Homeಮುಖಪುಟಸೈಬರ್ ವಂಚನೆ : 10 ತಿಂಗಳಲ್ಲಿ ₹ 2,140 ಕೋಟಿ ಕಳೆದುಕೊಂಡ ಭಾರತೀಯರು!

ಸೈಬರ್ ವಂಚನೆ : 10 ತಿಂಗಳಲ್ಲಿ ₹ 2,140 ಕೋಟಿ ಕಳೆದುಕೊಂಡ ಭಾರತೀಯರು!

'ಡಿಜಿಟಲ್ ಅರೆಸ್ಟ್' ಪ್ರಕರಣಗಳೇ ಹೆಚ್ಚು

- Advertisement -
- Advertisement -

ಈ ವರ್ಷದ (2024) 10 ತಿಂಗಳ ಅವಧಿಯಲ್ಲಿ ಸೈಬರ್ ವಂಚಕರು ಭಾರತೀಯರ ಬರೋಬ್ಬರಿ 2, 140 ಕೋಟಿ ರೂಪಾಯಿಗಳನ್ನು ದೋಚಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ಸೈಬರ್ ವಿಭಾಗ ಐ4ಸಿ (I4C) ವರದಿ ತಿಳಿಸಿದೆ.

ಡಿಜಿಟಲ್ ಅರೆಸ್ಟ್ ವಂಚನೆಯ ಮೂಲಕ ಹೆಚ್ಚಿನ ಹಣವನ್ನು ದೋಚಲಾಗಿದೆ. ಸೈಬರ್ ವಂಚಕರು ಜಾರಿ ನಿರ್ದೇಶನಾಲಯ (ಇಡಿ) ಕೇಂದ್ರಿಯ ತನಿಖಾ ದಳ (ಸಿಬಿಐ) ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಮತ್ತು ಪೊಲೀಸ್ ಅಧಿಕಾರಿಗಳಂತೆ ಸೋಗು ಹಾಕಿ ಜನರು ತಮ್ಮ ಬ್ಯಾಂಕ್‌ ಖಾತೆಗಳಿಂದ ಹಣ ವರ್ಗಾಯಿಸುವಂತೆ ಮಾಡುತ್ತಿದ್ದಾರೆ ಎಂದು ವರದಿ ಹೇಳಿದೆ.

ಹೆಚ್ಚಿನ ಸೈಬರ್‌ ವಂಚನೆಗಳು ಅಥವಾ ಡಿಜಿಟಲ್ ಅರೆಸ್ಟ್ ವಂಚನೆಯನ್ನು ಕಾಂಬೋಡಿಯಾ, ಮ್ಯಾನ್ಮಾರ್, ವಿಯೆಟ್ನಾಂ, ಲಾವೋಸ್ ಮತ್ತು ಥೈಲ್ಯಾಂಡ್‌ನಂತಹ ದೇಶಗಳಿಂದ ಕಾರ್ಯನಿರ್ವಹಿಸುತ್ತಿರುವ ಹಲವಾರು ಕಾಲ್ ಸೆಂಟರ್‌ಗಳಿಂದ ಮಾಡಲಾಗುತ್ತಿದೆ.

ಕಾಂಬೋಡಿಯಾ ಮತ್ತು ಚೀನಾ ಒಡೆತನದ ಕ್ಯಾಸಿನೋಗಳಲ್ಲಿ ಹೆಚ್ಚಾಗಿ ಈ ಕಾಲ್‌ ಸೆಂಟರ್‌ಗಳು ನೆಲೆಗೊಂಡಿವೆ. ಅಲ್ಲಿನ ಸೈಬರ್ ಗುಲಾಮಗಿರಿಯು ಕಳವಳಕಾರಿ ವಿಷಯವಾಗಿದೆ. ವಂಚನೆಯ ಮೂಲ ವಿದೇಶದಲ್ಲಿದ್ದರೂ, ಅದಕ್ಕೆ ಬಲಿಯಾಗುತ್ತಿರುವ 30 ರಿಂದ 40 ಶೇಖಡ ಜನರು ಭಾರತೀಯರು. ಇಲ್ಲಿನ ಸ್ಥಳೀಯ ವಂಚನೆಯ ಜಾಲಗಳೂ ಈ ವಿಚಾರದಲ್ಲಿ ಸಕ್ರಿಯವಾಗಿವೆ ಎಂದು ವರದಿ ವಿವರಿಸಿದೆ.

ವರದಿಯ ಪ್ರಕಾರ, ಜನವರಿ 2024 ರಿಂದ, ಭಾರತದಲ್ಲಿ 92,334ಕ್ಕೂ ಹೆಚ್ಚು ಡಿಜಿಟಲ್ ಅರೆಸ್ಟ್ ಘಟನೆಗಳು ನಡೆದಿವೆ. ಬಹುತೇಕ ಪ್ರಕರಣಗಳಲ್ಲಿ ತಕ್ಷಣ ಹಣ ವರ್ಗಾಯಿಸದಿದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೆದರಿಕೊಂಡು ಜನರು ಮೋಸ ಹೋಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವರದಿಯ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಸೈಬರ್ ಸೆಕ್ಯುರಿಟಿ ಏಜೆನ್ಸಿ CERT-IN ಜನರು ಸೈಬರ್ ವಂಚನೆಯ ಜಾಲದಲ್ಲಿ ಬಿದ್ದಿರುವ ಅನುಮಾನ ಎದುರಾದರೆ ರಕ್ಷಣೆ ಪಡೆಯಲು ಹಲವು ಸಲಹೆಗಳನ್ನು ನೀಡಿದೆ. ವಂಚನೆಗೊಳಗಾದವರು ಸಹಾಯವಾಣಿ ಸಂಖ್ಯೆ 1930ಗೆ ಕರೆ ಮಾಡಿ ಐ4ಸಿಗೆ ನೇರವಾಗಿ ವರದಿ ಮಾಡಬಹುದು. ಹೀಗೆ ವರದಿ ಮಾಡಿದರೆ, ಜನರು ಕಳೆದುಕೊಂಡಿರುವ ಹಣವನ್ನು ಮರಳಿ ಪಡೆಯಬಹುದು ಅಥವಾ ನಷ್ಟವನ್ನು ತಡೆಗಟ್ಟಲು ಗರಿಷ್ಠ ಪ್ರಯತ್ನ ಮಾಡಬಹುದು.

ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ವಂಚನೆಯ ಕುರಿತು ಅಕ್ಟೋಬರ್ 27ರಂದು ನಡೆದ ಮನ್‌ ಕಿ ಬಾತ್ 115ನೇ ಸಂಚಿಕೆಯಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ ಬಳಿಕ ಹೆಚ್ಚಿನ ಚರ್ಚೆ ನಡೆಯುತ್ತಿದೆ.

ಈ ಡಿಜಿಟಲ್ ಅರೆಸ್ಟ್ ಅಂದರೆ ಏನು? ಅದರ ಮೂಲಕ ಹೇಗೆ ಜನರಿಂದ ಹಣ ದೋಚಲಾಗುತ್ತದೆ ಎಂಬುವುದರ ಕುರಿತ ವಿಸ್ಕೃತ ವರದಿ ಕೆಳಗಿದೆ

ಇದನ್ನೂ ಓದಿ : Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...