Homeಮುಖಪುಟಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣ 2024ರಲ್ಲಿ 74% ಹೆಚ್ಚಳ!

ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣ 2024ರಲ್ಲಿ 74% ಹೆಚ್ಚಳ!

ಮೋದಿ, ಅಮಿತ್ ಶಾ ಮತ್ತು ಆದಿತ್ಯನಾಥ್ ಪ್ರಮುಖರು!

- Advertisement -
- Advertisement -

ಭಾರತದಲ್ಲಿ ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣವು ಹಿಂದಿನ ವರ್ಷಕ್ಕೆ ಹೋಲಿಸಿದರೆ 2024 ರಲ್ಲಿ 74.4% ರಷ್ಟು ಹೆಚ್ಚಾಗಿದೆ ಎಂದು ವಾಷಿಂಗ್ಟನ್ ಡಿಸಿ ಮೂಲದ ಸಂಶೋಧನಾ ಸಂಸ್ಥೆಯಾದ ‘ಇಂಡಿಯಾ ಹೇಟ್ ಲ್ಯಾಬ್’ ಸೋಮವಾರ ಪ್ರಕಟಿಸಿದ ಅಧ್ಯಯನ ಹೇಳಿದೆ. ‘ಭಾರತದಲ್ಲಿ ಸಾಮಾಜಿಕ ಮಾಧ್ಯಮ ಮತ್ತು ದ್ವೇಷ ಭಾಷಣ’ ಎಂಬ ಅಧ್ಯಯನದಲ್ಲಿ ಕಳೆದ ವರ್ಷ ದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ಮುಖ್ಯವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡು 1,165 ದ್ವೇಷ ಭಾಷಣದ ಪ್ರಕರಣಗಳನ್ನು ಅದು ದಾಖಲಿಸಿದೆ.

“ದ್ವೇಷ ಭಾಷಣವು 2023 ಕ್ಕಿಂತ 74.4% ಹೆಚ್ಚಳವನ್ನು ಸೂಚಿಸುತ್ತದೆ. 2023ರಲ್ಲಿ 668 ಇಂತಹ ಘಟನೆಗಳು ದಾಖಲಾಗಿತ್ತು. 2024ರಲ್ಲಿ ವರದಿಯಾದ ಪ್ರಕಗಣಗಳಲ್ಲಿ 1,147 (98.5%) ಭಾಷಣಗಳು ಮುಸ್ಲಿಮರನ್ನು ಗುರಿಯಾಗಿಸಿಕೊಂಡವು.” ಎಂದು ಅಧ್ಯಯನ ಹೇಳಿದೆ. ಭಾರತದಲ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದ್ವೇಷ ಭಾಷಣವನ್ನು ಹೆಚ್ಚಾಗಿ ಹರಡುವ 10 ಜನರಲ್ಲಿ ಆರು ಜನರು ರಾಜಕಾರಣಿಗಳಾಗಿದ್ದಾರೆ ಎಂದು ವರದಿಯು ಹೇಳಿದೆ. ದ್ವೇಷ ಭಾಷಣ ಹರಡುವ ಪ್ರಮುಖದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದ್ದಾರೆ.

ಒಟ್ಟು ದ್ವೇಷ ಭಾಷಣಗಳಲ್ಲಿ ಆದಿತ್ಯನಾಥ್ 86 (7.4%) ದ್ವೇಷ ಭಾಷಣ ಘಟನೆಗಳಿಗೆ ಕಾರಣರಾಗಿದ್ದಾರೆ. ಪ್ರಧಾನಿ ಮೋದಿ 67 ಭಾಷಣಗಳನ್ನು ನೀಡಿದ್ದು, ಇದು 2024 ರ ದ್ವೇಷ ಭಾಷಣಗಳ ಪೈಕಿ 5.7% ದಷ್ಟು ಪಾಲನ್ನು ಹೊಂದಿದೆ ಎಂದು ವರದಿ ಹೇಳಿದೆ.

2024 ರಲ್ಲಿ ಭಾರತದಲ್ಲಿ ಪರಿಶೀಲಿಸಿದ ವೈಯಕ್ತಿಕ ದ್ವೇಷ ಭಾಷಣ ಘಟನೆಗಳ ಪ್ರಸಾರ ಮತ್ತು ವರ್ಧಿಸುವಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳ ಪಾತ್ರವನ್ನು ಅಧ್ಯಯನವು ವಿಶ್ಲೇಷಿಸಿದೆ. ವರದಿಯು ರಾಜಕೀಯ ರ್ಯಾಲಿಗಳು, ಚುನಾವಣಾ ಪ್ರಚಾರ ಕಾರ್ಯಕ್ರಮಗಳು, ಧಾರ್ಮಿಕ ಮೆರವಣಿಗೆಗಳು ಮತ್ತು ಪ್ರತಿಭಟನಾ ಮೆರವಣಿಗೆಗಳಂತಹ ವಿವಿಧ ರೀತಿಯ ಸಾರ್ವಜನಿಕ ಸಭೆಗಳನ್ನು ಈ ವಿಶ್ಲೇಷಣೆ ಒಳಗೊಂಡಿದೆ.

