Homeಸಿನಿಮಾಕ್ರೀಡೆಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

ಅತಿಹೆಚ್ಚು ರನ್‌ಗಳ ಅಂತರದಲ್ಲಿ ಗೆದ್ದು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದ ಭಾರತ

- Advertisement -
- Advertisement -

ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಬೃಹತ್ ಅಂತರದಿಂದ ಗೆಲುವು ಪಡೆದ ಭಾರತ ತಂಡವು ಏಕದಿನ ಪಂದ್ಯದಲ್ಲಿ ಇತಿಹಾಸ ಬರೆದಿದೆ.

317ರನ್‌ಗಳ ಅಂತರದಿಂದ ಗೆದ್ದು ಅತಿ ಹೆಚ್ಚು ರನ್‌ಗಳ ಅಂತರದಿಂದ ವಿಜಯ ಸಾಧಿಸಿದ ಮೊದಲ ತಂಡವೆಂಬ ಕೀರ್ತಿಗೆ ಭಾರತ ಪಾತ್ರವಾಗಿದೆ. 50 ಓವರ್‌ಗಳಲ್ಲಿ 390 ರನ್‌ ಗಳಿಸಿ 391 ರನ್‌ಗಳ ಟಾರ್ಗೆಟ್ ನೀಡಿದ್ದ ಭಾರತ, ಶ್ರೀಲಂಕಾವನ್ನು 22 ಓವರ್‌ಗಳಲ್ಲಿ 73 ರನ್‌ಗಳಿಗೆ ಆಲ್‌ಔಟ್ ಮಾಡುವ ಮೂಲಕ ಗೆಲುವು ಪಡೆಯಿತು. ಜೊತೆಗೆ 3-0 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿತು.

2008ರಲ್ಲಿ ನ್ಯೂಜಿಲಾಂಡ್ ತಂಡವು ಐರ್ಲೆಂಡ್ ವಿರುದ್ಧ 290ರನ್‌ಗಳ ಅಂತರದಿಂದ ಗೆದ್ದದ್ದು ಈವರೆಗಿನ ಅತಿ ಹೆಚ್ಚು ಅಂತರದ ಗೆಲುವಿನ ಸಾಧನೆಯಾಗಿತ್ತು. ಆಫಘಾನಿಸ್ತಾನದ ವಿರುದ್ಧ ಆಸ್ಟ್ರೆಲಿಯಾ 275 ರನ್‌ಗಳ ಅಂತರದಿಂದ 2015ರಲ್ಲಿ ಗೆದ್ದಿತ್ತು.

ಭಾರತ ತಂಡದ ಪರವಾಗಿ ಹತ್ತು ಓವರ್‌ ಬೌಲಿಂಗ್ ಮಾಡಿದ ಮೊಹಮ್ಮದ್ ಸಿರಾಜ್ 32 ರನ್ ನೀಡಿ 4 ವಿಕೆಟ್ ಕಬಳಿಸಿದರು. ಐದು ಓವರ್‌ ಬೌಲಿಂಗ್ ಮಾಡಿದ ಕುಲದೀಪ್ ಯಾದವ್ 16 ರನ್‌ ನೀಡಿ 2 ವಿಕೆಟ್ ಪಡೆದರು. ಮೊಹಮ್ಮದ್ ಶಮಿ 6 ಓವರ್‌ ಎಸೆದು 20 ರನ್‌ ನೀಡಿ 2 ವಿಕೆಟ್ ಗಳಿಸಿದರು.

ಅತಿ ಹೆಚ್ಚು ಅಂತರದಿಂದ ಗೆದ್ದ ತಂಡಗಳ ವಿವರ

ದಾಖಲೆ ಬರೆದ ಕೊಹ್ಲಿ

ಸ್ವದೇಶದಲ್ಲಿ ಅತಿ ಹೆಚ್ಚು ಏಕದಿನ ಶತಕ ಬಾರಿಸಿದ ಸಚಿನ್‌ ತೆಂಡೂಲ್ಕರ್‌ರವರ ದಾಖಲೆಯನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮುರಿದಿದ್ದಾರೆ. ತಿರುವನಂತಪುರಂನಲ್ಲಿ ಶ್ರೀಲಂಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ 85 ಎಸೆತಗಳಲ್ಲಿ ಶತಕ ಪೂರೈಸಿದ ವಿರಾಟ್ ಕೊಹ್ಲಿ ಭಾರತದ ನೆಲದಲ್ಲಿ 21ನೇ ಏಕದಿನ ಶತಕ ಸಿಡಿಸುವ ಮೂಲಕ ವಿಶ್ವದಾಖಲೆಗೆ ಪಾತ್ರರಾದರು.

