Homeಮುಖಪುಟಕ್ರಿಕೆಟ್‌ನಲ್ಲಿ ಭಾರತಕ್ಕೆ ಸೋಲು: ರಾಜಸ್ಥಾನದಲ್ಲಿ ಶಿಕ್ಷಕಿಯಿಂದ ಸಂಭ್ರಮಾಚರಣೆಯ ಪೋಸ್ಟ್, ಕೆಲಸದಿಂದ ಅಮಾನತು

ಕ್ರಿಕೆಟ್‌ನಲ್ಲಿ ಭಾರತಕ್ಕೆ ಸೋಲು: ರಾಜಸ್ಥಾನದಲ್ಲಿ ಶಿಕ್ಷಕಿಯಿಂದ ಸಂಭ್ರಮಾಚರಣೆಯ ಪೋಸ್ಟ್, ಕೆಲಸದಿಂದ ಅಮಾನತು

- Advertisement -
- Advertisement -

ಭಾನುವಾರ (ಅ.24) ನಡೆದ ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಜಯಗಳಿಸಿದ ನಂತರ ಸಂಭ್ರಮಾಚರಣೆಯ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಶಿಕ್ಷಕಿಯನ್ನು ಕೆಲಸದಿಂದ ಅಮಾನತುಗೊಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಜೊತೆಗೆ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉದಯಪುರದ ನೀರಜಾ ಮೋದಿ ಶಾಲೆಯ ಶಿಕ್ಷಕಿ ನಫೀಸಾ ಅಟ್ಟಾರಿ ಅವರು ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪಾಕಿಸ್ತಾನಿ ಕ್ರಿಕೆಟ್ ಆಟಗಾರರ ಚಿತ್ರವನ್ನು ಹಾಕಿ “ಜೀತ್ ಗಯೀ… ನಾವು ಗೆದ್ದಿದ್ದೇವೆ” ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದರು.

ಶಿಕ್ಷಕಿ ನಫೀಸಾ ಅಟ್ಟಾರಿ ಅವರ ವಾಟ್ಸಾಪ್ ಸ್ಟೇಟಸ್‌ನ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಶಾಲೆಯ ಆಡಳಿತ ಮಂಡಳಿ ಅವರನ್ನು ವಜಾಗೊಳಿಸಿದೆ. “ನಾವು ಶಿಕ್ಷಕಿಯನ್ನು ವಜಾಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ” ಎಂದು ಸೋಜಾಟಿಯಾ ಚಾರಿಟೇಬಲ್ ಟ್ರಸ್ಟ್‌ನ ಸಭೆಯ ಬಳಿಕ ಶಾಲೆಯ ಅಧ್ಯಕ್ಷ ಮಹೇಂದ್ರ ಸೋಜಾಟಿಯಾ ದೃಢಪಡಿಸಿದ್ದಾರೆ.

ಇದನ್ನೂ ಓದಿ: ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ಭಾರತೀಯ ದಂಡ ಸಂಹಿತೆ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ) ಅಡಿಯಲ್ಲಿ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಂಬಾ ಮಾತಾ ಪೊಲೀಸ್ ಠಾಣೆ ಎಸ್‌ಎಚ್‌ಒ ನರ್ಪತ್ ಸಿಂಗ್ ಹೇಳಿದ್ದಾರೆ.

ಘಟನೆ ತೀವ್ರ ಸ್ಪರೂಪ ಪಡೆದುಕೊಂಡ ಬಳಿಕ ಪೋಸ್ಟ್‌ಗಾಗಿ ಕ್ಷಮೆಯಾಚಿಸುವ ವೀಡಿಯೊ ಹೇಳಿಕೆಯನ್ನು ಶಿಕ್ಷಕಿ ಬಿಡುಗಡೆ ಮಾಡಿ, ಯಾರ ಭಾವನೆಯನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದರು.

“ಯಾರೋ ನನಗೆ ಸಂದೇಶ ಕಳುಹಿಸಿ ‘ನೀವು ಪಾಕಿಸ್ತಾನವನ್ನು ಬೆಂಬಲಿಸುತ್ತೀರಾ’ ಎಂದು ಕೇಳಿದರು. ಸಂದೇಶವು ಎಮೋಜಿಗಳನ್ನು ಹೊಂದಿದ್ದು ತಮಾಷೆಯಾಗಿತ್ತು ಅದಕ್ಕೆ, ನಾನು ‘ಹೌದು’ ಎಂದು ಉತ್ತರಿಸಿದೆ. ಆದರೆ, ನಾನು ಪಾಕಿಸ್ತಾನವನ್ನು ಬೆಂಬಲಿಸುತ್ತೇನೆ ಎಂದು ಅರ್ಥವಲ್ಲ. ನಾನು ಭಾರತೀಯಳು. ನಾನು ಭಾರತವನ್ನು ಪ್ರೀತಿಸುತ್ತೇನೆ. ನಾನು ತಪ್ಪು ಮಾಡಿದ್ದೇನೆ ಎಂದು ತಿಳಿದುಕೊಂಡ ತಕ್ಷಣ, ನಾನು ಸ್ಟೇಟಸ್ ಅಳಿಸಿದ್ದೇನೆ. ಯಾರ ಭಾವನೆಗಳನ್ನೆನಾದರೂ ನೋಯಿಸಿದ್ದರೆ ಕ್ಷಮಿಸಿ” ಶಿಕ್ಷಕಿ ತಮ್ಮ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವು ದಾಖಲಿಸಿತ್ತು.


ಇದನ್ನೂ ಓದಿ: ಕ್ರಿಕೆಟ್‌ನಲ್ಲಿ ಭಾರತಕ್ಕೆ ಸೋಲು, ಪಂಜಾಬ್‌ನಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...