Homeಮುಖಪುಟಇಂಡಿಯಾ ಓಪನ್ ಟೂರ್ನಮೆಂಟ್‌‌: ಕೋವಿಡ್‌ ಸೋಂಕಿನ ಬಳಿಕ ಏಳು ಮಂದಿ ಆಟಗಾರರು ವಾಪಸ್‌

ಇಂಡಿಯಾ ಓಪನ್ ಟೂರ್ನಮೆಂಟ್‌‌: ಕೋವಿಡ್‌ ಸೋಂಕಿನ ಬಳಿಕ ಏಳು ಮಂದಿ ಆಟಗಾರರು ವಾಪಸ್‌

- Advertisement -
- Advertisement -

ಕೋವಿಡ್-19 ಸೋಂಕು ಹೆಚ್ಚಾಗುತ್ತಿದ್ದು, ಇಂಡಿಯಾ ಓಪನ್ ಟೂರ್ನಮೆಂಟ್ ತೊಂದರೆ ಎದುರಿಸುತ್ತಿದೆ. ಏಳು ಭಾರತೀಯ ಆಟಗಾರರು ಕೋವಿಡ್‌ ಪಾಸಿಟಿವ್ ಆಗಿದ್ದು, ಹಲವು ಭಾರತೀಯ ಆಟಗಾರರು ಟೂರ್ನಿಯಿಂದ ಹಿಂದೆ ಸರಿದಿದ್ದಾರೆ ಎಂದು ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (ಬಿಡಬ್ಲ್ಯೂಎಫ್) ಗುರುವಾರ ತಿಳಿಸಿದೆ.

“ಆಟಗಾರರು ಮಂಗಳವಾರ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಟ್ಟರು. ಅದರಲ್ಲಿ ಏಳು ಮಂದಿಗೆ ಸೋಂಕು ದೃಢಪಟ್ಟಿದೆ. ಡಬಲ್ಸ್ ಜೊತೆಗಾರರು ಏಳು ಆಟಗಾರರ ನಿಕಟ ಸಂಪರ್ಕವನ್ನು ಹೊಂದಿದ್ದು ಪಂದ್ಯಾವಳಿಯಿಂದ ಹಿಂದುಳಿದಿದ್ದಾರೆ” ಎಂದು ವರ್ಡ್ ಬ್ಯಾಡ್ಮಿಂಟನ್‌ ಆಡಳಿತ ಮಂಡಳಿ ಹೇಳಿದೆ.

“ಆಟಗಾರರನ್ನು ಬದಲಾಯಿಸಲಾಗುವುದಿಲ್ಲ ಮತ್ತು ಅವರ ಎದುರಾಳಿಗಳಿಗೆ ಮುಂದಿನ ಸುತ್ತಿಗೆ ವಾಕ್‌ಓವರ್ ನೀಡಲಾಗುವುದು” ಎಂದು ಬಿಡಬ್ಲ್ಯೂಎಫ್‌‌ ಪ್ರಕಟಿಸಿದೆ. ಆದರೆ ಏಳು ಆಟಗಾರರ ಹೆಸರುಗಳನ್ನು ಬಹಿರಂಗಪಡಿಸಲಿಲ್ಲ.

2019ರ ವಿಶ್ವ ಚಾಂಪಿಯನ್‌ಶಿಪ್ ಕಂಚಿನ ಪದಕ ವಿಜೇತ ಬಿ ಸಾಯಿ ಪ್ರಣೀತ್, ಡಬಲ್ ಸ್ಪೆಷಲಿಸ್ಟ್‌ಗಳಾದ ಮನು ಅತ್ರಿ ಮತ್ತು ಧ್ರುವ್ ರಾವತ್ ಅವರು ರಾಷ್ಟ್ರ ರಾಜಧಾನಿಗೆ ನಿರ್ಗಮಿಸುವ ಮೊದಲು ಪಾಸಿಟಿವ್‌ ಆಗಿದ್ದರು. ಪಂದ್ಯಾವಳಿಯ ಆರಂಭಕ್ಕೂ ಮುನ್ನವೇ ಹಿಂದೆ ಸರಿದಿದ್ದರು.

