Homeಮುಖಪುಟಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

- Advertisement -
- Advertisement -

ಒಂದೇ ದಿನ 86 ಲಕ್ಷ ಡೋಸ್‍ ಲಸಿಕೆ ಹಾಕಿದ್ದೇವೆ ಎಂದು ಮನ್‍ ಕಿ ಬಾತ್‍ನಲ್ಲಿ ಪ್ರಧಾನಿ ಸಂಭ್ರಮಿಸಿದರು. ಇಲ್ಲಿಯವರೆಗೆ ನೀಡಿರುವ ಒಟ್ಟು ಕೋವಿಡ್ ಲಸಿಕೆ ಪ್ರಮಾಣದಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಅದರ ಪ್ರಕಾರ, ಭಾರತವು ಇಲ್ಲಿಯವರೆಗೆ ಒಟ್ಟು 32,36,63,292 (32 ಕೋಟಿ 36 ಲಕ್ಷ 63 ಸಾವಿರದ 292) ಡೋಸ್‌ಗಳನ್ನು ನೀಡಿದ್ದರೆ, ಅಮೆರಿಕವು 32,33,27,328 ಡೋಸ್‌ಗಳನ್ನು ನೀಡಿದೆ. ಹೀಗಾಗಿ ನಾವು ಲಸಿಕೆ ನೀಡಿಕೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿದ್ದೇವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಹರ್ಷವರ್ಧನ್‍ ಮತ್ತು ಅವರ ಸಚಿವಾಲಯ ಇಂದು ಟ್ವೀಟ್‍ ಮಾಡಿದ್ದಾರೆ.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ. ಅಮೆರಿಕದಲ್ಲಿ ಶೇಕಡಾ 46.5 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ (ಎರಡೂ ಡೋಸ್) ಲಸಿಕೆ ನೀಡಲಾಗಿದೆ. ಭಾರತವು ಈವರೆಗೆ ತನ್ನ ಜನಸಂಖ್ಯೆಯ ಶೇಕಡಾ 4ರಷ್ಟು ಜನರಿಗೆ ಮಾತ್ರ ಪೂರ್ಣ ಲಸಿಕೆ ನೀಡಿದೆ. ಇಲ್ಲಿ ಒಂದು ಲಸಿಕೆ ಪಡೆದವರ ಪ್ರಮಾಣ ತುಸು ಹೆಚ್ಚಿರಬಹುದು. ಆದರೆ ಎರಡೂ ಲಸಿಕೆ ಪಡೆದವರ ಪ್ರಮಾಣ ತುಂಬ ಕಡಿಮೆಯಿದೆ ಎಂದು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಈ ಪಿಳ್ಳಂಗೋವಿ ಪ್ರಚಾರಕ್ಕೇನು ಕೊರತೆಯಿಲ್ಲ. ಅಲ್ರಯ್ಯಾ, ಬೇರೆ ದೇಶಗಳ ಜನಸಂಖ್ಯೆ ಇಟ್ಟುಕೊಂಡು ತುಲನೆ ಮಾಡ್ರಯ್ಯಾ. ನೀವು ಎಷ್ಟು