ದ್ವೇಷ ಭಾಷಣ ದಾಖಲಾದ 931 ಅಥವಾ 79.9% ಘಟನೆಗಳು ಬಿಜೆಪಿ ಆಡಳಿತದ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆದಿವೆ ಎಂದು ವರದಿ ಹೇಳಿದೆ. “ದತ್ತಾಂಶವು ರಾಜಕೀಯ ನಿಯಂತ್ರಣ ಮತ್ತು ದ್ವೇಷ ಭಾಷಣದ ಹರಡುವಿಕೆಯ ನಡುವಿನ ಬಲವಾದ ಸಂಬಂಧವನ್ನು ಸೂಚಿಸುತ್ತದೆ” ಎಂದು ಸಂಶೋಧನೆ ಹೇಳಿದೆ.

ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ 2024 ರಲ್ಲಿ 234 ಅಥವಾ 20% ರಷ್ಟು ದ್ವೇಷ ಭಾಷಣ ಘಟನೆಗಳು ದಾಖಲಾಗಿವೆ ಎಂದು ಅದು ಹೇಳಿದೆ.

“ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ಅತಿ ಹೆಚ್ಚು ದ್ವೇಷ ಭಾಷಣ ಘಟನೆಗಳನ್ನು ಹೊಂದಿರುವ ರಾಜ್ಯಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ. ಒಟ್ಟಾರೆಯಾಗಿ 2024 ರಲ್ಲಿ ದಾಖಲಾದ ಎಲ್ಲಾ ಘಟನೆಗಳಲ್ಲಿ 47% ರಷ್ಟಿದೆ” ಎಂದು ಅಧ್ಯಯನ ಹೇಳಿದೆ.

“ಬಿಜೆಪಿ ಸ್ವತಃ ಅತಿ ಹೆಚ್ಚು ಆಯೋಜಕನಾಗಿದ್ದು, 340 ದ್ವೇಷ ಭಾಷಣ ಘಟನೆಗಳಿಗೆ ಅದು ಕಾರಣವಾಗಿದೆ. ಈ ಘಟನೆಗಳು ಹೆಚ್ಚಾಗಿ ಮಾರ್ಚ್ ಮತ್ತು ಜೂನ್ ನಡುವಿನ ಸಾರ್ವತ್ರಿಕ ಚುನಾವಣೆಗಳು ಹಾಗೂ ಜಾರ್ಖಂಡ್ ಮತ್ತು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ಸಮಯದಲ್ಲಿ ನಡೆದಿದೆ. ಇದು 2023 ಕ್ಕಿಂತ 580% ರಷ್ಟು ಹೆಚ್ಚಳವಾಗಿದೆ.” ಎಂದು ವರದಿ ಹೇಳಿದೆ.

ಅಲ್ಪಸಂಖ್ಯಾತ ವಿರೋಧಿ ದ್ವೇಷ ಭಾಷಣವು ಆಕಸ್ಮಿಕವಾಗಿ ನಡೆದಿಲ್ಲ, ಬದಲಾಗಿ ಇವುಗಳು ಉದ್ದೇಶಪೂರ್ವಕ ಮಾದರಿಯನ್ನು ಅನುಸರಿಸಿದೆ ಎಂದು ವರದಿ ತೋರಿಸಿದೆ ಎಂದು ಇಂಡಿಯಾ ಹೇಟ್ ಲ್ಯಾಬ್ ಅನ್ನು ನಡೆಸುತ್ತಿರುವ ಥಿಂಕ್ ಟ್ಯಾಂಕ್ ಸೆಂಟರ್ ಫಾರ್ ದಿ ಸ್ಟಡಿ ಆಫ್ ಆರ್ಗನೈಸ್ಡ್ ಹೇಟ್‌ನ ಕಾರ್ಯನಿರ್ವಾಹಕ ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಗಳ ಪ್ರಚಾರದ ಸಮಯದಲ್ಲಿ ಪ್ರಧಾನಿ ಮೋದಿ 110 ಭಾಷಣಗಳಲ್ಲಿ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹ್ಯೂಮನ್ ರೈಟ್ಸ್ ವಾಚ್‌ನ ಆಗಸ್ಟ್ ವರದಿಯಲ್ಲಿ ಹೇಳಲಾಗಿತ್ತು. “ಕನಿಷ್ಠ 110 ಭಾಷಣಗಳಲ್ಲಿ, ಪ್ರಧಾನಿ ಮೋದಿ ರಾಜಕೀಯ ವಿರೋಧವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದಾರೆ. ಅವರ ಈ ಹೇಳಿಕೆಯು ತಪ್ಪು ಮಾಹಿತಿಯ ಮೂಲಕ ಬಹುಸಂಖ್ಯಾತ ಹಿಂದೂ ಸಮುದಾಯದಲ್ಲಿ ಭಯವನ್ನು ಬೆಳೆಸುತ್ತದೆ ಎಂದು ಅವರು ಹೇಳಿದರು” ಎಂದು ಈ ವರದಿ ಹೇಳಿತ್ತು.

ಇದನ್ನೂಓದಿ:  ಅಲಿಗಢ ವಿಶ್ವವಿದ್ಯಾಲಯ ಬಿರಿಯಾನಿ ವಿವಾದ; ಹಲವರ ವಿರುದ್ಧ ಎಫ್‌ಐಆರ್ ದಾಖಲು

ಅಲಿಗಢ ವಿಶ್ವವಿದ್ಯಾಲಯ ಬಿರಿಯಾನಿ ವಿವಾದ; ಹಲವರ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...