Homeಮುಖಪುಟಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣ 2024ರಲ್ಲಿ 74% ಹೆಚ್ಚಳ!

ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣ 2024ರಲ್ಲಿ 74% ಹೆಚ್ಚಳ!

ಮೋದಿ, ಅಮಿತ್ ಶಾ ಮತ್ತು ಆದಿತ್ಯನಾಥ್ ಪ್ರಮುಖರು!

- Advertisement -
- Advertisement -

ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣವು ಹಿಂದಿನ ವರ್ಷಕ್ಕೆ ಹೋಲಿಸಿದರೆ 2024 ರಲ್ಲಿ 74.4% ರಷ್ಟು ಹೆಚ್ಚಾಗಿದೆ ಎಂದು ವಾಷಿಂಗ್ಟನ್ ಡಿಸಿ ಮೂಲದ ಸಂಶೋಧನಾ ಸಂಸ್ಥೆಯಾದ ‘ಇಂಡಿಯಾ ಹೇಟ್ ಲ್ಯಾಬ್’ ಸೋಮವಾರ ಪ್ರಕಟಿಸಿದ ಅಧ್ಯಯನ ಹೇಳಿದೆ. ‘ಭಾರತದಲ್ಲಿ ಸಾಮಾಜಿಕ ಮಾಧ್ಯಮ ಮತ್ತು ದ್ವೇಷ ಭಾಷಣ’ ಎಂಬ ಅಧ್ಯಯನದಲ್ಲಿ ಕಳೆದ ವರ್ಷ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ಮುಖ್ಯವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು 1,165 ದ್ವೇಷ ಭಾಷಣದ ಪ್ರಕರಣಗಳನ್ನು ಅದು ದಾಖಲಿಸಿದೆ.

“ದ್ವೇಷ ಭಾಷಣವು 2023 ಕ್ಕಿಂತ 74.4% ಹೆಚ್ಚಳವನ್ನು ಸೂಚಿಸುತ್ತದೆ. 2023ರಲ್ಲಿ 668 ಇಂತಹ ಘಟನೆಗಳು ದಾಖಲಾಗಿತ್ತು. 2024ರಲ್ಲಿ ವರದಿಯಾದ ಪ್ರಕಗಣಗಳಲ್ಲಿ 1,147 (98.5%) ಭಾಷಣಗಳು ಮುಸ್ಲಿಮರನ್ನು ಗುರಿಯಾಗಿಸಿಕೊಂಡವು.” ಎಂದು ಅಧ್ಯಯನ ಹೇಳಿದೆ. ಭಾರತದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದ್ವೇಷ ಭಾಷಣವನ್ನು ಹೆಚ್ಚಾಗಿ ಹರಡುವ 10 ಜನರಲ್ಲಿ ಆರು ಜನರು ರಾಜಕಾರಣಿಗಳಾಗಿದ್ದಾರೆ ಎಂದು ವರದಿಯು ಹೇಳಿದೆ. ದ್ವೇಷ ಭಾಷಣ ಹರಡುವ ಪ್ರಮುಖದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದ್ದಾರೆ.

ಒಟ್ಟು ದ್ವೇಷ ಭಾಷಣಗಳಲ್ಲಿ ಆದಿತ್ಯನಾಥ್ 86 (7.4%) ದ್ವೇಷ ಭಾಷಣ ಘಟನೆಗಳಿಗೆ ಕಾರಣರಾಗಿದ್ದಾರೆ. ಪ್ರಧಾನಿ ಮೋದಿ 67 ಭಾಷಣಗಳನ್ನು ನೀಡಿದ್ದು, ಇದು 2024 ರ ದ್ವೇಷ ಭಾಷಣಗಳ ಪೈಕಿ 5.7% ದಷ್ಟು ಪಾಲನ್ನು ಹೊಂದಿದೆ ಎಂದು ವರದಿ ಹೇಳಿದೆ.

2024 ರಲ್ಲಿ ಭಾರತದಲ್ಲಿ ಪರಿಶೀಲಿಸಿದ ವೈಯಕ್ತಿಕ ದ್ವೇಷ ಭಾಷಣ ಘಟನೆಗಳ ಪ್ರಸಾರ ಮತ್ತು ವರ್ಧಿಸುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಪಾತ್ರವನ್ನು ಅಧ್ಯಯನವು ವಿಶ್ಲೇಷಿಸಿದೆ. ವರದಿಯು ರಾಜಕೀಯ ರ್ಯಾಲಿಗಳು, ಚುನಾವಣಾ ಪ್ರಚಾರ ಕಾರ್ಯಕ್ರಮಗಳು, ಧಾರ್ಮಿಕ ಮೆರವಣಿಗೆಗಳು ಮತ್ತು ಪ್ರತಿಭಟನಾ ಮೆರವಣಿಗೆಗಳಂತಹ ವಿವಿಧ ರೀತಿಯ ಸಾರ್ವಜನಿಕ ಸಭೆಗಳನ್ನು ಈ ವಿಶ್ಲೇಷಣೆ ಒಳಗೊಂಡಿದೆ.