ಸಚಿನ್ ತೆಂಡೂಲ್ಕರ್ ಭಾರತದಲ್ಲಿ ಆಡಿದ 164 ಪಂದ್ಯಗಳಲ್ಲಿ 20 ಶತಕಗಳನ್ನು ಬಾರಿಸಿದರೆ, ವಿರಾಟ್ ಕೊಹ್ಲಿ 104 ಪಂದ್ಯಗಳಲ್ಲಿ 21 ಶತಕ ಬಾರಿಸಿದ್ದಾರೆ.

ಅಲ್ಲದೆ ತಂಡವೊಂದರ ವಿರುದ್ಧ ಅತಿ ಹೆಚ್ಚು ಶತಕ ಗಳಿಸಿದ ವಿಶ್ವದಾಖಲೆ ಸಹ ಕೊಹ್ಲಿ ಪಾಲಾಯಿತು. ಸಚಿನ್ ಮತ್ತು ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಲಾ 9 ಶತಕ ಸಿಡಿಸಿದ್ದರೆ, ಇಂದಿನ ಪಂದ್ಯದಲ್ಲಿನ ಶತಕದ ಮೂಲಕ ಕೊಹ್ಲಿ ಶ್ರೀಲಂಕಾ ತಂಡದ ವಿರುದ್ಧ 10 ಶತಕಗಳನ್ನು ಸಿಡಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಶ್ರೀಲಂಕಾ ವಿರುದ್ಧ 8 ಶತಕಗಳನ್ನು ಬಾರಿಸಿದ್ದಾರೆ.

ಒಟ್ಟಾರೆ ಏಕದಿನ ಶತಕಗಳಲ್ಲಿ ಸಚಿನ್ 49 ಶತಕ ಬಾರಿಸಿದರೆ ಕೊಹ್ಲಿ 46 ಶತಕಗಳನ್ನು ಬಾರಿಸಿ 2ನೇ ಸ್ಥಾನದಲ್ಲಿದ್ದಾರೆ.

ಕೊಹ್ಲಿ ಮೂರು ಪಂದ್ಯಗಳ ಈ ಸರಣಿಯಲ್ಲಿ ಎರಡನೇ ಶತಕ ಗಳಿಸಿದ್ದಾರೆ. ಅಲ್ಲದೆ ಕಳೆದ ನಾಲ್ಕು ಪಂದ್ಯಗಳಲ್ಲಿ ಮೂರನೇ ಶತಕ ಇದಾಗಿದೆ. ಈ ಪಂದ್ಯದಲ್ಲಿ ಅಜೇಯರಾಗಿ ಉಳಿದ ಕೊಹ್ಲಿ 110 ಬಾಲ್‌ಗಳಲ್ಲಿ 166 ರನ್ ಸಿಡಿಸಿದರು. ಅವರ ಬ್ಯಾಟ್ ಮೂಲಕ 13 ಫೋರ್‌, 8 ಸಿಕ್ಸ್‌ ಮೂಡಿಬಂದವು.

ಶುಭ್‌ಮನ್‌ ಗಿಲ್ ಶತಕ

ಮೊದಲ ಬ್ಯಾಟ್ ಮಾಡಿದ ಭಾರತಕ್ಕೆ ಆರಂಭಿಕ ಆಟಗಾರರು ಭದ್ರಬುನಾದಿ ಹಾಕಿಕೊಟ್ಟರು. 49 ಬಾಲ್‌ಗಳಲ್ಲಿ 42 ರನ್‌ಗಳನ್ನು (2 ಫೋರ್‌, 3 ಸಿಕ್ಸ್‌) ಕ್ಯಾಪ್ಟನ್‌ ರೋಹಿತ್‌ ಶರ್ಮ ಗಳಿಸಿದರೆ, ಆರಂಭಿಕ ಆಟಗಾರ ಶುಭಮನ್‌ ಗಿಲ್‌ ಶತಕ ಸಿಡಿಸಿದರು. 97 ಎಸೆಗಳಲ್ಲಿ 116 ರನ್‌ ಗಳಿಸಿದ ಗಿಲ್‌, 14 ಫೋರ್‌, 2 ಸಿಕ್ಸ್‌ ಭಾರಿಸಿದರು. ಆ ನಂತರ ಬಂದ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್‌ (38 ರನ್‌, 32 ಬಾಲ್‌, 2 ಫೋರ್‌, 1 ಸಿಕ್ಸ್‌) ತಂಡ ಉತ್ತಮ ಮೊತ್ತ ಗಳಿಸಲು ಕಾರಣವಾದರು. ಕೆ.ಎಲ್‌.ರಾಹು‌ಲ್ 7 ರನ್‌, ಸೂರ್ಯಕುಮಾರ್‌ ಯಾದವ್‌ 4 ರನ್‌, ಅಕ್ಸರ್ ಪಟೇಲ್‌ ಅಜೇಯ 2 ರನ್‌ ಗಳಿಸಿದರು. ಅಂತಿಮವಾಗಿ ಭಾರತ ಐದು ವಿಕೆಟ್ ನಷ್ಟಕ್ಕೆ 390 ರನ್‌ ಗಳಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...