Homeಸಿನಿಮಾಕ್ರೀಡೆಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

ಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

- Advertisement -
- Advertisement -

ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಬೃಹತ್ ಅಂತರದಿಂದ ಗೆಲುವು ಪಡೆದ ಭಾರತ ತಂಡವು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದಿದೆ.

317ರನ್‌ಗಳ ಅಂತರದಿಂದ ಗೆದ್ದು ಅತಿ ಹೆಚ್ಚು ರನ್‌ಗಳ ಅಂತರದಿಂದ ವಿಜಯ ಸಾಧಿಸಿದ ಮೊದಲ ತಂಡವೆಂಬ ಕೀರ್ತಿಗೆ ಭಾರತ ಪಾತ್ರವಾಗಿದೆ. 50 ಓವರ್‌ಗಳಲ್ಲಿ 390 ರನ್‌ ಗಳಿಸಿ 391 ರನ್‌ಗಳ ಟಾರ್ಗೆಟ್ ನೀಡಿದ್ದ ಭಾರತ, ಶ್ರೀಲಂಕಾವನ್ನು 22 ಓವರ್‌ಗಳಲ್ಲಿ 73 ರನ್‌ಗಳಿಗೆ ಆಲ್‌ಔಟ್ ಮಾಡುವ ಮೂಲಕ ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿತು.

2008ರಲ್ಲಿ ನ್ಯೂಜಿಲಾಂಡ್ ತಂಡವು ಐರ್ಲೆಂಡ್ ವಿರುದ್ಧ 290ರನ್‌ಗಳ ಅಂತರದಿಂದ ಗೆದ್ದದ್ದು ಈವರೆಗಿನ ಅತಿ ಹೆಚ್ಚು ಅಂತರದ ಗೆಲುವಿನ ಸಾಧನೆಯಾಗಿತ್ತು. ಆಫಘಾನಿಸ್ತಾನದ ವಿರುದ್ಧ ಆಸ್ಟ್ರೆಲಿಯಾ 275 ರನ್‌ಗಳ ಅಂತರದಿಂದ 2015ರಲ್ಲಿ ಗೆದ್ದಿತ್ತು.

ಭಾರತ ತಂಡದ ಪರವಾಗಿ ಹತ್ತು ಓವರ್‌ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್ 32 ರನ್ ನೀಡಿ 4 ವಿಕೆಟ್ ಕಬಳಿಸಿದರು. ಐದು ಓವರ್‌ ಬೌಲಿಂಗ್ ಮಾಡಿದ ಕುಲದೀಪ್ ಯಾದವ್ 16 ರನ್‌ ನೀಡಿ 2 ವಿಕೆಟ್ ಪಡೆದರು. ಮೊಹಮ್ಮದ್ ಶಮಿ 6 ಓವರ್‌ ಎಸೆದು 20 ರನ್‌ ನೀಡಿ 2 ವಿಕೆಟ್ ಗಳಿಸಿದರು.

ಅತಿ ಹೆಚ್ಚು ಅಂತರದಿಂದ ಗೆದ್ದ ತಂಡಗಳ ವಿವರ

ದಾಖಲೆ ಬರೆದ ಕೊಹ್ಲಿ

ಸ್ವದೇಶದಲ್ಲಿ ಅತಿ ಹೆಚ್ಚು ಏಕದಿನ ಶತಕ ಬಾರಿಸಿದ ಸಚಿನ್‌ ತೆಂಡೂಲ್ಕರ್‌ರವರ ದಾಖಲೆಯನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮುರಿದಿದ್ದಾರೆ. ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 85 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ಕೊಹ್ಲಿ ಭಾರತದ ನೆಲದಲ್ಲಿ 21ನೇ ಏಕದಿನ ಶತಕ ಸಿಡಿಸುವ ಮೂಲಕ ವಿಶ್ವದಾಖಲೆಗೆ ಪಾತ್ರರಾದರು.

ಸಚಿನ್ ತೆಂಡೂಲ್ಕರ್ ಭಾರತದಲ್ಲಿ ಆಡಿದ 164 ಪಂದ್ಯಗಳಲ್ಲಿ 20 ಶತಕಗಳನ್ನು ಬಾರಿಸಿದರೆ, ವಿರಾಟ್ ಕೊಹ್ಲಿ 104 ಪಂದ್ಯಗಳಲ್ಲಿ 21 ಶತಕ ಬಾರಿಸಿದ್ದಾರೆ.

