Homeಮುಖಪುಟಇಂಡಿಯಾ ಓಪನ್ ಟೂರ್ನಮೆಂಟ್‌‌: ಕೋವಿಡ್‌ ಸೋಂಕಿನ ಬಳಿಕ ಏಳು ಮಂದಿ ಆಟಗಾರರು ವಾಪಸ್‌

ಇಂಡಿಯಾ ಓಪನ್ ಟೂರ್ನಮೆಂಟ್‌‌: ಕೋವಿಡ್‌ ಸೋಂಕಿನ ಬಳಿಕ ಏಳು ಮಂದಿ ಆಟಗಾರರು ವಾಪಸ್‌

- Advertisement -
- Advertisement -

ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು, ಇಂಡಿಯಾ ಓಪನ್ ಟೂರ್ನಮೆಂಟ್ ತೊಂದರೆ ಎದುರಿಸುತ್ತಿದೆ. ಏಳು ಭಾರತೀಯ ಆಟಗಾರರು ಕೋವಿಡ್‌ ಪಾಸಿಟಿವ್ ಆಗಿದ್ದು, ಹಲವು ಭಾರತೀಯ ಆಟಗಾರರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (ಬಿಡಬ್ಲ್ಯೂಎಫ್) ಗುರುವಾರ ತಿಳಿಸಿದೆ.

“ಆಟಗಾರರು ಮಂಗಳವಾರ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟರು. ಅದರಲ್ಲಿ ಏಳು ಮಂದಿಗೆ ಸೋಂಕು ದೃಢಪಟ್ಟಿದೆ. ಡಬಲ್ಸ್ ಜೊತೆಗಾರರು ಏಳು ಆಟಗಾರರ ನಿಕಟ ಸಂಪರ್ಕವನ್ನು ಹೊಂದಿದ್ದು ಪಂದ್ಯಾವಳಿಯಿಂದ ಹಿಂದುಳಿದಿದ್ದಾರೆ” ಎಂದು ವರ್ಡ್ ಬ್ಯಾಡ್ಮಿಂಟನ್‌ ಆಡಳಿತ ಮಂಡಳಿ ಹೇಳಿದೆ.

“ಆಟಗಾರರನ್ನು ಬದಲಾಯಿಸಲಾಗುವುದಿಲ್ಲ ಮತ್ತು ಅವರ ಎದುರಾಳಿಗಳಿಗೆ ಮುಂದಿನ ಸುತ್ತಿಗೆ ವಾಕ್‌ಓವರ್ ನೀಡಲಾಗುವುದು” ಎಂದು ಬಿಡಬ್ಲ್ಯೂಎಫ್‌‌ ಪ್ರಕಟಿಸಿದೆ. ಆದರೆ ಏಳು ಆಟಗಾರರ ಹೆಸರುಗಳನ್ನು ಬಹಿರಂಗಪಡಿಸಲಿಲ್ಲ.

2019ರ ವಿಶ್ವ ಚಾಂಪಿಯನ್‌ಶಿಪ್ ಕಂಚಿನ ಪದಕ ವಿಜೇತ ಬಿ ಸಾಯಿ ಪ್ರಣೀತ್, ಡಬಲ್ ಸ್ಪೆಷಲಿಸ್ಟ್‌ಗಳಾದ ಮನು ಅತ್ರಿ ಮತ್ತು ಧ್ರುವ್ ರಾವತ್ ಅವರು ರಾಷ್ಟ್ರ ರಾಜಧಾನಿಗೆ ನಿರ್ಗಮಿಸುವ ಮೊದಲು ಪಾಸಿಟಿವ್‌ ಆಗಿದ್ದರು. ಪಂದ್ಯಾವಳಿಯ ಆರಂಭಕ್ಕೂ ಮುನ್ನವೇ ಹಿಂದೆ ಸರಿದಿದ್ದರು.

ಡಬಲ್ಸ್ ಸ್ಪೆಷಲಿಸ್ಟ್ ಸೀನ್ ವೆಂಡಿ ಮತ್ತು ಕೋಚ್ ನಾಥನ್ ರಾಬರ್ಟ್‌ಸನ್ ಕೋವಿಡ್‌ ಪಾಸಿಟಿವ್‌‌ಗೆ ಒಳಪಟ್ಟ ಬಳಿಕ ಇಡೀ ಇಂಗ್ಲೆಂಡ್ ಬ್ಯಾಡ್ಮಿಂಟನ್ ತಂಡ ಟೂರ್ನಿಯಿಂದ ಹಿಂದೆ ಸರಿಯಿತು.

ಭಾರತದ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​2022ರ ಇಂಡಿಯಾ ಓಪನ್ ಟೂರ್ನಮೆಂಟ್‌ ಆಯೋಜಿಸಿದೆ. ಇಂದಿರಾ ಗಾಂಧಿ ಸ್ಟೇಡಿಯಂನ ಕೆಡಿ ಜಾಧವ್ ಒಳಾಂಗಣ ಸಭಾಂಗಣದಲ್ಲಿ ಟೂರ್ನಿ ನಡೆಯಲಿದೆ.

COVID-19 ಪ್ರೋಟೋಕಾಲ್‌ಗಳ ಪ್ರಕಾರ, ಭಾಗವಹಿಸುವ ಎಲ್ಲಾ ಆಟಗಾರರನ್ನು ಪ್ರತಿದಿನ ಹೋಟೆಲ್ ಮತ್ತು ಕ್ರೀಡಾಂಗಣದ ಹೊರಗೆ ಪರೀಕ್ಷಿಸಲಾಗುತ್ತಿದೆ.

ಎರಡು ಬಾರಿಯ ಒಲಂಪಿಕ್ ಪದಕ ವಿಜೇತೆ ಪಿ ವಿ ಸಿಂಧು, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ ವಿಜೇತರಾದ ಕಿಡಂಬಿ ಶ್ರೀಕಾಂತ್, ಲಕ್ಷ್ಯ ಸೇನ್, ಲಂಡನ್ ಗೇಮ್ಸ್ ಕಂಚಿನ ವಿಜೇತೆ ಸೈನಾ ನೆಹ್ವಾಲ್ ಟೂರ್ನಿಯ ಎರಡನೇ ಸುತ್ತಿಗೆ ತಲುಪಿರುವ ಭಾರತದ ಆಟಗಾರರಲ್ಲಿ ಪಟ್ಟಿಯಲ್ಲಿದ್ದಾರೆ.

ಅಗ್ರ ಕ್ರಮಾಂಕದ ಅಂತಾರಾಷ್ಟ್ರೀಯ ತಾರೆಗಳಲ್ಲಿ ವಿಶ್ವ ಚಾಂಪಿಯನ್ ಲೋಹ್ ಕೀನ್ ಯೂ, ಮೂರು ಬಾರಿ ಪುರುಷರ ಡಬಲ್ಸ್ ವಿಶ್ವ ಚಾಂಪಿಯನ್ ಮೊಹಮ್ಮದ್ ಅಹ್ಸಾನ್ ಮತ್ತು ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರು ಪಂದ್ಯಾವಳಿಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ದೆಹಲಿಯಲ್ಲಿ 27,561 ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಬುಧವಾರ 40 ಮಂದಿ ಸಾವನ್ನಪ್ಪಿದ್ದಾರೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಒಂದೇ ದಿನ 21 ಸಾವಿರ ಕೊರೊನಾ ಪ್ರಕರಣಗಳು: ಬೆಂಗಳೂರಿನಲ್ಲಿ 15 ಸಾವಿರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...