Homeಮುಖಪುಟಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

ಲಸಿಕೆ ನೀಡುವಲ್ಲಿ ಅಮೆರಿಕ ಹಿಂದಿಕ್ಕಿದ ಭಾರತ: ಪಿಳ್ಳಂಗೋವಿ ಪ್ರಚಾರವೆಂದು ನೆಟ್ಟಿಗರ ಟ್ರೋಲ್

- Advertisement -
- Advertisement -

ಒಂದೇ ದಿನ 86 ಲಕ್ಷ ಡೋಸ್‍ ಲಸಿಕೆ ಹಾಕಿದ್ದೇವೆ ಎಂದು ಮನ್‍ ಕಿ ಬಾತ್‍ನಲ್ಲಿ ಪ್ರಧಾನಿ ಸಂಭ್ರಮಿಸಿದರು. ಇಲ್ಲಿಯವರೆಗೆ ನೀಡಿರುವ ಒಟ್ಟು ಕೋವಿಡ್ ಲಸಿಕೆ ಪ್ರಮಾಣದಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ. ಅದರ ಪ್ರಕಾರ, ಭಾರತವು ಇಲ್ಲಿಯವರೆಗೆ ಒಟ್ಟು 32,36,63,292 (32 ಕೋಟಿ 36 ಲಕ್ಷ 63 ಸಾವಿರದ 292) ಡೋಸ್‌ಗಳನ್ನು ನೀಡಿದ್ದರೆ, ಅಮೆರಿಕವು 32,33,27,328 ಡೋಸ್‌ಗಳನ್ನು ನೀಡಿದೆ. ಹೀಗಾಗಿ ನಾವು ಲಸಿಕೆ ನೀಡಿಕೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿದ್ದೇವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಹರ್ಷವರ್ಧನ್‍ ಮತ್ತು ಅವರ ಸಚಿವಾಲಯ ಇಂದು ಟ್ವೀಟ್‍ ಮಾಡಿದ್ದಾರೆ.

ಆದರೆ ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆ ಕೇಳಿಬಂದಿದೆ. ಅಮೆರಿಕದಲ್ಲಿ ಶೇಕಡಾ 46.5 ರಷ್ಟು ವಯಸ್ಕರಿಗೆ ಸಂಪೂರ್ಣವಾಗಿ (ಎರಡೂ ಡೋಸ್) ಲಸಿಕೆ ನೀಡಲಾಗಿದೆ. ಭಾರತವು ಈವರೆಗೆ ತನ್ನ ಜನಸಂಖ್ಯೆಯ ಶೇಕಡಾ 4ರಷ್ಟು ಜನರಿಗೆ ಮಾತ್ರ ಪೂರ್ಣ ಲಸಿಕೆ ನೀಡಿದೆ. ಇಲ್ಲಿ ಒಂದು ಲಸಿಕೆ ಪಡೆದವರ ಪ್ರಮಾಣ ತುಸು ಹೆಚ್ಚಿರಬಹುದು. ಆದರೆ ಎರಡೂ ಲಸಿಕೆ ಪಡೆದವರ ಪ್ರಮಾಣ ತುಂಬ ಕಡಿಮೆಯಿದೆ ಎಂದು ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಈ ಪಿಳ್ಳಂಗೋವಿ ಪ್ರಚಾರಕ್ಕೇನು ಕೊರತೆಯಿಲ್ಲ. ಅಲ್ರಯ್ಯಾ, ಬೇರೆ ದೇಶಗಳ ಜನಸಂಖ್ಯೆ ಇಟ್ಟುಕೊಂಡು ತುಲನೆ ಮಾಡ್ರಯ್ಯಾ. ನೀವು ಎಷ್ಟು ಡೋಸ್ ವ್ಯಾಕ್ಸಿನ್ ಕೊಟ್ರಿ ಅನ್ನೋದಲ್ಲ ಮುಖ್ಯ, ಎಷ್ಟು ಪರ್ಸಂಟೇಜ್ ಜನರಿಗೆ ಕೊಟ್ರಿ ಅನ್ನೋದು ಮುಖ್ಯ. ಅದೂ ಕೂಡ ಎರಡೂ ಡೋಸ್ ಕೊಟ್ಟರೆ ಮಾತ್ರ Fully vaccinated ಎಂದು ಗ್ರಹಿಸುತ್ತೆ ಇಡಿಯ ಜಗತ್ತು. ನಿಮ್ಮದೇ ಕೋವಿನ್ ಆಪ್ ಪ್ರಕಾರ ದೇಶದ ಐದೂವರೆ ಕೋಟಿ ಜನರು ಮಾತ್ರ ಈ ಕ್ಷಣದವರೆಗೆ ಎರಡೂ ಡೋಸ್ ವ್ಯಾಕ್ಸಿನ್ ಪಡೆದಿದ್ದಾರೆ. ಪರ್ಸಂಟೇಜ್ ಎಷ್ಟು ಗೊತ್ತಾ? ಕೇವಲ 4% ಮಾತ್ರ. ಇದೇ ಸಮಯದಲ್ಲಿ ಅಮೆರಿಕದಲ್ಲಿ ಶೇ. 47 ರಷ್ಟು ಮಂದಿ, ಇಸ್ರೇಲ್ ನಲ್ಲಿ ಶೇ. 57 ರಷ್ಟು ಮಂದಿ fully vaccinate ಆಗಿದ್ದಾರೆ” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಡಿಮೆ ಜನಸಂಖ್ಯೆ ಇರೋ ದೇಶಗಳ ಜತೆ ಹೋಲಿಸಿಕೊಳ್ತೀರಲ್ಲ, ನಮಗಿಂತ ಹೆಚ್ಚು ಜನಸಂಖ್ಯೆ ಇರೋ ದೇಶದ ಜತೆ ಹೋಲಿಸಿಕೊಳ್ರಯ್ಯಾ? ಚೀನಾದಲ್ಲಿ 22.3 ಕೋಟಿ ಜನರಿಗೆ ಎರಡೂ ಡೋಸ್ ವ್ಯಾಕ್ಸಿನ್ ಕೊಡಲಾಗಿದೆ. ಭಾರತಕ್ಕಿಂತ ನಾಲ್ಕು ಪಟ್ಟು ಹೆಚ್ಚು. 119 ಕೋಟಿ ಜನರಿಗೆ ಮೊದಲ ಡೋಸ್ ಕೊಟ್ಟಾಗಿದೆ. ಅದೂ ಕೂಡ ಭಾರತದ ನಾಲ್ಕು ಪಟ್ಟು ಹೆಚ್ಚು. ನಿಮ್ಮ‌ ಈ ಡಿಜೈನಿನಲ್ಲಿ ಚೀನಾ ಯಾಕೆ ಇಲ್ಲ? ಹೇಳ್ಕೊಳ್ಳೋಕೆ ನಾಚಿಕೆನಾ? ಎಂದು ಅವರು ಪ್ರಶ್ನಿಸಿದ್ದಾರೆ.

