Homeಸಿನಿಮಾಕ್ರೀಡೆಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

ಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

- Advertisement -
- Advertisement -

ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಬೃಹತ್ ಅಂತರದಿಂದ ಗೆಲುವು ಪಡೆದ ಭಾರತ ತಂಡವು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದಿದೆ.

317ರನ್‌ಗಳ ಅಂತರದಿಂದ ಗೆದ್ದು ಅತಿ ಹೆಚ್ಚು ರನ್‌ಗಳ ಅಂತರದಿಂದ ವಿಜಯ ಸಾಧಿಸಿದ ಮೊದಲ ತಂಡವೆಂಬ ಕೀರ್ತಿಗೆ ಭಾರತ ಪಾತ್ರವಾಗಿದೆ. 50 ಓವರ್‌ಗಳಲ್ಲಿ 390 ರನ್‌ ಗಳಿಸಿ 391 ರನ್‌ಗಳ ಟಾರ್ಗೆಟ್ ನೀಡಿದ್ದ ಭಾರತ, ಶ್ರೀಲಂಕಾವನ್ನು 22 ಓವರ್‌ಗಳಲ್ಲಿ 73 ರನ್‌ಗಳಿಗೆ ಆಲ್‌ಔಟ್ ಮಾಡುವ ಮೂಲಕ ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿತು.

2008ರಲ್ಲಿ ನ್ಯೂಜಿಲಾಂಡ್ ತಂಡವು ಐರ್ಲೆಂಡ್ ವಿರುದ್ಧ 290ರನ್‌ಗಳ ಅಂತರದಿಂದ ಗೆದ್ದದ್ದು ಈವರೆಗಿನ ಅತಿ ಹೆಚ್ಚು ಅಂತರದ ಗೆಲುವಿನ ಸಾಧನೆಯಾಗಿತ್ತು. ಆಫಘಾನಿಸ್ತಾನದ ವಿರುದ್ಧ ಆಸ್ಟ್ರೆಲಿಯಾ 275 ರನ್‌ಗಳ ಅಂತರದಿಂದ 2015ರಲ್ಲಿ ಗೆದ್ದಿತ್ತು.

ಭಾರತ ತಂಡದ ಪರವಾಗಿ ಹತ್ತು ಓವರ್‌ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್ 32 ರನ್ ನೀಡಿ 4 ವಿಕೆಟ್ ಕಬಳಿಸಿದರು. ಐದು ಓವರ್‌ ಬೌಲಿಂಗ್ ಮಾಡಿದ ಕುಲದೀಪ್ ಯಾದವ್ 16 ರನ್‌ ನೀಡಿ 2 ವಿಕೆಟ್ ಪಡೆದರು. ಮೊಹಮ್ಮದ್ ಶಮಿ 6 ಓವರ್‌ ಎಸೆದು 20 ರನ್‌ ನೀಡಿ 2 ವಿಕೆಟ್ ಗಳಿಸಿದರು.

ಅತಿ ಹೆಚ್ಚು ಅಂತರದಿಂದ ಗೆದ್ದ ತಂಡಗಳ ವಿವರ

ದಾಖಲೆ ಬರೆದ ಕೊಹ್ಲಿ

ಸ್ವದೇಶದಲ್ಲಿ ಅತಿ ಹೆಚ್ಚು ಏಕದಿನ ಶತಕ ಬಾರಿಸಿದ ಸಚಿನ್‌ ತೆಂಡೂಲ್ಕರ್‌ರವರ ದಾಖಲೆಯನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮುರಿದಿದ್ದಾರೆ. ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 85 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ಕೊಹ್ಲಿ ಭಾರತದ ನೆಲದಲ್ಲಿ 21ನೇ ಏಕದಿನ ಶತಕ ಸಿಡಿಸುವ ಮೂಲಕ ವಿಶ್ವದಾಖಲೆಗೆ ಪಾತ್ರರಾದರು.

ಸಚಿನ್ ತೆಂಡೂಲ್ಕರ್ ಭಾರತದಲ್ಲಿ ಆಡಿದ 164 ಪಂದ್ಯಗಳಲ್ಲಿ 20 ಶತಕಗಳನ್ನು ಬಾರಿಸಿದರೆ, ವಿರಾಟ್ ಕೊಹ್ಲಿ 104 ಪಂದ್ಯಗಳಲ್ಲಿ 21 ಶತಕ ಬಾರಿಸಿದ್ದಾರೆ.

