Homeಮುಖಪುಟಭಾರತದಲ್ಲಿ ಕೊರೊನಾ ಸಾಮುದಾಯಿಕವಾಗಿ ಹರಡಲಿದೆ: ಡಾ.ಗಿರಿಧರ್ ಗ್ಯಾನಿ

ಭಾರತದಲ್ಲಿ ಕೊರೊನಾ ಸಾಮುದಾಯಿಕವಾಗಿ ಹರಡಲಿದೆ: ಡಾ.ಗಿರಿಧರ್ ಗ್ಯಾನಿ

- Advertisement -
- Advertisement -

ಭಾರತದಲ್ಲಿ ಕೊರೊನಾ ವೈರಸ್ ಮೂರನೇ ಹಂತ ತಲುಪಿದೆ ಹಾಗೂ ಅದನ್ನು ಎದುರಿಸಲು ಸಾಕಷ್ಟು ತಯಾರಿ ನಮ್ಮಲ್ಲಿಲ್ಲ ಎಂದು ಕೊರೊನ ವೈರಸ್ ಆಸ್ಪತ್ರೆಗಳ ಕಾರ್ಯಪಡೆಯ ಕನ್ವೀನರ್ ಡಾ.ಗಿರಿಧರ್ ಗ್ಯಾನಿ “ದಿ ಕ್ವಿಂಟ್”ಗೆ ನೀಡಿದ ಸಂದರ್ಶವೊಂದರಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಡಾ.ಗಿರಿಧರ್ ಗ್ಯಾನಿ ಮಾತಾಡುತ್ತಾ “ಭಾರತದಲ್ಲಿ ಕೊರೊನಾ ವೈರಸ್ ಮೂರನೇ ಹಂತ ತಲುಪಿದೆ. ಈಗ ಅದು ಸಾಮುದಾಯಿಕವಾಗಿ ಹರಡಲಿದೆ. ಅಧಿಕೃತವಾಗಿ ನಾವು ಇದನ್ನು ಘೋಷಿಸದಿದ್ದರೂ ಇದು 3ನೇ ಹಂತದ ಪ್ರಾರಂಭಿಕ ಲಕ್ಷಣವಾಗಿದೆ” ಎಂದು ಹೇಳಿದ್ದಾರೆ.

“ಮುಂಬರುವ ದಿನಗಳಲ್ಲಿ ಏಕಾಏಕಿ ಎದುರಾಗಬಹುದಾದ ಅಪಾಯಗಳನ್ನು ಎದುರಿಸಲು ಸಜ್ಜಾಗುವಲ್ಲಿ ದೇಶವು ಬಹಳ ಕಡಿಮೆ ಸಮಯವನ್ನು ಹೊಂದಿದೆ. ನಮ್ಮಲ್ಲಿ ಸಾಕಷ್ಟು ತರಬೇತಿ ಪಡೆದ ವೈದ್ಯಕೀಯ ಸಿಬ್ಬಂದಿ ಹಾಗೂ ಕೊರೊನವನ್ನು ಸಮರ್ಥವಾಗಿ ನಿಭಾಯಿಸಬಲ್ಲ ಆಸ್ಪತ್ರೆಗಳ ಕೊರತೆಯಿದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮೂರನೇ ಹಂತದಲ್ಲಿ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತದೆ. ಈ ಸಮಯದಲ್ಲಿ ಪ್ರಸರಣದ ಮೂಲವನ್ನು ಕಂಡುಹಿಡಿಯುವುದು ಕೂಡ ಕಷ್ಟವಾಗುತ್ತದೆ. ವೈರಸನ್ನು ನಿಯಂತ್ರಿಸಲು ಮುಂದಿನ ಐದು-ಹತ್ತು ದಿನಗಳು ಬಹಳ ನಿರ್ಣಾಯಕವಾಗಲಿದೆ, ಸೋಂಕು ತಗಲಿಯೂ ಇಲ್ಲಿಯವರೆಗೆ ರೋಗಲಕ್ಷಣ ತೋರಿಸದಿದ್ದವರು ಮುಂದಿನ ದಿನಗಳಲ್ಲಿ ರೋಗಲಕ್ಷಣಗಳನ್ನು ತೋರಿಸಲಾರಂಭಿಸುತ್ತಾರೆ” ಎಂದು ಹೇಳಿದ್ದಾರೆ.

“ಸರಕಾರದ ಬಳಿ ಸಾಕಷ್ಟು ಪರೀಕ್ಷಾ ಸಾಮಾಗ್ರಿಗಳಿಲ್ಲ. ಕೆಮ್ಮು, ಉಸಿರಾಟದ ಸಮಸ್ಯೆ ಮತ್ತು ಜ್ವರ – ಈ ಮೂರು ರೋಗಲಕ್ಷಣಗಳನ್ನು ಹೊಂದಿರುವವರನ್ನು ಮಾತ್ರ ಸರಕಾರ ಈಗಲೂ ಪರೀಕ್ಷಿಸುತ್ತಿದೆ. ಕೇವಲ ಒಂದು ರೋಗಲಕ್ಷಣ ಹೊಂದಿರುವ ರೋಗಿಗಳನ್ನು ಸ್ಥೂಲವಾಗಿ ಪರೀಕ್ಷೆಗೆ ಒಳಪಡಿಸುತ್ತಿಲ್ಲ, ಇದು ಬದಲಾಗಬೇಕು” ಎಂದಿದ್ದಾರೆ.

“ದೆಹಲಿಯಲ್ಲೇ ಮೂರು ಕೋಟಿ ಜನಸಂಖ್ಯೆಯಿದೆ ಅದಕ್ಕಾಗಿ ನಾವು ಕನಿಷ್ಟ ಮೂರು ಸಾವಿರ ಹಾಸಿಗೆಗಳ ಆಸ್ಪತ್ರೆಗಳನ್ನು ಸಿದ್ದವಾಗಿಡಬೇಕು. ಸಂಪರ್ಕತಡೆಯಲ್ಲಿ ಇರಿಸಬೇಕಾದವರಿಗೆ ಅಥವಾ ಕೊರೊನ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡವರಿಗೆ ಪ್ರತ್ಯೇಕ ಕೊರೊನಾ ವೈರಸ್ ಕೇಂದ್ರಗಳ ಅಗತ್ಯವಿದೆ, ಅದಕ್ಕಾಗಿ ವಸತಿಗೃಹ ಮತ್ತು ಹಾಸ್ಟೆಲ್‌ಗಳನ್ನು ಪರಿವರ್ತಿಸಿ ಇಂತಹ ಕೇಂದ್ರಗಳನ್ನಾಗಿ ಮಾಡಬಹುದು” ಎಂದು ಡಾ.ಗಿರಿಧರ್ ಗ್ಯಾನಿ ಅಭಿಪ್ರಾಯ ಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...