ಅಲ್ಲದೆ ತಂಡವೊಂದರ ವಿರುದ್ಧ ಅತಿ ಹೆಚ್ಚು ಶತಕ ಗಳಿಸಿದ ವಿಶ್ವದಾಖಲೆ ಸಹ ಕೊಹ್ಲಿ ಪಾಲಾಯಿತು. ಸಚಿನ್ ಮತ್ತು ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಲಾ 9 ಶತಕ ಸಿಡಿಸಿದ್ದರೆ, ಇಂದಿನ ಪಂದ್ಯದಲ್ಲಿನ ಶತಕದ ಮೂಲಕ ಕೊಹ್ಲಿ ಶ್ರೀಲಂಕಾ ತಂಡದ ವಿರುದ್ಧ 10 ಶತಕಗಳನ್ನು ಸಿಡಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಶ್ರೀಲಂಕಾ ವಿರುದ್ಧ 8 ಶತಕಗಳನ್ನು ಬಾರಿಸಿದ್ದಾರೆ.

ಒಟ್ಟಾರೆ ಏಕದಿನ ಶತಕಗಳಲ್ಲಿ ಸಚಿನ್ 49 ಶತಕ ಬಾರಿಸಿದರೆ ಕೊಹ್ಲಿ 46 ಶತಕಗಳನ್ನು ಬಾರಿಸಿ 2ನೇ ಸ್ಥಾನದಲ್ಲಿದ್ದಾರೆ.

ಕೊಹ್ಲಿ ಮೂರು ಪಂದ್ಯಗಳ ಈ ಸರಣಿಯಲ್ಲಿ ಎರಡನೇ ಶತಕ ಗಳಿಸಿದ್ದಾರೆ. ಅಲ್ಲದೆ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರನೇ ಶತಕ ಇದಾಗಿದೆ. ಈ ಪಂದ್ಯದಲ್ಲಿ ಅಜೇಯರಾಗಿ ಉಳಿದ ಕೊಹ್ಲಿ 110 ಬಾಲ್‌ಗಳಲ್ಲಿ 166 ರನ್ ಸಿಡಿಸಿದರು. ಅವರ ಬ್ಯಾಟ್ ಮೂಲಕ 13 ಫೋರ್‌, 8 ಸಿಕ್ಸ್‌ ಮೂಡಿಬಂದವು.

ಶುಭ್‌ಮನ್‌ ಗಿಲ್ ಶತಕ

ಮೊದಲ ಬ್ಯಾಟ್ ಮಾಡಿದ ಭಾರತಕ್ಕೆ ಆರಂಭಿಕ ಆಟಗಾರರು ಭದ್ರಬುನಾದಿ ಹಾಕಿಕೊಟ್ಟರು. 49 ಬಾಲ್‌ಗಳಲ್ಲಿ 42 ರನ್‌ಗಳನ್ನು (2 ಫೋರ್‌, 3 ಸಿಕ್ಸ್‌) ಕ್ಯಾಪ್ಟನ್‌ ರೋಹಿತ್‌ ಶರ್ಮ ಗಳಿಸಿದರೆ, ಆರಂಭಿಕ ಆಟಗಾರ ಶುಭಮನ್‌ ಗಿಲ್‌ ಶತಕ ಸಿಡಿಸಿದರು. 97 ಎಸೆಗಳಲ್ಲಿ 116 ರನ್‌ ಗಳಿಸಿದ ಗಿಲ್‌, 14 ಫೋರ್‌, 2 ಸಿಕ್ಸ್‌ ಭಾರಿಸಿದರು. ಆ ನಂತರ ಬಂದ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್‌ (38 ರನ್‌, 32 ಬಾಲ್‌, 2 ಫೋರ್‌, 1 ಸಿಕ್ಸ್‌) ತಂಡ ಉತ್ತಮ ಮೊತ್ತ ಗಳಿಸಲು ಕಾರಣವಾದರು. ಕೆ.ಎಲ್‌.ರಾಹು‌ಲ್ 7 ರನ್‌, ಸೂರ್ಯಕುಮಾರ್‌ ಯಾದವ್‌ 4 ರನ್‌, ಅಕ್ಸರ್ ಪಟೇಲ್‌ ಅಜೇಯ 2 ರನ್‌ ಗಳಿಸಿದರು. ಅಂತಿಮವಾಗಿ ಭಾರತ ಐದು ವಿಕೆಟ್ ನಷ್ಟಕ್ಕೆ 390 ರನ್‌ ಗಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...