ಅಲ್ಲದೆ ತಂಡವೊಂದರ ವಿರುದ್ಧ ಅತಿ ಹೆಚ್ಚು ಶತಕ ಗಳಿಸಿದ ವಿಶ್ವದಾಖಲೆ ಸಹ ಕೊಹ್ಲಿ ಪಾಲಾಯಿತು. ಸಚಿನ್ ಮತ್ತು ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಲಾ 9 ಶತಕ ಸಿಡಿಸಿದ್ದರೆ, ಇಂದಿನ ಪಂದ್ಯದಲ್ಲಿನ ಶತಕದ ಮೂಲಕ ಕೊಹ್ಲಿ ಶ್ರೀಲಂಕಾ ತಂಡದ ವಿರುದ್ಧ 10 ಶತಕಗಳನ್ನು ಸಿಡಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಶ್ರೀಲಂಕಾ ವಿರುದ್ಧ 8 ಶತಕಗಳನ್ನು ಬಾರಿಸಿದ್ದಾರೆ.

ಒಟ್ಟಾರೆ ಏಕದಿನ ಶತಕಗಳಲ್ಲಿ ಸಚಿನ್ 49 ಶತಕ ಬಾರಿಸಿದರೆ ಕೊಹ್ಲಿ 46 ಶತಕಗಳನ್ನು ಬಾರಿಸಿ 2ನೇ ಸ್ಥಾನದಲ್ಲಿದ್ದಾರೆ.

ಕೊಹ್ಲಿ ಮೂರು ಪಂದ್ಯಗಳ ಈ ಸರಣಿಯಲ್ಲಿ ಎರಡನೇ ಶತಕ ಗಳಿಸಿದ್ದಾರೆ. ಅಲ್ಲದೆ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರನೇ ಶತಕ ಇದಾಗಿದೆ. ಈ ಪಂದ್ಯದಲ್ಲಿ ಅಜೇಯರಾಗಿ ಉಳಿದ ಕೊಹ್ಲಿ 110 ಬಾಲ್‌ಗಳಲ್ಲಿ 166 ರನ್ ಸಿಡಿಸಿದರು. ಅವರ ಬ್ಯಾಟ್ ಮೂಲಕ 13 ಫೋರ್‌, 8 ಸಿಕ್ಸ್‌ ಮೂಡಿಬಂದವು.

ಶುಭ್‌ಮನ್‌ ಗಿಲ್ ಶತಕ

ಮೊದಲ ಬ್ಯಾಟ್ ಮಾಡಿದ ಭಾರತಕ್ಕೆ ಆರಂಭಿಕ ಆಟಗಾರರು ಭದ್ರಬುನಾದಿ ಹಾಕಿಕೊಟ್ಟರು. 49 ಬಾಲ್‌ಗಳಲ್ಲಿ 42 ರನ್‌ಗಳನ್ನು (2 ಫೋರ್‌, 3 ಸಿಕ್ಸ್‌) ಕ್ಯಾಪ್ಟನ್‌ ರೋಹಿತ್‌ ಶರ್ಮ ಗಳಿಸಿದರೆ, ಆರಂಭಿಕ ಆಟಗಾರ ಶುಭಮನ್‌ ಗಿಲ್‌ ಶತಕ ಸಿಡಿಸಿದರು. 97 ಎಸೆಗಳಲ್ಲಿ 116 ರನ್‌ ಗಳಿಸಿದ ಗಿಲ್‌, 14 ಫೋರ್‌, 2 ಸಿಕ್ಸ್‌ ಭಾರಿಸಿದರು. ಆ ನಂತರ ಬಂದ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್‌ (38 ರನ್‌, 32 ಬಾಲ್‌, 2 ಫೋರ್‌, 1 ಸಿಕ್ಸ್‌) ತಂಡ ಉತ್ತಮ ಮೊತ್ತ ಗಳಿಸಲು ಕಾರಣವಾದರು. ಕೆ.ಎಲ್‌.ರಾಹು‌ಲ್ 7 ರನ್‌, ಸೂರ್ಯಕುಮಾರ್‌ ಯಾದವ್‌ 4 ರನ್‌, ಅಕ್ಸರ್ ಪಟೇಲ್‌ ಅಜೇಯ 2 ರನ್‌ ಗಳಿಸಿದರು. ಅಂತಿಮವಾಗಿ ಭಾರತ ಐದು ವಿಕೆಟ್ ನಷ್ಟಕ್ಕೆ 390 ರನ್‌ ಗಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...