ಡೋಸ್ ವ್ಯಾಕ್ಸಿನ್ ಕೊಟ್ರಿ ಅನ್ನೋದಲ್ಲ ಮುಖ್ಯ, ಎಷ್ಟು ಪರ್ಸಂಟೇಜ್ ಜನರಿಗೆ ಕೊಟ್ರಿ ಅನ್ನೋದು ಮುಖ್ಯ. ಅದೂ ಕೂಡ ಎರಡೂ ಡೋಸ್ ಕೊಟ್ಟರೆ ಮಾತ್ರ Fully vaccinated ಎಂದು ಗ್ರಹಿಸುತ್ತೆ ಇಡಿಯ ಜಗತ್ತು. ನಿಮ್ಮದೇ ಕೋವಿನ್ ಆಪ್ ಪ್ರಕಾರ ದೇಶದ ಐದೂವರೆ ಕೋಟಿ ಜನರು ಮಾತ್ರ ಈ ಕ್ಷಣದವರೆಗೆ ಎರಡೂ ಡೋಸ್ ವ್ಯಾಕ್ಸಿನ್ ಪಡೆದಿದ್ದಾರೆ. ಪರ್ಸಂಟೇಜ್ ಎಷ್ಟು ಗೊತ್ತಾ? ಕೇವಲ 4% ಮಾತ್ರ. ಇದೇ ಸಮಯದಲ್ಲಿ ಅಮೆರಿಕದಲ್ಲಿ ಶೇ. 47 ರಷ್ಟು ಮಂದಿ, ಇಸ್ರೇಲ್ ನಲ್ಲಿ ಶೇ. 57 ರಷ್ಟು ಮಂದಿ fully vaccinate ಆಗಿದ್ದಾರೆ” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಡಿಮೆ ಜನಸಂಖ್ಯೆ ಇರೋ ದೇಶಗಳ ಜತೆ ಹೋಲಿಸಿಕೊಳ್ತೀರಲ್ಲ, ನಮಗಿಂತ ಹೆಚ್ಚು ಜನಸಂಖ್ಯೆ ಇರೋ ದೇಶದ ಜತೆ ಹೋಲಿಸಿಕೊಳ್ರಯ್ಯಾ? ಚೀನಾದಲ್ಲಿ 22.3 ಕೋಟಿ ಜನರಿಗೆ ಎರಡೂ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ. ಭಾರತಕ್ಕಿಂತ ನಾಲ್ಕು ಪಟ್ಟು ಹೆಚ್ಚು. 119 ಕೋಟಿ ಜನರಿಗೆ ಮೊದಲ ಡೋಸ್ ಕೊಟ್ಟಾಗಿದೆ. ಅದೂ ಕೂಡ ಭಾರತದ ನಾಲ್ಕು ಪಟ್ಟು ಹೆಚ್ಚು. ನಿಮ್ಮ‌ ಈ ಡಿಜೈನಿನಲ್ಲಿ ಚೀನಾ ಯಾಕೆ ಇಲ್ಲ? ಹೇಳ್ಕೊಳ್ಳೋಕೆ ನಾಚಿಕೆನಾ? ಎಂದು ಅವರು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರೇ, ಭಾರತದ ಜನರಿಗೆ ಪ್ರಚಾರ ಮಾಡಬೇಕಿದ್ದ ಕರೆಕ್ಟ ಗ್ರಾಫ್ ಇದು ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರ ಮತ್ತೊಂದು ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಎರಡೂ ಡೋಸ್ ಲಸಿಕೆ ಪಡೆದ ರಾಷ್ಟ್ರಗಳ ವಿವರ ಇದ್ದು ಅದರಲ್ಲಿ ಭಾರತವು 5ನೇ ಸ್ಥಾನದಲ್ಲಿದೆ.

