Homeಮುಖಪುಟಸೈಬರ್ ವಂಚನೆ : 10 ತಿಂಗಳಲ್ಲಿ ₹ 2,140 ಕೋಟಿ ಕಳೆದುಕೊಂಡ ಭಾರತೀಯರು!

ಸೈಬರ್ ವಂಚನೆ : 10 ತಿಂಗಳಲ್ಲಿ ₹ 2,140 ಕೋಟಿ ಕಳೆದುಕೊಂಡ ಭಾರತೀಯರು!

'ಡಿಜಿಟಲ್ ಅರೆಸ್ಟ್' ಪ್ರಕರಣಗಳೇ ಹೆಚ್ಚು

- Advertisement -
- Advertisement -

ಈ ವರ್ಷದ (2024) 10 ತಿಂಗಳ ಅವಧಿಯಲ್ಲಿ ಸೈಬರ್ ವಂಚಕರು ಭಾರತೀಯರ ಬರೋಬ್ಬರಿ 2, 140 ಕೋಟಿ ರೂಪಾಯಿಗಳನ್ನು ದೋಚಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ಸೈಬರ್ ವಿಭಾಗ ಐ4ಸಿ (I4C) ವರದಿ ತಿಳಿಸಿದೆ.

ಡಿಜಿಟಲ್ ಅರೆಸ್ಟ್ ವಂಚನೆಯ ಮೂಲಕ ಹೆಚ್ಚಿನ ಹಣವನ್ನು ದೋಚಲಾಗಿದೆ. ಸೈಬರ್ ವಂಚಕರು ಜಾರಿ ನಿರ್ದೇಶನಾಲಯ (ಇಡಿ) ಕೇಂದ್ರಿಯ ತನಿಖಾ ದಳ (ಸಿಬಿಐ) ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಮತ್ತು ಪೊಲೀಸ್ ಅಧಿಕಾರಿಗಳಂತೆ ಸೋಗು ಹಾಕಿ ಜನರು ತಮ್ಮ ಬ್ಯಾಂಕ್‌ ಖಾತೆಗಳಿಂದ ಹಣ ವರ್ಗಾಯಿಸುವಂತೆ ಮಾಡುತ್ತಿದ್ದಾರೆ ಎಂದು ವರದಿ ಹೇಳಿದೆ.

ಹೆಚ್ಚಿನ ಸೈಬರ್‌ ವಂಚನೆಗಳು ಅಥವಾ ಡಿಜಿಟಲ್ ಅರೆಸ್ಟ್ ವಂಚನೆಯನ್ನು ಕಾಂಬೋಡಿಯಾ, ಮ್ಯಾನ್ಮಾರ್, ವಿಯೆಟ್ನಾಂ, ಲಾವೋಸ್ ಮತ್ತು ಥೈಲ್ಯಾಂಡ್‌ನಂತಹ ದೇಶಗಳಿಂದ ಕಾರ್ಯನಿರ್ವಹಿಸುತ್ತಿರುವ ಹಲವಾರು ಕಾಲ್ ಸೆಂಟರ್‌ಗಳಿಂದ ಮಾಡಲಾಗುತ್ತಿದೆ.

ಕಾಂಬೋಡಿಯಾ ಮತ್ತು ಚೀನಾ ಒಡೆತನದ ಕ್ಯಾಸಿನೋಗಳಲ್ಲಿ ಹೆಚ್ಚಾಗಿ ಈ ಕಾಲ್‌ ಸೆಂಟರ್‌ಗಳು ನೆಲೆಗೊಂಡಿವೆ. ಅಲ್ಲಿನ ಸೈಬರ್ ಗುಲಾಮಗಿರಿಯು ಕಳವಳಕಾರಿ ವಿಷಯವಾಗಿದೆ. ವಂಚನೆಯ ಮೂಲ ವಿದೇಶದಲ್ಲಿದ್ದರೂ, ಅದಕ್ಕೆ ಬಲಿಯಾಗುತ್ತಿರುವ 30 ರಿಂದ 40 ಶೇಖಡ ಜನರು ಭಾರತೀಯರು. ಇಲ್ಲಿನ ಸ್ಥಳೀಯ ವಂಚನೆಯ ಜಾಲಗಳೂ ಈ ವಿಚಾರದಲ್ಲಿ ಸಕ್ರಿಯವಾಗಿವೆ ಎಂದು ವರದಿ ವಿವರಿಸಿದೆ.

ವರದಿಯ ಪ್ರಕಾರ, ಜನವರಿ 2024 ರಿಂದ, ಭಾರತದಲ್ಲಿ 92,334ಕ್ಕೂ ಹೆಚ್ಚು ಡಿಜಿಟಲ್ ಅರೆಸ್ಟ್ ಘಟನೆಗಳು ನಡೆದಿವೆ. ಬಹುತೇಕ ಪ್ರಕರಣಗಳಲ್ಲಿ ತಕ್ಷಣ ಹಣ ವರ್ಗಾಯಿಸದಿದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೆದರಿಕೊಂಡು ಜನರು ಮೋಸ ಹೋಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವರದಿಯ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಸೈಬರ್ ಸೆಕ್ಯುರಿಟಿ ಏಜೆನ್ಸಿ CERT-IN ಜನರು ಸೈಬರ್ ವಂಚನೆಯ ಜಾಲದಲ್ಲಿ ಬಿದ್ದಿರುವ ಅನುಮಾನ ಎದುರಾದರೆ ರಕ್ಷಣೆ ಪಡೆಯಲು ಹಲವು ಸಲಹೆಗಳನ್ನು ನೀಡಿದೆ. ವಂಚನೆಗೊಳಗಾದವರು ಸಹಾಯವಾಣಿ ಸಂಖ್ಯೆ 1930ಗೆ ಕರೆ ಮಾಡಿ ಐ4ಸಿಗೆ ನೇರವಾಗಿ ವರದಿ ಮಾಡಬಹುದು. ಹೀಗೆ ವರದಿ ಮಾಡಿದರೆ, ಜನರು ಕಳೆದುಕೊಂಡಿರುವ ಹಣವನ್ನು ಮರಳಿ ಪಡೆಯಬಹುದು ಅಥವಾ ನಷ್ಟವನ್ನು ತಡೆಗಟ್ಟಲು ಗರಿಷ್ಠ ಪ್ರಯತ್ನ ಮಾಡಬಹುದು.

ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ವಂಚನೆಯ ಕುರಿತು ಅಕ್ಟೋಬರ್ 27ರಂದು ನಡೆದ ಮನ್‌ ಕಿ ಬಾತ್ 115ನೇ ಸಂಚಿಕೆಯಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ ಬಳಿಕ ಹೆಚ್ಚಿನ ಚರ್ಚೆ ನಡೆಯುತ್ತಿದೆ.

ಈ ಡಿಜಿಟಲ್ ಅರೆಸ್ಟ್ ಅಂದರೆ ಏನು? ಅದರ ಮೂಲಕ ಹೇಗೆ ಜನರಿಂದ ಹಣ ದೋಚಲಾಗುತ್ತದೆ ಎಂಬುವುದರ ಕುರಿತ ವಿಸ್ಕೃತ ವರದಿ ಕೆಳಗಿದೆ

ಇದನ್ನೂ ಓದಿ : Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...