ದ್ವೇಷ ಭಾಷಣ ದಾಖಲಾದ 931 ಅಥವಾ 79.9% ಘಟನೆಗಳು ಬಿಜೆಪಿ ಆಡಳಿತದ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದಿವೆ ಎಂದು ವರದಿ ಹೇಳಿದೆ. “ದತ್ತಾಂಶವು ರಾಜಕೀಯ ನಿಯಂತ್ರಣ ಮತ್ತು ದ್ವೇಷ ಭಾಷಣದ ಹರಡುವಿಕೆಯ ನಡುವಿನ ಬಲವಾದ ಸಂಬಂಧವನ್ನು ಸೂಚಿಸುತ್ತದೆ” ಎಂದು ಸಂಶೋಧನೆ ಹೇಳಿದೆ.

ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ 2024 ರಲ್ಲಿ 234 ಅಥವಾ 20% ರಷ್ಟು ದ್ವೇಷ ಭಾಷಣ ಘಟನೆಗಳು ದಾಖಲಾಗಿವೆ ಎಂದು ಅದು ಹೇಳಿದೆ.

“ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಅತಿ ಹೆಚ್ಚು ದ್ವೇಷ ಭಾಷಣ ಘಟನೆಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ. ಒಟ್ಟಾರೆಯಾಗಿ 2024 ರಲ್ಲಿ ದಾಖಲಾದ ಎಲ್ಲಾ ಘಟನೆಗಳಲ್ಲಿ 47% ರಷ್ಟಿದೆ” ಎಂದು ಅಧ್ಯಯನ ಹೇಳಿದೆ.

“ಬಿಜೆಪಿ ಸ್ವತಃ ಅತಿ ಹೆಚ್ಚು ಆಯೋಜಕನಾಗಿದ್ದು, 340 ದ್ವೇಷ ಭಾಷಣ ಘಟನೆಗಳಿಗೆ ಅದು ಕಾರಣವಾಗಿದೆ. ಈ ಘಟನೆಗಳು ಹೆಚ್ಚಾಗಿ ಮಾರ್ಚ್ ಮತ್ತು ಜೂನ್ ನಡುವಿನ ಸಾರ್ವತ್ರಿಕ ಚುನಾವಣೆಗಳು ಹಾಗೂ ಜಾರ್ಖಂಡ್ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ಸಮಯದಲ್ಲಿ ನಡೆದಿದೆ. ಇದು 2023 ಕ್ಕಿಂತ 580% ರಷ್ಟು ಹೆಚ್ಚಳವಾಗಿದೆ.” ಎಂದು ವರದಿ ಹೇಳಿದೆ.

ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣವು ಆಕಸ್ಮಿಕವಾಗಿ ನಡೆದಿಲ್ಲ, ಬದಲಾಗಿ ಇವುಗಳು ಉದ್ದೇಶಪೂರ್ವಕ ಮಾದರಿಯನ್ನು ಅನುಸರಿಸಿದೆ ಎಂದು ವರದಿ ತೋರಿಸಿದೆ ಎಂದು ಇಂಡಿಯಾ ಹೇಟ್ ಲ್ಯಾಬ್ ಅನ್ನು ನಡೆಸುತ್ತಿರುವ ಥಿಂಕ್ ಟ್ಯಾಂಕ್ ಸೆಂಟರ್ ಫಾರ್ ದಿ ಸ್ಟಡಿ ಆಫ್ ಆರ್ಗನೈಸ್ಡ್ ಹೇಟ್‌ನ ಕಾರ್ಯನಿರ್ವಾಹಕ ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಗಳ ಪ್ರಚಾರದ ಸಮಯದಲ್ಲಿ ಪ್ರಧಾನಿ ಮೋದಿ 110 ಭಾಷಣಗಳಲ್ಲಿ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹ್ಯೂಮನ್ ರೈಟ್ಸ್ ವಾಚ್‌ನ ಆಗಸ್ಟ್ ವರದಿಯಲ್ಲಿ ಹೇಳಲಾಗಿತ್ತು. “ಕನಿಷ್ಠ 110 ಭಾಷಣಗಳಲ್ಲಿ, ಪ್ರಧಾನಿ ಮೋದಿ ರಾಜಕೀಯ ವಿರೋಧವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಾರೆ. ಅವರ ಈ ಹೇಳಿಕೆಯು ತಪ್ಪು ಮಾಹಿತಿಯ ಮೂಲಕ ಬಹುಸಂಖ್ಯಾತ ಹಿಂದೂ ಸಮುದಾಯದಲ್ಲಿ ಭಯವನ್ನು ಬೆಳೆಸುತ್ತದೆ ಎಂದು ಅವರು ಹೇಳಿದರು” ಎಂದು ಈ ವರದಿ ಹೇಳಿತ್ತು.

ಇದನ್ನೂಓದಿ:  ಅಲಿಗಢ ವಿಶ್ವವಿದ್ಯಾಲಯ ಬಿರಿಯಾನಿ ವಿವಾದ; ಹಲವರ ವಿರುದ್ಧ ಎಫ್‌ಐಆರ್ ದಾಖಲು

ಅಲಿಗಢ ವಿಶ್ವವಿದ್ಯಾಲಯ ಬಿರಿಯಾನಿ ವಿವಾದ; ಹಲವರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...