Homeಮುಖಪುಟಭಾರತಕ್ಕೆ 'ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ' ಪರ್ಯಾಯ ನಾಯಕತ್ವದ ಅಗತ್ಯವಿದೆ: ಶಶಿ ತರೂರ್

ಭಾರತಕ್ಕೆ ‘ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ’ ಪರ್ಯಾಯ ನಾಯಕತ್ವದ ಅಗತ್ಯವಿದೆ: ಶಶಿ ತರೂರ್

- Advertisement -
- Advertisement -

ಕೇಂದ್ರ ಸರಕಾರವು ಸರಕಾರಿ ಸಂಸ್ಥೆಗಳನ್ನು ನಾಶಪಡಿಸುತ್ತಿದೆ ಮತ್ತು ದೇಶವು ‘ಚುನಾಯಿತ ಸರ್ವಾಧಿಕಾರಿ’ ದೇಶವಾಗಿ ಬದಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದು, ದೇಶದ ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪರ್ಯಾಯ ನಾಯಕತ್ವದ ಅಗತ್ಯವಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಶಶಿ ತರೂರ್, ಕಳೆದ 10 ವರ್ಷಗಳಲ್ಲಿ ಒಬ್ಬ ವ್ಯಕ್ತಿಯ ಬಗ್ಗೆ ಮಾತ್ರ ಮಾತನಾಡಲಾಗುತ್ತಿದೆ ಮತ್ತು ದೇಶಕ್ಕೆ ಈಗ ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪರ್ಯಾಯ ನಾಯಕತ್ವದ ಅಗತ್ಯವಿದೆ ಎಂದು ಹೇಳಿದರು.

ಜೈಪುರದಲ್ಲಿ ನಡೆದ 17ನೇ ಸಾಹಿತ್ಯ ಉತ್ಸವದಲ್ಲಿ ಇಂದ್ರಜಿತ್ ರಾಯ್ ಅವರ “ಅಡಾಸಿಯಸ್ ಹೋಪ್: ಹೌ ಟು ಸೇವ್ ಎ ಡೆಮಾಕ್ರಸಿ” ಎಂಬ ಪುಸ್ತಕದ ಕುರಿತಾದ ಚರ್ಚೆಯ ವೇಳೆ ಶಶಿ ತರೂರ್ ಈ ಹೇಳಿಕೆ ನೀಡಿದ್ದಾರೆ.