ಅಫಿಡವಿಟ್‍ ಲೆಕ್ಕ ಏನು?

ಭಾರತೀಯ ಔಷಧೀಯ ಕಂಪನಿ ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ ಲಸಿಕೆ ಶೀಘ್ರದಲ್ಲೇ 12-18 ರ ವಯೋಮಾನದವರಿಗೆ ಲಭ್ಯವಾಗಲಿದೆ ಎಂದು ಕೇಂದ್ರವು ಶನಿವಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ತಿಳಿಸಿದೆ.

ಉನ್ನತ ನ್ಯಾಯಾಲಯಕ್ಕೆ ನೀಡಿದ ಅಫಿಡವಿಟ್‌ನಲ್ಲಿ, 18 ವರ್ಷಕ್ಕಿಂತ ಮೇಲ್ಪಟ್ಟ ನಿವಾಸಿಗಳಿಗೆ ಚುಚ್ಚುಮದ್ದು ನೀಡಲು 186.6 ಕೋಟಿ ಡೋಸ್‍ ಬೇಕಾಗುತ್ತವೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2021 ರ ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಈಗ ಅಫೀಡವಿಯೆಟ್‍ನಲ್ಲಿ ನೀಡಿದ ಪ್ರೊಜೆಕ್ಷನ್‍ ತಿಳಿಸುವ ಡೋಸ್‍ಗಳ ಪ್ರಮಾಣಕ್ಕೂ, ಈ ಹಿಂದೆ ಸರ್ಕಾರವೇ ಹೇಳಿದಂತೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಲು ಆಗಸ್ಟ್ ಮತ್ತು ಡಿಸೆಂಬರ್ ನಡುವೆ ಭಾರತವು 216 ಕೋಟಿ ಡೋಸ್ ಕೋವಿಡ್ ಡೋಸ್‍ಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಕ್ಕೂ ಅಗಾಧ ವ್ಯತ್ಯಾಸವಿದೆ. ಆ ವ್ಯತ್ಯಾಸ 81 ಕೋಟಿ ಡೋಸ್‍ ಆಗಿದೆ.

ಡಿಸೆಂಬರ್ 31ರೊಳಗೆ ಎಲ್ಲಾ ವಯಸ್ಕರಿಗೆ ಸಂಪೂರ್ಣವಾಗಿ ಲಸಿಕೆ ಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ. “ಈ ಅವಶ್ಯಕತೆಯಿಂದ, ಜುಲೈ 31 2021 ರ ವೇಳೆಗೆ 51.6 ಕೋಟಿ ಡೋಸ್‌ಗಳು ಸರ್ಕಾರಕ್ಕೆ ಲಭ್ಯವಾಗಲಿದೆ’ ಎಂದು ಹೇಳಿದೆ.

135 ಕೋಟಿಯಲ್ಲಿ 50 ಕೋಟಿ ಲಸಿಕೆಗಳನ್ನು ಕೋವಿಶೀಲ್ಡ್ ಮತ್ತು 40ಕೋಟಿ ಕೋವಾಕ್ಸಿನ್ ನಿಂದ ನೀಡಲಾಗುವುದು. ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ 10 ಕೋಟಿ ಎಂದು ಅಂದಾಜಿಸಲಾಗಿದೆ. ಜೈವಿಕ್‍ ಇ ಸಬ್ 30 ಕೋಟಿ ಡೋಸ್ ಮತ್ತು ಝೈಡನ್‍ ಕ್ಯಾಡಿಲಾ 5 ಕೋಟಿ ಡೋಸ್‍ಗಳನ್ನು ಸಹ ನೀಡಲಿದೆ ಎಂದು ಕೇಂದ್ರ ಸುಪ್ರೀಂಕೋರ್ಟಿಗೆ ಹೇಳಿದೆ.

ಆದರೆ, ಝೈಡಸ್ ಕ್ಯಾಡಿಲಾ ಮತ್ತು ಜೈವಿಕ್‍ ಇ ಸಬ್ ಲಸಿಕೆಗಳನ್ನು ತುರ್ತು ಬಳಕೆಗಾಗಿ ಇನ್ನೂ ಅನುಮೋದಿಸಲಾಗಿಲ್ಲ. ಆದರೆ, ಸದ್ಯದಲ್ಲಿಯೇ ಅವರಿಗೆ ಅನುಮೋದನೆ ನೀಡಲಾಗುವುದು ಎಂದು ಸರ್ಕಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.


ಇದನ್ನೂ ಓದಿ: ಎಂಆರ್‌ಎನ್‌ಎ ಲಸಿಕೆಗಳು; ಸಂಶೋಧನೆ ಮತ್ತು ವಿಜ್ಞಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ನೆಟ್ಟುಗೆ ವ್ಯಾಕ್ಸಿನ್ ಸ್ಟಾಕ್ ಇಲ್ಲ. ಅಂತಹದರಲ್ಲಿ ಸುಳ್ಳು ಪ್ರಚಾರ ಮಾಡಿಕೊಳ್ಳುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ..

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...