ನರೇಂದ್ರ ಮೋದಿಯವರೇ, ಭಾರತದ ಜನರಿಗೆ ಪ್ರಚಾರ ಮಾಡಬೇಕಿದ್ದ ಕರೆಕ್ಟ ಗ್ರಾಫ್ ಇದು ಎಂದು ನಾಗೇಗೌಡ ಶಿವಲಿಂಗಯ್ಯ ಕೀಲಾರ ಮತ್ತೊಂದು ಫೋಟೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಎರಡೂ ಡೋಸ್ ಲಸಿಕೆ ಪಡೆದ ರಾಷ್ಟ್ರಗಳ ವಿವರ ಇದ್ದು ಅದರಲ್ಲಿ ಭಾರತವು 5ನೇ ಸ್ಥಾನದಲ್ಲಿದೆ.

ಅಫಿಡವಿಟ್‍ ಲೆಕ್ಕ ಏನು?

ಭಾರತೀಯ ಔಷಧೀಯ ಕಂಪನಿ ಝೈಡಸ್ ಕ್ಯಾಡಿಲಾ ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ ಲಸಿಕೆ ಶೀಘ್ರದಲ್ಲೇ 12-18 ರ ವಯೋಮಾನದವರಿಗೆ ಲಭ್ಯವಾಗಲಿದೆ ಎಂದು ಕೇಂದ್ರವು ಶನಿವಾರ ಸುಪ್ರೀಂ ಕೋರ್ಟಿಗೆ ಸಲ್ಲಿಸಿದ ಅಫಿಡವಿಟ್‍ನಲ್ಲಿ ತಿಳಿಸಿದೆ.

