Homeಮುಖಪುಟಪಾಕಿಸ್ತಾನಿ ಹೈಕಮಿಷನ್‌ನ ಮತ್ತೊಬ್ಬ ಅಧಿಕಾರಿಯನ್ನು ದೇಶ ತೊರೆಯುವಂತೆ ಆದೇಶಿಸಿದ ಭಾರತ

ಪಾಕಿಸ್ತಾನಿ ಹೈಕಮಿಷನ್‌ನ ಮತ್ತೊಬ್ಬ ಅಧಿಕಾರಿಯನ್ನು ದೇಶ ತೊರೆಯುವಂತೆ ಆದೇಶಿಸಿದ ಭಾರತ

- Advertisement -
- Advertisement -

ನವದೆಹಲಿಯಲ್ಲಿರುವ ಪಾಕಿಸ್ತಾನಿ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯೊಬ್ಬರು “ರಾಜತಾಂತ್ರಿಕ ಪಾತ್ರಕ್ಕೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ” ಎಂಬ ಆರೋಪದ ಮೇಲೆ ಭಾರತ ಬುಧವಾರ ಅವರನ್ನು ”ಪರ್ಸನಾ ನಾನ್ ಗ್ರಾಟಾ” ಎಂದು ಘೋಷಿಸಿದೆ. ಪಾಕಿಸ್ತಾನಿ ಹೈಕಮಿಷನ್‌ನ

ಅಧಿಕಾರಿಯನ್ನು 24 ಗಂಟೆಗಳ ಒಳಗೆ ದೇಶ ಬಿಡುವಂತೆ ಭಾರತದ ವಿದೇಶಾಂಗ ಸಚಿವಾಲಯವು ಕೇಳಿದೆ ಎಂದು ವರದಿ ತಿಳಿಸಿದೆ. ಅದಾಗ್ಯೂ, ಅಧಿಕಾರಿಯ ಹೆಸರನ್ನು ಸಚಿವಾಲಯ ಬಹಿರಂಗಪಡಿಸಿಲ್ಲ. ಈ ರೀತಿಯ ಪ್ರಕ್ರಿಯೆ ಈ ಒಂದು ವಾರದಲ್ಲಿ ಇದು ಎರಡನೇ ಬಾರಿಗೆ ನಡೆಯುತ್ತಿದೆ.

ರಾಜತಾಂತ್ರಿಕ ಭಾಷೆಯಲ್ಲಿ, ಅಧಿಕೃತವಾಗಿ ಘೋಷಿಸಲಾದ ಪರ್ಸನಾ ನಾನ್ ಗ್ರಾಟಾ ವ್ಯಕ್ತಿಯನ್ನು ಆತಿಥೇಯ ದೇಶವು ಸ್ವಾಗತಿಸುವುದಿಲ್ಲ ಎಂದು ಪರಿಗಣಿಸುತ್ತದೆ.

ಗುರುವಾರ ಪಾಕಿಸ್ತಾನವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿರುವ ಅಧಿಕಾರಿಯೊಬ್ಬರು 24 ಗಂಟೆಗಳ ಒಳಗೆ ದೇಶ ಬಿಡುವಂತೆ ನಿರ್ದೇಶಿಸುವ ಮೂಲಕ ಪ್ರತೀಕಾರ ತೀರಿಸಿಕೊಂಡಿತು. ಇದು ಒಂದು ವಾರದೊಳಗೆ ಪಾಕಿಸ್ತಾನವು ಎರಡನೇ ಬಾರಿ ಈ ರೀತಿಯಾಗಿ ನಡೆದುಕೊಳ್ಳುತ್ತಿದೆ.

