Homeಮುಖಪುಟಭಾರತದಲ್ಲಿ ಕೊರೊನಾ ಸಾಮುದಾಯಿಕವಾಗಿ ಹರಡಲಿದೆ: ಡಾ.ಗಿರಿಧರ್ ಗ್ಯಾನಿ

ಭಾರತದಲ್ಲಿ ಕೊರೊನಾ ಸಾಮುದಾಯಿಕವಾಗಿ ಹರಡಲಿದೆ: ಡಾ.ಗಿರಿಧರ್ ಗ್ಯಾನಿ

- Advertisement -
- Advertisement -

ಭಾರತದಲ್ಲಿ ಕೊರೊನಾ ವೈರಸ್ ಮೂರನೇ ಹಂತ ತಲುಪಿದೆ ಹಾಗೂ ಅದನ್ನು ಎದುರಿಸಲು ಸಾಕಷ್ಟು ತಯಾರಿ ನಮ್ಮಲ್ಲಿಲ್ಲ ಎಂದು ಕೊರೊನ ವೈರಸ್ ಆಸ್ಪತ್ರೆಗಳ ಕಾರ್ಯಪಡೆಯ ಕನ್ವೀನರ್ ಡಾ.ಗಿರಿಧರ್ ಗ್ಯಾನಿ “ದಿ ಕ್ವಿಂಟ್”ಗೆ ನೀಡಿದ ಸಂದರ್ಶವೊಂದರಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಡಾ.ಗಿರಿಧರ್ ಗ್ಯಾನಿ ಮಾತಾಡುತ್ತಾ “ಭಾರತದಲ್ಲಿ ಕೊರೊನಾ ವೈರಸ್ ಮೂರನೇ ಹಂತ ತಲುಪಿದೆ. ಈಗ ಅದು ಸಾಮುದಾಯಿಕವಾಗಿ ಹರಡಲಿದೆ. ಅಧಿಕೃತವಾಗಿ ನಾವು ಇದನ್ನು ಘೋಷಿಸದಿದ್ದರೂ ಇದು 3ನೇ ಹಂತದ ಪ್ರಾರಂಭಿಕ ಲಕ್ಷಣವಾಗಿದೆ” ಎಂದು ಹೇಳಿದ್ದಾರೆ.

“ಮುಂಬರುವ ದಿನಗಳಲ್ಲಿ ಏಕಾಏಕಿ ಎದುರಾಗಬಹುದಾದ ಅಪಾಯಗಳನ್ನು ಎದುರಿಸಲು ಸಜ್ಜಾಗುವಲ್ಲಿ ದೇಶವು ಬಹಳ ಕಡಿಮೆ ಸಮಯವನ್ನು ಹೊಂದಿದೆ. ನಮ್ಮಲ್ಲಿ ಸಾಕಷ್ಟು ತರಬೇತಿ ಪಡೆದ ವೈದ್ಯಕೀಯ ಸಿಬ್ಬಂದಿ ಹಾಗೂ ಕೊರೊನವನ್ನು ಸಮರ್ಥವಾಗಿ ನಿಭಾಯಿಸಬಲ್ಲ ಆಸ್ಪತ್ರೆಗಳ ಕೊರತೆಯಿದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮೂರನೇ ಹಂತದಲ್ಲಿ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತದೆ. ಈ ಸಮಯದಲ್ಲಿ ಪ್ರಸರಣದ ಮೂಲವನ್ನು ಕಂಡುಹಿಡಿಯುವುದು ಕೂಡ ಕಷ್ಟವಾಗುತ್ತದೆ. ವೈರಸನ್ನು ನಿಯಂತ್ರಿಸಲು ಮುಂದಿನ ಐದು-ಹತ್ತು ದಿನಗಳು ಬಹಳ ನಿರ್ಣಾಯಕವಾಗಲಿದೆ, ಸೋಂಕು ತಗಲಿಯೂ ಇಲ್ಲಿಯವರೆಗೆ ರೋಗಲಕ್ಷಣ ತೋರಿಸದಿದ್ದವರು ಮುಂದಿನ ದಿನಗಳಲ್ಲಿ ರೋಗಲಕ್ಷಣಗಳನ್ನು ತೋರಿಸಲಾರಂಭಿಸುತ್ತಾರೆ” ಎಂದು ಹೇಳಿದ್ದಾರೆ.

“ಸರಕಾರದ ಬಳಿ ಸಾಕಷ್ಟು ಪರೀಕ್ಷಾ ಸಾಮಾಗ್ರಿಗಳಿಲ್ಲ. ಕೆಮ್ಮು, ಉಸಿರಾಟದ ಸಮಸ್ಯೆ ಮತ್ತು ಜ್ವರ – ಈ ಮೂರು ರೋಗಲಕ್ಷಣಗಳನ್ನು ಹೊಂದಿರುವವರನ್ನು ಮಾತ್ರ ಸರಕಾರ ಈಗಲೂ ಪರೀಕ್ಷಿಸುತ್ತಿದೆ. ಕೇವಲ ಒಂದು ರೋಗಲಕ್ಷಣ ಹೊಂದಿರುವ ರೋಗಿಗಳನ್ನು ಸ್ಥೂಲವಾಗಿ ಪರೀಕ್ಷೆಗೆ ಒಳಪಡಿಸುತ್ತಿಲ್ಲ, ಇದು ಬದಲಾಗಬೇಕು” ಎಂದಿದ್ದಾರೆ.

“ದೆಹಲಿಯಲ್ಲೇ ಮೂರು ಕೋಟಿ ಜನಸಂಖ್ಯೆಯಿದೆ ಅದಕ್ಕಾಗಿ ನಾವು ಕನಿಷ್ಟ ಮೂರು ಸಾವಿರ ಹಾಸಿಗೆಗಳ ಆಸ್ಪತ್ರೆಗಳನ್ನು ಸಿದ್ದವಾಗಿಡಬೇಕು. ಸಂಪರ್ಕತಡೆಯಲ್ಲಿ ಇರಿಸಬೇಕಾದವರಿಗೆ ಅಥವಾ ಕೊರೊನ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡವರಿಗೆ ಪ್ರತ್ಯೇಕ ಕೊರೊನಾ ವೈರಸ್ ಕೇಂದ್ರಗಳ ಅಗತ್ಯವಿದೆ, ಅದಕ್ಕಾಗಿ ವಸತಿಗೃಹ ಮತ್ತು ಹಾಸ್ಟೆಲ್‌ಗಳನ್ನು ಪರಿವರ್ತಿಸಿ ಇಂತಹ ಕೇಂದ್ರಗಳನ್ನಾಗಿ ಮಾಡಬಹುದು” ಎಂದು ಡಾ.ಗಿರಿಧರ್ ಗ್ಯಾನಿ ಅಭಿಪ್ರಾಯ ಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...