Homeಮುಖಪುಟಭಾರತವು 'ಪೊಲೀಸ್ ರಾಜ್' ಅಲ್ಲ: ಜಮ್ಮು ಕಾಶ್ಮೀರ ಹೈಕೋರ್ಟ್

ಭಾರತವು ‘ಪೊಲೀಸ್ ರಾಜ್’ ಅಲ್ಲ: ಜಮ್ಮು ಕಾಶ್ಮೀರ ಹೈಕೋರ್ಟ್

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ ಬಂಧಿತ ಯುವಕನ ಬಿಡುಗಡೆಗೆ ಆದೇಶ

- Advertisement -
- Advertisement -

ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿ 26 ವರ್ಷದ ಯುವಕನ ಬಂಧನವನ್ನು ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ರದ್ದುಗೊಳಿಸಿದ್ದು, ‘ಭಾರತವು ಪೊಲೀಸ್ ರಾಜ್’ ಅಲ್ಲ ಎಂದಿದೆ.

ನ್ಯಾಯಮೂರ್ತಿ ರಾಹುಲ್ ಭಾರ್ತಿ ಅವರು ಮಾರ್ಚ್ 22 ರಂದು ನೀಡಿದ್ದ ತೀರ್ಪಿನಲ್ಲಿ ಬಂಧಿತ ಜಾಫರ್ ಅಹ್ಮದ್ ಪಾರೆ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದ್ದರು. ತೀರ್ಪನ್ನು ಕಳೆದ ಸೋಮವಾರ ಹೈಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್ಲೋಡ್ ಮಾಡಲಾಗಿದೆ.

ಶೋಪಿಯಾನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶದ ಮೇರೆಗೆ ಮೇ ತಿಂಗಳಿನಿಂದ ಪಾರೆಯನ್ನು ಬಾರಾಮುಲ್ಲಾ ಜೈಲಿನಲ್ಲಿ ಇರಿಸಲಾಗಿತ್ತು. ಶೋಪಿಯಾನ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅವರ ಶಿಫಾರಸಿನ ಆಧಾರದ ಮೇಲೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಯುವಕ ಪಾರೆಯ ಬಂಧನಕ್ಕೆ ಆದೇಶಿಸಿದ್ದರು.

ಪಾರೆ ವಿರುದ್ಧದ ಪೋಲೀಸ್ ದಾಖಲೆಯು ಆತನನ್ನು ಭಯೋತ್ಪಾದಕ ಗುಂಪುಗಳಾದ ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ನ “ಹಾರ್ಡ್‌ಕೋರ್ ಒಜಿಡಬ್ಲ್ಯ [ಓವರ್ ಗ್ರೌಂಡ್ ವರ್ಕರ್]” ಎಂದು ಹೇಳಿತ್ತು.

ಆದರೆ, ಬಂಧಿತ ಪಾರೆ ಯಾವುದೇ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಎಫ್‌ಐಆರ್‌ಗಳಲ್ಲಿ ಆರೋಪಿಯಾಗಿಲ್ಲ. ಆತ ಏನು ತಪ್ಪು ಮಾಡಿದ್ದಾನೆ ಎಂಬ ಒಂದೇ ಒಂದು ಸಾಲಿನ ಉಲ್ಲೇಖವೂ ಇಲ್ಲ. ಆತ ಈ ಹಿಂದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾನೆ ಎನ್ನುವುದಕ್ಕೆ ಯಾವುದೇ ಆಧಾರವಿಲ್ಲ ಎಂದು ಹೈಕೋರ್ಟ್ ನ್ಯಾಯಮೂರ್ತಿ ಭಾರ್ತಿ ಹೇಳಿದ್ದಾರೆ.

ಪೋಲಿಸ್ ದಾಖಲೆಗಳು ಮತ್ತು ಜಿಲ್ಲಾಧಿಕಾರಿಗಳು ಉಲ್ಲೇಖಿಸಿರುವ ಬಂಧನ ಕಾರಣಗಳಲ್ಲಿ ಕಾನೂನಿನ ಯಾವ ಅಧಿಕಾರಿ ಅರ್ಜಿದಾರರನ್ನು ಮೊದಲು ಬಂಧಿಸಿದ್ದರು ಮತ್ತು ನಂತರ ಯಾರು ವಿಚಾರಣೆಯನ್ನು ನಡೆಸಿದ್ದರು ಎನ್ನುವುದನ್ನು ದಾಖಲಿಸುವುದು ಅಗತ್ಯವಾಗಿದೆ ಎಂದು ತೀರ್ಪಿನಲ್ಲಿ ಹೇಳಿರುವ ನ್ಯಾ.ಭಾರ್ತಿ, ಭಾರತವು ಕಾನೂನಿನ ಆಡಳಿತದಿಂದ ನಿಯಂತ್ರಿಸಲ್ಪಟ್ಟಿದೆ ಮತ್ತು ನಾಗರಿಕರ ವಿರುದ್ಧ ಪ್ರಕರಣವನ್ನು ದಾಖಲಿಸದೆ ಅವರನ್ನು ವಿಚಾರಣೆಗಾಗಿ ಕರೆದೊಯ್ಯುವಂತಿಲ್ಲ. ಜಿಲ್ಲಾಧಿಕಾರಿಗಳು ನೀಡಿರುವ ತಾರ್ಕಿಕತೆಯನ್ನು ಒಪ್ಪಿಕೊಂಡರೆ ಭಾರತವು ಪೋಲಿಸ್ ರಾಜ್ ಆಗಿದೆ ಎನ್ನುವುದನ್ನು ಒಪ್ಪಿಕೊಂಡಂತಾಗುತ್ತದೆ. ಆದರೆ ಕಲ್ಪನೆಯಲ್ಲಿಯೂ ಭಾರತವು ಪೋಲಿಸ್ ರಾಜ್ ಅಲ್ಲ ಎಂದು ಹೇಳಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಪಾರೆ ಬಂಧನವು ಮೂಲತಃ ಕಾನೂನುಬಾಹಿರ ಮತ್ತು ಬಲವಂತದ ಕ್ರಮವಾಗಿದೆ ಎಂದು ತೀರ್ಪಿನಲ್ಲಿ ಹೇಳಿರುವ ಹೈಕೋರ್ಟ್ ಪಾರೆಯನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಆದೇಶಿಸಿದೆ.

ಇದನ್ನೂ ಓದಿ : ಐರ್ಲೆಂಡ್‌ನಲ್ಲಿರುವ ಭಾರತೀಯ ರಾಯಭಾರಿಯಿಂದ ವಿಪಕ್ಷಗಳ ಟೀಕೆ: ರಾಜತಾಂತ್ರಿಕ ಅಧಿಕಾರಿಯ ನಿಲುವಿಗೆ ವ್ಯಾಪಕ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...