Homeಮುಖಪುಟಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣ 2024ರಲ್ಲಿ 74% ಹೆಚ್ಚಳ!

ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣ 2024ರಲ್ಲಿ 74% ಹೆಚ್ಚಳ!

ಮೋದಿ, ಅಮಿತ್ ಶಾ ಮತ್ತು ಆದಿತ್ಯನಾಥ್ ಪ್ರಮುಖರು!

- Advertisement -
- Advertisement -

ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣವು ಹಿಂದಿನ ವರ್ಷಕ್ಕೆ ಹೋಲಿಸಿದರೆ 2024 ರಲ್ಲಿ 74.4% ರಷ್ಟು ಹೆಚ್ಚಾಗಿದೆ ಎಂದು ವಾಷಿಂಗ್ಟನ್ ಡಿಸಿ ಮೂಲದ ಸಂಶೋಧನಾ ಸಂಸ್ಥೆಯಾದ ‘ಇಂಡಿಯಾ ಹೇಟ್ ಲ್ಯಾಬ್’ ಸೋಮವಾರ ಪ್ರಕಟಿಸಿದ ಅಧ್ಯಯನ ಹೇಳಿದೆ. ‘ಭಾರತದಲ್ಲಿ ಸಾಮಾಜಿಕ ಮಾಧ್ಯಮ ಮತ್ತು ದ್ವೇಷ ಭಾಷಣ’ ಎಂಬ ಅಧ್ಯಯನದಲ್ಲಿ ಕಳೆದ ವರ್ಷ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ಮುಖ್ಯವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು 1,165 ದ್ವೇಷ ಭಾಷಣದ ಪ್ರಕರಣಗಳನ್ನು ಅದು ದಾಖಲಿಸಿದೆ.

“ದ್ವೇಷ ಭಾಷಣವು 2023 ಕ್ಕಿಂತ 74.4% ಹೆಚ್ಚಳವನ್ನು ಸೂಚಿಸುತ್ತದೆ. 2023ರಲ್ಲಿ 668 ಇಂತಹ ಘಟನೆಗಳು ದಾಖಲಾಗಿತ್ತು. 2024ರಲ್ಲಿ ವರದಿಯಾದ ಪ್ರಕಗಣಗಳಲ್ಲಿ 1,147 (98.5%) ಭಾಷಣಗಳು ಮುಸ್ಲಿಮರನ್ನು ಗುರಿಯಾಗಿಸಿಕೊಂಡವು.” ಎಂದು ಅಧ್ಯಯನ ಹೇಳಿದೆ. ಭಾರತದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದ್ವೇಷ ಭಾಷಣವನ್ನು ಹೆಚ್ಚಾಗಿ ಹರಡುವ 10 ಜನರಲ್ಲಿ ಆರು ಜನರು ರಾಜಕಾರಣಿಗಳಾಗಿದ್ದಾರೆ ಎಂದು ವರದಿಯು ಹೇಳಿದೆ. ದ್ವೇಷ ಭಾಷಣ ಹರಡುವ ಪ್ರಮುಖದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದ್ದಾರೆ.

ಒಟ್ಟು ದ್ವೇಷ ಭಾಷಣಗಳಲ್ಲಿ ಆದಿತ್ಯನಾಥ್ 86 (7.4%) ದ್ವೇಷ ಭಾಷಣ ಘಟನೆಗಳಿಗೆ ಕಾರಣರಾಗಿದ್ದಾರೆ. ಪ್ರಧಾನಿ ಮೋದಿ 67 ಭಾಷಣಗಳನ್ನು ನೀಡಿದ್ದು, ಇದು 2024 ರ ದ್ವೇಷ ಭಾಷಣಗಳ ಪೈಕಿ 5.7% ದಷ್ಟು ಪಾಲನ್ನು ಹೊಂದಿದೆ ಎಂದು ವರದಿ ಹೇಳಿದೆ.

2024 ರಲ್ಲಿ ಭಾರತದಲ್ಲಿ ಪರಿಶೀಲಿಸಿದ ವೈಯಕ್ತಿಕ ದ್ವೇಷ ಭಾಷಣ ಘಟನೆಗಳ ಪ್ರಸಾರ ಮತ್ತು ವರ್ಧಿಸುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಪಾತ್ರವನ್ನು ಅಧ್ಯಯನವು ವಿಶ್ಲೇಷಿಸಿದೆ. ವರದಿಯು ರಾಜಕೀಯ ರ್ಯಾಲಿಗಳು, ಚುನಾವಣಾ ಪ್ರಚಾರ ಕಾರ್ಯಕ್ರಮಗಳು, ಧಾರ್ಮಿಕ ಮೆರವಣಿಗೆಗಳು ಮತ್ತು ಪ್ರತಿಭಟನಾ ಮೆರವಣಿಗೆಗಳಂತಹ ವಿವಿಧ ರೀತಿಯ ಸಾರ್ವಜನಿಕ ಸಭೆಗಳನ್ನು ಈ ವಿಶ್ಲೇಷಣೆ ಒಳಗೊಂಡಿದೆ.