ನಮ್ಮಲ್ಲಿ ಸಂಸದೀಯ ವ್ಯವಸ್ಥೆ ಇದೆ, ಅದು ಅಧ್ಯಕ್ಷರಿಂದ ನಡೆಸಲ್ಪಡುತ್ತದೆ ಮತ್ತು 2014ರ ಕಾಂಗ್ರೆಸ್ ಘೋಷಣೆ ‘ನಾನು ಅಲ್ಲ, ನಾವು’ ಎಂಬುವುದನ್ನು ನೆನಪಿಟ್ಟುಕೊಳ್ಳಬೇಕು. ಕಳೆದ 10 ವರ್ಷಗಳಲ್ಲಿ ನಾನು, ನನ್ನ ಮತ್ತು ‘ನನ್ನ ಬಗ್ಗೆ’ ಸಾಕಷ್ಟು ಕೇಳಿದ್ದೇವೆ. ಒಬ್ಬ ವ್ಯಕ್ತಿಯ ಬಗ್ಗೆ ಮಾತ್ರ ಮಾತನಾಡಲಾಗಿದೆ ಎಂದು ಮೋದಿಯ ಹೆಸರನ್ನು ಉಲ್ಲೇಖಿಸದೆ ಹೇಳಿದ್ದಾರೆ. ಈ “ನಾನು” ನ ಪ್ರತಿವಿಷಯವೆಂದರೆ ವಿಭಿನ್ನ ರೀತಿಯ ನಾಯಕತ್ವವನ್ನು ಸೃಷ್ಟಿಸುವುದು, ಅದು ಕೇವಲ ತನ್ನ ಬಗ್ಗೆ ಹೆಮ್ಮೆಪಡುವುದಿಲ್ಲ, ಸಂಪೂರ್ಣ ನಮ್ರತೆಯಿಂದ ನಿಮ್ಮ ಮಾತನ್ನು ಕೇಳುತ್ತದೆ, ನಿಮ್ಮ ಬಗ್ಗೆ ಮಾತನಾಡುತ್ತದೆ, ನಿಮ್ಮ ಅಗತ್ಯಗಳನ್ನು ಅರ್ಥಮಾಡಿಕೊಳ್ಳುತ್ತದೆ ಮತ್ತು ಅವುಗಳನ್ನು ಪರಿಹರಿಸುತ್ತದೆ. ಆದರೆ ಇಂದು ಪ್ರಜಾಪ್ರಭುತ್ವ ಇಂದು “ನಿಜವಾದ ಬಿಕ್ಕಟ್ಟನ್ನು” ಎದುರಿಸುತ್ತಿದೆ ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರು ತಮ್ಮ ಹಕ್ಕುಗಳನ್ನು ವ್ಯಾಪಕವಾಗಿ ಚಲಾಯಿಸಬೇಕೆಂದು ಮನವಿ ಮಾಡಿದ ಶಶಿ ತರೂರ್‌, ಅಂತಿಮವಾಗಿ ನಿಮ್ಮ ಮತ ಮಾತ್ರ ಮುಖ್ಯವಾಗಿದೆ. ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ, ಭಾರತವು ಬಲಿಷ್ಠ ಮತ್ತು ಪ್ರಬುದ್ಧ ಪ್ರಜಾಪ್ರಭುತ್ವವಾಗಿದೆ ಎಂದು ಹೇಳಿದ್ದಾರೆ.  ಪ್ರತಿಪಕ್ಷಗಳ INDIA ಮೈತ್ರಿಗೆ ಮತ ನೀಡಬೇಕು, ಅನೇಕ ರಾಜಕೀಯ ಪಕ್ಷಗಳು ಮೈತ್ರಿಯ ಭಾಗವಾಗಿವೆ. ಯಾವುದೇ ಒಂದೇ ಸೂತ್ರವು ಎಲ್ಲರಿಗೂ ಅನ್ವಯಿಸುವುದಿಲ್ಲ. ಪ್ರತಿಯೊಂದು ರಾಜ್ಯವು ತನ್ನದೇ ಆದ ರಾಜಕೀಯವನ್ನು ಹೊಂದಿದೆ. ನಾವು ಪರಸ್ಪರ ಒಪ್ಪುವ ಕೆಲವು ರಾಜ್ಯಗಳಿವೆ, ಕೆಲವು ರಾಜ್ಯಗಳಲ್ಲಿ ಮೈತ್ರಿ ಪರಸ್ಪರ ಒಪ್ಪುವುದಿಲ್ಲ ಎಂದು ಬಂಗಾಳದಲ್ಲಿನ ಮೈತ್ರಿ ಬಿರುಕಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಶಿ ತರೂರ್, ಕಳೆದ ಆರು-ಏಳು ದಶಕಗಳಲ್ಲಿ ಹಿಂದಿನ ಸರ್ಕಾರಗಳು ಪ್ರಜಾಪ್ರಭುತ್ವದ ಸುಗಮ ಕಾರ್ಯನಿರ್ವಹಣೆಗಾಗಿ ವಿವಿಧ ಸಂಸ್ಥೆಗಳನ್ನು ಬಲಪಡಿಸಿದ್ದವು, ಆದರೆ ಇಂದು ಈ ಸಂಸ್ಥೆಗಳ ಸ್ವಾಯತ್ತತೆ ನಾಶವಾಗುತ್ತಿದೆ. ಬಹುಮತ ಮುಂದಿಟ್ಟು, ದೇಶವು ಚುನಾವಣಾ ಪ್ರಜಾಪ್ರಭುತ್ವದಿಂದ ಚುನಾವಣಾ ಸರ್ವಾಧಿಕಾರವಾಗಿ ಬದಲಾಗುತ್ತಿದೆ. ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ದಳ ಮತ್ತು ಇತರ ತನಿಖಾ ಸಂಸ್ಥೆಗಳನ್ನು ಉಲ್ಲೇಖಿಸಿದ ತರೂರ್, ಕೇಂದ್ರ ಸರ್ಕಾರವು ನಾಚಿಕೆಯಿಲ್ಲದೆ ಪಟ್ಟಭದ್ರ ಹಿತಾಸಕ್ತಿಗಳಿಗೆ ಇದನ್ನು ಬಳಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...