Homeಮುಖಪುಟಇಂಡಿಯಾ ಓಪನ್ ಟೂರ್ನಮೆಂಟ್‌‌: ಕೋವಿಡ್‌ ಸೋಂಕಿನ ಬಳಿಕ ಏಳು ಮಂದಿ ಆಟಗಾರರು ವಾಪಸ್‌

ಇಂಡಿಯಾ ಓಪನ್ ಟೂರ್ನಮೆಂಟ್‌‌: ಕೋವಿಡ್‌ ಸೋಂಕಿನ ಬಳಿಕ ಏಳು ಮಂದಿ ಆಟಗಾರರು ವಾಪಸ್‌

- Advertisement -
- Advertisement -

ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು, ಇಂಡಿಯಾ ಓಪನ್ ಟೂರ್ನಮೆಂಟ್ ತೊಂದರೆ ಎದುರಿಸುತ್ತಿದೆ. ಏಳು ಭಾರತೀಯ ಆಟಗಾರರು ಕೋವಿಡ್‌ ಪಾಸಿಟಿವ್ ಆಗಿದ್ದು, ಹಲವು ಭಾರತೀಯ ಆಟಗಾರರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (ಬಿಡಬ್ಲ್ಯೂಎಫ್) ಗುರುವಾರ ತಿಳಿಸಿದೆ.

“ಆಟಗಾರರು ಮಂಗಳವಾರ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟರು. ಅದರಲ್ಲಿ ಏಳು ಮಂದಿಗೆ ಸೋಂಕು ದೃಢಪಟ್ಟಿದೆ. ಡಬಲ್ಸ್ ಜೊತೆಗಾರರು ಏಳು ಆಟಗಾರರ ನಿಕಟ ಸಂಪರ್ಕವನ್ನು ಹೊಂದಿದ್ದು ಪಂದ್ಯಾವಳಿಯಿಂದ ಹಿಂದುಳಿದಿದ್ದಾರೆ” ಎಂದು ವರ್ಡ್ ಬ್ಯಾಡ್ಮಿಂಟನ್‌ ಆಡಳಿತ ಮಂಡಳಿ ಹೇಳಿದೆ.

“ಆಟಗಾರರನ್ನು ಬದಲಾಯಿಸಲಾಗುವುದಿಲ್ಲ ಮತ್ತು ಅವರ ಎದುರಾಳಿಗಳಿಗೆ ಮುಂದಿನ ಸುತ್ತಿಗೆ ವಾಕ್‌ಓವರ್ ನೀಡಲಾಗುವುದು” ಎಂದು ಬಿಡಬ್ಲ್ಯೂಎಫ್‌‌ ಪ್ರಕಟಿಸಿದೆ. ಆದರೆ ಏಳು ಆಟಗಾರರ ಹೆಸರುಗಳನ್ನು ಬಹಿರಂಗಪಡಿಸಲಿಲ್ಲ.

2019ರ ವಿಶ್ವ ಚಾಂಪಿಯನ್‌ಶಿಪ್ ಕಂಚಿನ ಪದಕ ವಿಜೇತ ಬಿ ಸಾಯಿ ಪ್ರಣೀತ್, ಡಬಲ್ ಸ್ಪೆಷಲಿಸ್ಟ್‌ಗಳಾದ ಮನು ಅತ್ರಿ ಮತ್ತು ಧ್ರುವ್ ರಾವತ್ ಅವರು ರಾಷ್ಟ್ರ ರಾಜಧಾನಿಗೆ ನಿರ್ಗಮಿಸುವ ಮೊದಲು ಪಾಸಿಟಿವ್‌ ಆಗಿದ್ದರು. ಪಂದ್ಯಾವಳಿಯ ಆರಂಭಕ್ಕೂ ಮುನ್ನವೇ ಹಿಂದೆ ಸರಿದಿದ್ದರು.

ಡಬಲ್ಸ್ ಸ್ಪೆಷಲಿಸ್ಟ್ ಸೀನ್ ವೆಂಡಿ ಮತ್ತು ಕೋಚ್ ನಾಥನ್ ರಾಬರ್ಟ್‌ಸನ್ ಕೋವಿಡ್‌ ಪಾಸಿಟಿವ್‌‌ಗೆ ಒಳಪಟ್ಟ ಬಳಿಕ ಇಡೀ ಇಂಗ್ಲೆಂಡ್ ಬ್ಯಾಡ್ಮಿಂಟನ್ ತಂಡ ಟೂರ್ನಿಯಿಂದ ಹಿಂದೆ ಸರಿಯಿತು.

ಭಾರತದ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​2022ರ ಇಂಡಿಯಾ ಓಪನ್ ಟೂರ್ನಮೆಂಟ್‌ ಆಯೋಜಿಸಿದೆ. ಇಂದಿರಾ ಗಾಂಧಿ ಸ್ಟೇಡಿಯಂನ ಕೆಡಿ ಜಾಧವ್ ಒಳಾಂಗಣ ಸಭಾಂಗಣದಲ್ಲಿ ಟೂರ್ನಿ ನಡೆಯಲಿದೆ.

COVID-19 ಪ್ರೋಟೋಕಾಲ್‌ಗಳ ಪ್ರಕಾರ, ಭಾಗವಹಿಸುವ ಎಲ್ಲಾ ಆಟಗಾರರನ್ನು ಪ್ರತಿದಿನ ಹೋಟೆಲ್ ಮತ್ತು ಕ್ರೀಡಾಂಗಣದ ಹೊರಗೆ ಪರೀಕ್ಷಿಸಲಾಗುತ್ತಿದೆ.

ಎರಡು ಬಾರಿಯ ಒಲಂಪಿಕ್ ಪದಕ ವಿಜೇತೆ ಪಿ ವಿ ಸಿಂಧು, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ ವಿಜೇತರಾದ ಕಿಡಂಬಿ ಶ್ರೀಕಾಂತ್, ಲಕ್ಷ್ಯ ಸೇನ್, ಲಂಡನ್ ಗೇಮ್ಸ್ ಕಂಚಿನ ವಿಜೇತೆ ಸೈನಾ ನೆಹ್ವಾಲ್ ಟೂರ್ನಿಯ ಎರಡನೇ ಸುತ್ತಿಗೆ ತಲುಪಿರುವ ಭಾರತದ ಆಟಗಾರರಲ್ಲಿ ಪಟ್ಟಿಯಲ್ಲಿದ್ದಾರೆ.

ಅಗ್ರ ಕ್ರಮಾಂಕದ ಅಂತಾರಾಷ್ಟ್ರೀಯ ತಾರೆಗಳಲ್ಲಿ ವಿಶ್ವ ಚಾಂಪಿಯನ್ ಲೋಹ್ ಕೀನ್ ಯೂ, ಮೂರು ಬಾರಿ ಪುರುಷರ ಡಬಲ್ಸ್ ವಿಶ್ವ ಚಾಂಪಿಯನ್ ಮೊಹಮ್ಮದ್ ಅಹ್ಸಾನ್ ಮತ್ತು ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರು ಪಂದ್ಯಾವಳಿಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ದೆಹಲಿಯಲ್ಲಿ 27,561 ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಬುಧವಾರ 40 ಮಂದಿ ಸಾವನ್ನಪ್ಪಿದ್ದಾರೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಒಂದೇ ದಿನ 21 ಸಾವಿರ ಕೊರೊನಾ ಪ್ರಕರಣಗಳು: ಬೆಂಗಳೂರಿನಲ್ಲಿ 15 ಸಾವಿರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...