Homeಮುಖಪುಟಭಾರತದಲ್ಲಿ ಕೊರೊನಾ ಸಾಮುದಾಯಿಕವಾಗಿ ಹರಡಲಿದೆ: ಡಾ.ಗಿರಿಧರ್ ಗ್ಯಾನಿ

ಭಾರತದಲ್ಲಿ ಕೊರೊನಾ ಸಾಮುದಾಯಿಕವಾಗಿ ಹರಡಲಿದೆ: ಡಾ.ಗಿರಿಧರ್ ಗ್ಯಾನಿ

- Advertisement -
- Advertisement -

ಭಾರತದಲ್ಲಿ ಕೊರೊನಾ ವೈರಸ್ ಮೂರನೇ ಹಂತ ತಲುಪಿದೆ ಹಾಗೂ ಅದನ್ನು ಎದುರಿಸಲು ಸಾಕಷ್ಟು ತಯಾರಿ ನಮ್ಮಲ್ಲಿಲ್ಲ ಎಂದು ಕೊರೊನ ವೈರಸ್ ಆಸ್ಪತ್ರೆಗಳ ಕಾರ್ಯಪಡೆಯ ಕನ್ವೀನರ್ ಡಾ.ಗಿರಿಧರ್ ಗ್ಯಾನಿ “ದಿ ಕ್ವಿಂಟ್”ಗೆ ನೀಡಿದ ಸಂದರ್ಶವೊಂದರಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಡಾ.ಗಿರಿಧರ್ ಗ್ಯಾನಿ ಮಾತಾಡುತ್ತಾ “ಭಾರತದಲ್ಲಿ ಕೊರೊನಾ ವೈರಸ್ ಮೂರನೇ ಹಂತ ತಲುಪಿದೆ. ಈಗ ಅದು ಸಾಮುದಾಯಿಕವಾಗಿ ಹರಡಲಿದೆ. ಅಧಿಕೃತವಾಗಿ ನಾವು ಇದನ್ನು ಘೋಷಿಸದಿದ್ದರೂ ಇದು 3ನೇ ಹಂತದ ಪ್ರಾರಂಭಿಕ ಲಕ್ಷಣವಾಗಿದೆ” ಎಂದು ಹೇಳಿದ್ದಾರೆ.

“ಮುಂಬರುವ ದಿನಗಳಲ್ಲಿ ಏಕಾಏಕಿ ಎದುರಾಗಬಹುದಾದ ಅಪಾಯಗಳನ್ನು ಎದುರಿಸಲು ಸಜ್ಜಾಗುವಲ್ಲಿ ದೇಶವು ಬಹಳ ಕಡಿಮೆ ಸಮಯವನ್ನು ಹೊಂದಿದೆ. ನಮ್ಮಲ್ಲಿ ಸಾಕಷ್ಟು ತರಬೇತಿ ಪಡೆದ ವೈದ್ಯಕೀಯ ಸಿಬ್ಬಂದಿ ಹಾಗೂ ಕೊರೊನವನ್ನು ಸಮರ್ಥವಾಗಿ ನಿಭಾಯಿಸಬಲ್ಲ ಆಸ್ಪತ್ರೆಗಳ ಕೊರತೆಯಿದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮೂರನೇ ಹಂತದಲ್ಲಿ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತದೆ. ಈ ಸಮಯದಲ್ಲಿ ಪ್ರಸರಣದ ಮೂಲವನ್ನು ಕಂಡುಹಿಡಿಯುವುದು ಕೂಡ ಕಷ್ಟವಾಗುತ್ತದೆ. ವೈರಸನ್ನು ನಿಯಂತ್ರಿಸಲು ಮುಂದಿನ ಐದು-ಹತ್ತು ದಿನಗಳು ಬಹಳ ನಿರ್ಣಾಯಕವಾಗಲಿದೆ, ಸೋಂಕು ತಗಲಿಯೂ ಇಲ್ಲಿಯವರೆಗೆ ರೋಗಲಕ್ಷಣ ತೋರಿಸದಿದ್ದವರು ಮುಂದಿನ ದಿನಗಳಲ್ಲಿ ರೋಗಲಕ್ಷಣಗಳನ್ನು ತೋರಿಸಲಾರಂಭಿಸುತ್ತಾರೆ” ಎಂದು ಹೇಳಿದ್ದಾರೆ.

“ಸರಕಾರದ ಬಳಿ ಸಾಕಷ್ಟು ಪರೀಕ್ಷಾ ಸಾಮಾಗ್ರಿಗಳಿಲ್ಲ. ಕೆಮ್ಮು, ಉಸಿರಾಟದ ಸಮಸ್ಯೆ ಮತ್ತು ಜ್ವರ – ಈ ಮೂರು ರೋಗಲಕ್ಷಣಗಳನ್ನು ಹೊಂದಿರುವವರನ್ನು ಮಾತ್ರ ಸರಕಾರ ಈಗಲೂ ಪರೀಕ್ಷಿಸುತ್ತಿದೆ. ಕೇವಲ ಒಂದು ರೋಗಲಕ್ಷಣ ಹೊಂದಿರುವ ರೋಗಿಗಳನ್ನು ಸ್ಥೂಲವಾಗಿ ಪರೀಕ್ಷೆಗೆ ಒಳಪಡಿಸುತ್ತಿಲ್ಲ, ಇದು ಬದಲಾಗಬೇಕು” ಎಂದಿದ್ದಾರೆ.

“ದೆಹಲಿಯಲ್ಲೇ ಮೂರು ಕೋಟಿ ಜನಸಂಖ್ಯೆಯಿದೆ ಅದಕ್ಕಾಗಿ ನಾವು ಕನಿಷ್ಟ ಮೂರು ಸಾವಿರ ಹಾಸಿಗೆಗಳ ಆಸ್ಪತ್ರೆಗಳನ್ನು ಸಿದ್ದವಾಗಿಡಬೇಕು. ಸಂಪರ್ಕತಡೆಯಲ್ಲಿ ಇರಿಸಬೇಕಾದವರಿಗೆ ಅಥವಾ ಕೊರೊನ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡವರಿಗೆ ಪ್ರತ್ಯೇಕ ಕೊರೊನಾ ವೈರಸ್ ಕೇಂದ್ರಗಳ ಅಗತ್ಯವಿದೆ, ಅದಕ್ಕಾಗಿ ವಸತಿಗೃಹ ಮತ್ತು ಹಾಸ್ಟೆಲ್‌ಗಳನ್ನು ಪರಿವರ್ತಿಸಿ ಇಂತಹ ಕೇಂದ್ರಗಳನ್ನಾಗಿ ಮಾಡಬಹುದು” ಎಂದು ಡಾ.ಗಿರಿಧರ್ ಗ್ಯಾನಿ ಅಭಿಪ್ರಾಯ ಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...