ಉನ್ನತ ನ್ಯಾಯಾಲಯಕ್ಕೆ ನೀಡಿದ ಅಫಿಡವಿಟ್‌ನಲ್ಲಿ, 18 ವರ್ಷಕ್ಕಿಂತ ಮೇಲ್ಪಟ್ಟ ನಿವಾಸಿಗಳಿಗೆ ಚುಚ್ಚುಮದ್ದು ನೀಡಲು 186.6 ಕೋಟಿ ಡೋಸ್‍ ಬೇಕಾಗುತ್ತವೆ ಎಂದು ಕೇಂದ್ರ ಸರ್ಕಾರ ಹೇಳಿದೆ. 2021 ರ ಡಿಸೆಂಬರ್ ವೇಳೆಗೆ ಎಲ್ಲರಿಗೂ ಲಸಿಕೆ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಈಗ ಅಫೀಡವಿಯೆಟ್‍ನಲ್ಲಿ ನೀಡಿದ ಪ್ರೊಜೆಕ್ಷನ್‍ ತಿಳಿಸುವ ಡೋಸ್‍ಗಳ ಪ್ರಮಾಣಕ್ಕೂ, ಈ ಹಿಂದೆ ಸರ್ಕಾರವೇ ಹೇಳಿದಂತೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಲು ಆಗಸ್ಟ್ ಮತ್ತು ಡಿಸೆಂಬರ್ ನಡುವೆ ಭಾರತವು 216 ಕೋಟಿ ಡೋಸ್ ಕೋವಿಡ್ ಡೋಸ್‍ಗಳನ್ನು ಹೊಂದಿರುತ್ತದೆ ಎಂದು ಹೇಳಿದ್ದಕ್ಕೂ ಅಗಾಧ ವ್ಯತ್ಯಾಸವಿದೆ. ಆ ವ್ಯತ್ಯಾಸ 81 ಕೋಟಿ ಡೋಸ್‍ ಆಗಿದೆ.

ಡಿಸೆಂಬರ್ 31ರೊಳಗೆ ಎಲ್ಲಾ ವಯಸ್ಕರಿಗೆ ಸಂಪೂರ್ಣವಾಗಿ ಲಸಿಕೆ ಹಾಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ. “ಈ ಅವಶ್ಯಕತೆಯಿಂದ, ಜುಲೈ 31 2021 ರ ವೇಳೆಗೆ 51.6 ಕೋಟಿ ಡೋಸ್‌ಗಳು ಸರ್ಕಾರಕ್ಕೆ ಲಭ್ಯವಾಗಲಿದೆ’ ಎಂದು ಹೇಳಿದೆ.

135 ಕೋಟಿಯಲ್ಲಿ 50 ಕೋಟಿ ಲಸಿಕೆಗಳನ್ನು ಕೋವಿಶೀಲ್ಡ್ ಮತ್ತು 40ಕೋಟಿ ಕೋವಾಕ್ಸಿನ್ ನಿಂದ ನೀಡಲಾಗುವುದು. ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ 10 ಕೋಟಿ ಎಂದು ಅಂದಾಜಿಸಲಾಗಿದೆ. ಜೈವಿಕ್‍ ಇ ಸಬ್ 30 ಕೋಟಿ ಡೋಸ್ ಮತ್ತು ಝೈಡನ್‍ ಕ್ಯಾಡಿಲಾ 5 ಕೋಟಿ ಡೋಸ್‍ಗಳನ್ನು ಸಹ ನೀಡಲಿದೆ ಎಂದು ಕೇಂದ್ರ ಸುಪ್ರೀಂಕೋರ್ಟಿಗೆ ಹೇಳಿದೆ.

ಆದರೆ, ಝೈಡಸ್ ಕ್ಯಾಡಿಲಾ ಮತ್ತು ಜೈವಿಕ್‍ ಇ ಸಬ್ ಲಸಿಕೆಗಳನ್ನು ತುರ್ತು ಬಳಕೆಗಾಗಿ ಇನ್ನೂ ಅನುಮೋದಿಸಲಾಗಿಲ್ಲ. ಆದರೆ, ಸದ್ಯದಲ್ಲಿಯೇ ಅವರಿಗೆ ಅನುಮೋದನೆ ನೀಡಲಾಗುವುದು ಎಂದು ಸರ್ಕಾರ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.


ಇದನ್ನೂ ಓದಿ: ಎಂಆರ್‌ಎನ್‌ಎ ಲಸಿಕೆಗಳು; ಸಂಶೋಧನೆ ಮತ್ತು ವಿಜ್ಞಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ನೆಟ್ಟುಗೆ ವ್ಯಾಕ್ಸಿನ್ ಸ್ಟಾಕ್ ಇಲ್ಲ. ಅಂತಹದರಲ್ಲಿ ಸುಳ್ಳು ಪ್ರಚಾರ ಮಾಡಿಕೊಳ್ಳುವ ಈ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ..

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...