ಡಬಲ್ಸ್ ಸ್ಪೆಷಲಿಸ್ಟ್ ಸೀನ್ ವೆಂಡಿ ಮತ್ತು ಕೋಚ್ ನಾಥನ್ ರಾಬರ್ಟ್‌ಸನ್ ಕೋವಿಡ್‌ ಪಾಸಿಟಿವ್‌‌ಗೆ ಒಳಪಟ್ಟ ಬಳಿಕ ಇಡೀ ಇಂಗ್ಲೆಂಡ್ ಬ್ಯಾಡ್ಮಿಂಟನ್ ತಂಡ ಟೂರ್ನಿಯಿಂದ ಹಿಂದೆ ಸರಿಯಿತು.

ಭಾರತದ ಬ್ಯಾಡ್ಮಿಂಟನ್ ಅಸೋಸಿಯೇಷನ್ ​​2022ರ ಇಂಡಿಯಾ ಓಪನ್ ಟೂರ್ನಮೆಂಟ್‌ ಆಯೋಜಿಸಿದೆ. ಇಂದಿರಾ ಗಾಂಧಿ ಸ್ಟೇಡಿಯಂನ ಕೆಡಿ ಜಾಧವ್ ಒಳಾಂಗಣ ಸಭಾಂಗಣದಲ್ಲಿ ಟೂರ್ನಿ ನಡೆಯಲಿದೆ.

COVID-19 ಪ್ರೋಟೋಕಾಲ್‌ಗಳ ಪ್ರಕಾರ, ಭಾಗವಹಿಸುವ ಎಲ್ಲಾ ಆಟಗಾರರನ್ನು ಪ್ರತಿದಿನ ಹೋಟೆಲ್ ಮತ್ತು ಕ್ರೀಡಾಂಗಣದ ಹೊರಗೆ ಪರೀಕ್ಷಿಸಲಾಗುತ್ತಿದೆ.

ಎರಡು ಬಾರಿಯ ಒಲಂಪಿಕ್ ಪದಕ ವಿಜೇತೆ ಪಿ ವಿ ಸಿಂಧು, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ ವಿಜೇತರಾದ ಕಿಡಂಬಿ ಶ್ರೀಕಾಂತ್, ಲಕ್ಷ್ಯ ಸೇನ್, ಲಂಡನ್ ಗೇಮ್ಸ್ ಕಂಚಿನ ವಿಜೇತೆ ಸೈನಾ ನೆಹ್ವಾಲ್ ಟೂರ್ನಿಯ ಎರಡನೇ ಸುತ್ತಿಗೆ ತಲುಪಿರುವ ಭಾರತದ ಆಟಗಾರರಲ್ಲಿ ಪಟ್ಟಿಯಲ್ಲಿದ್ದಾರೆ.

ಅಗ್ರ ಕ್ರಮಾಂಕದ ಅಂತಾರಾಷ್ಟ್ರೀಯ ತಾರೆಗಳಲ್ಲಿ ವಿಶ್ವ ಚಾಂಪಿಯನ್ ಲೋಹ್ ಕೀನ್ ಯೂ, ಮೂರು ಬಾರಿ ಪುರುಷರ ಡಬಲ್ಸ್ ವಿಶ್ವ ಚಾಂಪಿಯನ್ ಮೊಹಮ್ಮದ್ ಅಹ್ಸಾನ್ ಮತ್ತು ಥಾಯ್ಲೆಂಡ್‌ನ ಬುಸಾನನ್ ಒಂಗ್‌ಬಮ್ರುಂಗ್‌ಫಾನ್ ಅವರು ಪಂದ್ಯಾವಳಿಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ದೆಹಲಿಯಲ್ಲಿ 27,561 ಕೋವಿಡ್ ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ಬುಧವಾರ 40 ಮಂದಿ ಸಾವನ್ನಪ್ಪಿದ್ದಾರೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಒಂದೇ ದಿನ 21 ಸಾವಿರ ಕೊರೊನಾ ಪ್ರಕರಣಗಳು: ಬೆಂಗಳೂರಿನಲ್ಲಿ 15 ಸಾವಿರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...