Homeಮುಖಪುಟವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು ಪ್ರಸ್ತಾಪ

ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು ಪ್ರಸ್ತಾಪ

- Advertisement -
- Advertisement -

ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ನಡೆಯುತ್ತಿರುವ ಎರಡು ದಿನಗಳ ವಿರೋಧ ಪಕ್ಷಗಳ ಮೈತ್ರಿಕೂಟದ ಸಭೆಯಲ್ಲಿ ಒಕ್ಕೂಟಕ್ಕೆ INDIA (Indian National Developmental Inclusive Alliance) ಎಂಬ ಹೆಸರಿಡುವ ಪ್ರಸ್ತಾಪ ಮುಂದಿಡಲಾಗಿದೆ.

ನೂತನ ಹೆಸರಿಗೆ ಬಹುತೇಕ ಪಕ್ಷಗಳು ಒಪ್ಪಿಗೆ ನೀಡಿದ್ದು ಮುಂದಿನ ಸಭೆಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎನ್ನಲಾಗಿದೆ. ಒಕ್ಕೂಟದ ಮುಖ್ಯಸ್ಥರನ್ನಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡುವ ಬಗ್ಗೆಯೂ ಚರ್ಚೆಗಳು ನಡೆದಿವೆ.

ಪ್ರತಿಪಕ್ಷಗಳ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ”ತಮ್ಮ ಪಕ್ಷಕ್ಕೆ ಅಧಿಕಾರ ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಇಲ್ಲ. 2024ರಲ್ಲಿ ಎನ್‌ಡಿಎಯನ್ನು ಅಧಿಕಾರದಿಂದ ಹೊರಗಿಡಲು ಬಿಜೆಪಿಯನ್ನು ಗುರಿಯಾಗಿಟ್ಟುಕೊಂಡು, ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡಬೇಕಿದೆ” ಎಂದಿದ್ದಾರೆ.

ನಾವು 26 ಪಕ್ಷಗಳು ಇಲ್ಲಿ ಸೇರಿದ್ದೇವೆ, ಅಲ್ಲದೇ 11 ರಾಜ್ಯಗಳಲ್ಲಿ ನಮ್ಮ ಸರ್ಕಾರವಿದೆ. ಬಿಜೆಪಿ ತಮ್ಮ ಮಿತ್ರಪಕ್ಷಗಳ ಮತಗಳನ್ನು ಬಳಸಿಕೊಂಡು ನಂತರ ಅವುಗಳನ್ನು ತಿರಸ್ಕರಿಸಿತ್ತು. ಆದರೆ ಈಗ ಬಿಜೆಪಿ ಅಧ್ಯಕ್ಷರು ಮತ್ತು ಪಕ್ಷದ ನಾಯಕರು ಹಳೆಯ ಮಿತ್ರ ಪಕ್ಷದ ನಾಯಕರನ್ನು ಸೆಳೆಯಲು ”ರಾಜ್ಯದಿಂದ ರಾಜ್ಯಕ್ಕೆ ಓಡುತ್ತಿದ್ದಾರೆ.” ಎಂದು ಅವರು ಸಭೆಯಲ್ಲಿ ಟೀಕಿಸಿದರು.

ಸಭೆಯಲ್ಲಿ ಭಾಗವಹಿಸಿರುವ ಪಕ್ಷಗಳ ಪಟ್ಟಿ ಇಲ್ಲಿದೆ.

1. ಕಾಂಗ್ರೆಸ್:

2. ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (TMC)

3. ದ್ರಾವಿಡ ಮುನ್ನೇತ್ರ ಕಳಗಂ (DMK)

4. ಆಮ್ ಆದ್ಮಿ ಪಕ್ಷ (AAP):

5. ಜನತಾ ದಳ (ಯುನೈಟೆಡ್): (JDU)

6. ರಾಷ್ಟ್ರೀಯ ಜನತಾ ದಳ (RJD):

7. ಜಾರ್ಖಂಡ್ ಮುಕ್ತಿ ಮೋರ್ಚಾ (JMM):

8. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) – ಶರದ್ ಪವಾರ್ ಬಣ

9. ಶಿವಸೇನೆ (UBT)

10. ಸಮಾಜವಾದಿ ಪಕ್ಷ (SP)

11. ರಾಷ್ಟ್ರೀಯ ಲೋಕದಳ (RLD)

12. ಅಪ್ನಾ ದಳ (ಕಾಮೆರವಾಡಿ)

13. ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್(NC)

14. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP)

15. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)

16. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)

17. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂಎಲ್) ಲಿಬರೇಶನ್

18. ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP)

19. ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್

20. ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK)

21. ವಿದುತಲೈ ಚಿರುತೈಗಲ್ ಕಚ್ಚಿ (VCK)

22. ಕೊಂಗುನಾಡು ಮಕ್ಕಳ್ ದೇಸಿಯಾ ಕಚ್ಚಿ (KMDK)

23. ಮಾನಿತನೇಯ ಮಕ್ಕಳ್ ಕಚ್ಚಿ (MMK)

24. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML)

25. ಕೇರಳ ಕಾಂಗ್ರೆಸ್ (ಎಂ)

26. ಕೇರಳ ಕಾಂಗ್ರೆಸ್ (ಜೋಸೆಫ್)

ಇದನ್ನೂ ಓದಿ: ಪ್ರಧಾನಿ ಹುದ್ದೆಯ ಮೇಲೆ ಕಾಂಗ್ರೆಸ್‌ಗೆ ಆಸಕ್ತಿ ಇಲ್ಲ: ಪ್ರತಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....