Homeಸಿನಿಮಾಕ್ರೀಡೆಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

ಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

- Advertisement -
- Advertisement -

ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಬೃಹತ್ ಅಂತರದಿಂದ ಗೆಲುವು ಪಡೆದ ಭಾರತ ತಂಡವು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದಿದೆ.

317ರನ್‌ಗಳ ಅಂತರದಿಂದ ಗೆದ್ದು ಅತಿ ಹೆಚ್ಚು ರನ್‌ಗಳ ಅಂತರದಿಂದ ವಿಜಯ ಸಾಧಿಸಿದ ಮೊದಲ ತಂಡವೆಂಬ ಕೀರ್ತಿಗೆ ಭಾರತ ಪಾತ್ರವಾಗಿದೆ. 50 ಓವರ್‌ಗಳಲ್ಲಿ 390 ರನ್‌ ಗಳಿಸಿ 391 ರನ್‌ಗಳ ಟಾರ್ಗೆಟ್ ನೀಡಿದ್ದ ಭಾರತ, ಶ್ರೀಲಂಕಾವನ್ನು 22 ಓವರ್‌ಗಳಲ್ಲಿ 73 ರನ್‌ಗಳಿಗೆ ಆಲ್‌ಔಟ್ ಮಾಡುವ ಮೂಲಕ ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿತು.

2008ರಲ್ಲಿ ನ್ಯೂಜಿಲಾಂಡ್ ತಂಡವು ಐರ್ಲೆಂಡ್ ವಿರುದ್ಧ 290ರನ್‌ಗಳ ಅಂತರದಿಂದ ಗೆದ್ದದ್ದು ಈವರೆಗಿನ ಅತಿ ಹೆಚ್ಚು ಅಂತರದ ಗೆಲುವಿನ ಸಾಧನೆಯಾಗಿತ್ತು. ಆಫಘಾನಿಸ್ತಾನದ ವಿರುದ್ಧ ಆಸ್ಟ್ರೆಲಿಯಾ 275 ರನ್‌ಗಳ ಅಂತರದಿಂದ 2015ರಲ್ಲಿ ಗೆದ್ದಿತ್ತು.

ಭಾರತ ತಂಡದ ಪರವಾಗಿ ಹತ್ತು ಓವರ್‌ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್ 32 ರನ್ ನೀಡಿ 4 ವಿಕೆಟ್ ಕಬಳಿಸಿದರು. ಐದು ಓವರ್‌ ಬೌಲಿಂಗ್ ಮಾಡಿದ ಕುಲದೀಪ್ ಯಾದವ್ 16 ರನ್‌ ನೀಡಿ 2 ವಿಕೆಟ್ ಪಡೆದರು. ಮೊಹಮ್ಮದ್ ಶಮಿ 6 ಓವರ್‌ ಎಸೆದು 20 ರನ್‌ ನೀಡಿ 2 ವಿಕೆಟ್ ಗಳಿಸಿದರು.

ಅತಿ ಹೆಚ್ಚು ಅಂತರದಿಂದ ಗೆದ್ದ ತಂಡಗಳ ವಿವರ

ದಾಖಲೆ ಬರೆದ ಕೊಹ್ಲಿ

ಸ್ವದೇಶದಲ್ಲಿ ಅತಿ ಹೆಚ್ಚು ಏಕದಿನ ಶತಕ ಬಾರಿಸಿದ ಸಚಿನ್‌ ತೆಂಡೂಲ್ಕರ್‌ರವರ ದಾಖಲೆಯನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮುರಿದಿದ್ದಾರೆ. ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 85 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ಕೊಹ್ಲಿ ಭಾರತದ ನೆಲದಲ್ಲಿ 21ನೇ ಏಕದಿನ ಶತಕ ಸಿಡಿಸುವ ಮೂಲಕ ವಿಶ್ವದಾಖಲೆಗೆ ಪಾತ್ರರಾದರು.

ಸಚಿನ್ ತೆಂಡೂಲ್ಕರ್ ಭಾರತದಲ್ಲಿ ಆಡಿದ 164 ಪಂದ್ಯಗಳಲ್ಲಿ 20 ಶತಕಗಳನ್ನು ಬಾರಿಸಿದರೆ, ವಿರಾಟ್ ಕೊಹ್ಲಿ 104 ಪಂದ್ಯಗಳಲ್ಲಿ 21 ಶತಕ ಬಾರಿಸಿದ್ದಾರೆ.

