Homeಮುಖಪುಟಭಾರತ ’ಚುನಾಯಿತ ಸರ್ವಾಧಿಕಾರ’ದತ್ತ ವಾಲುತ್ತಿದೆ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ

ಭಾರತ ’ಚುನಾಯಿತ ಸರ್ವಾಧಿಕಾರ’ದತ್ತ ವಾಲುತ್ತಿದೆ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ

1962 ರಲ್ಲಿ ಚೀನಾದ ಜೊತೆ ಹಾಗೂ 1971 ರಲ್ಲಿ ಪಾಕಿಸ್ತಾನದ ಜೊತೆ ಭಾರತ ಯುದ್ಧ ಮಾಡುತ್ತಿದ್ದ ಸಂದರ್ಭವೂ ಸಂಸತ್ತು ಕಾರ್ಯಾಚರಿಸುವುದನ್ನು ನಿಲ್ಲಿಸಿರಲಿಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದ ಮರುದಿನವೂ ಅಧಿವೇಶನ ನಡೆದಿತ್ತು ಎಂದು ಅವರು ನೆನಪಿಸಿದ್ದಾರೆ.

- Advertisement -
- Advertisement -

ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಪಿ. ಶಾ ‘ಭಾರತವು ಒಂದು ರೀತಿಯ ಚುನಾಯಿತ ಸರ್ವಾಧಿಕಾರದ ಕಡೆ ಸಾಗುತ್ತಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜನರಿಗೆ ಸೂಕ್ತ ನಾಯಕತ್ವ ಒದಗಿಸಲು ಸಂಸತ್ತು ವಿಫಲವಾಗಿರುವ ಕೊರೊನಾ ಕಾಲದ ಈ ಸಂದರ್ಭವನ್ನು ಉಪಯೋಗಿಸಿ ಸರಕಾರಕ್ಕೆ ತನಗೆ ಬೇಕಿದ್ದಂತೆ ಮಾಡಲು ಸ್ವಾತಂತ್ರ್ಯ ನೀಡಿದಂತಾಗಿದೆ ಎಂದು ಅವರು ಹೇಳಿದ್ದಾರೆ.

ಸರಕಾರವನ್ನು ಹದ್ದುಬಸ್ತಿನಲ್ಲಿಡುವ ಅಧಿಕಾರ ಹೊಂದಿದ ನ್ಯಾಯಾಂಗ ಸಂಸ್ಥೆಯನ್ನು ಭಾರತದಲ್ಲಿ ವ್ಯವಸ್ಥಿತವಾಗಿ ನಾಶಗೊಳಿಸಲಾಗುತ್ತಿದೆ ಎಂದಿರುವ ಮಾಜಿ ನ್ಯಾಯಮೂರ್ತಿ, 2014 ರಿಂದ ಈ ಎಲ್ಲಾ ಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.

ಇಂದಿರಾ ಗಾಂಧಿ ಮಾಡಿದಂತೆ ಇದು ಬಹಿರಂಗವಾಗಿ ಇಲ್ಲದಿದ್ದರು ಭಾರತದ ಪ್ರಜಾಪ್ರಭುತ್ವ ಕೋಮಾ ಸ್ಥಿತಿಯಲ್ಲಿರುವಂತೆ ಮಾಡಲಾಗುತ್ತಿದೆ ಜೊತೆಗೆ ಕಾರ್ಯಾಂಗಕ್ಕೆ ಹೆಚ್ಚಿನ ವಿಚಾರಗಳಲ್ಲಿ ಮೇಲುಗೈ ಒದಗಿಸಲಾಗಿದೆ, ಚುನಾಯಿತ ಸರ್ವಾಧಿಕಾರವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಮಾರ್ಚ್ ತಿಂಗಳಿನಿಂದ ದೇಶದ ಸಂಸತ್ತು “ಭೂತಗಳ ಪಟ್ಟಣ”ವಾಗಿದೆ ಎಂದಿರುವ ಅವರು, ಇಂತಹ ಒಂದು ಸಾಂಕ್ರಾಮಿಕ ರೋಗ ಸೃಷ್ಟಿಸಿದ ಸಮಸ್ಯೆಯ ಸಂದರ್ಭ ಜನರಿಗೆ ನಾಯಕತ್ವ ಒದಗಿಸಲು ವಿಫಲವಾಗಿರುವುದರ ಜತೆಗೆ ಉತ್ತರದಾಯಿತ್ವ ಹಾಗೂ ಪ್ರತಿನಿಧಿತ್ವವನ್ನು ದೂರವಾಗಿಸಿ ಕಾರ್ಯಾಂಗಕ್ಕೆ ತನಗೆ ಬೇಕಿದ್ದಂತೆ ಮಾಡುವ ಸ್ವಾತಂತ್ರ್ಯ ನೀಡಿದೆ’ ಎಂದಿದ್ದಾರೆ.

“ಇಂತಹ ಸಂದರ್ಭಗಳಲ್ಲಿ ಕಾರ್ಯಾಂಗದ ಉತ್ತರದಾಯಿತ್ವ ನೆನಪು ಮಾತ್ರ, ಅದರ ಕಾರ್ಯಗಳ ಕುರಿತು ಪ್ರಶ್ನೆಗಳನ್ನು ಎತ್ತಲು ಯಾರೂ ಇಲ್ಲ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

1962 ರಲ್ಲಿ ಚೀನಾದ ಜೊತೆ ಹಾಗೂ 1971 ರಲ್ಲಿ ಪಾಕಿಸ್ತಾನದ ಜೊತೆ ಭಾರತ ಯುದ್ಧ ಮಾಡುತ್ತಿದ್ದ ಸಂದರ್ಭವೂ ಸಂಸತ್ತು ಕಾರ್ಯಾಚರಿಸುವುದನ್ನು ನಿಲ್ಲಿಸಿರಲಿಲ್ಲ. 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದ ಮರುದಿನವೂ ಅಧಿವೇಶನ ನಡೆದಿತ್ತು ಎಂದು ಅವರು ನೆನಪಿಸಿದ್ದಾರೆ.

ಮಾರ್ಚ್ ತಿಂಗಳಲ್ಲಿ ಭಾರತದ ಸಂಸತ್ತಿನ ಬಜೆಟ್ ಅಧಿವೇಶನ ಮುಂದೂಡಲಾಗಿದೆ. ಆದರೆ ಇತರ ದೇಶಗಳು ಕೊರೊನಾ ವೈರಸ್ ಭೀತಿಯ ನಡುವೆಯೇ ವರ್ಚುವಲ್ ಆಗಿ ಕಾರ್ಯಾಚರಿಸುತ್ತಿವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಜನರ ನಿರೀಕ್ಷೆಗಳನ್ನು ಹುಸಿಯಾಗಿಸಿದೆ ಎಂದು ನ್ಯಾಯಾಂಗವನ್ನು ಟೀಕಿಸಿದ ಎ.ಪಿ. ಶಾ, “ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಕುರಿತಾದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತನ್ನ ಕಾರ್ಯ ನಿರ್ವಹಿಸದೆ, ಕಾರ್ಯಾಂಗ ನೇತೃತ್ವದ ಸಮಿತಿಗೆ ಈ ವಿಚಾರ ತೀರ್ಮಾನಿಸಲು ಬಿಟ್ಟಿದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.


ಓದಿ: ಯಾರು ಕನ್ನಡಿಗರು, ಯಾರು ಕನ್ನಡಿಗರಲ್ಲ ಎಂಬುದನ್ನು ನಿರ್ಧರಿಸುವವರು ಯಾರು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...