮಸ್ಯೆಯ ಸಂದರ್ಭ ಜನರಿಗೆ ನಾಯಕತ್ವ ಒದಗಿಸಲು ವಿಫಲವಾಗಿರುವುದರ ಜತೆಗೆ ಉತ್ತರದಾಯಿತ್ವ ಹಾಗೂ ಪ್ರತಿನಿಧಿತ್ವವನ್ನು ದೂರವಾಗಿಸಿ ಕಾರ್ಯಾಂಗಕ್ಕೆ ತನಗೆ ಬೇಕಿದ್ದಂತೆ ಮಾಡುವ ಸ್ವಾತಂತ್ರ್ಯ ನೀಡಿದೆ’ ಎಂದಿದ್ದಾರೆ.

“ಇಂತಹ ಸಂದರ್ಭಗಳಲ್ಲಿ ಕಾರ್ಯಾಂಗದ ಉತ್ತರದಾಯಿತ್ವ ನೆನಪು ಮಾತ್ರ, ಅದರ ಕಾರ್ಯಗಳ ಕುರಿತು ಪ್ರಶ್ನೆಗಳನ್ನು ಎತ್ತಲು ಯಾರೂ ಇಲ್ಲ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

1962 ರಲ್ಲಿ ಚೀನಾದ ಜೊತೆ ಹಾಗೂ 1971 ರಲ್ಲಿ ಪಾಕಿಸ್ತಾನದ ಜೊತೆ ಭಾರತ ಯುದ್ಧ ಮಾಡುತ್ತಿದ್ದ ಸಂದರ್ಭವೂ ಸಂಸತ್ತು ಕಾರ್ಯಾಚರಿಸುವುದನ್ನು ನಿಲ್ಲಿಸಿರಲಿಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದ ಮರುದಿನವೂ ಅಧಿವೇಶನ ನಡೆದಿತ್ತು ಎಂದು ಅವರು ನೆನಪಿಸಿದ್ದಾರೆ.

ಮಾರ್ಚ್ ತಿಂಗಳಲ್ಲಿ ಭಾರತದ ಸಂಸತ್ತಿನ ಬಜೆಟ್ ಅಧಿವೇಶನ ಮುಂದೂಡಲಾಗಿದೆ. ಆದರೆ ಇತರ ದೇಶಗಳು ಕೊರೊನಾ ವೈರಸ್ ಭೀತಿಯ ನಡುವೆಯೇ ವರ್ಚುವಲ್ ಆಗಿ ಕಾರ್ಯಾಚರಿಸುತ್ತಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಜನರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ ಎಂದು ನ್ಯಾಯಾಂಗವನ್ನು ಟೀಕಿಸಿದ ಎ.ಪಿ. ಶಾ, “ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಕುರಿತಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ಕಾರ್ಯ ನಿರ್ವಹಿಸದೆ, ಕಾರ್ಯಾಂಗ ನೇತೃತ್ವದ ಸಮಿತಿಗೆ ಈ ವಿಚಾರ ತೀರ್ಮಾನಿಸಲು ಬಿಟ್ಟಿದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.


ಓದಿ: ಯಾರು ಕನ್ನಡಿಗರು, ಯಾರು ಕನ್ನಡಿಗರಲ್ಲ ಎಂಬುದನ್ನು ನಿರ್ಧರಿಸುವವರು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...