Homeಮುಖಪುಟಆರು ತಿಂಗಳಲ್ಲಿ ಭಾರತ ಆರ್ಥಿಕ ಹಿಂಜರಿತ ಎದುರಿಸಬಹುದು: ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್

ಆರು ತಿಂಗಳಲ್ಲಿ ಭಾರತ ಆರ್ಥಿಕ ಹಿಂಜರಿತ ಎದುರಿಸಬಹುದು: ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದಿಂದ ಏನನ್ನು ಮರೆಮಾಚುತ್ತಿದ್ದಾರೆ” ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಅವರ ಹೇಳಿಕೆಯ ನಂತರ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು, ಜೂನ್ ನಂತರ ಭಾರತ ಆರ್ಥಿಕ ಹಿಂಜರಿತವನ್ನು ಎದುರಿಸಬಹುದು ಎಂದು ಕೇಂದ್ರ ಸಚಿವರ ಹೇಳಿಕೆಗಳು ಸೂಚಿಸುತ್ತವೆ ಎಂದು ಹೇಳಿದ್ದಾರೆ.

“ಭಾರತವು ಆರ್ಥಿಕ ಹಿಂಜರಿತವನ್ನು ಎದುರಿಸಿದರೆ, ಅದು ಜೂನ್ ನಂತರವೇ ಸಂಭವಿಸುತ್ತದೆ. ಆದರೆ ಅಂತಹ ಪರಿಸ್ಥಿತಿಯನ್ನು ತಪ್ಪಿಸಲು ಕೇಂದ್ರವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಈಗಾಗಲೇ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿವೆ” ಎಂದು ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಸಚಿವರು ಸೋಮವಾರ ಪುಣೆಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.

“‘2014ರಿಂದ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ನಾಶವಾಗಿದೆ. ಇದು 6 ತಿಂಗಳ ನಂತರ ಭಾರತದಲ್ಲಿ ಆರ್ಥಿಕ ಹಿಂಜರಿತವನ್ನು ಎದುರಿಸುವ ಮುನ್ಸೂಚನೆಯಾಗಿದೆ. ಪುಣೆಯಲ್ಲಿ ನಡೆದ ಜಿ-20 ಸಮಾವೇಶದಲ್ಲಿ ರಾಣೆ ಈ ವಿಷಯ ತಿಳಿಸಿದ್ದಾರೆ. ಪ್ರಧಾನಿ ಮತ್ತು ವಿತ್ತ ಸಚಿವೆ ದೇಶದ ಜನರಿಂದ ಏನು ಮರೆಮಾಚುತ್ತಿದ್ದಾರೆ?” ಎಂದು ರಮೇಶ್ ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

ಪ್ರಸ್ತುತ G20 ಗುಂಪಿನ ಅಧ್ಯಕ್ಷರು ಭಾರತೀಯದವರೇ ಆಗಿದ್ದಾರೆ. G20 ಯ 1 ನೇ IWGಅನ್ನು ಉದ್ಘಾಟಿಸಿದ ನಂತರ ರಾಣೆ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ:- “ನಾನು ಸಂಪುಟದಲ್ಲಿರುವುದರಿಂದ ನಮಗೆ ಈ ಬಗ್ಗೆ ಕೆಲವು ಮಾಹಿತಿಗಳು ಲಭ್ಯವಾಗಿದೆ. ಪ್ರಧಾನಿ ಮೋದಿಜಿ ಅವರಿಂದ ನಾವು ಸಲಹೆಯನ್ನು ಪಡೆಯುತ್ತೇವೆ. ಈಗಾಗಲೇ ದೊಡ್ಡದೊಡ್ಡ ದೇಶಗಳಲ್ಲಿ ಆರ್ಥಿಕ ಹಿಂಜರಿತವಿದೆ ಎಂದು ನಾವು ಹೇಳಬಹುದು, ಇದು ವಾಸ್ತವವೂ ಹೌದು.” ಎಂದು ಸುದ್ದಿಗಾರರಿಗೆ ತಿಳಿಸಿದರು.

“ಭಾರತದ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲು ಅಥವಾ ಜೂನ್ ನಂತರ ಬರುವ ನಿರೀಕ್ಷೆಯಿರುವ ಆರ್ಥಿಕ ಮಂದಗತಿ ನಿಲ್ಲಿಸಲು ಮೋದಿಜಿ ಮತ್ತು ಕೇಂದ್ರವು ದೇಶದ ಜನರನ್ನು ನಿಧಾನಗತಿಯಿಂದ ಪ್ರಭಾವಿತವಾಗದಂತೆ ಖಚಿತಪಡಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿದೆ” ಎಂದು ರಾಣೆ ಹೇಳಿದರು.

ಭಾರತದ ಆರ್ಥಿಕ ಪರಿಸ್ಥಿತಿ ವಿಚಾರದಲ್ಲಿ ಸರ್ಕಾರದ ನಡೆ ನೋಡುತ್ತಿದ್ದರೆ ಹಲವು ಅನುಮಾನಗಳು ಜನಸಾಮಾನ್ಯರಲ್ಲಿ ಮೂಡಿವೆ. ಇತ್ತೀಚೆಗೆ ಶ್ರೀಲಂಕಾ ಎದುರಿಸಿದ ಆರ್ಥಿಕ ಬಿಕ್ಕಟ್ಟಿನಿಂದ ಆ ದೇಶದ ಜನರು ಬೀದಿಗೆ ಬರುವಂತಾಗಿತ್ತು. ಈಗಲೂ ಕೂಡ ಅಲ್ಲಿಯ ಪರಿಸ್ಥಿತಿ ಸುಧಾರಣೆಯಾಗಿಲ್ಲ. ಕೆಲವು ದಿನಗಳಿಂದ ಪಕ್ಕದ ಪಾಕಿಸ್ಥಾನ ಹಾಗೂ ನೇಪಾಳದಲ್ಲೂ ಆರ್ಥಿಕ ಹಿಂಜರಿತದಿಂದ ಆ ದೇಶದ ಪ್ರಜೆಗಳು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ.

‘ಪ್ರಧಾನಿ ಮತ್ತು ವಿತ್ ಸಚಿವರು ದೇಶದ ಜನರಿಂದ ಏನನ್ನೋ ಮರೆಮಾಚುತ್ತಿದ್ದಾರೆ’ ಎಂದು ಕೇಂದ್ರದ ಸಚಿವರೇ ಹೇಳುತ್ತಿರುವಾಗ ಸಹಜವಾಗಿ ಜನರಲ್ಲಿ ಆರ್ಥಿಕತೆಯ ಅಧಃಪತನದ ಆತಂಕ ದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...