ಅಲ್ಲದೆ ತಂಡವೊಂದರ ವಿರುದ್ಧ ಅತಿ ಹೆಚ್ಚು ಶತಕ ಗಳಿಸಿದ ವಿಶ್ವದಾಖಲೆ ಸಹ ಕೊಹ್ಲಿ ಪಾಲಾಯಿತು. ಸಚಿನ್ ಮತ್ತು ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಲಾ 9 ಶತಕ ಸಿಡಿಸಿದ್ದರೆ, ಇಂದಿನ ಪಂದ್ಯದಲ್ಲಿನ ಶತಕದ ಮೂಲಕ ಕೊಹ್ಲಿ ಶ್ರೀಲಂಕಾ ತಂಡದ ವಿರುದ್ಧ 10 ಶತಕಗಳನ್ನು ಸಿಡಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಶ್ರೀಲಂಕಾ ವಿರುದ್ಧ 8 ಶತಕಗಳನ್ನು ಬಾರಿಸಿದ್ದಾರೆ.

ಒಟ್ಟಾರೆ ಏಕದಿನ ಶತಕಗಳಲ್ಲಿ ಸಚಿನ್ 49 ಶತಕ ಬಾರಿಸಿದರೆ ಕೊಹ್ಲಿ 46 ಶತಕಗಳನ್ನು ಬಾರಿಸಿ 2ನೇ ಸ್ಥಾನದಲ್ಲಿದ್ದಾರೆ.

ಕೊಹ್ಲಿ ಮೂರು ಪಂದ್ಯಗಳ ಈ ಸರಣಿಯಲ್ಲಿ ಎರಡನೇ ಶತಕ ಗಳಿಸಿದ್ದಾರೆ. ಅಲ್ಲದೆ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರನೇ ಶತಕ ಇದಾಗಿದೆ. ಈ ಪಂದ್ಯದಲ್ಲಿ ಅಜೇಯರಾಗಿ ಉಳಿದ ಕೊಹ್ಲಿ 110 ಬಾಲ್‌ಗಳಲ್ಲಿ 166 ರನ್ ಸಿಡಿಸಿದರು. ಅವರ ಬ್ಯಾಟ್ ಮೂಲಕ 13 ಫೋರ್‌, 8 ಸಿಕ್ಸ್‌ ಮೂಡಿಬಂದವು.

ಶುಭ್‌ಮನ್‌ ಗಿಲ್ ಶತಕ

ಮೊದಲ ಬ್ಯಾಟ್ ಮಾಡಿದ ಭಾರತಕ್ಕೆ ಆರಂಭಿಕ ಆಟಗಾರರು ಭದ್ರಬುನಾದಿ ಹಾಕಿಕೊಟ್ಟರು. 49 ಬಾಲ್‌ಗಳಲ್ಲಿ 42 ರನ್‌ಗಳನ್ನು (2 ಫೋರ್‌, 3 ಸಿಕ್ಸ್‌) ಕ್ಯಾಪ್ಟನ್‌ ರೋಹಿತ್‌ ಶರ್ಮ ಗಳಿಸಿದರೆ, ಆರಂಭಿಕ ಆಟಗಾರ ಶುಭಮನ್‌ ಗಿಲ್‌ ಶತಕ ಸಿಡಿಸಿದರು. 97 ಎಸೆಗಳಲ್ಲಿ 116 ರನ್‌ ಗಳಿಸಿದ ಗಿಲ್‌, 14 ಫೋರ್‌, 2 ಸಿಕ್ಸ್‌ ಭಾರಿಸಿದರು. ಆ ನಂತರ ಬಂದ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್‌ (38 ರನ್‌, 32 ಬಾಲ್‌, 2 ಫೋರ್‌, 1 ಸಿಕ್ಸ್‌) ತಂಡ ಉತ್ತಮ ಮೊತ್ತ ಗಳಿಸಲು ಕಾರಣವಾದರು. ಕೆ.ಎಲ್‌.ರಾಹು‌ಲ್ 7 ರನ್‌, ಸೂರ್ಯಕುಮಾರ್‌ ಯಾದವ್‌ 4 ರನ್‌, ಅಕ್ಸರ್ ಪಟೇಲ್‌ ಅಜೇಯ 2 ರನ್‌ ಗಳಿಸಿದರು. ಅಂತಿಮವಾಗಿ ಭಾರತ ಐದು ವಿಕೆಟ್ ನಷ್ಟಕ್ಕೆ 390 ರನ್‌ ಗಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...