Homeಎಕಾನಮಿಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಭಾರತವು ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ಬರಲು ಇನ್ನೂ 30 ವರ್ಷ ಬೇಕು: ಅಧ್ಯಯನ

ಆದರೆ, ಲಾಕ್‌ಡೌನ್‌ ಸಂದರ್ಭದಲ್ಲಿ ದೇಶದ ಜಿಡಿಪಿ ಕುಸಿದು, ಇತ್ತೀಚಿನ ವರ್ತಮಾನದ ಪ್ರಕಾರ ಅದು ಶೇ. -23ರಷ್ಟು ಕುಸಿದಿತ್ತು. ನಿರುದ್ಯೋಗ ದಾಖಲೆ ಪ್ರಮಾಣದಲ್ಲಿ ಏರಿತ್ತು.

- Advertisement -
- Advertisement -

2050ರ ವೇಳೆಗೆ ಅಮೇರಿಕಾ ಮತ್ತು ಚೀನಾದ ನಂತರ, ಭಾರತವು ವಿಶ್ವದಲ್ಲಿ 3ನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ರಾಷ್ಟ್ರವಾಗಲಿದೆ ಎಂದು ಲ್ಯಾನ್ಸೆಟ್‌ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನ ತಿಳಿಸಿದೆ. ಪ್ರಸ್ತುತ ಭಾರತ 5ನೇ ಸ್ಥಾನದಲ್ಲಿದ್ದು, ಫ್ರಾನ್ಸ್‌ ಮತ್ತು ಇಂಗ್ಲೆಂಡ್‌ನ ನಂತರದ ಸ್ಥಾನದಲ್ಲಿದೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

2017 ರಲ್ಲಿ ಭಾರತವು ವಿಶ್ವದ ಏಳನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿತ್ತು. ಈ ಅಧ್ಯಯನವು ಆ ಮೂಲ ವರ್ಷವನ್ನು ಆಧಾರವಾಗಿಟ್ಟುಕೊಂಡು ದೇಶದ ಬೆಳವಣಿಗೆಯನ್ನು ಅಧ್ಯಯನಿಸಿದೆ. ಈ ಅಧ್ಯಯನದ ಪ್ರಕಾರ, ಭಾರತವು 2030 ರ ವೇಳೆಗೆ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದು, 2050 ರ ವೇಳೆಗೆ ಮೂರನೇ ಸ್ಥಾನಕ್ಕೆ ತಲುಪಲಿದೆ ಎಂದು ತಿಳಿದುಬಂದಿದೆ. ಇದು ಸಂಭವಿಸಿದರೆ, ಪ್ರಸ್ತುತ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಜಪಾನ್‌ ಅನ್ನು ಭಾರತವು ಹಿಂದಿಕ್ಕಲಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಆದರೆ, ಲಾಕ್‌ಡೌನ್‌ ಸಂದರ್ಭದಲ್ಲಿ ದೇಶದ ಜಿಡಿಪಿ ಕುಸಿದು, ಇತ್ತೀಚಿನ ವರ್ತಮಾನದ ಪ್ರಕಾರ ಅದು ಶೇ. -23ರಷ್ಟು ಕುಸಿದಿತ್ತು. ನಿರುದ್ಯೋಗ ದಾಖಲೆ ಪ್ರಮಾಣದಲ್ಲಿ ಏರಿತ್ತು. ಕೃಷಿಯೊಂದನ್ನು ಹೊರತುಪಡಿಸಿದರೆ ಉತ್ಪಾದನೆ, ಸೇವಾ ವಲಯ, ನಿರ್ಮಾಣ ವಲಯ ಸೇರಿದಂತೆ ಮಿಕ್ಕೆಲ್ಲಾ ಕ್ಷೇತ್ರಗಳು ತೀವ್ರ ಸಂಕಷ್ಟ ಅನುಭವಿಸಿದ್ದವು.

ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಹಿಂದೆಂದಿಗಿಂತಲೂ ಇಂದು ದೇಶದ ಆರ್ಥಿಕತೆ ಪಾತಾಳ ಸೇರಿದೆ ಎಂದು ಭಾರತದ ಅರ್ಥಶಾಸ್ತ್ರಜ್ಮರಿಂದ ಹಿಡಿದು ಅಂತರಾಷ್ಟ್ರೀಯ ತಜ್ಞರವರೆಗೆ ಬಹುತೇಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಈ ಅಧ್ಯಯನ ಸ್ವಲ್ಪಮಟ್ಟಿಗೆ ಆಶಾಭಾವನೆಯನ್ನು ಮೂಡಿಸುತ್ತದಾದರೂ, ಅನುಮಾನಕ್ಕೂ ಎಡೆ ಮಾಡಿಕೊಡುತ್ತದೆ?!

ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಆರ್ಥಿಕ ತಜ್ಞರೂ ಆದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸರ್ಕಾರದ ಅಸಮರ್ಪಕ ನೀತಿಗಳ ವಿರುದ್ಧ ತೀವ್ರವಾಗಿ ಟೀಕೆ ಮಾಡಿದ್ದರು.

ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

“2014-15 ರ ಆರ್ಥಿಕ ವರ್ಷದಲ್ಲಿ ದೇಶದ ಅಭಿವೃದ್ಧಿ ದರ ಶೇ.8 ರಷ್ಟಿತ್ತು. ನಂತರದ ವರ್ಷಗಳಲ್ಲಿ ಅದು ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. 2019-20 ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅಭಿವೃದ್ಧಿ ದರ 3.1 ಕ್ಕೆ ಕುಸಿದಿತ್ತು. ಕೊರೊನಾ ನಂತರದಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಲಾಕ್‌ಡೌನ್‌ ಹೇರಿಕೆಯಿಂದಾಗಿ ವ್ಯಾಪಾರ, ವಹಿವಾಟು, ಉತ್ಪಾದನಾ ಕ್ಷೇತ್ರ ಎಲ್ಲವೂ ಸ್ಥಗಿತಗೊಂಡಿದ್ದು, ಅಭಿವೃದ್ಧಿ ಸೂಚ್ಯಂಕ ಬಿದ್ದಿದೆ. ಜಿಡಿಪಿ ದರ ಗಣನೀಯವಾಗಿ ಕುಸಿಯುತ್ತಿದೆ ಎಂದು ನಾನು ಹೇಳುತ್ತಲೇ ಇದ್ದೆ. ಆದರೆ, ಎಲ್ಲರೂ ನನಗೆ ಬೈದು ಬಾಯಿಮುಚ್ಚಿಸುತ್ತಿದ್ದರು. ಈಗ, 2020-2021 ರ ಹಣಕಾಸು ವರ್ಷದ ಆರಂಭದಲ್ಲಿ (ಏಪ್ರಿಲ್‌-ಜೂನ್‌ 30)  ದೇಶದ ಜಿಡಿಪಿ ಶೇಕಡಾ 23.9 ರಷ್ಟು ಕುಸಿದಿದೆ. ಈ ವರ್ಷದ ಅಂತ್ಯದ ವೇಳೆಗೆ ದೇಶದ ಅಭಿವೃದ್ಧಿ ದರ -15% ಗೆ ಇಳಿಯಬಹುದು. ಕೊನೆಗೆ ಒಟ್ಟಾರೆ ದೇಶದ ಬೆಳವಣಿಗೆ ಶೇಕಡಾ 15 ರಷ್ಟಾಗಬಹುದು” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

“ಕಳೆದ ನಾಲ್ಕೈದು ವರ್ಷಗಳಿಂದ ವಿತ್ತೀಯ ಕೊರತೆಯುಂಟಾಗಿದೆ. ನೋಟು ಅನಾಣ್ಯೀಕರಣ ಮತ್ತು ಜಿಎಸ್‌ಟಿಯಿಂದ ಇದು ಸಂಭವಿಸಿದೆ. ಇದನ್ನು ತೆರಿಗೆ ಭಯೋತ್ಪಾದನೆ ಎಂದು ನಾವು ಕರೆಯಬಹುದು. ಆದಾಯ ತೆರಿಗೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಸರ್ಕಾರ ಜನರ ಕೈಗೆ ಹೇಗೆ ಹಣ ತಲುಪಬೇಕು ಎಂಬುದರ ಬಗ್ಗೆ ಯೋಚಿಸಬೇಕು. ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಉತ್ತಮವಾಗಿ ನಿಭಾಯಿಸಿದೆ. ಆದರೆ, ದೇಶಾದ್ಯಂತ ಲಾಕ್‌ಡೌನ್‌ ಹೇರುವ ಮುನ್ನ ಜನರಿಗೆ ತಮ್ಮ ಜೀವನೋಪಾಯಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕಾಗಿತ್ತು. ಆದರೆ, ಅದು ಆಗಲಿಲ್ಲ ಹಾಗಾಗಿ ಜನರು ಸಂಕಷ್ಟಗಳನ್ನು ಎದುರಿಸಬೇಕಾಯಿತು” ಎಂದು ವಿವರಿಸಿದ್ದರು


ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...