ದ್ವೇಷ ಭಾಷಣ ದಾಖಲಾದ 931 ಅಥವಾ 79.9% ಘಟನೆಗಳು ಬಿಜೆಪಿ ಆಡಳಿತದ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದಿವೆ ಎಂದು ವರದಿ ಹೇಳಿದೆ. “ದತ್ತಾಂಶವು ರಾಜಕೀಯ ನಿಯಂತ್ರಣ ಮತ್ತು ದ್ವೇಷ ಭಾಷಣದ ಹರಡುವಿಕೆಯ ನಡುವಿನ ಬಲವಾದ ಸಂಬಂಧವನ್ನು ಸೂಚಿಸುತ್ತದೆ” ಎಂದು ಸಂಶೋಧನೆ ಹೇಳಿದೆ.

ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ 2024 ರಲ್ಲಿ 234 ಅಥವಾ 20% ರಷ್ಟು ದ್ವೇಷ ಭಾಷಣ ಘಟನೆಗಳು ದಾಖಲಾಗಿವೆ ಎಂದು ಅದು ಹೇಳಿದೆ.

“ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಅತಿ ಹೆಚ್ಚು ದ್ವೇಷ ಭಾಷಣ ಘಟನೆಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ. ಒಟ್ಟಾರೆಯಾಗಿ 2024 ರಲ್ಲಿ ದಾಖಲಾದ ಎಲ್ಲಾ ಘಟನೆಗಳಲ್ಲಿ 47% ರಷ್ಟಿದೆ” ಎಂದು ಅಧ್ಯಯನ ಹೇಳಿದೆ.

“ಬಿಜೆಪಿ ಸ್ವತಃ ಅತಿ ಹೆಚ್ಚು ಆಯೋಜಕನಾಗಿದ್ದು, 340 ದ್ವೇಷ ಭಾಷಣ ಘಟನೆಗಳಿಗೆ ಅದು ಕಾರಣವಾಗಿದೆ. ಈ ಘಟನೆಗಳು ಹೆಚ್ಚಾಗಿ ಮಾರ್ಚ್ ಮತ್ತು ಜೂನ್ ನಡುವಿನ ಸಾರ್ವತ್ರಿಕ ಚುನಾವಣೆಗಳು ಹಾಗೂ ಜಾರ್ಖಂಡ್ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ಸಮಯದಲ್ಲಿ ನಡೆದಿದೆ. ಇದು 2023 ಕ್ಕಿಂತ 580% ರಷ್ಟು ಹೆಚ್ಚಳವಾಗಿದೆ.” ಎಂದು ವರದಿ ಹೇಳಿದೆ.

ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣವು ಆಕಸ್ಮಿಕವಾಗಿ ನಡೆದಿಲ್ಲ, ಬದಲಾಗಿ ಇವುಗಳು ಉದ್ದೇಶಪೂರ್ವಕ ಮಾದರಿಯನ್ನು ಅನುಸರಿಸಿದೆ ಎಂದು ವರದಿ ತೋರಿಸಿದೆ ಎಂದು ಇಂಡಿಯಾ ಹೇಟ್ ಲ್ಯಾಬ್ ಅನ್ನು ನಡೆಸುತ್ತಿರುವ ಥಿಂಕ್ ಟ್ಯಾಂಕ್ ಸೆಂಟರ್ ಫಾರ್ ದಿ ಸ್ಟಡಿ ಆಫ್ ಆರ್ಗನೈಸ್ಡ್ ಹೇಟ್‌ನ ಕಾರ್ಯನಿರ್ವಾಹಕ ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಗಳ ಪ್ರಚಾರದ ಸಮಯದಲ್ಲಿ ಪ್ರಧಾನಿ ಮೋದಿ 110 ಭಾಷಣಗಳಲ್ಲಿ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹ್ಯೂಮನ್ ರೈಟ್ಸ್ ವಾಚ್‌ನ ಆಗಸ್ಟ್ ವರದಿಯಲ್ಲಿ ಹೇಳಲಾಗಿತ್ತು. “ಕನಿಷ್ಠ 110 ಭಾಷಣಗಳಲ್ಲಿ, ಪ್ರಧಾನಿ ಮೋದಿ ರಾಜಕೀಯ ವಿರೋಧವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಾರೆ. ಅವರ ಈ ಹೇಳಿಕೆಯು ತಪ್ಪು ಮಾಹಿತಿಯ ಮೂಲಕ ಬಹುಸಂಖ್ಯಾತ ಹಿಂದೂ ಸಮುದಾಯದಲ್ಲಿ ಭಯವನ್ನು ಬೆಳೆಸುತ್ತದೆ ಎಂದು ಅವರು ಹೇಳಿದರು” ಎಂದು ಈ ವರದಿ ಹೇಳಿತ್ತು.

ಇದನ್ನೂಓದಿ:  ಅಲಿಗಢ ವಿಶ್ವವಿದ್ಯಾಲಯ ಬಿರಿಯಾನಿ ವಿವಾದ; ಹಲವರ ವಿರುದ್ಧ ಎಫ್‌ಐಆರ್ ದಾಖಲು

ಅಲಿಗಢ ವಿಶ್ವವಿದ್ಯಾಲಯ ಬಿರಿಯಾನಿ ವಿವಾದ; ಹಲವರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...