ಪಾಕಿಸ್ತಾನಿ ಹೈಕಮಿಷನ್‌ನ ಉಸ್ತುವಾರಿ ಅಧಿಕಾರಿ ಸಾದ್ ವಾರೈಚ್ ಅವರಿಗೆ ಡೆಮಾರ್ಚೆ ಅಥವಾ ರಾಜತಾಂತ್ರಿಕ ಪ್ರತಿಭಟನೆಯನ್ನು ನೀಡಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಬುಧವಾರ ತಿಳಿಸಿದೆ ಮತ್ತು ಭಾರತದಲ್ಲಿ ಯಾವುದೇ ಪಾಕಿಸ್ತಾನಿ ರಾಜತಾಂತ್ರಿಕ ಅಥವಾ ಅಧಿಕಾರಿ ತಮ್ಮ ಸವಲತ್ತುಗಳು ಅಥವಾ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಳ್ಳದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.

ಆಗಸ್ಟ್ 2019 ರಲ್ಲಿ ಭಾರತವು ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಪಾಕಿಸ್ತಾನವು ನಮ್ಮ ದೇಶದೊಂದಿಗೆ ರಾಜತಾಂತ್ರಿಕ ಸಂಬಂಧಗಳನ್ನು ಕೆಳಮಟ್ಟಕ್ಕೆ ಇಳಿಸಿತ್ತು. ಅದರ ನಂತರ, ಎರಡೂ ದೇಶಗಳ ರಾಜತಾಂತ್ರಿಕ ಕಾರ್ಯಾಚರಣೆಗಳನ್ನು ಹೈಕಮಿಷನರ್‌ಗಳ ಬದಲಿಗೆ ಚಾರ್ಜ್‌ಗಳು ಡಿ’ಅಫೇರ್‌ಗಳು ನೇತೃತ್ವ ವಹಿಸಿದ್ದಾರೆ.

ಬುಧವಾರದ ಉಚ್ಚಾಟನೆಯೊಂದಿಗೆ, ಪಾಕಿಸ್ತಾನಿ ಹೈಕಮಿಷನ್‌ನಲ್ಲಿನ ಕಾರ್ಯಾಚರಣಾ ಸಿಬ್ಬಂದಿ 28 ಕ್ಕೆ ಇಳಿದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಮೇ 13 ರಂದು ಕೂಡಾ ಭಾರತ ಇದೇ ರೀತಿಯ ಆಧಾರದ ಮೇಲೆ ಪಾಕಿಸ್ತಾನಿ ಹೈಕಮಿಷನ್‌ನ ಅಧಿಕಾರಿಯನ್ನು ಹೊರಹಾಕಿತ್ತು.

ಪಾಕಿಸ್ತಾನ ಗುಪ್ತಚರ ಸಂಸ್ಥೆಗಳಿಗೆ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಟ್ರಾವೆಲ್ ವ್ಲಾಗರ್ ಸೇರಿದಂತೆ ಪಂಜಾಬ್ ಮತ್ತು ಹರಿಯಾಣದಲ್ಲಿ ಇತ್ತೀಚೆಗೆ ಬಂಧಿಸಲ್ಪಟ್ಟ ಜನರೊಂದಿಗೆ ಉಚ್ಚಾಟಿತ ಪಾಕಿಸ್ತಾನಿ ಅಧಿಕಾರಿಗಳು ಸಂಪರ್ಕ ಹೊಂದಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ಸರ್ಕಾರಿ ಅಧಿಕಾರಿಗಳ ಹೇಳಿಕೆಯನ್ನು ಉಲ್ಲೇಖಿಸಿ ವರದಿ ಮಾಡಿದೆ. ಪಾಕಿಸ್ತಾನಿ ಹೈಕಮಿಷನ್‌ನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭದ್ರತಾ ಅನುಮತಿ ರದ್ದತಿಯಿಂದ 10,000 ಭಾರತೀಯ ಉದ್ಯೋಗಗಳಿಗೆ ಹೊಡೆತ: ಹೈಕೋರ್ಟ್‌ಗೆ ತುರ್ಕಿ ಸಂಸ್ಥೆ ಹೇಳಿಕೆ

ಭದ್ರತಾ ಅನುಮತಿ ರದ್ದತಿಯಿಂದ 10,000 ಭಾರತೀಯ ಉದ್ಯೋಗಗಳಿಗೆ ಹೊಡೆತ: ಹೈಕೋರ್ಟ್‌ಗೆ ತುರ್ಕಿ ಸಂಸ್ಥೆ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...