Homeಮುಖಪುಟಭಾರತದಲ್ಲಿ ಕೊರೊನಾ ಸಾಮುದಾಯಿಕವಾಗಿ ಹರಡಲಿದೆ: ಡಾ.ಗಿರಿಧರ್ ಗ್ಯಾನಿ

ಭಾರತದಲ್ಲಿ ಕೊರೊನಾ ಸಾಮುದಾಯಿಕವಾಗಿ ಹರಡಲಿದೆ: ಡಾ.ಗಿರಿಧರ್ ಗ್ಯಾನಿ

- Advertisement -
- Advertisement -

ಭಾರತದಲ್ಲಿ ಕೊರೊನಾ ವೈರಸ್ ಮೂರನೇ ಹಂತ ತಲುಪಿದೆ ಹಾಗೂ ಅದನ್ನು ಎದುರಿಸಲು ಸಾಕಷ್ಟು ತಯಾರಿ ನಮ್ಮಲ್ಲಿಲ್ಲ ಎಂದು ಕೊರೊನ ವೈರಸ್ ಆಸ್ಪತ್ರೆಗಳ ಕಾರ್ಯಪಡೆಯ ಕನ್ವೀನರ್ ಡಾ.ಗಿರಿಧರ್ ಗ್ಯಾನಿ “ದಿ ಕ್ವಿಂಟ್”ಗೆ ನೀಡಿದ ಸಂದರ್ಶವೊಂದರಲ್ಲಿ ಹೇಳಿದ್ದಾರೆ.

ಸಂದರ್ಶನದಲ್ಲಿ ಡಾ.ಗಿರಿಧರ್ ಗ್ಯಾನಿ ಮಾತಾಡುತ್ತಾ “ಭಾರತದಲ್ಲಿ ಕೊರೊನಾ ವೈರಸ್ ಮೂರನೇ ಹಂತ ತಲುಪಿದೆ. ಈಗ ಅದು ಸಾಮುದಾಯಿಕವಾಗಿ ಹರಡಲಿದೆ. ಅಧಿಕೃತವಾಗಿ ನಾವು ಇದನ್ನು ಘೋಷಿಸದಿದ್ದರೂ ಇದು 3ನೇ ಹಂತದ ಪ್ರಾರಂಭಿಕ ಲಕ್ಷಣವಾಗಿದೆ” ಎಂದು ಹೇಳಿದ್ದಾರೆ.

“ಮುಂಬರುವ ದಿನಗಳಲ್ಲಿ ಏಕಾಏಕಿ ಎದುರಾಗಬಹುದಾದ ಅಪಾಯಗಳನ್ನು ಎದುರಿಸಲು ಸಜ್ಜಾಗುವಲ್ಲಿ ದೇಶವು ಬಹಳ ಕಡಿಮೆ ಸಮಯವನ್ನು ಹೊಂದಿದೆ. ನಮ್ಮಲ್ಲಿ ಸಾಕಷ್ಟು ತರಬೇತಿ ಪಡೆದ ವೈದ್ಯಕೀಯ ಸಿಬ್ಬಂದಿ ಹಾಗೂ ಕೊರೊನವನ್ನು ಸಮರ್ಥವಾಗಿ ನಿಭಾಯಿಸಬಲ್ಲ ಆಸ್ಪತ್ರೆಗಳ ಕೊರತೆಯಿದೆ” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

“ಮೂರನೇ ಹಂತದಲ್ಲಿ ಸಾಂಕ್ರಾಮಿಕ ರೋಗವು ವೇಗವಾಗಿ ಹರಡುತ್ತದೆ. ಈ ಸಮಯದಲ್ಲಿ ಪ್ರಸರಣದ ಮೂಲವನ್ನು ಕಂಡುಹಿಡಿಯುವುದು ಕೂಡ ಕಷ್ಟವಾಗುತ್ತದೆ. ವೈರಸನ್ನು ನಿಯಂತ್ರಿಸಲು ಮುಂದಿನ ಐದು-ಹತ್ತು ದಿನಗಳು ಬಹಳ ನಿರ್ಣಾಯಕವಾಗಲಿದೆ, ಸೋಂಕು ತಗಲಿಯೂ ಇಲ್ಲಿಯವರೆಗೆ ರೋಗಲಕ್ಷಣ ತೋರಿಸದಿದ್ದವರು ಮುಂದಿನ ದಿನಗಳಲ್ಲಿ ರೋಗಲಕ್ಷಣಗಳನ್ನು ತೋರಿಸಲಾರಂಭಿಸುತ್ತಾರೆ” ಎಂದು ಹೇಳಿದ್ದಾರೆ.

“ಸರಕಾರದ ಬಳಿ ಸಾಕಷ್ಟು ಪರೀಕ್ಷಾ ಸಾಮಾಗ್ರಿಗಳಿಲ್ಲ. ಕೆಮ್ಮು, ಉಸಿರಾಟದ ಸಮಸ್ಯೆ ಮತ್ತು ಜ್ವರ – ಈ ಮೂರು ರೋಗಲಕ್ಷಣಗಳನ್ನು ಹೊಂದಿರುವವರನ್ನು ಮಾತ್ರ ಸರಕಾರ ಈಗಲೂ ಪರೀಕ್ಷಿಸುತ್ತಿದೆ. ಕೇವಲ ಒಂದು ರೋಗಲಕ್ಷಣ ಹೊಂದಿರುವ ರೋಗಿಗಳನ್ನು ಸ್ಥೂಲವಾಗಿ ಪರೀಕ್ಷೆಗೆ ಒಳಪಡಿಸುತ್ತಿಲ್ಲ, ಇದು ಬದಲಾಗಬೇಕು” ಎಂದಿದ್ದಾರೆ.

“ದೆಹಲಿಯಲ್ಲೇ ಮೂರು ಕೋಟಿ ಜನಸಂಖ್ಯೆಯಿದೆ ಅದಕ್ಕಾಗಿ ನಾವು ಕನಿಷ್ಟ ಮೂರು ಸಾವಿರ ಹಾಸಿಗೆಗಳ ಆಸ್ಪತ್ರೆಗಳನ್ನು ಸಿದ್ದವಾಗಿಡಬೇಕು. ಸಂಪರ್ಕತಡೆಯಲ್ಲಿ ಇರಿಸಬೇಕಾದವರಿಗೆ ಅಥವಾ ಕೊರೊನ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡವರಿಗೆ ಪ್ರತ್ಯೇಕ ಕೊರೊನಾ ವೈರಸ್ ಕೇಂದ್ರಗಳ ಅಗತ್ಯವಿದೆ, ಅದಕ್ಕಾಗಿ ವಸತಿಗೃಹ ಮತ್ತು ಹಾಸ್ಟೆಲ್‌ಗಳನ್ನು ಪರಿವರ್ತಿಸಿ ಇಂತಹ ಕೇಂದ್ರಗಳನ್ನಾಗಿ ಮಾಡಬಹುದು” ಎಂದು ಡಾ.ಗಿರಿಧರ್ ಗ್ಯಾನಿ ಅಭಿಪ್ರಾಯ ಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...