Homeಮುಖಪುಟವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು ಪ್ರಸ್ತಾಪ

ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು ಪ್ರಸ್ತಾಪ

- Advertisement -
- Advertisement -

ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ನಡೆಯುತ್ತಿರುವ ಎರಡು ದಿನಗಳ ವಿರೋಧ ಪಕ್ಷಗಳ ಮೈತ್ರಿಕೂಟದ ಸಭೆಯಲ್ಲಿ ಒಕ್ಕೂಟಕ್ಕೆ INDIA (Indian National Developmental Inclusive Alliance) ಎಂಬ ಹೆಸರಿಡುವ ಪ್ರಸ್ತಾಪ ಮುಂದಿಡಲಾಗಿದೆ.

ನೂತನ ಹೆಸರಿಗೆ ಬಹುತೇಕ ಪಕ್ಷಗಳು ಒಪ್ಪಿಗೆ ನೀಡಿದ್ದು ಮುಂದಿನ ಸಭೆಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎನ್ನಲಾಗಿದೆ. ಒಕ್ಕೂಟದ ಮುಖ್ಯಸ್ಥರನ್ನಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡುವ ಬಗ್ಗೆಯೂ ಚರ್ಚೆಗಳು ನಡೆದಿವೆ.

ಪ್ರತಿಪಕ್ಷಗಳ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ”ತಮ್ಮ ಪಕ್ಷಕ್ಕೆ ಅಧಿಕಾರ ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಇಲ್ಲ. 2024ರಲ್ಲಿ ಎನ್‌ಡಿಎಯನ್ನು ಅಧಿಕಾರದಿಂದ ಹೊರಗಿಡಲು ಬಿಜೆಪಿಯನ್ನು ಗುರಿಯಾಗಿಟ್ಟುಕೊಂಡು, ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡಬೇಕಿದೆ” ಎಂದಿದ್ದಾರೆ.

ನಾವು 26 ಪಕ್ಷಗಳು ಇಲ್ಲಿ ಸೇರಿದ್ದೇವೆ, ಅಲ್ಲದೇ 11 ರಾಜ್ಯಗಳಲ್ಲಿ ನಮ್ಮ ಸರ್ಕಾರವಿದೆ. ಬಿಜೆಪಿ ತಮ್ಮ ಮಿತ್ರಪಕ್ಷಗಳ ಮತಗಳನ್ನು ಬಳಸಿಕೊಂಡು ನಂತರ ಅವುಗಳನ್ನು ತಿರಸ್ಕರಿಸಿತ್ತು. ಆದರೆ ಈಗ ಬಿಜೆಪಿ ಅಧ್ಯಕ್ಷರು ಮತ್ತು ಪಕ್ಷದ ನಾಯಕರು ಹಳೆಯ ಮಿತ್ರ ಪಕ್ಷದ ನಾಯಕರನ್ನು ಸೆಳೆಯಲು ”ರಾಜ್ಯದಿಂದ ರಾಜ್ಯಕ್ಕೆ ಓಡುತ್ತಿದ್ದಾರೆ.” ಎಂದು ಅವರು ಸಭೆಯಲ್ಲಿ ಟೀಕಿಸಿದರು.

ಸಭೆಯಲ್ಲಿ ಭಾಗವಹಿಸಿರುವ ಪಕ್ಷಗಳ ಪಟ್ಟಿ ಇಲ್ಲಿದೆ.

1. ಕಾಂಗ್ರೆಸ್:

2. ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (TMC)

3. ದ್ರಾವಿಡ ಮುನ್ನೇತ್ರ ಕಳಗಂ (DMK)

4. ಆಮ್ ಆದ್ಮಿ ಪಕ್ಷ (AAP):

5. ಜನತಾ ದಳ (ಯುನೈಟೆಡ್): (JDU)

6. ರಾಷ್ಟ್ರೀಯ ಜನತಾ ದಳ (RJD):

7. ಜಾರ್ಖಂಡ್ ಮುಕ್ತಿ ಮೋರ್ಚಾ (JMM):

8. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) – ಶರದ್ ಪವಾರ್ ಬಣ

9. ಶಿವಸೇನೆ (UBT)

10. ಸಮಾಜವಾದಿ ಪಕ್ಷ (SP)

11. ರಾಷ್ಟ್ರೀಯ ಲೋಕದಳ (RLD)

12. ಅಪ್ನಾ ದಳ (ಕಾಮೆರವಾಡಿ)

13. ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್(NC)

14. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP)

15. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)

16. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)

17. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂಎಲ್) ಲಿಬರೇಶನ್

18. ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP)

19. ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್

20. ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK)

21. ವಿದುತಲೈ ಚಿರುತೈಗಲ್ ಕಚ್ಚಿ (VCK)

22. ಕೊಂಗುನಾಡು ಮಕ್ಕಳ್ ದೇಸಿಯಾ ಕಚ್ಚಿ (KMDK)

23. ಮಾನಿತನೇಯ ಮಕ್ಕಳ್ ಕಚ್ಚಿ (MMK)

24. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML)

25. ಕೇರಳ ಕಾಂಗ್ರೆಸ್ (ಎಂ)

26. ಕೇರಳ ಕಾಂಗ್ರೆಸ್ (ಜೋಸೆಫ್)

ಇದನ್ನೂ ಓದಿ: ಪ್ರಧಾನಿ ಹುದ್ದೆಯ ಮೇಲೆ ಕಾಂಗ್ರೆಸ್‌ಗೆ ಆಸಕ್ತಿ ಇಲ್ಲ: ಪ್ರತಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...