Homeಮುಖಪುಟಆರು ತಿಂಗಳಲ್ಲಿ ಭಾರತ ಆರ್ಥಿಕ ಹಿಂಜರಿತ ಎದುರಿಸಬಹುದು: ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್

ಆರು ತಿಂಗಳಲ್ಲಿ ಭಾರತ ಆರ್ಥಿಕ ಹಿಂಜರಿತ ಎದುರಿಸಬಹುದು: ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದಿಂದ ಏನನ್ನು ಮರೆಮಾಚುತ್ತಿದ್ದಾರೆ” ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಅವರ ಹೇಳಿಕೆಯ ನಂತರ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು, ಜೂನ್ ನಂತರ ಭಾರತ ಆರ್ಥಿಕ ಹಿಂಜರಿತವನ್ನು ಎದುರಿಸಬಹುದು ಎಂದು ಕೇಂದ್ರ ಸಚಿವರ ಹೇಳಿಕೆಗಳು ಸೂಚಿಸುತ್ತವೆ ಎಂದು ಹೇಳಿದ್ದಾರೆ.

“ಭಾರತವು ಆರ್ಥಿಕ ಹಿಂಜರಿತವನ್ನು ಎದುರಿಸಿದರೆ, ಅದು ಜೂನ್ ನಂತರವೇ ಸಂಭವಿಸುತ್ತದೆ. ಆದರೆ ಅಂತಹ ಪರಿಸ್ಥಿತಿಯನ್ನು ತಪ್ಪಿಸಲು ಕೇಂದ್ರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಈಗಾಗಲೇ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿವೆ” ಎಂದು ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಸಚಿವರು ಸೋಮವಾರ ಪುಣೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

“‘2014ರಿಂದ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ನಾಶವಾಗಿದೆ. ಇದು 6 ತಿಂಗಳ ನಂತರ ಭಾರತದಲ್ಲಿ ಆರ್ಥಿಕ ಹಿಂಜರಿತವನ್ನು ಎದುರಿಸುವ ಮುನ್ಸೂಚನೆಯಾಗಿದೆ. ಪುಣೆಯಲ್ಲಿ ನಡೆದ ಜಿ-20 ಸಮಾವೇಶದಲ್ಲಿ ರಾಣೆ ಈ ವಿಷಯ ತಿಳಿಸಿದ್ದಾರೆ. ಪ್ರಧಾನಿ ಮತ್ತು ವಿತ್ತ ಸಚಿವೆ ದೇಶದ ಜನರಿಂದ ಏನು ಮರೆಮಾಚುತ್ತಿದ್ದಾರೆ?” ಎಂದು ರಮೇಶ್ ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

ಪ್ರಸ್ತುತ G20 ಗುಂಪಿನ ಅಧ್ಯಕ್ಷರು ಭಾರತೀಯದವರೇ ಆಗಿದ್ದಾರೆ. G20 ಯ 1 ನೇ IWGಅನ್ನು ಉದ್ಘಾಟಿಸಿದ ನಂತರ ರಾಣೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ:- “ನಾನು ಸಂಪುಟದಲ್ಲಿರುವುದರಿಂದ ನಮಗೆ ಈ ಬಗ್ಗೆ ಕೆಲವು ಮಾಹಿತಿಗಳು ಲಭ್ಯವಾಗಿದೆ. ಪ್ರಧಾನಿ ಮೋದಿಜಿ ಅವರಿಂದ ನಾವು ಸಲಹೆಯನ್ನು ಪಡೆಯುತ್ತೇವೆ. ಈಗಾಗಲೇ ದೊಡ್ಡದೊಡ್ಡ ದೇಶಗಳಲ್ಲಿ ಆರ್ಥಿಕ ಹಿಂಜರಿತವಿದೆ ಎಂದು ನಾವು ಹೇಳಬಹುದು, ಇದು ವಾಸ್ತವವೂ ಹೌದು.” ಎಂದು ಸುದ್ದಿಗಾರರಿಗೆ ತಿಳಿಸಿದರು.

“ಭಾರತದ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲು ಅಥವಾ ಜೂನ್ ನಂತರ ಬರುವ ನಿರೀಕ್ಷೆಯಿರುವ ಆರ್ಥಿಕ ಮಂದಗತಿ ನಿಲ್ಲಿಸಲು ಮೋದಿಜಿ ಮತ್ತು ಕೇಂದ್ರವು ದೇಶದ ಜನರನ್ನು ನಿಧಾನಗತಿಯಿಂದ ಪ್ರಭಾವಿತವಾಗದಂತೆ ಖಚಿತಪಡಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ರಾಣೆ ಹೇಳಿದರು.

ಭಾರತದ ಆರ್ಥಿಕ ಪರಿಸ್ಥಿತಿ ವಿಚಾರದಲ್ಲಿ ಸರ್ಕಾರದ ನಡೆ ನೋಡುತ್ತಿದ್ದರೆ ಹಲವು ಅನುಮಾನಗಳು ಜನಸಾಮಾನ್ಯರಲ್ಲಿ ಮೂಡಿವೆ. ಇತ್ತೀಚೆಗೆ ಶ್ರೀಲಂಕಾ ಎದುರಿಸಿದ ಆರ್ಥಿಕ ಬಿಕ್ಕಟ್ಟಿನಿಂದ ಆ ದೇಶದ ಜನರು ಬೀದಿಗೆ ಬರುವಂತಾಗಿತ್ತು. ಈಗಲೂ ಕೂಡ ಅಲ್ಲಿಯ ಪರಿಸ್ಥಿತಿ ಸುಧಾರಣೆಯಾಗಿಲ್ಲ. ಕೆಲವು ದಿನಗಳಿಂದ ಪಕ್ಕದ ಪಾಕಿಸ್ಥಾನ ಹಾಗೂ ನೇಪಾಳದಲ್ಲೂ ಆರ್ಥಿಕ ಹಿಂಜರಿತದಿಂದ ಆ ದೇಶದ ಪ್ರಜೆಗಳು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ.

‘ಪ್ರಧಾನಿ ಮತ್ತು ವಿತ್ ಸಚಿವರು ದೇಶದ ಜನರಿಂದ ಏನನ್ನೋ ಮರೆಮಾಚುತ್ತಿದ್ದಾರೆ’ ಎಂದು ಕೇಂದ್ರದ ಸಚಿವರೇ ಹೇಳುತ್ತಿರುವಾಗ ಸಹಜವಾಗಿ ಜನರಲ್ಲಿ ಆರ್ಥಿಕತೆಯ ಅಧಃಪತನದ ಆತಂಕ ದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...