Homeಮುಖಪುಟಯುದ್ಧ ಪರಿಹಾರವಲ್ಲ, ಭಾರತ-ಪಾಕಿಸ್ತಾನ ನಡುವೆ ಮಾತುಕತೆಗೆ ಕರೆ ನೀಡಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು...

ಯುದ್ಧ ಪರಿಹಾರವಲ್ಲ, ಭಾರತ-ಪಾಕಿಸ್ತಾನ ನಡುವೆ ಮಾತುಕತೆಗೆ ಕರೆ ನೀಡಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ

- Advertisement -
- Advertisement -

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡೆಯುತ್ತಿರುವ ಸಂಘರ್ಷವನ್ನು ಮಾತುಕತೆಯ ಮೂಲಕ ಪರಿಹರಿಸಬೇಕೆಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಒತ್ತಾಯಿಸಿತು ಮತ್ತು ಎರಡು ಪರಮಾಣು ಶಕ್ತಿಗಳು “ಯುದ್ಧವನ್ನು ನಡೆಸಬಾರದು” ಎಂದು ಹೇಳಿದೆ.

ಭಾರತವು ಆಪರೇಷನ್ ಸಿಂಧೂರ್ ಘೋಷಣೆ ಮಾಡಿದ ನಂತರ ಗುರುವಾರ ನಡೆದ ತನ್ನ ಪದಾಧಿಕಾರಿಗಳ ವಿಶೇಷ ಆನ್‌ಲೈನ್ ಸಭೆಯಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ “ಒಂದು ಗಂಭೀರ ಕಳವಳ” ವ್ಯಕ್ತಪಡಿಸುವ ನಿರ್ಣಯವನ್ನು AIMPLB ಅಂಗೀಕರಿಸಿತು.

ರಾಷ್ಟ್ರ ಮತ್ತು ಅದರ ಜನರ ರಕ್ಷಣೆಗಾಗಿ ತೆಗೆದುಕೊಳ್ಳಲಾದ ಪ್ರತಿಯೊಂದು ಅಗತ್ಯ ಕ್ರಮವನ್ನು ಬೆಂಬಲಿಸುವುದಾಗಿ ಸಂಸ್ಥೆ ಹೇಳಿದೆ ಮತ್ತು “ಸಾರ್ವಜನಿಕರು, ರಾಜಕೀಯ ಪಕ್ಷಗಳು, ಸಶಸ್ತ್ರ ಪಡೆಗಳು ಮತ್ತು ಸರ್ಕಾರ” ಈ ಕ್ಷಣದಲ್ಲಿ ಒಟ್ಟಾಗಿ ನಿಲ್ಲಬೇಕು ಎಂದು ಹೇಳಿದೆ.

ಪಹಲ್ಗಾಮ್ ನಲ್ಲಿ ಭಯೋತ್ಪಾದನೆಯಿಂದ ಮುಗ್ಧ ನಾಗರಿಕರ ಹತ್ಯೆಯು ಗಂಭೀರ ಕಳವಳವಾಗಿದೆ. ಇಸ್ಲಾಮಿಕ್ ಬೋಧನೆಗಳು, ಜಾಗತಿಕವಾಗಿ ಗುರುತಿಸಲ್ಪಟ್ಟ ತತ್ವಗಳು ಮತ್ತು ಮಾನವೀಯ ಮೌಲ್ಯಗಳಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ಆದ್ದರಿಂದ ಈ ಎರಡು ದೇಶಗಳು ದ್ವಿಪಕ್ಷೀಯ ಮಾತುಕತೆಗಳು ಮತ್ತು ಚರ್ಚೆಗಳ ಮೂಲಕ ತಮ್ಮ ವಿಷಯಗಳನ್ನು ಪರಿಹರಿಸಿಕೊಳ್ಳಬೇಕು. ಯುದ್ಧವು ಯಾವುದೇ ಸಮಸ್ಯೆಗೆ ಪರಿಹಾರವಲ್ಲ. ವಿಶೇಷವಾಗಿ ಪರಮಾಣು ಶಸ್ತ್ರಾಸ್ತ್ರಗಳೊಂದಿಗೆ ಭಾರತ ಮತ್ತು ಪಾಕಿಸ್ತಾನ ಯುದ್ಧವನ್ನು ನಡೆಸಲು ಸಾಧ್ಯವಿಲ್ಲ ಎಂದು ಸಂಸ್ಥೆಯ ನಿರ್ಣಯವು ಹೇಳಿದೆ.

ಎರಡು ದೇಶಗಳ ನಡುವಿನ ಸಂಘರ್ಷವು ಎರಡೂ ರಾಷ್ಟ್ರಗಳ ಜನರನ್ನು ಭಾರೀ ಇಕ್ಕಟ್ಟಿಗೆ ಮತ್ತು ಸಂಕಟಗಳಿಗೆ ತಳ್ಳಬಹುದು ಎಂದು AIMPLB ಮಂಡಳಿ ಹೇಳಿದೆ.

ಮಂಡಳಿಯು ವಕ್ಫ್ ಕಾಯ್ದೆಯ ವಿರುದ್ಧದ ತನ್ನ ಅಭಿಯಾನವನ್ನು ಮುಂದುವರಿಸುವುದಾಗಿ ಹೇಳಿದ್ದರೂ, ಮೇ 16ರವರೆಗೆ ತನ್ನ ಎಲ್ಲಾ ಸಭೆಗಳು ಮತ್ತು ಕಾರ್ಯಕ್ರಮಗಳನ್ನು ಸ್ಥಗಿತಗೊಳಿಸಿರುವುದಾಗಿ AIMPLB ತಿಳಿಸಿದೆ.

ಒಳಾಂಗಣ ಕಾರ್ಯಕ್ರಮಗಳು, ದುಂಡುಮೇಜಿನ ಸಭೆಗಳು, ಮಸೀದಿ ಪ್ರವಚನಗಳು ಮತ್ತು ಪತ್ರಿಕಾಗೋಷ್ಠಿಗಳು ನಿಗದಿಯಂತೆ ಮುಂದುವರಿಯುತ್ತವೆ. ವಕ್ಫ್ ಕಾಯ್ದೆಯನ್ನು AIMPLB ಯು ಪ್ರಬಲವಾಗಿ ವಿರೋಧಿಸುವಲ್ಲಿ ಒಂದಾಗಿದೆ ಮತ್ತು ದೇಶಾದ್ಯಂತ “ವಕ್ಫ್ ಉಳಿಸಿ” ಅಭಿಯಾನವನ್ನು ಕೈಗೊಳ್ಳುತ್ತಿದೆ. ಅಭಿಯಾನದ ಮೊದಲ ಹಂತವು ಜುಲೈ 13ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಮುಕ್ತಾಯಗೊಳ್ಳಲಿದೆ ಎಂದು ಮಂಡಳಿ ಹೇಳಿದೆ.

ಫಿಲಡೆಲ್ಫಿಯಾ ವಿಮಾನ ಅಪಘಾತದ ದೃಶ್ಯವನ್ನು ಐಎನ್‌ಎಸ್‌ ವಿಕ್ರಾಂತ್ ದಾಳಿ ಎಂದ ಎಬಿಪಿ ಆನಂದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...